Health Checkup for Fire Station Staff

ಅಗ್ನಿಶಾಮಕ ಠಾಣೆ ಸಿಬ್ಬಂದಿಗೆ ಆರೋಗ್ಯ ತಪಾಸಣೆ

ಅಗ್ನಿಶಾಮಕ ಠಾಣೆ ಸಿಬ್ಬಂದಿಗೆ ಆರೋಗ್ಯ ತಪಾಸಣೆ

ಹೃದಯದ ಕಾಳಜಿ ವಹಿಸಿ-ಡಾ.ಕರೇಕಲ್ ಪಾಟೀಲ್

ಮುದ್ದೇಬಿಹಾಳ : ನಾವು ಸೇವಿಸುವ ಆಹಾರ, ದೈಹಿಕವಾಗಿ ಕೈಗೊಳ್ಳುವ ಚಟುವಟಿಕೆಗಳು ಹಾಗೂ ಒತ್ತಡ ಮುಕ್ತ ಬದುಕು ಸಾಗಿಸುವುದರಿಂದ ಹೃದಯಾಘಾತಗಳಂತಹ ಘಟನೆಗಳಿಂದ ದೂರವಿರಬಹುದಾಗಿದೆ ಎಂದು ಕರೇಕಲ್ ಪಾಟೀಲ್ ಮಲ್ಟಿಸ್ಪೆಶಾಲಿಟಿ ಹಾಸ್ಪಿಟಲ್ ಮುಖ್ಯಸ್ಥ ಡಾ.ಬಸನಗೌಡ ಕರೇಕಲ್‌ಪಾಟೀಲ್ ಹೇಳಿದರು.

ಪಟ್ಟಣದ ಅಗ್ನಿಶಾಮಕ ಠಾಣೆಯ ಆವರಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಹಾಗೂ ಫಕೀರೇಶ್ವರ‌ ಡೈಗ್ನೋಸ್ಟಿಕ್ ಸೆಂಟರ್ ಸಹಯೋಗದಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಬುಧವಾರ ಅಗ್ನಿಶಾಮಕ ಠಾಣೆಯಲ್ಲಿ ಏರ್ಪಡಿಸಿದ್ದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಆರೋಗ್ಯ ಉಚಿತ ತಪಾಸಣಾ ಶಿಬಿರ ಹಾಗೂ ಹೃದಯ ರೋಗದ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಹೃದಯ ರೋಗ ಕಾರಣ ಪರಿಹಾರ ಕುರಿತು ಮಾತನಾಡಿದರು.

ನಾವೆಲ್ಲ ಸಂಪತ್ತಿನ ಹಿಂದೆ ಬಿದ್ದಿದ್ದೇವೆ.ಆದರೆ ಆರೋಗ್ಯವನ್ನು ಸಂಪತ್ತು ಎಂದು ಮರೆತಿದ್ದೇವೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಮಾತನಾಡಿ, ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು. ಪತ್ರಕರ್ತರು ರಾಜಕಾರಣಿಗಳ ಸಂಬಂಧ ಸೌಹಾರ್ದಯುತವಾಗಿದ್ದರೆ ಸಮಾಜದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸುವುದಕ್ಕೆ ಸಾಧ್ಯವಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಅಗ್ನಿಶಾಮಕ ಠಾಣೆಯ ಜಿಲ್ಲಾ ಅಧಿಕಾರಿ ಶಶಿಧರ ನೀಲಗಾರ ಮಾತನಾಡಿ, ಅಗ್ನಿಶಾಮಕ ಠಾಣೆಯ ಸಿಬ್ಬಂದಿಯನ್ನು ಜನರು ಆಪತ್ತಿನ ಸಮಯದಲ್ಲಿ ನೆನಪಿಸಿಕೊಳ್ಳುವುದು ಸಹಜ. ಆದರೆ ಪತ್ರಕರ್ತರ ಧ್ವನಿ ಸಂಘಟನೆಯವರು ಸಮಾಜದ ಮುಖ್ಯವಾಹಿನಿಯಲ್ಲಿ ಅಗ್ನಿಶಾಮಕ ಠಾಣೆಯ ನೌಕರರಿಗೂ ಆದ್ಯತೆ ಕೊಟ್ಟಿರುವುದು ಖುಷಿ ತರಿಸಿದೆ ಎಂದರು.

ಐಎನ್‌ಬಿಡಬ್ಲ್ಯೂಎಫ್ ಸಂಘಟನೆ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸಂಗೀತಾ ನಾಡಗೌಡ, ಫಕೀರೇಶ್ವರ ಡಯಗ್ನೋಸ್ಟಿಕ್ ಸೆಂಟರ್ ಮುಖ್ಯಸ್ಥ ಡಾ.ಸಿ.ಕೆ.ಶಿವಯೋಗಿಮಠ, ಬಿಜೆಪಿ ನಾಯಕಿ ಕಾಶೀಬಾಯಿ ರಾಂಪೂರ, ಅಧ್ಯಕ್ಷತೆ ವಹಿಸಿದ್ದ ಕಾನಿಪ ಧ್ವನಿ ಜಿಲ್ಲಾಧ್ಯಕ್ಷ ಯೂಸೂಫ ನೇವಾರ, ತಾಲ್ಲೂಕು ಅಧ್ಯಕ್ಷ ಶಂಕರ ಈ. ಹೆಬ್ಬಾಳ ಮಾತನಾಡಿದರು.

ಖಾಸ್ಗತೇಶ್ವರ ಮಠದ ಶರಣೆ ನೀಲಮ್ಮ ವಿರಕ್ತಮಠ ಸಾನಿಧ್ಯ ವಹಿಸಿದ್ದರು. ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಮಲ್ಲಿಕಾರ್ಜುನ ಮದರಿ, ಕಾನಿಪ ಧ್ವನಿ ರಾಜ್ಯ ಕಾರ್ಯಾಧ್ಯಕ್ಷ ಇರ್ಫಾನ ಬೀಳಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನಾಯಕ ಸೊಂಡೂರ, ಸಂಘಟನೆಯ ಉಪಾಧ್ಯಕ್ಷೆ ಭಾರತಿ ನಲವಡೆ, ಪ್ರಧಾನ ಕಾರ್ಯದರ್ಶಿ ಗುಲಾಮಮೊಹ್ಮದ ದಫೇದಾರ, ಬಸಲಿಂಗಪ್ಪ ಹೂಗಾರ, ಬಸವರಾಜ ಕುಂಟೋಜಿ,ಮುತ್ತು ಕನ್ನೂರ, ವಿನಯ ಕಡ್ಲಿಮಟ್ಟಿ, ಹಣಮಂತ ಚವ್ಹಾಣ ಇದ್ದರು. ಪತ್ರಕರ್ತರಾದ ಹಣಮಂತ ನಲವಡೆ, ರವಿ ತೇಲಂಗಿ ಅವರನ್ನು ಸನ್ಮಾನಿಸಲಾಯಿತು. ಶಿಕ್ಷಕ ಟಿ.ಡಿ.ಲಮಾಣಿ ಕಾರ್ಯಕ್ರಮ ನಿರೂಪಿಸಿದರು.

ಇಸಿಜಿ,ಆರ್.ಬಿ.ಎಸ್ ಆರೋಗ್ಯ ಉಚಿತ ತಪಾಸಣೆ: ಪತ್ರಿಕಾ ದಿನಾಚರಣೆಯ ಅಂಗವಾಗಿ ಪಟ್ಟಣದ ಫಕೀರೇಶ್ವರ ಡಯಗ್ನೋಸ್ಟಿಕ್ ಸೆಂಟರ್‌ನಲ್ಲಿ ಬುಧವಾರ ಬೆಳಗ್ಗೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗೆ ಇಸಿಜಿ, ಆರ್.ಬಿ.ಎಸ್ ಆರೋಗ್ಯ ಉಚಿತ ತಪಾಸಣಾ ಶಿಬಿರಕ್ಕೆ ಪುರಸಭೆ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ ಚಾಲನೆ ನೀಡಿದರು.

ಡಾ.ಸಿ.ಕೆ.ಶಿವಯೋಗಿಮಠ, ಅಗ್ನಿಶಾಮಕ ಠಾಣೆಯ ಪ್ರಭಾರ ಅಧಿಕಾರಿ ನಾಗೇಶ ರಾಠೋಡ, ಅಯ್ಯಪ್ಪ ಸೇವಾ ಸಮಿತಿ ಸದಸ್ಯ ಟಿ.ವಿಜಯಭಾಸ್ಕರ್, ಸಂಘಟನೆಯ ಅಧ್ಯಕ್ಷ ಶಂಕರ ಹೆಬ್ಬಾಳ, ಪ್ರಧಾನ ಕಾರ್ಯದರ್ಶಿ ಗುಲಾಮಮೊಹ್ಮದ ದಫೇದಾರ, ರವಿ ತೇಲಂಗಿ, ಹಣಮಂತ ನಲವಡೆ ಇದ್ದರು.

Latest News

ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳ ಲೋಕಾರ್ಪಣೆ

ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳ ಲೋಕಾರ್ಪಣೆ

ಸಿದ್ಲೀಪುರ(ಶಿವಮೊಗ್ಗ ಜಿಲ್ಲೆ) ಆಗಸ್ಟ್‌ 04: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌

ಬಡವರ ಕೈಗೆ ಹಣ ಬಂದಾಗ ಮಾತ್ರ ದೇಶದ ಪ್ರಗತಿ: ಸಚಿವ ಲಾಡ್

ಬಡವರ ಕೈಗೆ ಹಣ ಬಂದಾಗ ಮಾತ್ರ ದೇಶದ ಪ್ರಗತಿ: ಸಚಿವ ಲಾಡ್

ಶಿವಮೊಗ್ಗ, ಆಗಸ್ಟ್ 04 : ಬಡವರ ಕೈಯಲ್ಲಿ ಹಣ ಬಂದಾಗ ಮಾತ್ರ ದೇಶದ ಪ್ರಗತಿಯಾಗಲಿದ್ದು,

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸದುಗೌಡ ಆಯ್ಕೆ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸದುಗೌಡ ಆಯ್ಕೆ

ಮುಧೋಳ : ನಗರದ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಕೋ ಅರ್ಡಿನೆಟರ್ ಅಗಿದ್ದ ನಗರದ

ಮಹಿಳಾ ಕಾಂಗ್ರೆಸ್‌ಗೆ ಅಕ್ಷತಾ ಚಲವಾದಿ ನೇಮಕ

ಮಹಿಳಾ ಕಾಂಗ್ರೆಸ್‌ಗೆ ಅಕ್ಷತಾ ಚಲವಾದಿ ನೇಮಕ

ಮುದ್ದೇಬಿಹಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷೆಯಾಗಿ ಅಕ್ಷತಾ ಶರಣು ಚಲವಾದಿ ಅವರನ್ನು

ವಲಯ ಮಟ್ಟದ ಕ್ರೀಡಾಕೂಟ: ಕರ್ಲಕೊಪ್ಪ ಶಾಲೆಯ ಬಾಲಕಿಯರಿಗೆ ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನ

ವಲಯ ಮಟ್ಟದ ಕ್ರೀಡಾಕೂಟ: ಕರ್ಲಕೊಪ್ಪ ಶಾಲೆಯ ಬಾಲಕಿಯರಿಗೆ ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನ

ಕುಳಗೇರಿ ಕ್ರಾಸ್: ಸಮೀಪದ ಕುಳಗೇರಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರ್ ಎಸ್ ಕೆ ಯಲ್ಲಿ ಆಯೋಜನೆಗೊಂಡಿತ್ತು. ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ಲಕೊಪ್ಪದ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ. ಬಾಲಕಿಯರ ಕಬ್ಬಡ್ಡಿ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ. ವೈಯಕ್ತಿಕ ಆಟಗಳಲ್ಲಿ ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇವರಿಗೆ ಶಾಲಾ ಆಡಳಿತ ಹಾಗೂ ಎಸ್.ಡಿ.ಎಂ.ಸಿಯ ಅಧ್ಯಕ್ಷರು ಮತ್ತು ಸರ್ವ

ಶ್ರಾವಣ ಮಾಸದ ಸೌಹಾರ್ದ ಕೂಟ ಆಯೋಜನೆ: ಆ.9,10 ರಂದು ಕಣ್ಣಿನ ಉಚಿತ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

ಶ್ರಾವಣ ಮಾಸದ ಸೌಹಾರ್ದ ಕೂಟ ಆಯೋಜನೆ: ಆ.9,10 ರಂದು ಕಣ್ಣಿನ ಉಚಿತ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

ಮುದ್ದೇಬಿಹಾಳ : ರಂಜಾನ್ ಮಾಸದಲ್ಲಿ ಈದ್ ಸೌಹಾರ್ದ ಕೂಟ ಏರ್ಪಡಿಸಿದಂತೆ ಈ ಬಾರಿ ಮನಿಯಾರ ಚಾರಿಟೇಬಲ್ ಟ್ರಸ್ಟ್ನಿಂದ ಶ್ರಾವಣ ಮಾಸದ ಸೌಹಾರ್ದ ಕೂಟ ಹಮ್ಮಿಕೊಂಡಿದ್ದೇವೆ ಎಂದು ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಅಯೂಬ ಮನಿಯಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ತಾಳಿಕೋಟಿ, ಮುದ್ದೇಬಿಹಾಳ ಹಾಗೂ ನಾಲತವಾಡದಲ್ಲಿ ಅನೇಕ ವರ್ಷಗಳಿಂದ ಟ್ರಸ್ಟ್ನಿಂದ ವಿಧವೆಯರಿಗೆ ಪಿಂಚಣಿ, ಈದ್ ಕಿಟ್ ವಿತರಣೆ, ಬೀದಿಯಲ್ಲಿರುವ ನಿರಾಶ್ರಿತರಿಗೆ ಆಶ್ರಯ, ಬಡ ವಿದ್ಯಾರ್ಥಿಗಳಿಗೆ