Distribution of smart cards to 91 categories of unorganized workers: Labor Minister Lad

91 ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ: ಕಾರ್ಮಿಕ ಸಚಿವ ಲಾಡ್

91 ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ: ಕಾರ್ಮಿಕ ಸಚಿವ ಲಾಡ್

ಮೈಸೂರು,ಆ.06: ರಾಜ್ಯದಲ್ಲಿ ಶೇ 83 ರಷ್ಟು ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದು, ಸಣ್ಣ ವೃತ್ತಿಯಲ್ಲಿ ತೊಡಗಿರುವ 91 ವರ್ಗದ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಡೀಸೆಲ್- ಪೆಟ್ರೋಲ್ ‌ಮೇಲಿನ ಸೆಸ್ ನಲ್ಲಿ ಒಂದಂಶ ಪಡೆದು ಅದನ್ನು ಕಾರ್ಮಿಕರ ಕಲ್ಯಾಣಕ್ಕೆ ನೀಡುವ ಚಿಂತನೆ ಇದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಅವರು ಹೇಳಿದರು.

ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್, ಮೈಸೂರು ಇವರ ಸಹಯೋಗದಲ್ಲಿ ಮೈಸೂರು ಜಿಲ್ಲೆಯ ವಿವಿಧ ಸಂಘಟಿತ ಕಾರ್ಮಿಕರಿಗೆ “ಸ್ಮಾರ್ಟ್ ಕಾರ್ಡ್” ವಿತರಣೆ ಮತ್ತು ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗುತ್ತಿದೆ. ಅಂಬೇಡ್ಕರ್ ಸಹಾಯ ಹಸ್ತ ಯೋಜನೆಯಡಿ 25.55 ಲಕ್ಷ ಕಾರ್ಮಿಕರು ನೋಂದಣಿ ಆಗಿದ್ದಾರೆ. ಸಾರಿಗೆ ವಲಯದಲ್ಲಿ 10.55 ಲಕ್ಷ ಕಾರ್ಮಿಕರು ನೋಂದಣಿ ಆಗಿದ್ದಾರೆ. ಪತ್ರಿಕಾ ವಿತರಕರ ವರ್ಗದಲ್ಲಿ 7 ಸಾವಿರ ಅಸಂಘಟಿತ ಕಾರ್ಮಿಕರು ನೋಂದಣಿ ಆಗಿದ್ದಾರೆ ಎಂದು ತಿಳಿಸಿದರು.

ಸಾರಿಗೆ ವಲಯದಲ್ಲಿ ಅಪಘಾತ ಆಗಿ ಮರಣ ಹೊಂದಿದರೆ 5 ಲಕ್ಷ ಅಪಘಾತ ವಿಮೆ ನೀಡಲಾಗುತ್ತದೆ. ಇತರೆ ವರ್ಗದ ಕಾರ್ಮಿಕರು ಅಪಘಾತ ಆಗಿ ಮರಣ ಹೊಂದಿದರೆ 1 ಲಕ್ಷ ಅಪಘಾತ ವಿಮೆ, ಶಾಶ್ವತ ಅಂಗವಿಕಲತೆ ಉಂಟಾದರೆ 1 ಲಕ್ಷ , ಆಸ್ಪತ್ರೆ ವೆಚ್ಚ ಮರುಪಾವತಿ 50 ಸಾವಿರ, ಸಹಜ ಸಾವು ಸಂಭವಿಸಿದರೆ 10 ಸಾವಿರ ನೀಡಲಾಗುತ್ತದೆ ಎಂದು ತಿಳಿಸಿದರು.

ದೇಶದಲ್ಲಿ ತಲಾ ಆದಾಯದಲ್ಲಿ ಕರ್ನಾಟಕವೇ ಮೊದಲ ಸ್ಥಾನದಲ್ಲಿ ಇದೆ.‌ ಜಿಎಸ್ ಟಿ ಸಂಗ್ರಹದಲ್ಲೂ ಮುಂಚೂಣಿಯಲ್ಲಿದ್ದೇವೆ. ಇದಕ್ಕೆ ಗ್ಯಾರಂಟಿ ಯೋಜನೆಗಳ ಯಶಸ್ಸು ಕಾರಣ. ಆಶಾ ದೀಪ ಕಾರ್ಯಕ್ರಮದಲ್ಲಿ ಎಸ್ ಸಿ/ ಎಸ್ ಟಿ ವರ್ಗದವರಿಗೆ ಕೆಲಸ ನೀಡುವವರಿಗೆ ರೂ 7500 ವರೆಗೆ ನೆರವು ನೀಡಲಾಗುತ್ತಿದೆ. ಹೊರಗುತ್ತಿಗೆ ನೌಕರರು ಸೊಸೈಟಿ ಮೂಲಕ ಕಾರ್ಯ ನಿರ್ವಹಿಸಲಿದ್ದು, ಸಂಬಳ ಸಮಸ್ಯೆ ತಪ್ಪಲಿದೆ. ಮುಂದಿನ ದಿನಗಳಲ್ಲಿ ಮನೆ ಕೆಲಸ ಕಾರ್ಮಿಕರಿಗೆ ಕನಿಷ್ಢ ವೇತನ ಕಾನೂನು ಜಾರಿಗೆ ತರಲಾಗುವುದು ಎಂದು ಹೇಳಿದರು.

ಚಾಮರಾಜ ಕ್ಷೇತ್ರದ ವಿಧಾನಸಭಾ ಶಾಸಕರಾದ ಕೆ ಹರೀಶ್ ಗೌಡ ಅವರು ಮಾತನಾಡಿ ಚಾಮರಾಜ ಕ್ಷೇತ್ರದಲ್ಲಿ 60 ಸಾವಿರ ಅಸಂಘಟಿತ ಕಾರ್ಮಿಕರಿದ್ದಾರೆ. ಸರ್ಕಾರದ ಯೋಜನೆಗಳ ಕುರಿತು ರಾಜ್ಯವ್ಯಾಪಿ ಪ್ರಚಾರ ನಡೆಸಬೇಕಿದೆ ಎಂದು ಹೇಳಿದರು.

ಅಸಂಘಟಿತ ವರ್ಗದ ಕಾರ್ಮಿಕರಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರು ಸುಮಾರು 40 ಲಕ್ಷ ಇರು ವುದಾಗಿ ಅಂದಾಜಿಸಲಾಗಿದ್ದು, ಅವರಿಗೆ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ, ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಅಧಿನಿಯಮವನ್ನು ಜಾರಿಗೆ ತಂದಿದೆ ಎಂದು ಹೇಳಿದರು.

ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ಕೃಷ್ಣರಾಜನಗರ ವಿಧಾನಸಭೆ ಕ್ಷೇತ್ರದ ಶಾಸಕರಾದ ರವಿಶಂಕರ್ .ಡಿ, ವಿಧಾನ ಪರಿಷತ್ತಿನ ಶಾಸಕರಾದ ಡಾ. ಯತೀಂದ್ರ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ್ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ ಯಕೇಶ್ ಕುಮಾರ್, ಅಪರ ಕಾರ್ಮಿಕ ಆಯುಕ್ತರು ಹಾಗೂ ಜಂಟಿ ಕಾರ್ಯದರ್ಶಿಗಳಾದ ಡಾ. ಎಸ್. ಬಿ ರವಿಕುಮಾರ್ , ಕಾರ್ಮಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು