Leave politics and come to Mathadola - God Amareshwar

ರಾಜಕಾರಣ ಹೊರಗಿಟ್ಟು ಮಠದೊಳಕ್ಕೆ ಬನ್ನಿ-ಅಮರೇಶ್ವರ ದೇವರು

ರಾಜಕಾರಣ ಹೊರಗಿಟ್ಟು ಮಠದೊಳಕ್ಕೆ ಬನ್ನಿ-ಅಮರೇಶ್ವರ ದೇವರು

ಮುದ್ದೇಬಿಹಾಳ : ಆಸ್ತಿ ನೋಡಿಕೊಂಡು ನಾವು ಈ ಮಠಕ್ಕೆ ಬಂದಿಲ್ಲ. ಭಕ್ತರ ಭಕ್ತಿಯೇ ಶ್ರೀಮಠಕ್ಕೆ ಆಸ್ತಿ. ಹುನಗುಂದದಲ್ಲಿರುವ ಗಚ್ಚಿನಮಠಕ್ಕೆ ಹಿಂದೂ, ಮುಸ್ಲಿಂ, ಕ್ರೈಸ್ತ ಬಾಂಧವರನ್ನು ಕರೆಯುತ್ತೇವೆ. ಆ ಸಂಪ್ರದಾಯ ಮುದ್ದೇಬಿಹಾಳದ ಮಠದಲ್ಲೂ ಮುಂದುವರೆಸುತ್ತೇವೆ. ಮಠಕ್ಕೆ ಬರುವವರು ರಾಜಕಾರಣ ಹೊರಗಿಟ್ಟು ಸಾಮಾನ್ಯ ಭಕ್ತರಂತೆ ಬರಬೇಕು ಎಂದು ಮುದ್ದೇಬಿಹಾಳ ಹೊಸಮಠದ ನೂತನ ಸ್ವಾಮೀಜಿ ಅಮರೇಶ್ವರ ದೇವರು ಹೇಳಿದರು.

ಮುದ್ದೇಬಿಹಾಳ ಭಕ್ತರ ಆಹ್ವಾನದ ಮೇರೆಗೆ ಪಟ್ಟಣದ ಕಿಲ್ಲಾದಲ್ಲಿರುವ ಹೊಸಮಠಕ್ಕೆ ಭಾನುವಾರ ಆಗಮಿಸಿದ್ದ ಅವರಿಗೆ ಮುದ್ದೇಬಿಹಾಳ ವೀರಶೈವ ಲಿಂಗಾಯತ ಸಮಾಜದಿಂದ ನೀಡಿದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಸಂಸ್ಕಾರ ಕೊಡಬೇಕು ಎಂದರೆ ಗುರು ಶಿಷ್ಯರ ಪರಂಪರೆ ಬಹುಮುಖ್ಯವಾದದ್ದು. ಶಿಷ್ಯ ನೀರು, ಗುರುಗಳು ಬೆಂಕಿ ಆಗಿರಬೇಕು, ಇಲ್ಲವೇ ಶಿಷ್ಯಂದಿರು ಬೆಂಕಿ ಗುರುಗಳು ನೀರಿನಂತಿರಬೇಕು. ಭಕ್ತರು ಇದ್ದ ಹಾಗೆ ನಾನು ಇರುತ್ತೇನೆ. ಯಾವುದೇ ವ್ಯಕ್ತಿಗಳು ಬಂದರೂ ಮಠಕ್ಕೆ ಅವರು ಭಕ್ತರಾಗಿ ಬಂದು ಭಕ್ತರಾಗಿ ಹೋಗಬೇಕು. ಇದು ಯಾವುದೇ ಪಕ್ಷಕ್ಕೆ ಸಿಮೀತವಾದ ಮಠವಲ್ಲ ಎಂದು ಹೇಳಬಯಸುತ್ತೇವೆ. ಅಂತಹ ಭಾವನೆ ಬರುವುದಕ್ಕೆ ನಾವು ಬಿಡುವುದಿಲ್ಲ. ಎಲ್ಲರೂ ತಿರುಗಿ ನೋಡುವ ಮಠವನ್ನಾಗಿ ಹೊಸಮಠವನ್ನು ಮಾಡುತ್ತೇವೆ. ಜೀರ್ಣೋದ್ಧಾರಗೊಳಿಸಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಸಾಹಿತಿ ರುದ್ರೇಶ ಕಿತ್ತೂರ ಮಾತನಾಡಿ, ಮುದ್ದೇಬಿಹಾಳದಲ್ಲಿ ಹಿಂದೆ ಏಳು ಮಠಗಳಿದ್ದವು. ಆದರೆ ಒಬ್ಬರೂ ಸ್ವಾಮೀಜಿಗಳಿರಲಿಲ್ಲ. ಧರ್ಮ ಮಾರ್ಗದರ್ಶಕರ ಅಗತ್ಯತೆ ಇದ್ದು ಆಧ್ಯಾತ್ಮಿಕ ಚಿಂತನೆ ಕೊರತೆಯನ್ನು ತುಂಬುವ ಸ್ವಾಮೀಜಿಯವರನ್ನು ನಾವು ಬರಮಾಡಿಕೊಂಡಿದ್ದೇವೆ. ಮುದ್ದೇಬಿಹಾಳ ಸೌಹಾರ್ದತೆಗೆ ಹೆಸರಾಗಿದ್ದು ಹೊಸಮಠವನ್ನು ಜೀರ್ಣೋದ್ಧಾರಗೊಳಿಸಿ ಅದರ ಇತಿಹಾಸ ಮರಳಿ ಜನತೆಗೆ ಅರಿವು ಮೂಡಿಸಬೇಕು. ಅಳಿವಿನಂಚಿನಲ್ಲಿದ್ದ ಮಠವನ್ನು ಜೀರ್ಣೋದ್ಧಾರಗೊಳಿಸುವ ಸವಾಲು ಸ್ವೀಕರಿಸಿರುವ ಅಮರೇಶ್ವರ ಶ್ರೀಗಳ ಕರ್ತೃತ್ವ ಶಕ್ತಿ ಬಗ್ಗೆ ಅಭಿಮಾನ,ಗೌರವ ಮುದ್ದೇಬಿಹಾಳದ ಭಕ್ತರು ಹೊಂದಿದ್ದೇವೆ ಎಂದರು.

ನಿವೃತ್ತ ಪ್ರೊ.ಎಸ್.ಎಸ್.ಹೂಗಾರ ಮಾತನಾಡಿ, ಹೊಸಮಠದ ಜೀರ್ಣೋದ್ಧಾರಕ್ಕೆ 25 ಸಾವಿರ ರೂ ದೇಣಿಗೆ ನೀಡುವುದಾಗಿ ತಿಳಿಸಿದರು. ಹುನಗುಂದ ತಾಲ್ಲೂಕಿನ ಭಕ್ತರಾದ ಅರುಣ ದುದ್ದಗಿ, ಪ್ರಭು ಮಾಲಗತ್ತಿಮಠ ಮಾತನಾಡಿ, ಹುನಗುಂದದಲ್ಲಿ ಗಚ್ಚಿನಮಠ ಬೃಹದಾಕಾರವಾಗಿ ಬೆಳೆದಿದೆ. ಮುದ್ದೇಬಿಹಾಳದ ಭಕ್ತರ ಅಪೇಕ್ಷೆಯ ಮೇರೆಗೆ ಇಲ್ಲಿನ ಮಠವನ್ನು, ಜನರನ್ನು ಉದ್ಧರಿಸಲು ಶ್ರೀಗಳು ತಮ್ಮ ಜ್ಞಾನದ ದಾಸೋಹ ಕಾರ್ಯ ಕೈಗೊಳ್ಳಲಿದ್ದು ಭಕ್ತರು ಪೂಜ್ಯರಿಗೆ ಬೆಂಬಲವಾಗಿ ನಿಲ್ಲಬೇಕು ಎಂದರು.

ವೀರೇಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ, ಹುನಗುಂದದ ಮಹಾಂತೇಶ ಮಠ, ಮುಖಂಡರಾದ ವೆಂಕನಗೌಡ ಪಾಟೀಲ, ಶಿವಕುಮಾರ ಬಿರಾದಾರ, ಪತ್ರಕರ್ತ ಶಂಕರ ಹೆಬ್ಬಾಳ, ಪ್ರತಿಭಾ ಅಂಗಡಗೇರಿ, ದಾನಯ್ಯಸ್ವಾಮಿ ಹಿರೇಮಠ, ಬಸವರಾಜ ನಂದಿಕೇಶ್ವರಮಠ ಮಾತನಾಡಿದರು.

ಹುನಗುಂದ ಹಾಗೂ ಮುದ್ದೇಬಿಹಾಳದಿಂದ ಆಗಮಿಸಿದ್ದ ನೂರಾರು ಭಕ್ತರು ಇದ್ದರು. ಹೊಸಮಠಕ್ಕೆ ಮೊದಲ ಬಾರಿಗ ಆಗಮಿಸಿದ ಅಮರೇಶ್ವರ ದೇವರನ್ನು ಪುಷ್ಪಾರ್ಚನೆ ಮೂಲಕ ಭಕ್ತರು ಮಠಕ್ಕೆ ಸ್ವಾಗತಿಸಿದರು.

Latest News

ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳ ಲೋಕಾರ್ಪಣೆ

ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳ ಲೋಕಾರ್ಪಣೆ

ಸಿದ್ಲೀಪುರ(ಶಿವಮೊಗ್ಗ ಜಿಲ್ಲೆ) ಆಗಸ್ಟ್‌ 04: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌

ಬಡವರ ಕೈಗೆ ಹಣ ಬಂದಾಗ ಮಾತ್ರ ದೇಶದ ಪ್ರಗತಿ: ಸಚಿವ ಲಾಡ್

ಬಡವರ ಕೈಗೆ ಹಣ ಬಂದಾಗ ಮಾತ್ರ ದೇಶದ ಪ್ರಗತಿ: ಸಚಿವ ಲಾಡ್

ಶಿವಮೊಗ್ಗ, ಆಗಸ್ಟ್ 04 : ಬಡವರ ಕೈಯಲ್ಲಿ ಹಣ ಬಂದಾಗ ಮಾತ್ರ ದೇಶದ ಪ್ರಗತಿಯಾಗಲಿದ್ದು,

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸದುಗೌಡ ಆಯ್ಕೆ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸದುಗೌಡ ಆಯ್ಕೆ

ಮುಧೋಳ : ನಗರದ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಕೋ ಅರ್ಡಿನೆಟರ್ ಅಗಿದ್ದ ನಗರದ

ಮಹಿಳಾ ಕಾಂಗ್ರೆಸ್‌ಗೆ ಅಕ್ಷತಾ ಚಲವಾದಿ ನೇಮಕ

ಮಹಿಳಾ ಕಾಂಗ್ರೆಸ್‌ಗೆ ಅಕ್ಷತಾ ಚಲವಾದಿ ನೇಮಕ

ಮುದ್ದೇಬಿಹಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷೆಯಾಗಿ ಅಕ್ಷತಾ ಶರಣು ಚಲವಾದಿ ಅವರನ್ನು

ವಲಯ ಮಟ್ಟದ ಕ್ರೀಡಾಕೂಟ: ಕರ್ಲಕೊಪ್ಪ ಶಾಲೆಯ ಬಾಲಕಿಯರಿಗೆ ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನ

ವಲಯ ಮಟ್ಟದ ಕ್ರೀಡಾಕೂಟ: ಕರ್ಲಕೊಪ್ಪ ಶಾಲೆಯ ಬಾಲಕಿಯರಿಗೆ ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನ

ಕುಳಗೇರಿ ಕ್ರಾಸ್: ಸಮೀಪದ ಕುಳಗೇರಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರ್ ಎಸ್ ಕೆ ಯಲ್ಲಿ ಆಯೋಜನೆಗೊಂಡಿತ್ತು. ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ಲಕೊಪ್ಪದ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ. ಬಾಲಕಿಯರ ಕಬ್ಬಡ್ಡಿ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ. ವೈಯಕ್ತಿಕ ಆಟಗಳಲ್ಲಿ ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇವರಿಗೆ ಶಾಲಾ ಆಡಳಿತ ಹಾಗೂ ಎಸ್.ಡಿ.ಎಂ.ಸಿಯ ಅಧ್ಯಕ್ಷರು ಮತ್ತು ಸರ್ವ

ಶ್ರಾವಣ ಮಾಸದ ಸೌಹಾರ್ದ ಕೂಟ ಆಯೋಜನೆ: ಆ.9,10 ರಂದು ಕಣ್ಣಿನ ಉಚಿತ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

ಶ್ರಾವಣ ಮಾಸದ ಸೌಹಾರ್ದ ಕೂಟ ಆಯೋಜನೆ: ಆ.9,10 ರಂದು ಕಣ್ಣಿನ ಉಚಿತ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

ಮುದ್ದೇಬಿಹಾಳ : ರಂಜಾನ್ ಮಾಸದಲ್ಲಿ ಈದ್ ಸೌಹಾರ್ದ ಕೂಟ ಏರ್ಪಡಿಸಿದಂತೆ ಈ ಬಾರಿ ಮನಿಯಾರ ಚಾರಿಟೇಬಲ್ ಟ್ರಸ್ಟ್ನಿಂದ ಶ್ರಾವಣ ಮಾಸದ ಸೌಹಾರ್ದ ಕೂಟ ಹಮ್ಮಿಕೊಂಡಿದ್ದೇವೆ ಎಂದು ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಅಯೂಬ ಮನಿಯಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ತಾಳಿಕೋಟಿ, ಮುದ್ದೇಬಿಹಾಳ ಹಾಗೂ ನಾಲತವಾಡದಲ್ಲಿ ಅನೇಕ ವರ್ಷಗಳಿಂದ ಟ್ರಸ್ಟ್ನಿಂದ ವಿಧವೆಯರಿಗೆ ಪಿಂಚಣಿ, ಈದ್ ಕಿಟ್ ವಿತರಣೆ, ಬೀದಿಯಲ್ಲಿರುವ ನಿರಾಶ್ರಿತರಿಗೆ ಆಶ್ರಯ, ಬಡ ವಿದ್ಯಾರ್ಥಿಗಳಿಗೆ