Leave politics and come to Mathadola - God Amareshwar

ರಾಜಕಾರಣ ಹೊರಗಿಟ್ಟು ಮಠದೊಳಕ್ಕೆ ಬನ್ನಿ-ಅಮರೇಶ್ವರ ದೇವರು

ರಾಜಕಾರಣ ಹೊರಗಿಟ್ಟು ಮಠದೊಳಕ್ಕೆ ಬನ್ನಿ-ಅಮರೇಶ್ವರ ದೇವರು

ಮುದ್ದೇಬಿಹಾಳ : ಆಸ್ತಿ ನೋಡಿಕೊಂಡು ನಾವು ಈ ಮಠಕ್ಕೆ ಬಂದಿಲ್ಲ. ಭಕ್ತರ ಭಕ್ತಿಯೇ ಶ್ರೀಮಠಕ್ಕೆ ಆಸ್ತಿ. ಹುನಗುಂದದಲ್ಲಿರುವ ಗಚ್ಚಿನಮಠಕ್ಕೆ ಹಿಂದೂ, ಮುಸ್ಲಿಂ, ಕ್ರೈಸ್ತ ಬಾಂಧವರನ್ನು ಕರೆಯುತ್ತೇವೆ. ಆ ಸಂಪ್ರದಾಯ ಮುದ್ದೇಬಿಹಾಳದ ಮಠದಲ್ಲೂ ಮುಂದುವರೆಸುತ್ತೇವೆ. ಮಠಕ್ಕೆ ಬರುವವರು ರಾಜಕಾರಣ ಹೊರಗಿಟ್ಟು ಸಾಮಾನ್ಯ ಭಕ್ತರಂತೆ ಬರಬೇಕು ಎಂದು ಮುದ್ದೇಬಿಹಾಳ ಹೊಸಮಠದ ನೂತನ ಸ್ವಾಮೀಜಿ ಅಮರೇಶ್ವರ ದೇವರು ಹೇಳಿದರು.

ಮುದ್ದೇಬಿಹಾಳ ಭಕ್ತರ ಆಹ್ವಾನದ ಮೇರೆಗೆ ಪಟ್ಟಣದ ಕಿಲ್ಲಾದಲ್ಲಿರುವ ಹೊಸಮಠಕ್ಕೆ ಭಾನುವಾರ ಆಗಮಿಸಿದ್ದ ಅವರಿಗೆ ಮುದ್ದೇಬಿಹಾಳ ವೀರಶೈವ ಲಿಂಗಾಯತ ಸಮಾಜದಿಂದ ನೀಡಿದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಸಂಸ್ಕಾರ ಕೊಡಬೇಕು ಎಂದರೆ ಗುರು ಶಿಷ್ಯರ ಪರಂಪರೆ ಬಹುಮುಖ್ಯವಾದದ್ದು. ಶಿಷ್ಯ ನೀರು, ಗುರುಗಳು ಬೆಂಕಿ ಆಗಿರಬೇಕು, ಇಲ್ಲವೇ ಶಿಷ್ಯಂದಿರು ಬೆಂಕಿ ಗುರುಗಳು ನೀರಿನಂತಿರಬೇಕು. ಭಕ್ತರು ಇದ್ದ ಹಾಗೆ ನಾನು ಇರುತ್ತೇನೆ. ಯಾವುದೇ ವ್ಯಕ್ತಿಗಳು ಬಂದರೂ ಮಠಕ್ಕೆ ಅವರು ಭಕ್ತರಾಗಿ ಬಂದು ಭಕ್ತರಾಗಿ ಹೋಗಬೇಕು. ಇದು ಯಾವುದೇ ಪಕ್ಷಕ್ಕೆ ಸಿಮೀತವಾದ ಮಠವಲ್ಲ ಎಂದು ಹೇಳಬಯಸುತ್ತೇವೆ. ಅಂತಹ ಭಾವನೆ ಬರುವುದಕ್ಕೆ ನಾವು ಬಿಡುವುದಿಲ್ಲ. ಎಲ್ಲರೂ ತಿರುಗಿ ನೋಡುವ ಮಠವನ್ನಾಗಿ ಹೊಸಮಠವನ್ನು ಮಾಡುತ್ತೇವೆ. ಜೀರ್ಣೋದ್ಧಾರಗೊಳಿಸಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಸಾಹಿತಿ ರುದ್ರೇಶ ಕಿತ್ತೂರ ಮಾತನಾಡಿ, ಮುದ್ದೇಬಿಹಾಳದಲ್ಲಿ ಹಿಂದೆ ಏಳು ಮಠಗಳಿದ್ದವು. ಆದರೆ ಒಬ್ಬರೂ ಸ್ವಾಮೀಜಿಗಳಿರಲಿಲ್ಲ. ಧರ್ಮ ಮಾರ್ಗದರ್ಶಕರ ಅಗತ್ಯತೆ ಇದ್ದು ಆಧ್ಯಾತ್ಮಿಕ ಚಿಂತನೆ ಕೊರತೆಯನ್ನು ತುಂಬುವ ಸ್ವಾಮೀಜಿಯವರನ್ನು ನಾವು ಬರಮಾಡಿಕೊಂಡಿದ್ದೇವೆ. ಮುದ್ದೇಬಿಹಾಳ ಸೌಹಾರ್ದತೆಗೆ ಹೆಸರಾಗಿದ್ದು ಹೊಸಮಠವನ್ನು ಜೀರ್ಣೋದ್ಧಾರಗೊಳಿಸಿ ಅದರ ಇತಿಹಾಸ ಮರಳಿ ಜನತೆಗೆ ಅರಿವು ಮೂಡಿಸಬೇಕು. ಅಳಿವಿನಂಚಿನಲ್ಲಿದ್ದ ಮಠವನ್ನು ಜೀರ್ಣೋದ್ಧಾರಗೊಳಿಸುವ ಸವಾಲು ಸ್ವೀಕರಿಸಿರುವ ಅಮರೇಶ್ವರ ಶ್ರೀಗಳ ಕರ್ತೃತ್ವ ಶಕ್ತಿ ಬಗ್ಗೆ ಅಭಿಮಾನ,ಗೌರವ ಮುದ್ದೇಬಿಹಾಳದ ಭಕ್ತರು ಹೊಂದಿದ್ದೇವೆ ಎಂದರು.

ನಿವೃತ್ತ ಪ್ರೊ.ಎಸ್.ಎಸ್.ಹೂಗಾರ ಮಾತನಾಡಿ, ಹೊಸಮಠದ ಜೀರ್ಣೋದ್ಧಾರಕ್ಕೆ 25 ಸಾವಿರ ರೂ ದೇಣಿಗೆ ನೀಡುವುದಾಗಿ ತಿಳಿಸಿದರು. ಹುನಗುಂದ ತಾಲ್ಲೂಕಿನ ಭಕ್ತರಾದ ಅರುಣ ದುದ್ದಗಿ, ಪ್ರಭು ಮಾಲಗತ್ತಿಮಠ ಮಾತನಾಡಿ, ಹುನಗುಂದದಲ್ಲಿ ಗಚ್ಚಿನಮಠ ಬೃಹದಾಕಾರವಾಗಿ ಬೆಳೆದಿದೆ. ಮುದ್ದೇಬಿಹಾಳದ ಭಕ್ತರ ಅಪೇಕ್ಷೆಯ ಮೇರೆಗೆ ಇಲ್ಲಿನ ಮಠವನ್ನು, ಜನರನ್ನು ಉದ್ಧರಿಸಲು ಶ್ರೀಗಳು ತಮ್ಮ ಜ್ಞಾನದ ದಾಸೋಹ ಕಾರ್ಯ ಕೈಗೊಳ್ಳಲಿದ್ದು ಭಕ್ತರು ಪೂಜ್ಯರಿಗೆ ಬೆಂಬಲವಾಗಿ ನಿಲ್ಲಬೇಕು ಎಂದರು.

ವೀರೇಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ, ಹುನಗುಂದದ ಮಹಾಂತೇಶ ಮಠ, ಮುಖಂಡರಾದ ವೆಂಕನಗೌಡ ಪಾಟೀಲ, ಶಿವಕುಮಾರ ಬಿರಾದಾರ, ಪತ್ರಕರ್ತ ಶಂಕರ ಹೆಬ್ಬಾಳ, ಪ್ರತಿಭಾ ಅಂಗಡಗೇರಿ, ದಾನಯ್ಯಸ್ವಾಮಿ ಹಿರೇಮಠ, ಬಸವರಾಜ ನಂದಿಕೇಶ್ವರಮಠ ಮಾತನಾಡಿದರು.

ಹುನಗುಂದ ಹಾಗೂ ಮುದ್ದೇಬಿಹಾಳದಿಂದ ಆಗಮಿಸಿದ್ದ ನೂರಾರು ಭಕ್ತರು ಇದ್ದರು. ಹೊಸಮಠಕ್ಕೆ ಮೊದಲ ಬಾರಿಗ ಆಗಮಿಸಿದ ಅಮರೇಶ್ವರ ದೇವರನ್ನು ಪುಷ್ಪಾರ್ಚನೆ ಮೂಲಕ ಭಕ್ತರು ಮಠಕ್ಕೆ ಸ್ವಾಗತಿಸಿದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ