Traffic stopped for about 6 km

ಸುಮಾರು 6 ಕೀಲೋ ಮೀಟರ್ ವರೆಗೆ ನಿಂತ ವಾಹನ ದಟ್ಟನೆ

ಸುಮಾರು 6 ಕೀಲೋ ಮೀಟರ್ ವರೆಗೆ ನಿಂತ ವಾಹನ ದಟ್ಟನೆ

ತಾಳಿಕೋಟೆ: ಡೋಣಿ ನದಿಯ ಪ್ರವಾಹದಿಂದ ವಿಜಯಪುರ ರಸ್ತೆಯ ಕೆಳಮಟ್ಟದ ಸೇತುವೆ ಜಲಾವೃತವಾಗಿರುವದು ಒಂದು ಕಡೆಯಾದರೆ ಹಡಗಿನಾಳ ಗ್ರಾಮದ ಮೂಲಕ ಮೂಲಕ ಸಂಚರಿಸುವ ಮೂಕೀಹಾಳ ಗ್ರಾಮದ ಹತ್ತಿರದ ಹಳ್ಳದಲ್ಲಿಯೂ ಶುಕ್ರವಾರ ಸಾಯಂಕಾಲ ಪ್ರವಾಹದ ಉಕ್ಕಿ ಬಂದಿದ್ದರಿಂದ ಸಂಪೂರ್ಣ ಸಂಚಾರ ವ್ಯವಸ್ಥೆಯೇ ಕಡಿತಗೊಂಡ ಪರಿಣಾಮ ತಾಳಿಕೋಟೆಯಿಂದ ಮೂಕೀಹಾಳ ಗ್ರಾಮದ ಹಳ್ಳದ ವರೆಗಿನ 6 ಕೀಲೋ ಮೀಟರ್ ವಾಹನಗಳ ದಟ್ಟನೆ ನಿಂತಲ್ಲೇ ನಿಂತುಕೊಂಡಿವೆ.

ವಿಜಯಪುರ ಹಾಗೂ ಮುದ್ದೇಬಿಹಾಳ ಮಾರ್ಗದ ಕಡೆಯಿಂದ ಆಗಮಿಸಿದ ವಾಹನಗಳೂ ಸಹ ಸುಮಾರು 5 ಕೀಲೋ ಮೀಟರ್‌ವರೆಗೆ ನಿಂತಿದ್ದರೆ ಇತ್ತ ಮಿಣಜಗಿ ಕಡೆಯ 3 ಕೀಲೋ ಮೀಟರ್ ವರೆಗೆ ವಾಹನಗಳು ನಿಂತುಕೊಂಡಿದ್ದವು.

ಕೆಲವರು ಈ ಸಂಚಾರ ಸಂಪರ್ಕ ಕಡಿತಗೊಂಡಿರುವ ಸುದ್ದಿಯನ್ನು ಅರೀತುಕೊಂಡ ಖಾಸಗಿ ವಾಹನದೊಂದಿಗೆ ಸುಮಾರು 80 ಕೀಲೋ ಮೀಟರ್ ಅಂತರದ ಕೊಡೇಕಲ್ಲ, ನಾರಾಯಣಪೂರ, ನಾಲತವಾಡ ಮೂಲಕ ಮುದ್ದೇಬಿಹಾಳದ ಸಂಪರ್ಕವನ್ನು ಪಡೆದುಕೊಂಡರೆ ಇನ್ನೂ ಕೆಲವರು ದೇವರ ಹಿಪ್ಪರಗಿ ಮೂಲಕ 140 ಕೀಲೋ ಮೀಟರ್ ಅಂತರದಿಂದ ವಿಜಯಪುರ ನಗರವನ್ನು ಸಂಪರ್ಕಕ್ಕೆ ಪಡೆದುಕೊಂಡರು.

ಈ ಪ್ರವಾಹದ ದಟ್ಟನೆ ಅರೀಯದೇ ಆಗಮಿಸಿದ್ದ ಮುದ್ದೇಬಿಹಾಳದ ನ್ಯಾಯವಾದಿಗಳಾದ ಎಂ.ಎನ್.ಯರಗಲ್ಲ, ಪಿ.ಬಿ.ಜಾಧವ, ಎಸ್.ಸಿ.ಹಿರೇಮಠ, ಎನ್.ಆರ್.ಮೋಕಾಸಿ ಅವರು ಸುಮಾರು 80 ಕೀಲೋ ಮೀಟರ್ ಅಂತರದಿಂದ ಮುದ್ದೇಬಿಹಾಳಕ್ಕೆ ತೆರಳಿದರಲ್ಲದೇ ಈ ರಸ್ತೆ ಸಂಪರ್ಕ ಚ್ಯಾಲ ಇದ್ದರೆ ಕೇವಲ 30 ಕೀಲೋ ಮೀಟರ್‌ದಲ್ಲಿ ಮುದ್ದೇಬಿಹಾಳಕ್ಕೆ ಹೋಗುತ್ತಿದ್ದೇವೆಂದು ಪತ್ರಿಕೆಯೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡರಲ್ಲದೇ ಈ ನದಿಗೆ ಮೇಲ್ಮಟ್ಟದ ಸೇತುವೆಯನ್ನು ತ್ವರಿತಗತಿಯಲ್ಲಿ ನಿರ್ಮಾಣ ಮಾಡಿ ಜನರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕೆಂದು ಒತ್ತಾಯಿಸಿದರು.

Latest News

ಸುಮಾರು 6 ಕೀಲೋ ಮೀಟರ್ ವರೆಗೆ ನಿಂತ ವಾಹನ ದಟ್ಟನೆ

ಸುಮಾರು 6 ಕೀಲೋ ಮೀಟರ್ ವರೆಗೆ ನಿಂತ ವಾಹನ ದಟ್ಟನೆ

ತಾಳಿಕೋಟೆ: ಡೋಣಿ ನದಿಯ ಪ್ರವಾಹದಿಂದ ವಿಜಯಪುರ ರಸ್ತೆಯ ಕೆಳಮಟ್ಟದ ಸೇತುವೆ ಜಲಾವೃತವಾಗಿರುವದು ಒಂದು ಕಡೆಯಾದರೆ

ಟ್ರ್ಯಾಕ್ಟ‌ರ್ ಹಾಯ್ದು ಏಳು ವರ್ಷದ ಬಾಲಕಿ ಸಾವು

ಟ್ರ್ಯಾಕ್ಟ‌ರ್ ಹಾಯ್ದು ಏಳು ವರ್ಷದ ಬಾಲಕಿ ಸಾವು

ಮುಧೋಳ: ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿಯಿಂದ ಕೆಳಗೆ ಬಿದ್ದ ಬಾಲಕಿ ಮೇಲೆ ಹಿಂದಿನಿಂದ ಟ್ರ್ಯಾಕ್ಟ‌ರ್

ಶಾಸಕ ನಾಡಗೌಡರಿಂದ ಭೂಮಿಪೂಜೆ: ಆರೋಗ್ಯ ಘಟಕ ಪ್ರಯೋಗಾಲಯ ಉದ್ಘಾಟನೆ

ಶಾಸಕ ನಾಡಗೌಡರಿಂದ ಭೂಮಿಪೂಜೆ: ಆರೋಗ್ಯ ಘಟಕ ಪ್ರಯೋಗಾಲಯ ಉದ್ಘಾಟನೆ

ಮುದ್ದೇಬಿಹಾಳ : ಪಟ್ಟಣದ ಸರ್ಕಾರಿ ಆಸ್ಪತ್ರೆಯ ನವೀಕರಣ ಕಾರ್ಯದ ಭೂಮಿಪೂಜೆ ಹಾಗೂ ತಾಲ್ಲೂಕು ಆಸ್ಪತ್ರೆಯ

91 ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ: ಕಾರ್ಮಿಕ ಸಚಿವ ಲಾಡ್

91 ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ: ಕಾರ್ಮಿಕ ಸಚಿವ ಲಾಡ್

ಮೈಸೂರು,ಆ.06: ರಾಜ್ಯದಲ್ಲಿ ಶೇ 83 ರಷ್ಟು ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದು, ಸಣ್ಣ ವೃತ್ತಿಯಲ್ಲಿ ತೊಡಗಿರುವ

ಬಡವರ ಕೈಗೆ ಹಣ ಬಂದಾಗ ಮಾತ್ರ ದೇಶದ ಪ್ರಗತಿ: ಸಚಿವ ಲಾಡ್

ಬಡವರ ಕೈಗೆ ಹಣ ಬಂದಾಗ ಮಾತ್ರ ದೇಶದ ಪ್ರಗತಿ: ಸಚಿವ ಲಾಡ್

ಶಿವಮೊಗ್ಗ, ಆಗಸ್ಟ್ 04 : ಬಡವರ ಕೈಯಲ್ಲಿ ಹಣ ಬಂದಾಗ ಮಾತ್ರ ದೇಶದ ಪ್ರಗತಿಯಾಗಲಿದ್ದು, ಬಡವರಿಗಾಗಿ ರೂಪಿಸಿರುವ ಯೋಜನೆಗಳನ್ನು ಅವರಿಗೆ ಸಮರ್ಪಕವಾಗಿ ತಲುಪಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಅವರು ಕರೆ ನೀಡಿದರು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಹಯೋಗದೊಂದಿಗೆ ಸೋಮವಾರ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸದುಗೌಡ ಆಯ್ಕೆ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸದುಗೌಡ ಆಯ್ಕೆ

ಮುಧೋಳ : ನಗರದ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಕೋ ಅರ್ಡಿನೆಟರ್ ಅಗಿದ್ದ ನಗರದ ಸದುಗೌಡ ಲಕ್ಷ್ಮಣಗೌಡ ಪಾಟೀಲ್ ಅವರನ್ನು ಮುಧೋಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ಅವರು ರಾಜ್ಯದ ಗಣ್ಯರು, ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ