Workers' protest demanding fulfillment of various demands in the lap of rain raya

ಮಳೆರಾಯನ ಮಡಿಲಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕರ ಪ್ರತಿಭಟನೆ

ಮಳೆರಾಯನ ಮಡಿಲಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕರ ಪ್ರತಿಭಟನೆ

ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮೂರನೇ ದಿನದ ಪ್ರಾರಂಭ. ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದ ಜಿಲ್ಲಾ ಘಟಕದಿಂದ ಗೋಕುಲ ರಸ್ತೆ ಪ್ರಿಯದರ್ಶಿನಿ ಕಾಲೋನಿಯಲ್ಲಿರುವ ಕಾರ್ಮಿಕರ ಭವನದ ಎದುರು ಸೋಮವಾರ ದಿಂದ ಪ್ರಾರಂಭವಾಗಿ ಇಂದಿಗೆ ಮೂರನೇ ದಿನ ಪ್ರತಿಭಟನೆ ಮುಂದುವರೆದಿದೆ.

ಮಂಗಳವಾರದಂದು ರಾತ್ರಿ ಸರಿ-ಸುಮಾರು ಎಂಟು ಗಂಟೆಗೆ ಏಕಾಏಕಿ ಧಾರಾಕಾರ ಮಳೆಯಲ್ಲಿ ಪ್ರತಿಭಟನೆ ಮುಂದುವರಿಯುತ್ತಿತ್ತು ಈ ಪ್ರತಿಭಟನೆಯು ಅನಿರ್ದಿಷ್ಟಾವಧಿ ಧರಣಿ ಆಗಿರುವುದರಿಂದ ಹುಬ್ಬಳ್ಳಿ-ಧಾರವಾಡ ಕಮಿಷನರಾದ ಎನ್ ಶಶಿಕುಮಾರ್ ಅವರು ಪ್ರತಿಭಟನಾಕಾರರೊಂದಿಗೆ ಮನವಲಿಸುವ ಪ್ರಯತ್ನ ಮಾಡಿದರು ಆದರೂ ಪ್ರತಿಭಟನಾಕಾರರು ಕಾರ್ಮಿಕರ ಇಲಾಖೆಯ ಸಚಿವರು ಬರೋವರೆಗೂ ಪ್ರತಿಭಟನೆ ಮುಂದುವರೆಯುತ್ತದೆ ಎಂದು ತಿಳಿಸಿದರು.

ಹಾಗೆ ನಮ್ಮ ಮನವಿಯನ್ನು ಸ್ವೀಕರಿಸಬೇಕು ತದನಂತರ ನಾವು ಪ್ರತಿಭಟನೆಯನ್ನು ಹಿಂಬಡಿಯುತ್ತೇವೆ ಎಂಬವ ಮಾತನ್ನು ಅಧಿಕಾರಿಗಳಿಗೆ ತಿಳಿಸಿದರು.

ಪ್ರತಿಭಟನಾಕಾರರ ಬೇಡಿಕೆ ಕಾಳಜಿ ಇಲ್ಲಾ ಪ್ರತಿಭಟನೆ ನಿಲ್ಲಿಸುವದರ ಬಗ್ಗೆ ಕುತಂತ್ರಿ ಯೋಚನೆಗಳು ಹಾಗೂ ಬೇರೆಯವರಿಗೆ ಕರೆ ಮಾಡಿ ಸಂದೇಶಗಳು ತಿಳಿಸುವುದಕ್ಕಿಂತ ಮೊದಲು ಪ್ರತಿಭಟನಾಕಾರರಿಗೆ ಕರೆ ಮಾಡಿ ಅವರ ಬಗ್ಗೆ – ಅವರ ಬೇಡಿಕೆಗಳ ಬಗ್ಗೆ ಯಾರ ಜೊತೆಯೂ ಮಾತುಕತೆ ಆಡದೆ ಇರೋದು ವಿಪರ್ಯಾಸ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕಾರ್ಮಿಕ ಮುಖಂಡರ ಮಾತನಾಡಿ, ಮಕ್ಕಳಿಗೆ ಕೂಡಲೇ ಶೈಕ್ಷಣಿಕ, ಇತರೆ ಧನಸಹಾಯ ಮಂಜೂರು ಮಾಡಬೇಕು. ಅನಾವಶ್ಯಕ ಟೆಂಡ‌ರ್ ಕರೆಯುವುದನ್ನು ಕೂಡಲೇ ಸ್ಥಗಿತಗೊಳಿಸಬೇಕು. 15-20 ವರ್ಷಗಳ ಹಿಂದೆ ಆಗಿರುವ ನೋಂದಣಿ ಆಧರಿಸಿ ಈಗ ಕಾರ್ಮಿಕರ ಕಾರ್ಡ್‌ಗಳನ್ನು ರದ್ದುಪಡಿಸುತ್ತಿದ್ದು, ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ಒದಗಿಸಲು ಮುಂದಾಗಬೇಕು. ಹೆರಿಗೆ ಭತ್ಯೆ, ಹಿರಿಯ ಕಾರ್ಮಿಕರ ಪಿಂಚಣಿ, ಅಂತ್ಯಕ್ರಿಯೆ, ಅಪಘಾತ ಪರಿಹಾರವನ್ನು ಈವರೆಗೂ ಮಂಜೂರು ಮಾಡಿಲ್ಲ ಕೂಡಲೇ ಅದನ್ನು ಬಿಡುಗಡೆ ಮಾಡಬೇಕು. ಅರ್ಜಿ ವಿಲೇವಾರಿಯಲ್ಲಿ ಆಗುತ್ತಿರುವ ವಿಳಂಬ ತಪ್ಪಿಸಬೇಕು ಎಂದು ಒತ್ತಾಯಿಸಿದರು.

ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಸ್ಥಳಕ್ಕೆ ಬಂದು ನಮ್ಮ ಬೇಡಿಕೆ ಈಡೇರಿಸುವ ಭರವಸೆ ನೀಡುವವರೆಗೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಯಾದಗಿರಿ , ಗುಲ್ಬರ್ಗ, ರಾಯಚೂರು, ಗದಗ, ಹಾವೇರಿ, ಉತ್ತರ ಕನ್ನಡ, ಧಾರವಾಡ ವಿವಿಧ ಜಿಲ್ಲೆಗಳ ಕಾರ್ಮಿಕರ ಸಂಘಗಳು ಭಾಗವಹಿಸಿದ್ದರು. ಅಶ್ವಥ್ ಮರಿಗೌಡ್ರ, ಶಿವು ರಾಠೋಡ, ಶಿವಕುಮಾರ ಬಂಡಿವಡ್ಡರ, ವಾಸು ಲಮಾಣಿ, ಮುಸ್ತಾಕ್ ನದಾಫ್, ಎಸ್.ಪಿ. ಕರಿಸೋಮನಗೌಡ್ರ, ಶರಣಪ್ಪ ರೊಟ್ಟಿ , ಶಿವಕುಮಾರ ಗೌಡ್ರ, ಬೀರಪ್ಪ ಡೊಳ್ಳ, ರಾಜು ದೊರೆ, ಈರಪ್ಪ ವಲ್ಕಂದಿನ್ನಿ , ವೆಂಕಟೇಶ್, ತಿಮ್ಮಪ್ಪ, ತಾಯಪ್ಪ , ರವಿರಾಜ್, ದೇವಿಂದ್ರ ಕಾಲವಾ, ಶಿವಾನಂದ ಅಸೊಟ್ಟಿ, ಲಕ್ಷ್ಮಣ್, ಶಂಕರ್ ಲಂಬಾಣಿ , ಜೋತಿ ಪತ್ತಾರ, ಶಭಿನಾ ಮೇಲಿನಮನಿ, ಇನ್ನಿತರರಿದ್ದರು.

ವರದಿಗಾರ : ಶಿವು ರಾಠೋಡ

Latest News

91 ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ: ಕಾರ್ಮಿಕ ಸಚಿವ ಲಾಡ್

91 ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ: ಕಾರ್ಮಿಕ ಸಚಿವ ಲಾಡ್

ಮೈಸೂರು,ಆ.06: ರಾಜ್ಯದಲ್ಲಿ ಶೇ 83 ರಷ್ಟು ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದು, ಸಣ್ಣ ವೃತ್ತಿಯಲ್ಲಿ ತೊಡಗಿರುವ

ಮುದ್ದೇಬಿಹಾಳ ಬಿಇಓ ಕಚೇರಿ ಮುಂದೆ ಧರಣಿ: ಶತಮಾನ ಕಂಡ ಶಾಲೆ ಆರಂಭಕ್ಕೆ ಒಂದು ವಾರ ಗಡುವು

ಮುದ್ದೇಬಿಹಾಳ ಬಿಇಓ ಕಚೇರಿ ಮುಂದೆ ಧರಣಿ: ಶತಮಾನ ಕಂಡ ಶಾಲೆ ಆರಂಭಕ್ಕೆ ಒಂದು ವಾರ ಗಡುವು

ಮುದ್ದೇಬಿಹಾಳ : ಪಟ್ಟಣದ ಹೃದಯ ಭಾಗದಲ್ಲಿರುವ ಬಜಾರ ಸರ್ಕಾರಿ ಉರ್ದು ಶಾಲೆಯನ್ನು ಪುನಃ ಆರಂಭಿಸಬೇಕು

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ಹಲವು ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ಹಲವು ಯೋಜನೆ ಜಾರಿ

ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳ ಉದ್ಘಾಟನೆ ಸಮಾರಂಭದಲ್ಲಿ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್

ಮಳೆರಾಯನ ಮಡಿಲಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕರ ಪ್ರತಿಭಟನೆ

ಮಳೆರಾಯನ ಮಡಿಲಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕರ ಪ್ರತಿಭಟನೆ

ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮೂರನೇ ದಿನದ ಪ್ರಾರಂಭ. ರಾಜ್ಯ ಕಟ್ಟಡ ಮತ್ತು

ರಾಜಕಾರಣ ಹೊರಗಿಟ್ಟು ಮಠದೊಳಕ್ಕೆ ಬನ್ನಿ-ಅಮರೇಶ್ವರ ದೇವರು

ರಾಜಕಾರಣ ಹೊರಗಿಟ್ಟು ಮಠದೊಳಕ್ಕೆ ಬನ್ನಿ-ಅಮರೇಶ್ವರ ದೇವರು

ಮುದ್ದೇಬಿಹಾಳ : ಆಸ್ತಿ ನೋಡಿಕೊಂಡು ನಾವು ಈ ಮಠಕ್ಕೆ ಬಂದಿಲ್ಲ. ಭಕ್ತರ ಭಕ್ತಿಯೇ ಶ್ರೀಮಠಕ್ಕೆ ಆಸ್ತಿ. ಹುನಗುಂದದಲ್ಲಿರುವ ಗಚ್ಚಿನಮಠಕ್ಕೆ ಹಿಂದೂ, ಮುಸ್ಲಿಂ, ಕ್ರೈಸ್ತ ಬಾಂಧವರನ್ನು ಕರೆಯುತ್ತೇವೆ. ಆ ಸಂಪ್ರದಾಯ ಮುದ್ದೇಬಿಹಾಳದ ಮಠದಲ್ಲೂ ಮುಂದುವರೆಸುತ್ತೇವೆ. ಮಠಕ್ಕೆ ಬರುವವರು ರಾಜಕಾರಣ ಹೊರಗಿಟ್ಟು ಸಾಮಾನ್ಯ ಭಕ್ತರಂತೆ ಬರಬೇಕು ಎಂದು ಮುದ್ದೇಬಿಹಾಳ ಹೊಸಮಠದ ನೂತನ ಸ್ವಾಮೀಜಿ ಅಮರೇಶ್ವರ ದೇವರು ಹೇಳಿದರು. ಮುದ್ದೇಬಿಹಾಳ ಭಕ್ತರ ಆಹ್ವಾನದ ಮೇರೆಗೆ ಪಟ್ಟಣದ ಕಿಲ್ಲಾದಲ್ಲಿರುವ ಹೊಸಮಠಕ್ಕೆ ಭಾನುವಾರ ಆಗಮಿಸಿದ್ದ ಅವರಿಗೆ ಮುದ್ದೇಬಿಹಾಳ

ಅನಿರ್ದಿಷ್ಟವಧಿ ಧರಣಿಯಲ್ಲಿ ಭಾಗವಹಿಸುವ‌ ಕಾರ್ಮಿಕರಿಗೆ ನೆರವು ಘೋಷಿಸಿದ ಅಶ್ವಥ ಟಿ ಮರೀಗೌಡ್ರು

ಅನಿರ್ದಿಷ್ಟವಧಿ ಧರಣಿಯಲ್ಲಿ ಭಾಗವಹಿಸುವ‌ ಕಾರ್ಮಿಕರಿಗೆ ನೆರವು ಘೋಷಿಸಿದ ಅಶ್ವಥ ಟಿ ಮರೀಗೌಡ್ರು

ಹುಬ್ಬಳ್ಳಿ : ಧಾರವಾಡ ವಿಭಾಗದ ನೊಂದಾಯಿತ ಕಾರ್ಮಿಕ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ನಡೆಯಲಿರುವ ಧರಣಿಯಲ್ಲಿ ಧಾರವಾಡ ವಿಭಾಗ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಯಿಂದ ಪ್ರಮುಖ ಕಾರ್ಮಿಕ ಮುಖಂಡರು ಭಾಗವಹಿಸುತ್ತಿದ್ದಾರೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಮಸ್ಯೆ ಮತ್ತು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಹುಬ್ಬಳ್ಳಿಯ ಕಾರ್ಮಿಕರ ಭವನದವರೆಗೂ ರ್ಯಾಲಿ ಮೂಲಕ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಕಾರ್ಮಿಕ ಸಚಿವರು ಸ್ಥಳಕ್ಕೆ ಆಗಮಿಸಿಲಿದ್ದಾರೆ. ನಮ್ಮ ಮನವಿಗೆ ಸ್ಪಂದಿಸದಿದ್ದಲಿ,