Seven athletes from Vijayapur district have been selected for bandy hockey training

ಬ್ಯಾಂಡಿ ಹಾಕಿ ತರಬೇತಿಗೆ ವಿಜಯಪುರ ಜಿಲ್ಲೆಯ ಏಳು ಕ್ರೀಡಾಪಟುಗಳು ಆಯ್ಕೆ

ಬ್ಯಾಂಡಿ ಹಾಕಿ ತರಬೇತಿಗೆ ವಿಜಯಪುರ ಜಿಲ್ಲೆಯ ಏಳು ಕ್ರೀಡಾಪಟುಗಳು ಆಯ್ಕೆ

ಮುದ್ದೇಬಿಹಾಳ: ಹಾಕಿ ಬಳಿಕ ಇದೀಗ ಬ್ಯಾಂಡಿ ಹಾಕಿಯಲ್ಲಿ ಮಿಂಚಲು ವಿಜಯಪುರ ಜಿಲ್ಲೆಯ ಪ್ರತಿಭೆಗಳು ಸಿದ್ದರಾಗಿದ್ದಾರೆ.

ಐಸ್ ಸ್ಕೇಟಿಂಗ ಗುರಗಾಂವ್ (ದೆಹಲಿ) ನಲ್ಲಿ ಆಗಸ್ಟ್ 4 ರಿಂದ 6 ರ ವರೆಗೆ ನಡೆಯುವ ಹಾಕಿ ಬ್ಯಾಂಡಿ ಕ್ರೀಡಾ ತರಬೇತಿ ಶಿಬಿರದಲ್ಲಿ
ಮುದ್ದೇಬಿಹಾಳ ಪಟ್ಟಣದ ಏಕಲವ್ಯ ರೋಲರ್ ಸ್ಕೇಟಿಂಗ್ ಸಂಸ್ಥೆಯ 7 ಜನ ಕ್ರೀಡಾಪಟುಗಳಾದ, ಮಹ್ಮದ್ ಆಹಿಲ್ ಎಂ ಅಕ್ಕಲಕೋಟ್, ಹೃದಯಾನಂದ ಅರವಿಂದ ಕೊಪ್ಪ, ಅಬ್ದುಲ್ ರಜಾಕ್ ಗುಡ್ನಾಳ, ವಿಕ್ರಾಂತ ಶಾರದಳ್ಳಿ, ಶಕುಂತಲಾ ಶಾರದಳ್ಳಿ, ಪೃತ್ವಿಗೌಡ ಪಾಟೀಲ್, ನುಮಾನ ಹಾದಿಮನಿ, ಟೀಮ್ ಮ್ಯಾನೇಜರ್ ಆಗಿ ಉಮಾ ಶಾರದಳ್ಳಿ ಅವರು ತರಬೇತಿ ಶಿಬಿರ ಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಿವಕುಮಾರ ಶಾರದಳ್ಳಿ ಉತ್ತರ ಕರ್ನಾಟಕ ಮತ್ತು ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬ್ಯಾಂಡಿ ಅಸೋಸಿಯೇಷನ, ಗುರುಮೂರ್ತಿ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಬ್ಯಾಂಡಿ ಅಸೋಸಿಯೇಷನ್ ತಿಳಿಸಿದ್ದಾರೆ.

ತರಬೇತಿ ಬಳಿಕ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಹಾಗೂ ಇತರೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಈ ಕ್ರೀಡಾಪಟುಗಳು ಭಾಗವಹಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಏನಿದು ಬ್ಯಾಂಡಿ(ಐಸ್) ಹಾಕಿ: ಸಾಮಾನ್ಯವಾಗಿ
ಹಾಕಿ ಚಿರಪರಿಚಿತ ಕ್ರೀಡೆ ಆದರೆ, ಇತ್ತೀಚೆಗೆ ಬ್ಯಾಂಡಿ ಹಾಕಿ ವೇಗವಾಗಿ ಬೆಳೆಯುತ್ತಿರುವ ಕ್ರೀಡೆಯಾಗಿದೆ. ಸಾಂಪ್ರದಾಯಿಕ ಹಾಕಿಗಿಂತ ಈ ಆಟದ ನಿಯಮಗಳು ಭಿನ್ನವಾಗಿವೆ. ಬ್ಯಾಂಡಿ ಚಳಿಗಾಲದ ಕ್ರೀಡೆಯಾಗಿದೆ. ಪಂದ್ಯಗಳು ಹಿಮಾವೃತ ನೆಲದಲ್ಲಿ ನಡೆಯುತ್ತದೆ. ಐಸ್ ಹಾಕಿ(ಬ್ಯಾಂಡಿ) ಯನ್ನು ದೊಡ್ಡದಾದ ಸಮತಟ್ಟಾದ ಐಸ್ ಮೇಲೆ, ಮೂರು ಇಂಚಿನ (76.2 ಮಿ.ಮೀ) ವಿಸ್ತೀರ್ಣವುಳ್ಳ ಬಿರುಸು ಅಥವಾ ಮೆದು ರಬ್ಬರ್‌ನ ಪಕ್ ಎಂದು ಕರೆಯಲ್ಪಡುವ ಡಿಸ್ಕ್ ನಿಂದ ಆಡಲಾಗುತ್ತದೆ. ಪಕ್ ಅನ್ನು ಉನ್ನತ ಶ್ರೇಣಿಯ ಆಟಗಳಲ್ಲಿ ಐಸ್‌ನ‌ ಮೇಲೆ ಜಿಗಿತ ಮತ್ತು ಘರ್ಷಣೆಯನ್ನು ಕಡಿಮೆ ಮಾಡಲು ಗಟ್ಟಿಗೊಳಿಸಲಾಗಿರುತ್ತದೆ. ಎರಡು ಸ್ಟೇಟರ್ ತಂಡಗಳ ಮಧ್ಯೆ ಆಟದ ಸ್ಪರ್ಧೆ ಏರ್ಪಡುತ್ತದೆ.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು