Seven athletes from Vijayapur district have been selected for bandy hockey training

ಬ್ಯಾಂಡಿ ಹಾಕಿ ತರಬೇತಿಗೆ ವಿಜಯಪುರ ಜಿಲ್ಲೆಯ ಏಳು ಕ್ರೀಡಾಪಟುಗಳು ಆಯ್ಕೆ

ಬ್ಯಾಂಡಿ ಹಾಕಿ ತರಬೇತಿಗೆ ವಿಜಯಪುರ ಜಿಲ್ಲೆಯ ಏಳು ಕ್ರೀಡಾಪಟುಗಳು ಆಯ್ಕೆ

ಮುದ್ದೇಬಿಹಾಳ: ಹಾಕಿ ಬಳಿಕ ಇದೀಗ ಬ್ಯಾಂಡಿ ಹಾಕಿಯಲ್ಲಿ ಮಿಂಚಲು ವಿಜಯಪುರ ಜಿಲ್ಲೆಯ ಪ್ರತಿಭೆಗಳು ಸಿದ್ದರಾಗಿದ್ದಾರೆ.

ಐಸ್ ಸ್ಕೇಟಿಂಗ ಗುರಗಾಂವ್ (ದೆಹಲಿ) ನಲ್ಲಿ ಆಗಸ್ಟ್ 4 ರಿಂದ 6 ರ ವರೆಗೆ ನಡೆಯುವ ಹಾಕಿ ಬ್ಯಾಂಡಿ ಕ್ರೀಡಾ ತರಬೇತಿ ಶಿಬಿರದಲ್ಲಿ
ಮುದ್ದೇಬಿಹಾಳ ಪಟ್ಟಣದ ಏಕಲವ್ಯ ರೋಲರ್ ಸ್ಕೇಟಿಂಗ್ ಸಂಸ್ಥೆಯ 7 ಜನ ಕ್ರೀಡಾಪಟುಗಳಾದ, ಮಹ್ಮದ್ ಆಹಿಲ್ ಎಂ ಅಕ್ಕಲಕೋಟ್, ಹೃದಯಾನಂದ ಅರವಿಂದ ಕೊಪ್ಪ, ಅಬ್ದುಲ್ ರಜಾಕ್ ಗುಡ್ನಾಳ, ವಿಕ್ರಾಂತ ಶಾರದಳ್ಳಿ, ಶಕುಂತಲಾ ಶಾರದಳ್ಳಿ, ಪೃತ್ವಿಗೌಡ ಪಾಟೀಲ್, ನುಮಾನ ಹಾದಿಮನಿ, ಟೀಮ್ ಮ್ಯಾನೇಜರ್ ಆಗಿ ಉಮಾ ಶಾರದಳ್ಳಿ ಅವರು ತರಬೇತಿ ಶಿಬಿರ ಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಿವಕುಮಾರ ಶಾರದಳ್ಳಿ ಉತ್ತರ ಕರ್ನಾಟಕ ಮತ್ತು ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬ್ಯಾಂಡಿ ಅಸೋಸಿಯೇಷನ, ಗುರುಮೂರ್ತಿ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಬ್ಯಾಂಡಿ ಅಸೋಸಿಯೇಷನ್ ತಿಳಿಸಿದ್ದಾರೆ.

ತರಬೇತಿ ಬಳಿಕ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಹಾಗೂ ಇತರೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಈ ಕ್ರೀಡಾಪಟುಗಳು ಭಾಗವಹಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಏನಿದು ಬ್ಯಾಂಡಿ(ಐಸ್) ಹಾಕಿ: ಸಾಮಾನ್ಯವಾಗಿ
ಹಾಕಿ ಚಿರಪರಿಚಿತ ಕ್ರೀಡೆ ಆದರೆ, ಇತ್ತೀಚೆಗೆ ಬ್ಯಾಂಡಿ ಹಾಕಿ ವೇಗವಾಗಿ ಬೆಳೆಯುತ್ತಿರುವ ಕ್ರೀಡೆಯಾಗಿದೆ. ಸಾಂಪ್ರದಾಯಿಕ ಹಾಕಿಗಿಂತ ಈ ಆಟದ ನಿಯಮಗಳು ಭಿನ್ನವಾಗಿವೆ. ಬ್ಯಾಂಡಿ ಚಳಿಗಾಲದ ಕ್ರೀಡೆಯಾಗಿದೆ. ಪಂದ್ಯಗಳು ಹಿಮಾವೃತ ನೆಲದಲ್ಲಿ ನಡೆಯುತ್ತದೆ. ಐಸ್ ಹಾಕಿ(ಬ್ಯಾಂಡಿ) ಯನ್ನು ದೊಡ್ಡದಾದ ಸಮತಟ್ಟಾದ ಐಸ್ ಮೇಲೆ, ಮೂರು ಇಂಚಿನ (76.2 ಮಿ.ಮೀ) ವಿಸ್ತೀರ್ಣವುಳ್ಳ ಬಿರುಸು ಅಥವಾ ಮೆದು ರಬ್ಬರ್‌ನ ಪಕ್ ಎಂದು ಕರೆಯಲ್ಪಡುವ ಡಿಸ್ಕ್ ನಿಂದ ಆಡಲಾಗುತ್ತದೆ. ಪಕ್ ಅನ್ನು ಉನ್ನತ ಶ್ರೇಣಿಯ ಆಟಗಳಲ್ಲಿ ಐಸ್‌ನ‌ ಮೇಲೆ ಜಿಗಿತ ಮತ್ತು ಘರ್ಷಣೆಯನ್ನು ಕಡಿಮೆ ಮಾಡಲು ಗಟ್ಟಿಗೊಳಿಸಲಾಗಿರುತ್ತದೆ. ಎರಡು ಸ್ಟೇಟರ್ ತಂಡಗಳ ಮಧ್ಯೆ ಆಟದ ಸ್ಪರ್ಧೆ ಏರ್ಪಡುತ್ತದೆ.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ