Seven athletes from Vijayapur district have been selected for bandy hockey training

ಬ್ಯಾಂಡಿ ಹಾಕಿ ತರಬೇತಿಗೆ ವಿಜಯಪುರ ಜಿಲ್ಲೆಯ ಏಳು ಕ್ರೀಡಾಪಟುಗಳು ಆಯ್ಕೆ

ಬ್ಯಾಂಡಿ ಹಾಕಿ ತರಬೇತಿಗೆ ವಿಜಯಪುರ ಜಿಲ್ಲೆಯ ಏಳು ಕ್ರೀಡಾಪಟುಗಳು ಆಯ್ಕೆ

ಮುದ್ದೇಬಿಹಾಳ: ಹಾಕಿ ಬಳಿಕ ಇದೀಗ ಬ್ಯಾಂಡಿ ಹಾಕಿಯಲ್ಲಿ ಮಿಂಚಲು ವಿಜಯಪುರ ಜಿಲ್ಲೆಯ ಪ್ರತಿಭೆಗಳು ಸಿದ್ದರಾಗಿದ್ದಾರೆ.

ಐಸ್ ಸ್ಕೇಟಿಂಗ ಗುರಗಾಂವ್ (ದೆಹಲಿ) ನಲ್ಲಿ ಆಗಸ್ಟ್ 4 ರಿಂದ 6 ರ ವರೆಗೆ ನಡೆಯುವ ಹಾಕಿ ಬ್ಯಾಂಡಿ ಕ್ರೀಡಾ ತರಬೇತಿ ಶಿಬಿರದಲ್ಲಿ
ಮುದ್ದೇಬಿಹಾಳ ಪಟ್ಟಣದ ಏಕಲವ್ಯ ರೋಲರ್ ಸ್ಕೇಟಿಂಗ್ ಸಂಸ್ಥೆಯ 7 ಜನ ಕ್ರೀಡಾಪಟುಗಳಾದ, ಮಹ್ಮದ್ ಆಹಿಲ್ ಎಂ ಅಕ್ಕಲಕೋಟ್, ಹೃದಯಾನಂದ ಅರವಿಂದ ಕೊಪ್ಪ, ಅಬ್ದುಲ್ ರಜಾಕ್ ಗುಡ್ನಾಳ, ವಿಕ್ರಾಂತ ಶಾರದಳ್ಳಿ, ಶಕುಂತಲಾ ಶಾರದಳ್ಳಿ, ಪೃತ್ವಿಗೌಡ ಪಾಟೀಲ್, ನುಮಾನ ಹಾದಿಮನಿ, ಟೀಮ್ ಮ್ಯಾನೇಜರ್ ಆಗಿ ಉಮಾ ಶಾರದಳ್ಳಿ ಅವರು ತರಬೇತಿ ಶಿಬಿರ ಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಿವಕುಮಾರ ಶಾರದಳ್ಳಿ ಉತ್ತರ ಕರ್ನಾಟಕ ಮತ್ತು ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬ್ಯಾಂಡಿ ಅಸೋಸಿಯೇಷನ, ಗುರುಮೂರ್ತಿ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಬ್ಯಾಂಡಿ ಅಸೋಸಿಯೇಷನ್ ತಿಳಿಸಿದ್ದಾರೆ.

ತರಬೇತಿ ಬಳಿಕ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಹಾಗೂ ಇತರೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಈ ಕ್ರೀಡಾಪಟುಗಳು ಭಾಗವಹಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಏನಿದು ಬ್ಯಾಂಡಿ(ಐಸ್) ಹಾಕಿ: ಸಾಮಾನ್ಯವಾಗಿ
ಹಾಕಿ ಚಿರಪರಿಚಿತ ಕ್ರೀಡೆ ಆದರೆ, ಇತ್ತೀಚೆಗೆ ಬ್ಯಾಂಡಿ ಹಾಕಿ ವೇಗವಾಗಿ ಬೆಳೆಯುತ್ತಿರುವ ಕ್ರೀಡೆಯಾಗಿದೆ. ಸಾಂಪ್ರದಾಯಿಕ ಹಾಕಿಗಿಂತ ಈ ಆಟದ ನಿಯಮಗಳು ಭಿನ್ನವಾಗಿವೆ. ಬ್ಯಾಂಡಿ ಚಳಿಗಾಲದ ಕ್ರೀಡೆಯಾಗಿದೆ. ಪಂದ್ಯಗಳು ಹಿಮಾವೃತ ನೆಲದಲ್ಲಿ ನಡೆಯುತ್ತದೆ. ಐಸ್ ಹಾಕಿ(ಬ್ಯಾಂಡಿ) ಯನ್ನು ದೊಡ್ಡದಾದ ಸಮತಟ್ಟಾದ ಐಸ್ ಮೇಲೆ, ಮೂರು ಇಂಚಿನ (76.2 ಮಿ.ಮೀ) ವಿಸ್ತೀರ್ಣವುಳ್ಳ ಬಿರುಸು ಅಥವಾ ಮೆದು ರಬ್ಬರ್‌ನ ಪಕ್ ಎಂದು ಕರೆಯಲ್ಪಡುವ ಡಿಸ್ಕ್ ನಿಂದ ಆಡಲಾಗುತ್ತದೆ. ಪಕ್ ಅನ್ನು ಉನ್ನತ ಶ್ರೇಣಿಯ ಆಟಗಳಲ್ಲಿ ಐಸ್‌ನ‌ ಮೇಲೆ ಜಿಗಿತ ಮತ್ತು ಘರ್ಷಣೆಯನ್ನು ಕಡಿಮೆ ಮಾಡಲು ಗಟ್ಟಿಗೊಳಿಸಲಾಗಿರುತ್ತದೆ. ಎರಡು ಸ್ಟೇಟರ್ ತಂಡಗಳ ಮಧ್ಯೆ ಆಟದ ಸ್ಪರ್ಧೆ ಏರ್ಪಡುತ್ತದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ