Leave politics and come to Mathadola - God Amareshwar

ರಾಜಕಾರಣ ಹೊರಗಿಟ್ಟು ಮಠದೊಳಕ್ಕೆ ಬನ್ನಿ-ಅಮರೇಶ್ವರ ದೇವರು

ರಾಜಕಾರಣ ಹೊರಗಿಟ್ಟು ಮಠದೊಳಕ್ಕೆ ಬನ್ನಿ-ಅಮರೇಶ್ವರ ದೇವರು

ಮುದ್ದೇಬಿಹಾಳ : ಆಸ್ತಿ ನೋಡಿಕೊಂಡು ನಾವು ಈ ಮಠಕ್ಕೆ ಬಂದಿಲ್ಲ. ಭಕ್ತರ ಭಕ್ತಿಯೇ ಶ್ರೀಮಠಕ್ಕೆ ಆಸ್ತಿ. ಹುನಗುಂದದಲ್ಲಿರುವ ಗಚ್ಚಿನಮಠಕ್ಕೆ ಹಿಂದೂ, ಮುಸ್ಲಿಂ, ಕ್ರೈಸ್ತ ಬಾಂಧವರನ್ನು ಕರೆಯುತ್ತೇವೆ. ಆ ಸಂಪ್ರದಾಯ ಮುದ್ದೇಬಿಹಾಳದ ಮಠದಲ್ಲೂ ಮುಂದುವರೆಸುತ್ತೇವೆ. ಮಠಕ್ಕೆ ಬರುವವರು ರಾಜಕಾರಣ ಹೊರಗಿಟ್ಟು ಸಾಮಾನ್ಯ ಭಕ್ತರಂತೆ ಬರಬೇಕು ಎಂದು ಮುದ್ದೇಬಿಹಾಳ ಹೊಸಮಠದ ನೂತನ ಸ್ವಾಮೀಜಿ ಅಮರೇಶ್ವರ ದೇವರು ಹೇಳಿದರು.

ಮುದ್ದೇಬಿಹಾಳ ಭಕ್ತರ ಆಹ್ವಾನದ ಮೇರೆಗೆ ಪಟ್ಟಣದ ಕಿಲ್ಲಾದಲ್ಲಿರುವ ಹೊಸಮಠಕ್ಕೆ ಭಾನುವಾರ ಆಗಮಿಸಿದ್ದ ಅವರಿಗೆ ಮುದ್ದೇಬಿಹಾಳ ವೀರಶೈವ ಲಿಂಗಾಯತ ಸಮಾಜದಿಂದ ನೀಡಿದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಸಂಸ್ಕಾರ ಕೊಡಬೇಕು ಎಂದರೆ ಗುರು ಶಿಷ್ಯರ ಪರಂಪರೆ ಬಹುಮುಖ್ಯವಾದದ್ದು. ಶಿಷ್ಯ ನೀರು, ಗುರುಗಳು ಬೆಂಕಿ ಆಗಿರಬೇಕು, ಇಲ್ಲವೇ ಶಿಷ್ಯಂದಿರು ಬೆಂಕಿ ಗುರುಗಳು ನೀರಿನಂತಿರಬೇಕು. ಭಕ್ತರು ಇದ್ದ ಹಾಗೆ ನಾನು ಇರುತ್ತೇನೆ. ಯಾವುದೇ ವ್ಯಕ್ತಿಗಳು ಬಂದರೂ ಮಠಕ್ಕೆ ಅವರು ಭಕ್ತರಾಗಿ ಬಂದು ಭಕ್ತರಾಗಿ ಹೋಗಬೇಕು. ಇದು ಯಾವುದೇ ಪಕ್ಷಕ್ಕೆ ಸಿಮೀತವಾದ ಮಠವಲ್ಲ ಎಂದು ಹೇಳಬಯಸುತ್ತೇವೆ. ಅಂತಹ ಭಾವನೆ ಬರುವುದಕ್ಕೆ ನಾವು ಬಿಡುವುದಿಲ್ಲ. ಎಲ್ಲರೂ ತಿರುಗಿ ನೋಡುವ ಮಠವನ್ನಾಗಿ ಹೊಸಮಠವನ್ನು ಮಾಡುತ್ತೇವೆ. ಜೀರ್ಣೋದ್ಧಾರಗೊಳಿಸಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಸಾಹಿತಿ ರುದ್ರೇಶ ಕಿತ್ತೂರ ಮಾತನಾಡಿ, ಮುದ್ದೇಬಿಹಾಳದಲ್ಲಿ ಹಿಂದೆ ಏಳು ಮಠಗಳಿದ್ದವು. ಆದರೆ ಒಬ್ಬರೂ ಸ್ವಾಮೀಜಿಗಳಿರಲಿಲ್ಲ. ಧರ್ಮ ಮಾರ್ಗದರ್ಶಕರ ಅಗತ್ಯತೆ ಇದ್ದು ಆಧ್ಯಾತ್ಮಿಕ ಚಿಂತನೆ ಕೊರತೆಯನ್ನು ತುಂಬುವ ಸ್ವಾಮೀಜಿಯವರನ್ನು ನಾವು ಬರಮಾಡಿಕೊಂಡಿದ್ದೇವೆ. ಮುದ್ದೇಬಿಹಾಳ ಸೌಹಾರ್ದತೆಗೆ ಹೆಸರಾಗಿದ್ದು ಹೊಸಮಠವನ್ನು ಜೀರ್ಣೋದ್ಧಾರಗೊಳಿಸಿ ಅದರ ಇತಿಹಾಸ ಮರಳಿ ಜನತೆಗೆ ಅರಿವು ಮೂಡಿಸಬೇಕು. ಅಳಿವಿನಂಚಿನಲ್ಲಿದ್ದ ಮಠವನ್ನು ಜೀರ್ಣೋದ್ಧಾರಗೊಳಿಸುವ ಸವಾಲು ಸ್ವೀಕರಿಸಿರುವ ಅಮರೇಶ್ವರ ಶ್ರೀಗಳ ಕರ್ತೃತ್ವ ಶಕ್ತಿ ಬಗ್ಗೆ ಅಭಿಮಾನ,ಗೌರವ ಮುದ್ದೇಬಿಹಾಳದ ಭಕ್ತರು ಹೊಂದಿದ್ದೇವೆ ಎಂದರು.

ನಿವೃತ್ತ ಪ್ರೊ.ಎಸ್.ಎಸ್.ಹೂಗಾರ ಮಾತನಾಡಿ, ಹೊಸಮಠದ ಜೀರ್ಣೋದ್ಧಾರಕ್ಕೆ 25 ಸಾವಿರ ರೂ ದೇಣಿಗೆ ನೀಡುವುದಾಗಿ ತಿಳಿಸಿದರು. ಹುನಗುಂದ ತಾಲ್ಲೂಕಿನ ಭಕ್ತರಾದ ಅರುಣ ದುದ್ದಗಿ, ಪ್ರಭು ಮಾಲಗತ್ತಿಮಠ ಮಾತನಾಡಿ, ಹುನಗುಂದದಲ್ಲಿ ಗಚ್ಚಿನಮಠ ಬೃಹದಾಕಾರವಾಗಿ ಬೆಳೆದಿದೆ. ಮುದ್ದೇಬಿಹಾಳದ ಭಕ್ತರ ಅಪೇಕ್ಷೆಯ ಮೇರೆಗೆ ಇಲ್ಲಿನ ಮಠವನ್ನು, ಜನರನ್ನು ಉದ್ಧರಿಸಲು ಶ್ರೀಗಳು ತಮ್ಮ ಜ್ಞಾನದ ದಾಸೋಹ ಕಾರ್ಯ ಕೈಗೊಳ್ಳಲಿದ್ದು ಭಕ್ತರು ಪೂಜ್ಯರಿಗೆ ಬೆಂಬಲವಾಗಿ ನಿಲ್ಲಬೇಕು ಎಂದರು.

ವೀರೇಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ, ಹುನಗುಂದದ ಮಹಾಂತೇಶ ಮಠ, ಮುಖಂಡರಾದ ವೆಂಕನಗೌಡ ಪಾಟೀಲ, ಶಿವಕುಮಾರ ಬಿರಾದಾರ, ಪತ್ರಕರ್ತ ಶಂಕರ ಹೆಬ್ಬಾಳ, ಪ್ರತಿಭಾ ಅಂಗಡಗೇರಿ, ದಾನಯ್ಯಸ್ವಾಮಿ ಹಿರೇಮಠ, ಬಸವರಾಜ ನಂದಿಕೇಶ್ವರಮಠ ಮಾತನಾಡಿದರು.

ಹುನಗುಂದ ಹಾಗೂ ಮುದ್ದೇಬಿಹಾಳದಿಂದ ಆಗಮಿಸಿದ್ದ ನೂರಾರು ಭಕ್ತರು ಇದ್ದರು. ಹೊಸಮಠಕ್ಕೆ ಮೊದಲ ಬಾರಿಗ ಆಗಮಿಸಿದ ಅಮರೇಶ್ವರ ದೇವರನ್ನು ಪುಷ್ಪಾರ್ಚನೆ ಮೂಲಕ ಭಕ್ತರು ಮಠಕ್ಕೆ ಸ್ವಾಗತಿಸಿದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ