Leave politics and come to Mathadola - God Amareshwar

ರಾಜಕಾರಣ ಹೊರಗಿಟ್ಟು ಮಠದೊಳಕ್ಕೆ ಬನ್ನಿ-ಅಮರೇಶ್ವರ ದೇವರು

ರಾಜಕಾರಣ ಹೊರಗಿಟ್ಟು ಮಠದೊಳಕ್ಕೆ ಬನ್ನಿ-ಅಮರೇಶ್ವರ ದೇವರು

ಮುದ್ದೇಬಿಹಾಳ : ಆಸ್ತಿ ನೋಡಿಕೊಂಡು ನಾವು ಈ ಮಠಕ್ಕೆ ಬಂದಿಲ್ಲ. ಭಕ್ತರ ಭಕ್ತಿಯೇ ಶ್ರೀಮಠಕ್ಕೆ ಆಸ್ತಿ. ಹುನಗುಂದದಲ್ಲಿರುವ ಗಚ್ಚಿನಮಠಕ್ಕೆ ಹಿಂದೂ, ಮುಸ್ಲಿಂ, ಕ್ರೈಸ್ತ ಬಾಂಧವರನ್ನು ಕರೆಯುತ್ತೇವೆ. ಆ ಸಂಪ್ರದಾಯ ಮುದ್ದೇಬಿಹಾಳದ ಮಠದಲ್ಲೂ ಮುಂದುವರೆಸುತ್ತೇವೆ. ಮಠಕ್ಕೆ ಬರುವವರು ರಾಜಕಾರಣ ಹೊರಗಿಟ್ಟು ಸಾಮಾನ್ಯ ಭಕ್ತರಂತೆ ಬರಬೇಕು ಎಂದು ಮುದ್ದೇಬಿಹಾಳ ಹೊಸಮಠದ ನೂತನ ಸ್ವಾಮೀಜಿ ಅಮರೇಶ್ವರ ದೇವರು ಹೇಳಿದರು.

ಮುದ್ದೇಬಿಹಾಳ ಭಕ್ತರ ಆಹ್ವಾನದ ಮೇರೆಗೆ ಪಟ್ಟಣದ ಕಿಲ್ಲಾದಲ್ಲಿರುವ ಹೊಸಮಠಕ್ಕೆ ಭಾನುವಾರ ಆಗಮಿಸಿದ್ದ ಅವರಿಗೆ ಮುದ್ದೇಬಿಹಾಳ ವೀರಶೈವ ಲಿಂಗಾಯತ ಸಮಾಜದಿಂದ ನೀಡಿದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಸಂಸ್ಕಾರ ಕೊಡಬೇಕು ಎಂದರೆ ಗುರು ಶಿಷ್ಯರ ಪರಂಪರೆ ಬಹುಮುಖ್ಯವಾದದ್ದು. ಶಿಷ್ಯ ನೀರು, ಗುರುಗಳು ಬೆಂಕಿ ಆಗಿರಬೇಕು, ಇಲ್ಲವೇ ಶಿಷ್ಯಂದಿರು ಬೆಂಕಿ ಗುರುಗಳು ನೀರಿನಂತಿರಬೇಕು. ಭಕ್ತರು ಇದ್ದ ಹಾಗೆ ನಾನು ಇರುತ್ತೇನೆ. ಯಾವುದೇ ವ್ಯಕ್ತಿಗಳು ಬಂದರೂ ಮಠಕ್ಕೆ ಅವರು ಭಕ್ತರಾಗಿ ಬಂದು ಭಕ್ತರಾಗಿ ಹೋಗಬೇಕು. ಇದು ಯಾವುದೇ ಪಕ್ಷಕ್ಕೆ ಸಿಮೀತವಾದ ಮಠವಲ್ಲ ಎಂದು ಹೇಳಬಯಸುತ್ತೇವೆ. ಅಂತಹ ಭಾವನೆ ಬರುವುದಕ್ಕೆ ನಾವು ಬಿಡುವುದಿಲ್ಲ. ಎಲ್ಲರೂ ತಿರುಗಿ ನೋಡುವ ಮಠವನ್ನಾಗಿ ಹೊಸಮಠವನ್ನು ಮಾಡುತ್ತೇವೆ. ಜೀರ್ಣೋದ್ಧಾರಗೊಳಿಸಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಸಾಹಿತಿ ರುದ್ರೇಶ ಕಿತ್ತೂರ ಮಾತನಾಡಿ, ಮುದ್ದೇಬಿಹಾಳದಲ್ಲಿ ಹಿಂದೆ ಏಳು ಮಠಗಳಿದ್ದವು. ಆದರೆ ಒಬ್ಬರೂ ಸ್ವಾಮೀಜಿಗಳಿರಲಿಲ್ಲ. ಧರ್ಮ ಮಾರ್ಗದರ್ಶಕರ ಅಗತ್ಯತೆ ಇದ್ದು ಆಧ್ಯಾತ್ಮಿಕ ಚಿಂತನೆ ಕೊರತೆಯನ್ನು ತುಂಬುವ ಸ್ವಾಮೀಜಿಯವರನ್ನು ನಾವು ಬರಮಾಡಿಕೊಂಡಿದ್ದೇವೆ. ಮುದ್ದೇಬಿಹಾಳ ಸೌಹಾರ್ದತೆಗೆ ಹೆಸರಾಗಿದ್ದು ಹೊಸಮಠವನ್ನು ಜೀರ್ಣೋದ್ಧಾರಗೊಳಿಸಿ ಅದರ ಇತಿಹಾಸ ಮರಳಿ ಜನತೆಗೆ ಅರಿವು ಮೂಡಿಸಬೇಕು. ಅಳಿವಿನಂಚಿನಲ್ಲಿದ್ದ ಮಠವನ್ನು ಜೀರ್ಣೋದ್ಧಾರಗೊಳಿಸುವ ಸವಾಲು ಸ್ವೀಕರಿಸಿರುವ ಅಮರೇಶ್ವರ ಶ್ರೀಗಳ ಕರ್ತೃತ್ವ ಶಕ್ತಿ ಬಗ್ಗೆ ಅಭಿಮಾನ,ಗೌರವ ಮುದ್ದೇಬಿಹಾಳದ ಭಕ್ತರು ಹೊಂದಿದ್ದೇವೆ ಎಂದರು.

ನಿವೃತ್ತ ಪ್ರೊ.ಎಸ್.ಎಸ್.ಹೂಗಾರ ಮಾತನಾಡಿ, ಹೊಸಮಠದ ಜೀರ್ಣೋದ್ಧಾರಕ್ಕೆ 25 ಸಾವಿರ ರೂ ದೇಣಿಗೆ ನೀಡುವುದಾಗಿ ತಿಳಿಸಿದರು. ಹುನಗುಂದ ತಾಲ್ಲೂಕಿನ ಭಕ್ತರಾದ ಅರುಣ ದುದ್ದಗಿ, ಪ್ರಭು ಮಾಲಗತ್ತಿಮಠ ಮಾತನಾಡಿ, ಹುನಗುಂದದಲ್ಲಿ ಗಚ್ಚಿನಮಠ ಬೃಹದಾಕಾರವಾಗಿ ಬೆಳೆದಿದೆ. ಮುದ್ದೇಬಿಹಾಳದ ಭಕ್ತರ ಅಪೇಕ್ಷೆಯ ಮೇರೆಗೆ ಇಲ್ಲಿನ ಮಠವನ್ನು, ಜನರನ್ನು ಉದ್ಧರಿಸಲು ಶ್ರೀಗಳು ತಮ್ಮ ಜ್ಞಾನದ ದಾಸೋಹ ಕಾರ್ಯ ಕೈಗೊಳ್ಳಲಿದ್ದು ಭಕ್ತರು ಪೂಜ್ಯರಿಗೆ ಬೆಂಬಲವಾಗಿ ನಿಲ್ಲಬೇಕು ಎಂದರು.

ವೀರೇಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ, ಹುನಗುಂದದ ಮಹಾಂತೇಶ ಮಠ, ಮುಖಂಡರಾದ ವೆಂಕನಗೌಡ ಪಾಟೀಲ, ಶಿವಕುಮಾರ ಬಿರಾದಾರ, ಪತ್ರಕರ್ತ ಶಂಕರ ಹೆಬ್ಬಾಳ, ಪ್ರತಿಭಾ ಅಂಗಡಗೇರಿ, ದಾನಯ್ಯಸ್ವಾಮಿ ಹಿರೇಮಠ, ಬಸವರಾಜ ನಂದಿಕೇಶ್ವರಮಠ ಮಾತನಾಡಿದರು.

ಹುನಗುಂದ ಹಾಗೂ ಮುದ್ದೇಬಿಹಾಳದಿಂದ ಆಗಮಿಸಿದ್ದ ನೂರಾರು ಭಕ್ತರು ಇದ್ದರು. ಹೊಸಮಠಕ್ಕೆ ಮೊದಲ ಬಾರಿಗ ಆಗಮಿಸಿದ ಅಮರೇಶ್ವರ ದೇವರನ್ನು ಪುಷ್ಪಾರ್ಚನೆ ಮೂಲಕ ಭಕ್ತರು ಮಠಕ್ಕೆ ಸ್ವಾಗತಿಸಿದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು