Soon installation of Rayanna's idol in Muddebihala: M.N.Madari

ಮುದ್ದೇಬಿಹಾಳದಲ್ಲಿ ಶೀಘ್ರ ರಾಯಣ್ಣನವರ ಮೂರ್ತಿ ಪ್ರತಿಷ್ಠಾಪನೆ : ಎಂ.ಎನ್.ಮದರಿ

ಮುದ್ದೇಬಿಹಾಳದಲ್ಲಿ ಶೀಘ್ರ ರಾಯಣ್ಣನವರ ಮೂರ್ತಿ ಪ್ರತಿಷ್ಠಾಪನೆ : ಎಂ.ಎನ್.ಮದರಿ

ಮುದ್ದೇಬಿಹಾಳ : ಕೊಲ್ಹಾಪೂರದಲ್ಲಿ ಸಂಗೊಳ್ಳಿ ರಾಯಣ್ಣನವರ ಕಂಚಿನ ಮೂರ್ತಿ ಸಿದ್ಧವಾಗಿದ್ದು ಎರಡ್ಮೂರು ದಿನಗಳಲ್ಲಿ ಮುದ್ದೇಬಿಹಾಳಕ್ಕೆ ಕರೆತರುವ ಕೆಲಸ ಮಾಡುತ್ತೇವೆ ಎಂದು ಕುರುಬ ಸಮಾಜದ ತಾಲ್ಲೂಕು ಅಧ್ಯಕ್ಷ ಎಂ. ಎನ್. ಮದರಿ ಹೇಳಿದರು.

ತಾಲ್ಲೂಕು ಕುಂಟೋಜಿಯ ಪರಮಹಂಸ ವಿದ್ಯಾವರಣ್ಯ ಆಶ್ರಮದ ಆವರಣದಲ್ಲಿ ಶುಕ್ರವಾರ ಸಂಗೊಳ್ಳಿ ರಾಯಣ್ಣನವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕುಂಟೋಜಿ, ಕವಡಿಮಟ್ಟಿ ಗ್ರಾಮಗಳಲ್ಲಿ ರಾಯಣ್ಣನ ಮೂರ್ತಿಗಳು ಪ್ರತಿಷ್ಠಾಪನೆಯಾಗಿವೆ. ಆದರೆ, ಮುದ್ದೇಬಿಹಾಳ ನಗರದಲ್ಲಿ ಆದಷ್ಟು ಶೀಘ್ರ ಮೂರ್ತಿ ಅನಾವರಣ ಕಾರ್ಯಕ್ರಮ ಎಲ್ಲ ಸಮಾಜದ ಸಹಕಾರದೊಂದಿಗೆ ದೊಡ್ಡಮಟ್ಟದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಸರೂರು ಅಗತೀರ್ಥದ ರೇವಣಸಿದ್ದೇಶ್ವರ ಶಾಂತಮಯ ಸ್ವಾಮೀಜಿ ಮಾತನಾಡಿ, ಶೌರ್ಯ ಸಾಹಸ, ತ್ಯಾಗಕ್ಕೆ ಹೆಸರಾದ ಸಂಗೊಳ್ಳಿ ರಾಯಣ್ಣನವರ ಮೂರ್ತಿ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಡೊಳ್ಳು ಬಡಿದು ಕುಣಿದು ಕುಪ್ಪಳಿಸುವ ಬದಲು ಹಾಲುಮತ ಜಾಗೃತಿ ಹೊಂದಬೇಕಾಗಿದೆ. ಸಮಾಜ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಎಂದು ಹೇಳಿದರು.

ಎಂ.ಜಿ.ಎಂ.ಕೆ ಕಾಲೇಜಿನ ಪ್ರಾಚಾರ್ಯ ಎಸ್.ಕೆ.ಹರನಾಳ ಮಾತನಾಡಿ, ಸಂಗೊಳ್ಳಿ ರಾಯಣ್ಣನವರ ತ್ಯಾಗ, ಬಲಿದಾನದ ಆದರ್ಶಗಳು ಯುವಕರಲ್ಲಿ ಬರಬೇಕು. ಬೇರೊಂದು ಸಮಾಜದ ಮಹಿಳೆಯನ್ನು ತನ್ನ ತಾಯಿ ಎಂದು ಒಪ್ಪಿಕೊಂಡು ಅವರ ಜೀವ ಕಾಪಾಡಿದ ಹೋರಾಟಗಾರ ರಾಯಣ್ಣ ಎಂದರು.

ತಿಂಥಣಿ ಕನಕ ಗುರುಪೀಠದ ಸಿದ್ದರಮಾನಂದಪುರಿ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಸರೂರ ಹಾಲುಮತ ಗುರುಪೀಠದ ಶಿವಕುಮಾರ ಸ್ವಾಮೀಜಿ, ವಿದ್ಯಾವರಣ್ಯಯೋಗೇಶ್ವರ ಆಶ್ರಮದ ಮುರುಳೀಧರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ, ಮುಖಂಡರಾದ ರುದ್ರಯ್ಯ ಮಠ, ಸಂಗನಗೌಡ ಪಾಟೀಲ, ರವಿ ಜಗಲಿ, ಬಿ.ಬಿ.ಚಿಗರಿ, ಎಸ್.ಎನ್.ಕಂಬಳಿ, ಎಂ.ಎಂ.ನಾಟೇಕರ, ಬಿ.ಎಸ್.ಹೂಗಾರ, ಶ್ರೀಶೈಲ ಸಜ್ಜನ, ಸೋಮಲಿಂಗಪ್ಪ ಹೊಸಮನಿ, ಬಸವರಾಜ ಹುಲಗಣ್ಣಿ, ಬಸವರಾಜ ಬಡಿಗೇರ, ಕಾಳಿದಾಸ ಜಟಗುಣಿ ಮೊದಲಾದವರು ಇದ್ದರು.
ಕಾರ್ಯಕ್ರಮದಲ್ಲಿ ದಾನಿಗಳನ್ನು ಸನ್ಮಾನಿಸಲಾಯಿತು. ಮುದ್ದೇಬಿಹಾಳ ಪಟ್ಟಣದಿಂದ ಕುಂಟೋಜಿಯವರೆಗೆ ಅದ್ದೂರಿಯಾಗಿ ರಾಯಣ್ಣನವರ ಮೂರ್ತಿ ಮೆರವಣಿಗೆ ನಡೆಸಲಾಯಿತು.

Latest News

ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳ ಲೋಕಾರ್ಪಣೆ

ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳ ಲೋಕಾರ್ಪಣೆ

ಸಿದ್ಲೀಪುರ(ಶಿವಮೊಗ್ಗ ಜಿಲ್ಲೆ) ಆಗಸ್ಟ್‌ 04: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌

ಬಡವರ ಕೈಗೆ ಹಣ ಬಂದಾಗ ಮಾತ್ರ ದೇಶದ ಪ್ರಗತಿ: ಸಚಿವ ಲಾಡ್

ಬಡವರ ಕೈಗೆ ಹಣ ಬಂದಾಗ ಮಾತ್ರ ದೇಶದ ಪ್ರಗತಿ: ಸಚಿವ ಲಾಡ್

ಶಿವಮೊಗ್ಗ, ಆಗಸ್ಟ್ 04 : ಬಡವರ ಕೈಯಲ್ಲಿ ಹಣ ಬಂದಾಗ ಮಾತ್ರ ದೇಶದ ಪ್ರಗತಿಯಾಗಲಿದ್ದು,

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸದುಗೌಡ ಆಯ್ಕೆ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸದುಗೌಡ ಆಯ್ಕೆ

ಮುಧೋಳ : ನಗರದ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಕೋ ಅರ್ಡಿನೆಟರ್ ಅಗಿದ್ದ ನಗರದ

ಮಹಿಳಾ ಕಾಂಗ್ರೆಸ್‌ಗೆ ಅಕ್ಷತಾ ಚಲವಾದಿ ನೇಮಕ

ಮಹಿಳಾ ಕಾಂಗ್ರೆಸ್‌ಗೆ ಅಕ್ಷತಾ ಚಲವಾದಿ ನೇಮಕ

ಮುದ್ದೇಬಿಹಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷೆಯಾಗಿ ಅಕ್ಷತಾ ಶರಣು ಚಲವಾದಿ ಅವರನ್ನು

ವಲಯ ಮಟ್ಟದ ಕ್ರೀಡಾಕೂಟ: ಕರ್ಲಕೊಪ್ಪ ಶಾಲೆಯ ಬಾಲಕಿಯರಿಗೆ ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನ

ವಲಯ ಮಟ್ಟದ ಕ್ರೀಡಾಕೂಟ: ಕರ್ಲಕೊಪ್ಪ ಶಾಲೆಯ ಬಾಲಕಿಯರಿಗೆ ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನ

ಕುಳಗೇರಿ ಕ್ರಾಸ್: ಸಮೀಪದ ಕುಳಗೇರಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರ್ ಎಸ್ ಕೆ ಯಲ್ಲಿ ಆಯೋಜನೆಗೊಂಡಿತ್ತು. ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ಲಕೊಪ್ಪದ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ. ಬಾಲಕಿಯರ ಕಬ್ಬಡ್ಡಿ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ. ವೈಯಕ್ತಿಕ ಆಟಗಳಲ್ಲಿ ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇವರಿಗೆ ಶಾಲಾ ಆಡಳಿತ ಹಾಗೂ ಎಸ್.ಡಿ.ಎಂ.ಸಿಯ ಅಧ್ಯಕ್ಷರು ಮತ್ತು ಸರ್ವ

ಶ್ರಾವಣ ಮಾಸದ ಸೌಹಾರ್ದ ಕೂಟ ಆಯೋಜನೆ: ಆ.9,10 ರಂದು ಕಣ್ಣಿನ ಉಚಿತ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

ಶ್ರಾವಣ ಮಾಸದ ಸೌಹಾರ್ದ ಕೂಟ ಆಯೋಜನೆ: ಆ.9,10 ರಂದು ಕಣ್ಣಿನ ಉಚಿತ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

ಮುದ್ದೇಬಿಹಾಳ : ರಂಜಾನ್ ಮಾಸದಲ್ಲಿ ಈದ್ ಸೌಹಾರ್ದ ಕೂಟ ಏರ್ಪಡಿಸಿದಂತೆ ಈ ಬಾರಿ ಮನಿಯಾರ ಚಾರಿಟೇಬಲ್ ಟ್ರಸ್ಟ್ನಿಂದ ಶ್ರಾವಣ ಮಾಸದ ಸೌಹಾರ್ದ ಕೂಟ ಹಮ್ಮಿಕೊಂಡಿದ್ದೇವೆ ಎಂದು ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಅಯೂಬ ಮನಿಯಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ತಾಳಿಕೋಟಿ, ಮುದ್ದೇಬಿಹಾಳ ಹಾಗೂ ನಾಲತವಾಡದಲ್ಲಿ ಅನೇಕ ವರ್ಷಗಳಿಂದ ಟ್ರಸ್ಟ್ನಿಂದ ವಿಧವೆಯರಿಗೆ ಪಿಂಚಣಿ, ಈದ್ ಕಿಟ್ ವಿತರಣೆ, ಬೀದಿಯಲ್ಲಿರುವ ನಿರಾಶ್ರಿತರಿಗೆ ಆಶ್ರಯ, ಬಡ ವಿದ್ಯಾರ್ಥಿಗಳಿಗೆ