Health Checkup for Fire Station Staff

ಅಗ್ನಿಶಾಮಕ ಠಾಣೆ ಸಿಬ್ಬಂದಿಗೆ ಆರೋಗ್ಯ ತಪಾಸಣೆ

ಅಗ್ನಿಶಾಮಕ ಠಾಣೆ ಸಿಬ್ಬಂದಿಗೆ ಆರೋಗ್ಯ ತಪಾಸಣೆ

ಹೃದಯದ ಕಾಳಜಿ ವಹಿಸಿ-ಡಾ.ಕರೇಕಲ್ ಪಾಟೀಲ್

ಮುದ್ದೇಬಿಹಾಳ : ನಾವು ಸೇವಿಸುವ ಆಹಾರ, ದೈಹಿಕವಾಗಿ ಕೈಗೊಳ್ಳುವ ಚಟುವಟಿಕೆಗಳು ಹಾಗೂ ಒತ್ತಡ ಮುಕ್ತ ಬದುಕು ಸಾಗಿಸುವುದರಿಂದ ಹೃದಯಾಘಾತಗಳಂತಹ ಘಟನೆಗಳಿಂದ ದೂರವಿರಬಹುದಾಗಿದೆ ಎಂದು ಕರೇಕಲ್ ಪಾಟೀಲ್ ಮಲ್ಟಿಸ್ಪೆಶಾಲಿಟಿ ಹಾಸ್ಪಿಟಲ್ ಮುಖ್ಯಸ್ಥ ಡಾ.ಬಸನಗೌಡ ಕರೇಕಲ್‌ಪಾಟೀಲ್ ಹೇಳಿದರು.

ಪಟ್ಟಣದ ಅಗ್ನಿಶಾಮಕ ಠಾಣೆಯ ಆವರಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಹಾಗೂ ಫಕೀರೇಶ್ವರ‌ ಡೈಗ್ನೋಸ್ಟಿಕ್ ಸೆಂಟರ್ ಸಹಯೋಗದಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಬುಧವಾರ ಅಗ್ನಿಶಾಮಕ ಠಾಣೆಯಲ್ಲಿ ಏರ್ಪಡಿಸಿದ್ದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಆರೋಗ್ಯ ಉಚಿತ ತಪಾಸಣಾ ಶಿಬಿರ ಹಾಗೂ ಹೃದಯ ರೋಗದ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಹೃದಯ ರೋಗ ಕಾರಣ ಪರಿಹಾರ ಕುರಿತು ಮಾತನಾಡಿದರು.

ನಾವೆಲ್ಲ ಸಂಪತ್ತಿನ ಹಿಂದೆ ಬಿದ್ದಿದ್ದೇವೆ.ಆದರೆ ಆರೋಗ್ಯವನ್ನು ಸಂಪತ್ತು ಎಂದು ಮರೆತಿದ್ದೇವೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಮಾತನಾಡಿ, ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು. ಪತ್ರಕರ್ತರು ರಾಜಕಾರಣಿಗಳ ಸಂಬಂಧ ಸೌಹಾರ್ದಯುತವಾಗಿದ್ದರೆ ಸಮಾಜದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸುವುದಕ್ಕೆ ಸಾಧ್ಯವಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಅಗ್ನಿಶಾಮಕ ಠಾಣೆಯ ಜಿಲ್ಲಾ ಅಧಿಕಾರಿ ಶಶಿಧರ ನೀಲಗಾರ ಮಾತನಾಡಿ, ಅಗ್ನಿಶಾಮಕ ಠಾಣೆಯ ಸಿಬ್ಬಂದಿಯನ್ನು ಜನರು ಆಪತ್ತಿನ ಸಮಯದಲ್ಲಿ ನೆನಪಿಸಿಕೊಳ್ಳುವುದು ಸಹಜ. ಆದರೆ ಪತ್ರಕರ್ತರ ಧ್ವನಿ ಸಂಘಟನೆಯವರು ಸಮಾಜದ ಮುಖ್ಯವಾಹಿನಿಯಲ್ಲಿ ಅಗ್ನಿಶಾಮಕ ಠಾಣೆಯ ನೌಕರರಿಗೂ ಆದ್ಯತೆ ಕೊಟ್ಟಿರುವುದು ಖುಷಿ ತರಿಸಿದೆ ಎಂದರು.

ಐಎನ್‌ಬಿಡಬ್ಲ್ಯೂಎಫ್ ಸಂಘಟನೆ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸಂಗೀತಾ ನಾಡಗೌಡ, ಫಕೀರೇಶ್ವರ ಡಯಗ್ನೋಸ್ಟಿಕ್ ಸೆಂಟರ್ ಮುಖ್ಯಸ್ಥ ಡಾ.ಸಿ.ಕೆ.ಶಿವಯೋಗಿಮಠ, ಬಿಜೆಪಿ ನಾಯಕಿ ಕಾಶೀಬಾಯಿ ರಾಂಪೂರ, ಅಧ್ಯಕ್ಷತೆ ವಹಿಸಿದ್ದ ಕಾನಿಪ ಧ್ವನಿ ಜಿಲ್ಲಾಧ್ಯಕ್ಷ ಯೂಸೂಫ ನೇವಾರ, ತಾಲ್ಲೂಕು ಅಧ್ಯಕ್ಷ ಶಂಕರ ಈ. ಹೆಬ್ಬಾಳ ಮಾತನಾಡಿದರು.

ಖಾಸ್ಗತೇಶ್ವರ ಮಠದ ಶರಣೆ ನೀಲಮ್ಮ ವಿರಕ್ತಮಠ ಸಾನಿಧ್ಯ ವಹಿಸಿದ್ದರು. ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಮಲ್ಲಿಕಾರ್ಜುನ ಮದರಿ, ಕಾನಿಪ ಧ್ವನಿ ರಾಜ್ಯ ಕಾರ್ಯಾಧ್ಯಕ್ಷ ಇರ್ಫಾನ ಬೀಳಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನಾಯಕ ಸೊಂಡೂರ, ಸಂಘಟನೆಯ ಉಪಾಧ್ಯಕ್ಷೆ ಭಾರತಿ ನಲವಡೆ, ಪ್ರಧಾನ ಕಾರ್ಯದರ್ಶಿ ಗುಲಾಮಮೊಹ್ಮದ ದಫೇದಾರ, ಬಸಲಿಂಗಪ್ಪ ಹೂಗಾರ, ಬಸವರಾಜ ಕುಂಟೋಜಿ,ಮುತ್ತು ಕನ್ನೂರ, ವಿನಯ ಕಡ್ಲಿಮಟ್ಟಿ, ಹಣಮಂತ ಚವ್ಹಾಣ ಇದ್ದರು. ಪತ್ರಕರ್ತರಾದ ಹಣಮಂತ ನಲವಡೆ, ರವಿ ತೇಲಂಗಿ ಅವರನ್ನು ಸನ್ಮಾನಿಸಲಾಯಿತು. ಶಿಕ್ಷಕ ಟಿ.ಡಿ.ಲಮಾಣಿ ಕಾರ್ಯಕ್ರಮ ನಿರೂಪಿಸಿದರು.

ಇಸಿಜಿ,ಆರ್.ಬಿ.ಎಸ್ ಆರೋಗ್ಯ ಉಚಿತ ತಪಾಸಣೆ: ಪತ್ರಿಕಾ ದಿನಾಚರಣೆಯ ಅಂಗವಾಗಿ ಪಟ್ಟಣದ ಫಕೀರೇಶ್ವರ ಡಯಗ್ನೋಸ್ಟಿಕ್ ಸೆಂಟರ್‌ನಲ್ಲಿ ಬುಧವಾರ ಬೆಳಗ್ಗೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗೆ ಇಸಿಜಿ, ಆರ್.ಬಿ.ಎಸ್ ಆರೋಗ್ಯ ಉಚಿತ ತಪಾಸಣಾ ಶಿಬಿರಕ್ಕೆ ಪುರಸಭೆ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ ಚಾಲನೆ ನೀಡಿದರು.

ಡಾ.ಸಿ.ಕೆ.ಶಿವಯೋಗಿಮಠ, ಅಗ್ನಿಶಾಮಕ ಠಾಣೆಯ ಪ್ರಭಾರ ಅಧಿಕಾರಿ ನಾಗೇಶ ರಾಠೋಡ, ಅಯ್ಯಪ್ಪ ಸೇವಾ ಸಮಿತಿ ಸದಸ್ಯ ಟಿ.ವಿಜಯಭಾಸ್ಕರ್, ಸಂಘಟನೆಯ ಅಧ್ಯಕ್ಷ ಶಂಕರ ಹೆಬ್ಬಾಳ, ಪ್ರಧಾನ ಕಾರ್ಯದರ್ಶಿ ಗುಲಾಮಮೊಹ್ಮದ ದಫೇದಾರ, ರವಿ ತೇಲಂಗಿ, ಹಣಮಂತ ನಲವಡೆ ಇದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ