103 patients selected for surgery: Eye health screening of 250 patients

103 ರೋಗಿಗಳು ಶಸ್ತ್ರಚಿಕಿತ್ಸೆಗೆ ಆಯ್ಕೆ: 250 ರೋಗಿಗಳ ಕಣ್ಣಿನ ಆರೋಗ್ಯ ತಪಾಸಣೆ

103 ರೋಗಿಗಳು ಶಸ್ತ್ರಚಿಕಿತ್ಸೆಗೆ ಆಯ್ಕೆ: 250 ರೋಗಿಗಳ ಕಣ್ಣಿನ ಆರೋಗ್ಯ ತಪಾಸಣೆ

ಮುದ್ದೇಬಿಹಾಳ : ಪಟ್ಟಣದ ಮನಿಯಾರ ಸಮಾಜ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಭಾನುವಾರ ಇಲ್ಲಿನ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ಕಣ್ಣಿನ ಆರೋಗ್ಯ ಉಚಿತ ತಪಾಸಣಾ ಶಿಬಿರ ನಡೆಯಿತು.

ಶಿಬಿರದ ನೇತೃತ್ವ ವಹಿಸಿದ್ದ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಅಯೂಬ ಮನಿಯಾರ ಮಾತನಾಡಿ, ಈಗಾಗಲೇ ತಾಳಿಕೋಟಿಯಲ್ಲಿ ಶಿಬಿರ ನಡೆಸಲಾಗಿದ್ದು ಅಲ್ಲಿ 103 ಜನರು ಶಸ್ತçಚಿಕಿತ್ಸೆಗೆ ಆಯ್ಕೆಯಾಗಿದ್ದಾರೆ. ಅವರನ್ನು ಕಲಬುರ್ಗಿಯಲ್ಲಿರುವ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಕಳಿಸಿಕೊಡಲಾಗಿದೆ.
ಮುದ್ದೇಬಿಹಾಳದಲ್ಲಿ ನಡೆದ ಶಿಬಿರದಲ್ಲಿ 250 ಜನರ ಕಣ್ಣುಗಳ ಆರೋಗ್ಯ ತಪಾಸಣೆ ನಡೆಸಲಾಗಿದ್ದು 103 ಜನರನ್ನು ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಗಿದೆ. ಅವರನ್ನು ಆ.13-15ರಂದು ಶಸ್ತ್ರಚಿಕಿತ್ಸೆಗೆ ವಿಜಯಪುರಕ್ಕೆ ಕಳಿಸಲಾಗುವುದು ಎಂದು ಹೇಳಿದರು.

ಕಣ್ಣಿನ ಪೊರೆ ಬಂದವರಿಗೆ ಮಾತ್ರ ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಗುತ್ತದೆ. ಕಣ್ಣಿನ ಗಂಭೀರ ಸಮಸ್ಯೆಗಳಿದ್ದಲ್ಲಿ ರೋಗಿಗಳು ಅವರ ಸಂಬಂಧಿಕರನ್ನು ಕರೆದುಕೊಂಡು ಬಂದು ತಪಾಸಣೆಗೆ ಹೋಗಬೇಕು ಎಂದು ಮನಿಯಾರ ತಿಳಿಸಿದರು.

ಡಾ.ಸತೀಶ ಪಟ್ಟಣಶೆಟ್ಟಿ ಮಾತನಾಡಿ, ಕಳೆದ 12 ವರ್ಷಗಳಿಂದ ಮನಿಯಾರ ಅವರ ನೇತೃತ್ವದಲ್ಲಿ ಬಡವರಿಗೆ ಅನುಕೂಲ ಒದಗಿಸುವ ಕಾರ್ಯ ನಡೆದಿದೆ. ಶ್ರಾವಣ ಮಾಸದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಅವರ ಸೌಹಾರ್ದತೆಗೆ ಸಾಕ್ಷಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಬಾಗಲಕೋಟೆಯಿಂದ ಆಗಮಿಸಿದ್ದ ಮೇರಿ ಎಂಬುವರು ಮಾತನಾಡಿ, ನನ್ನ ಸ್ನೇಹಿತೆಯಿಂದ ಇಲ್ಲಿ ಕಣ್ಣಿನ ಆರೋಗ್ಯ ಉಚಿತ ತಪಾಸಣೆ ನಡೆಸುತ್ತಾರೆ ಎಂದು ತಿಳಿದು ಬಂದಿದ್ದೇನೆ.ಮನಿಯಾರ ಟ್ರಸ್ಟ್ ನವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದರು.

ಮುಖಂಡರಾದ ದಾದಾ ಎತ್ತಿನಮನಿ, ಟ್ರಸ್ಟ್ ಸಂಚಾಲಕ ಅಫ್ತಾಬ ಮನಿಯಾರ, ಬಾಬಾ ಯಕೀನ,ರಜಾಕ ಹುನಕುಂಟಿ ಮೊದಲಾದವರು ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ