ಅಧ್ಯಕ್ಷರಾಗಿ ಪ್ರಶಾಂತ ಹಂಚಾಟೆ, ಉಪಾಧ್ಯಕ್ಷರಾಗಿ ಸುನೀಲ್ ದೇವಗಿರಕರ್ ಅವಿರೋಧ ಆಯ್ಕೆ

ಅಧ್ಯಕ್ಷರಾಗಿ ಪ್ರಶಾಂತ ಹಂಚಾಟೆ, ಉಪಾಧ್ಯಕ್ಷರಾಗಿ ಸುನೀಲ್ ದೇವಗಿರಕರ್ ಅವಿರೋಧ ಆಯ್ಕೆ

ಇಳಕಲ್: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಇಲಕಲ್ಲ ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಇಲಕಲ್ಲ ನಗರದ ಚಾರ್ಟರ್ಡ್ ಟ್ಯಾಕ್ಸ್ ಪ್ರ್ಯಾಕ್ಟೀಶನರ್ ಪ್ರಶಾಂತ ಹಂಚಾಟೆ ಹಾಗೂ ಉಪಾಧ್ಯಕ್ಷರಾಗಿ ನಗರದ ವ್ಯಾಪಾರಸ್ಥರಾದ ಸುನೀಲ್ ದೇವಗಿರಿಕರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಗಳು ಹಾಗೂ ಸಹಕಾರ ಅಭಿವೃದ್ಧಿ ಅಧಿಕಾರಿಗಳಾದ ಬಿ.‌ಎನ್. ಪೋಲಿಸ್ ಪಾಟೀಲ್ ಅವರು ಹೇಳಿದರು.

ನಗರದ ಶ್ರೀ ‌ಹಿಂಗುಲಾಂಬಿಕಾ ದೇವಿ ದೇವಸ್ಥಾನದ ಸಭಾಂಗಣದಲ್ಲಿ‌ ನಡೆದ ಪದಾಧಿಕಾರಿಗಳ ಸಭೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಘೋಷಿಸಿಲಾಯಿತು.

ನಿರ್ದೇಶಕರಾಗಿ ಪ್ರಕಾಶ ದೇವಗಿರಿಕರ್, ಜಮದಗ್ನಿ ಮಹೇಂದ್ರಕರ, ಲಕ್ಷ್ಮಣ ದಾಯಪುಲ್ಲೆ, ರಮೇಶ ಹಂಚಾಟೆ, ಸಂತೋಷ ದೇವಗಿರಿಕರ್, ರಾಮಚಂದ್ರ ಕಠಾರೆ, ಶ್ರೀಮತಿ ರೇಣುಕಾ ದೇವಗಿರಿಕರ್, ಶ್ರೀಮತಿ ಭಾಗ್ಯಶ್ರೀ ಹಂಚಾಟೆ, ಶ್ರೀಮತಿ ಗೀತಾಬಾಯಿ ಲೋಕರೆ ಅವರು ಚುನಾಯಿತರಾಗಿದ್ದಾರೆಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಚುನಾವಣಾಧೀಕಾರಿಗಳಾದ ಬಿ. ಎನ್. ಪೋಲಿಸ್ ಪಾಟೀಲ ಅವರು ಮಾತಾನಾಡಿ ಎಲ್ಲ ನಿರ್ದೇಶರಿಗೆ ಶುಭ ಕೋರಿದರು. ಸಭೆಯಲ್ಲಿ ನಿರ್ದೇಶಕರಾದ ಪ್ರಕಾಶ ದೇವಗಿರಿಕರ್, ಜಮದಗ್ನಿ ಮಹೇಂದ್ರಕರ ಹಾಗೂ ಶ್ರೀಮತಿ ಗೀತಾಬಾಯಿ ಲೋಕರೆ ಮಾತನಾಡಿ ಪತ್ತಿನ ಸಹಕಾರ ಸಂಘದ ಅಭಿವೃದ್ಧಿಗೆ ಶ್ರಮಿಸುವದಾಗಿ ಹೇಳಿದರು.

ನೂತನ ಆಧ್ಯಕ್ಷರು ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಪ್ರಶಾಂತ ಹಂಚಾಟೆ ಹಾಗೂ ಸುನೀಲ್ ದೇವಗಿರಿಕರ್ ಅವರು ಎಲ್ಲ ಶೇರುದಾರರ ಹಾಗೂ ನಿರ್ದೇಶಕ ಮಂಡಳಿಯ ಸದಸ್ಯರ ಸಹಕಾರ ಕೋರಿದರು. ಸಮಾಜದ ಮುಖಂಡರಾದ ಶ್ರೀ ನಾರಾಯಣರಾವ ಅಂಬೋರೆ ಅವರು ಉಪಸ್ಥಿತರಿದ್ದರು. ನಂತರ ನಡೆದ ಶ್ರೀ ಹಿಂಗುಲಾಂಬಿಕಾ ದೇವಿಯ ಪೂಜೆಯಲ್ಲಿ ಮಹಾಮಂಗಳಾರತಿಯಲ್ಲಿ ಪಾಲ್ಘೊಂಡು ಶ್ರೀ ದೇವಿಯ ಆಶೀರ್ವಾದ ಪಡೆದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ