Dharna in front of Muddebihal BEO office: One week deadline for the start of century-old school

ಮುದ್ದೇಬಿಹಾಳ ಬಿಇಓ ಕಚೇರಿ ಮುಂದೆ ಧರಣಿ: ಶತಮಾನ ಕಂಡ ಶಾಲೆ ಆರಂಭಕ್ಕೆ ಒಂದು ವಾರ ಗಡುವು

ಮುದ್ದೇಬಿಹಾಳ ಬಿಇಓ ಕಚೇರಿ ಮುಂದೆ ಧರಣಿ: ಶತಮಾನ ಕಂಡ ಶಾಲೆ ಆರಂಭಕ್ಕೆ ಒಂದು ವಾರ ಗಡುವು

ಮುದ್ದೇಬಿಹಾಳ : ಪಟ್ಟಣದ ಹೃದಯ ಭಾಗದಲ್ಲಿರುವ ಬಜಾರ ಸರ್ಕಾರಿ ಉರ್ದು ಶಾಲೆಯನ್ನು ಪುನಃ ಆರಂಭಿಸಬೇಕು ಎಂದು ಆಗ್ರಹಿಸಿ ಇಂದು ಮುದ್ದೇಬಿಹಾಳದ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯ ಎದುರಿಗೆ ಕರ್ನಾಟಕ ಮುಸ್ಲಿಂ ಕೌನ್ಸಿಲ್ ಹಾಗೂ ಶಾಲೆಯ ಹಳೆ ವಿದ್ಯಾರ್ಥಿಗಳ ಕೂಟದ ಸಹಯೋಗದಲ್ಲಿ ಬುಧವಾರ ಧರಣಿ ಸತ್ಯಾಗ್ರಹ ನಡೆಸಲಾಯಿತು.

ಕೆ.ಎಂ.ಸಿ ಮುಖಂಡ ಕೆ.ಎಂ.ರಿಸಾಲ್ದಾರ ಮಾತನಾಡಿ, ಈಗಾಗಲೇ ಈ ಶಾಲೆಯನ್ನು ಡೈಸ್ ಕೋಡ ನೆಪದಲ್ಲಿ ಆರಂಭಿಸಲಾಗುತ್ತಿಲ್ಲ. ಜೊತೆಗೆ ಈ ಶಾಲೆಯನ್ನು ಪುರಸಭೆ ಸುಪರ್ದಿಗೆ ಹಸ್ತಾಂತರಿಸಲಾಗುತ್ತಿದೆ. ಇದು ಕಾನೂನು ಬಾಹಿರವಾಗಿದ್ದು, ಕೂಡಲೇ ಸರ್ಕಾರ ಇದನ್ನು ತಡೆದು, ಇಲ್ಲಿ ಪುನಃ ಉರ್ದು ಶಾಲೆ ಆರಂಭಿಸಬೇಕು. ಈ ಜಾಗವನ್ನು ಶಾಲೆಗಾಗಿಯೇ ದಾನ ಮಾಡಿದ್ದಾರೆ. ಹಾಗಾಗಿ ಈ ಜಾಗ ಶಾಲೆಗೆ ಸೀಮಿತವಾಗಿದ್ದು, ಶಾಲೆ ಶಾಲೆಯಾಗಿಯೇ ಉಳಿಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಧರಣಿ ಸ್ಥಳಕ್ಕೆ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್. ಸಾವಳಗಿ ಅವರು, ನಾನು ಈಗಾಗಲೆ ಈ ಶಾಲೆ ಆರಂಭಕ್ಕೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ ಎನ್ನುತ್ತಿದ್ದಂತೆ ಆಕ್ರೋಶಗೊಂಡ ಹೋರಾಟಗಾರರು ಈ ಶಾಲೆ ಸ್ಥಳಾಂತರವಾಗುತ್ತಿದ್ದರೂ ಮೌನ ವಹಿಸಿದ್ದೇಕೆ ಎಂದು ತರಾಟೆಗೆ ತೆಗೆದುಕೊಂಡರು.

ಆಗ ಸ್ಥಳದಲ್ಲಿಯೇ ಬಿಇಓ ಅವರು ಡಿಡಿಪಿಐ ಅವರೊಂದಿಗೆ ಮಾತನಾಡಿ ಸೂಕ್ತ ಕ್ರಮ ಜರುಗಿಸುವ ಭರವಸೆ ಮೇರೆಗೆ ಹೋರಾಟಗಾರರು ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆದರು.

ಒಂದು ವಾರದೊಳಗೆ ಶಾಲೆಯನ್ನು ಆರಂಭಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾರ್ಯಪೃತ್ತರಾಗಬೇಕು, ಜೊತೆಗೆ ಡಿಡಿಪಿಐ ಅವರು ತಿಳಿಸಿದ ಹಾಗೇ ಶಾಲೆ ಆರಂಭಕ್ಕೆ ಪ್ರಸ್ತಾವನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಳಿಸಬೇಕು ಎಂದು ತಿಳಿಸಿದರು.

ನಿವಾಸಿಗಳಾದ ಎಲ್.ಎಮ್.ನಾಯ್ಕೋಡಿ, ದಾವಲ ಸಾತಿಹಾಳ, ತೆಗ್ಗಿ ಹಾಜಿ, ರಿಯಾಜ್ ಮುಲ್ಲಾ, ಹುಸೇನಬಾಷಾ ಮುಲ್ಲಾ, ಇಸ್ಮಾಯಿಲ್ ಅವಟಿ, ಹೆಚ್. ಆರ್. ಬಾಗವಾನ, ಅಶ್ಫಾಕ್ ಮುಲ್ಲಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Latest News

ಮಳೆರಾಯನ ಮಡಿಲಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕರ ಪ್ರತಿಭಟನೆ

ಮಳೆರಾಯನ ಮಡಿಲಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕರ ಪ್ರತಿಭಟನೆ

ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮೂರನೇ ದಿನದ ಪ್ರಾರಂಭ. ರಾಜ್ಯ ಕಟ್ಟಡ ಮತ್ತು

ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳ ಲೋಕಾರ್ಪಣೆ

ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳ ಲೋಕಾರ್ಪಣೆ

ಸಿದ್ಲೀಪುರ(ಶಿವಮೊಗ್ಗ ಜಿಲ್ಲೆ) ಆಗಸ್ಟ್‌ 04: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌

ಬಡವರ ಕೈಗೆ ಹಣ ಬಂದಾಗ ಮಾತ್ರ ದೇಶದ ಪ್ರಗತಿ: ಸಚಿವ ಲಾಡ್

ಬಡವರ ಕೈಗೆ ಹಣ ಬಂದಾಗ ಮಾತ್ರ ದೇಶದ ಪ್ರಗತಿ: ಸಚಿವ ಲಾಡ್

ಶಿವಮೊಗ್ಗ, ಆಗಸ್ಟ್ 04 : ಬಡವರ ಕೈಯಲ್ಲಿ ಹಣ ಬಂದಾಗ ಮಾತ್ರ ದೇಶದ ಪ್ರಗತಿಯಾಗಲಿದ್ದು,

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸದುಗೌಡ ಆಯ್ಕೆ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸದುಗೌಡ ಆಯ್ಕೆ

ಮುಧೋಳ : ನಗರದ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಕೋ ಅರ್ಡಿನೆಟರ್ ಅಗಿದ್ದ ನಗರದ

ಮುದ್ದೇಬಿಹಾಳದಲ್ಲಿ ಶೀಘ್ರ ರಾಯಣ್ಣನವರ ಮೂರ್ತಿ ಪ್ರತಿಷ್ಠಾಪನೆ : ಎಂ.ಎನ್.ಮದರಿ

ಮುದ್ದೇಬಿಹಾಳದಲ್ಲಿ ಶೀಘ್ರ ರಾಯಣ್ಣನವರ ಮೂರ್ತಿ ಪ್ರತಿಷ್ಠಾಪನೆ : ಎಂ.ಎನ್.ಮದರಿ

ಮುದ್ದೇಬಿಹಾಳ : ಕೊಲ್ಹಾಪೂರದಲ್ಲಿ ಸಂಗೊಳ್ಳಿ ರಾಯಣ್ಣನವರ ಕಂಚಿನ ಮೂರ್ತಿ ಸಿದ್ಧವಾಗಿದ್ದು ಎರಡ್ಮೂರು ದಿನಗಳಲ್ಲಿ ಮುದ್ದೇಬಿಹಾಳಕ್ಕೆ ಕರೆತರುವ ಕೆಲಸ ಮಾಡುತ್ತೇವೆ ಎಂದು ಕುರುಬ ಸಮಾಜದ ತಾಲ್ಲೂಕು ಅಧ್ಯಕ್ಷ ಎಂ. ಎನ್. ಮದರಿ ಹೇಳಿದರು. ತಾಲ್ಲೂಕು ಕುಂಟೋಜಿಯ ಪರಮಹಂಸ ವಿದ್ಯಾವರಣ್ಯ ಆಶ್ರಮದ ಆವರಣದಲ್ಲಿ ಶುಕ್ರವಾರ ಸಂಗೊಳ್ಳಿ ರಾಯಣ್ಣನವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕುಂಟೋಜಿ, ಕವಡಿಮಟ್ಟಿ ಗ್ರಾಮಗಳಲ್ಲಿ ರಾಯಣ್ಣನ ಮೂರ್ತಿಗಳು ಪ್ರತಿಷ್ಠಾಪನೆಯಾಗಿವೆ. ಆದರೆ, ಮುದ್ದೇಬಿಹಾಳ ನಗರದಲ್ಲಿ ಆದಷ್ಟು ಶೀಘ್ರ ಮೂರ್ತಿ ಅನಾವರಣ

ವಲಯ ಮಟ್ಟದ ಕ್ರೀಡಾಕೂಟ: ಕರ್ಲಕೊಪ್ಪ ಶಾಲೆಯ ಬಾಲಕಿಯರಿಗೆ ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನ

ವಲಯ ಮಟ್ಟದ ಕ್ರೀಡಾಕೂಟ: ಕರ್ಲಕೊಪ್ಪ ಶಾಲೆಯ ಬಾಲಕಿಯರಿಗೆ ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನ

ಕುಳಗೇರಿ ಕ್ರಾಸ್: ಸಮೀಪದ ಕುಳಗೇರಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರ್ ಎಸ್ ಕೆ ಯಲ್ಲಿ ಆಯೋಜನೆಗೊಂಡಿತ್ತು. ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ಲಕೊಪ್ಪದ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ. ಬಾಲಕಿಯರ ಕಬ್ಬಡ್ಡಿ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ. ವೈಯಕ್ತಿಕ ಆಟಗಳಲ್ಲಿ ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇವರಿಗೆ ಶಾಲಾ ಆಡಳಿತ ಹಾಗೂ ಎಸ್.ಡಿ.ಎಂ.ಸಿಯ ಅಧ್ಯಕ್ಷರು ಮತ್ತು ಸರ್ವ