Workers' protest demanding fulfillment of various demands in the lap of rain raya

ಮಳೆರಾಯನ ಮಡಿಲಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕರ ಪ್ರತಿಭಟನೆ

ಮಳೆರಾಯನ ಮಡಿಲಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕರ ಪ್ರತಿಭಟನೆ

ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮೂರನೇ ದಿನದ ಪ್ರಾರಂಭ. ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದ ಜಿಲ್ಲಾ ಘಟಕದಿಂದ ಗೋಕುಲ ರಸ್ತೆ ಪ್ರಿಯದರ್ಶಿನಿ ಕಾಲೋನಿಯಲ್ಲಿರುವ ಕಾರ್ಮಿಕರ ಭವನದ ಎದುರು ಸೋಮವಾರ ದಿಂದ ಪ್ರಾರಂಭವಾಗಿ ಇಂದಿಗೆ ಮೂರನೇ ದಿನ ಪ್ರತಿಭಟನೆ ಮುಂದುವರೆದಿದೆ.

ಮಂಗಳವಾರದಂದು ರಾತ್ರಿ ಸರಿ-ಸುಮಾರು ಎಂಟು ಗಂಟೆಗೆ ಏಕಾಏಕಿ ಧಾರಾಕಾರ ಮಳೆಯಲ್ಲಿ ಪ್ರತಿಭಟನೆ ಮುಂದುವರಿಯುತ್ತಿತ್ತು ಈ ಪ್ರತಿಭಟನೆಯು ಅನಿರ್ದಿಷ್ಟಾವಧಿ ಧರಣಿ ಆಗಿರುವುದರಿಂದ ಹುಬ್ಬಳ್ಳಿ-ಧಾರವಾಡ ಕಮಿಷನರಾದ ಎನ್ ಶಶಿಕುಮಾರ್ ಅವರು ಪ್ರತಿಭಟನಾಕಾರರೊಂದಿಗೆ ಮನವಲಿಸುವ ಪ್ರಯತ್ನ ಮಾಡಿದರು ಆದರೂ ಪ್ರತಿಭಟನಾಕಾರರು ಕಾರ್ಮಿಕರ ಇಲಾಖೆಯ ಸಚಿವರು ಬರೋವರೆಗೂ ಪ್ರತಿಭಟನೆ ಮುಂದುವರೆಯುತ್ತದೆ ಎಂದು ತಿಳಿಸಿದರು.

ಹಾಗೆ ನಮ್ಮ ಮನವಿಯನ್ನು ಸ್ವೀಕರಿಸಬೇಕು ತದನಂತರ ನಾವು ಪ್ರತಿಭಟನೆಯನ್ನು ಹಿಂಬಡಿಯುತ್ತೇವೆ ಎಂಬವ ಮಾತನ್ನು ಅಧಿಕಾರಿಗಳಿಗೆ ತಿಳಿಸಿದರು.

ಪ್ರತಿಭಟನಾಕಾರರ ಬೇಡಿಕೆ ಕಾಳಜಿ ಇಲ್ಲಾ ಪ್ರತಿಭಟನೆ ನಿಲ್ಲಿಸುವದರ ಬಗ್ಗೆ ಕುತಂತ್ರಿ ಯೋಚನೆಗಳು ಹಾಗೂ ಬೇರೆಯವರಿಗೆ ಕರೆ ಮಾಡಿ ಸಂದೇಶಗಳು ತಿಳಿಸುವುದಕ್ಕಿಂತ ಮೊದಲು ಪ್ರತಿಭಟನಾಕಾರರಿಗೆ ಕರೆ ಮಾಡಿ ಅವರ ಬಗ್ಗೆ – ಅವರ ಬೇಡಿಕೆಗಳ ಬಗ್ಗೆ ಯಾರ ಜೊತೆಯೂ ಮಾತುಕತೆ ಆಡದೆ ಇರೋದು ವಿಪರ್ಯಾಸ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕಾರ್ಮಿಕ ಮುಖಂಡರ ಮಾತನಾಡಿ, ಮಕ್ಕಳಿಗೆ ಕೂಡಲೇ ಶೈಕ್ಷಣಿಕ, ಇತರೆ ಧನಸಹಾಯ ಮಂಜೂರು ಮಾಡಬೇಕು. ಅನಾವಶ್ಯಕ ಟೆಂಡ‌ರ್ ಕರೆಯುವುದನ್ನು ಕೂಡಲೇ ಸ್ಥಗಿತಗೊಳಿಸಬೇಕು. 15-20 ವರ್ಷಗಳ ಹಿಂದೆ ಆಗಿರುವ ನೋಂದಣಿ ಆಧರಿಸಿ ಈಗ ಕಾರ್ಮಿಕರ ಕಾರ್ಡ್‌ಗಳನ್ನು ರದ್ದುಪಡಿಸುತ್ತಿದ್ದು, ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ಒದಗಿಸಲು ಮುಂದಾಗಬೇಕು. ಹೆರಿಗೆ ಭತ್ಯೆ, ಹಿರಿಯ ಕಾರ್ಮಿಕರ ಪಿಂಚಣಿ, ಅಂತ್ಯಕ್ರಿಯೆ, ಅಪಘಾತ ಪರಿಹಾರವನ್ನು ಈವರೆಗೂ ಮಂಜೂರು ಮಾಡಿಲ್ಲ ಕೂಡಲೇ ಅದನ್ನು ಬಿಡುಗಡೆ ಮಾಡಬೇಕು. ಅರ್ಜಿ ವಿಲೇವಾರಿಯಲ್ಲಿ ಆಗುತ್ತಿರುವ ವಿಳಂಬ ತಪ್ಪಿಸಬೇಕು ಎಂದು ಒತ್ತಾಯಿಸಿದರು.

ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಸ್ಥಳಕ್ಕೆ ಬಂದು ನಮ್ಮ ಬೇಡಿಕೆ ಈಡೇರಿಸುವ ಭರವಸೆ ನೀಡುವವರೆಗೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಯಾದಗಿರಿ , ಗುಲ್ಬರ್ಗ, ರಾಯಚೂರು, ಗದಗ, ಹಾವೇರಿ, ಉತ್ತರ ಕನ್ನಡ, ಧಾರವಾಡ ವಿವಿಧ ಜಿಲ್ಲೆಗಳ ಕಾರ್ಮಿಕರ ಸಂಘಗಳು ಭಾಗವಹಿಸಿದ್ದರು. ಅಶ್ವಥ್ ಮರಿಗೌಡ್ರ, ಶಿವು ರಾಠೋಡ, ಶಿವಕುಮಾರ ಬಂಡಿವಡ್ಡರ, ವಾಸು ಲಮಾಣಿ, ಮುಸ್ತಾಕ್ ನದಾಫ್, ಎಸ್.ಪಿ. ಕರಿಸೋಮನಗೌಡ್ರ, ಶರಣಪ್ಪ ರೊಟ್ಟಿ , ಶಿವಕುಮಾರ ಗೌಡ್ರ, ಬೀರಪ್ಪ ಡೊಳ್ಳ, ರಾಜು ದೊರೆ, ಈರಪ್ಪ ವಲ್ಕಂದಿನ್ನಿ , ವೆಂಕಟೇಶ್, ತಿಮ್ಮಪ್ಪ, ತಾಯಪ್ಪ , ರವಿರಾಜ್, ದೇವಿಂದ್ರ ಕಾಲವಾ, ಶಿವಾನಂದ ಅಸೊಟ್ಟಿ, ಲಕ್ಷ್ಮಣ್, ಶಂಕರ್ ಲಂಬಾಣಿ , ಜೋತಿ ಪತ್ತಾರ, ಶಭಿನಾ ಮೇಲಿನಮನಿ, ಇನ್ನಿತರರಿದ್ದರು.

ವರದಿಗಾರ : ಶಿವು ರಾಠೋಡ

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು