A teacher who arranged a bus to the last village of the district

ಜಿಲ್ಲೆಯ ಕೊನೆಯ ಗ್ರಾಮಕ್ಕೂ ಬಸ್ ವ್ಯವಸ್ಥೆ ಮಾಡಿಸಿದ ಶಿಕ್ಷಕ

ಜಿಲ್ಲೆಯ ಕೊನೆಯ ಗ್ರಾಮಕ್ಕೂ ಬಸ್ ವ್ಯವಸ್ಥೆ ಮಾಡಿಸಿದ ಶಿಕ್ಷಕ

ಕೊಡೇಕಲ್ಲ : ಯಾದಗಿರಿ ಜಿಲ್ಲೆಯ ಕಟ್ಟ ಕಡೆಯ ಗ್ರಾಮ ಬಸ್ಸಾಪುರ. ಈ ಗ್ರಾಮವು ಇಲ್ಲಿಯವರೆಗೆ ಬಸ್ಸಿನ ಮುಖವನ್ನೇ ನೋಡಿರಲಿಲ್ಲ. ಗ್ರಾಮದ ಜನರಿಗೆ ಹಾಗೂ ಮುಂದಿನ ಶಿಕ್ಷಣಕ್ಕಾಗಿ ಮಕ್ಕಳಿಗೆ ಬೇರೆ ಗ್ರಾಮಕ್ಕೆ ಹೋಗಿ ಬರಲು ಮತ್ತು ವಿಶೇಷವಾಗಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ತುಂಬಾ ತೊಂದರೆಯಾಗಿತ್ತು.

ಇದನ್ನು ಗಮನಿಸಿದ ಶಿಕ್ಷಕರಾದ ಶ್ರೀ ನೀಲಪ್ಪ ತೆಗ್ಗಿಯವರು, ಗ್ರಾಮಸ್ಥರ ಸಹಕಾರದಿಂದ ಘಟಕ ವ್ಯವಸ್ಥಾಪಕರು ಸುರಪುರ ಇವರಿಗೆ ಮನವಿಯನ್ನು ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಘಟಕ ವ್ಯವಸ್ಥಾಪಕರು ಕೇವಲ 15 ದಿನಗಳಲ್ಲಿ ಬಸ್ಸಾಪುರ ಗ್ರಾಮಕ್ಕೆ ಬಸ್ಸಿನ ವ್ಯವಸ್ಥೆಯನ್ನು ಮಾಡಿದರು. ಹೀಗಾಗಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು, ವಿಶೇಷವಾಗಿ ಬೇರೆ ಗ್ರಾಮದಲ್ಲಿ ಶಾಲೆಗೆ ದಾಖಲಾದ ಹೆಣ್ಣು ಮಕ್ಕಳು ಬಹಳಷ್ಟು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

ಘಟಕ ವ್ಯವಸ್ಥಾಪಕರಾದ ಶ್ರೀ ಭೀಮಪ್ಪ ರಾಠೋಡ ಮತ್ತು ಸಂಗಮೇಶ ದಳವಾಯಿ ಸರ್ ಅವರಿಗೆ ಗ್ರಾಮಸ್ಥರು ಧನ್ಯವಾದಗಳನ್ನು ತಿಳಿಸಿದ್ದಾರೆ. ಇದೇ ವೇಳೆ ಬಸ್ಸನ್ನು ಟೆಂಗಿನ ಗರಿಗಳಿಂದ ಅಲಂಕಾರಿಸಿ ಪೂಜೆ ಮಾಡುವಲಾಯಿತು. ಹಾಗೂ ಬಸ್ಸಿನ ಡ್ರೈವರ್ ಮತ್ತು ಕಂಡಕ್ಟರ್ ಇವರಿಗೆ ‌ಶಾಲು ಹಾಗೂ ಹಾರ ಹಾಕುವ ಮೂಲಕ ಸನ್ಮಾನಿಸಲಾಯಿತು.
ಗ್ರಾಮಕ್ಕೆ ಬಸ್ಸು ಬರಲು ಸತತ ಪ್ರಯತ್ನ ಮಾಡಿದ ಶ್ರೀ ನೀಲಪ್ಪ ತೆಗ್ಗಿ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಊರಿನ ಮುಖಂಡರಾದ ನಿಂಗಪ್ಪ ಕೊಂಡೇಕಾರ, ನೀಲಕಂಠ ಕೊಂಡೇಕಾರ, ಸಿದ್ದಪ್ಪ ಬಿರಾದಾರ, ಶಂಕ್ರಪ್ಪ ಕೊಂಡೇಕಾರ, ಸುರೇಶ ಬಿರಾದಾರ, ಪವನ್ ಕೊಂಡೇಕಾರ, ಯಮನಪ್ಪ ಜೈನಾಪುರ ಹಾಗೂ ಇತರರು ಉಪಸ್ಥಿತರಿದ್ದರು.

ಈ ಗ್ರಾಮದ ಜನರು ರೈತರು ಮತ್ತು ಕೂಲಿ ಕೆಲಸಗಾರರು. ಇವರು ತಮ್ಮ ಮಕ್ಕಳನ್ನು ಮುಂದಿನ ಶೈಕ್ಷಣಕ್ಕಾಗಿ ಹೆಚ್ಚಿನ ಹಣವನ್ನು ನೀಡಿ ಹಾಸ್ಟೆಲ್ ಇರುವ ಶಾಲೆಗಳಿಗೆ, ಇಲ್ಲವೆ ತಮ್ಮ ಸಂಬಂಧಿಕರು ಇರುವ ಊರುಗಳಲ್ಲಿನ ಶಾಲೆಗಳಿಗೆ ದಾಖಲು ಮಾಡುತ್ತಿದ್ದಾರೆ. ಇದನ್ನು ಗಮನಿಸಿದ ನಾನು ಹೇಗಾದರೂ ಮಾಡಿ ಈ ಊರಿಗೆ ಬಸ್ಸಿನ ವ್ಯವಸ್ಥೆ ಮಾಡಲೇಬೇಕು ಎಂದು ನಿರ್ಧರಿಸಿದೆನು. ಗ್ರಾಮಸ್ಥರ ಸಹಕಾರದಿಂದ ಮನವಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ಈ ಗ್ರಾಮಕ್ಕೆ ಬಸ್ಸಿನ ವ್ಯವಸ್ಥೆ ಮಾಡಿದ ಘಟಕ ವ್ಯವಸ್ಥಾಪಕರಾದ ಶ್ರೀ ಭೀಮಪ್ಪ ರಾಠೋಡ ಸಾಹೇಬರಿಗೆ ಹಾಗೂ ಶ್ರೀ ಸಂಗಣ್ಣ ದಳವಾಯಿ ಸರ್ ಅವರಿಗೆ ಗ್ರಾಮಸ್ಥರ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ.
ಶ್ರೀ ನೀಲಪ್ಪ ತೆಗ್ಗಿ ಶಿಕ್ಷಕರು ಬಸ್ಸಾಪೂರ

ನಮ್ಮೂರಿಗೆ ಬಸ್ಸಿನ ಅವಶ್ಯಕತೆ ಬಹಳಷ್ಟು ಇತ್ತು. ನಮ್ಮೂರ ಶಿಕ್ಷಕರಾದ ಶ್ರೀ ನೀಲಪ್ಪ ತೆಗ್ಗಿ ಇವರ ಸತತ ಪ್ರಯತ್ನದಿಂದಾಗಿ, ನಮ್ಮೂರಿಗೆ ಇಂದು ಬಸ್ಸಿನ ವ್ಯವಸ್ಥೆಯಾಗಿದೆ. ಅದಕ್ಕಾಗಿ ಶಿಕ್ಷಕರಾದ ಶ್ರೀ ನೀಲಪ್ಪ ತೆಗ್ಗಿ ಸರ್ ಇವರಿಗೆ ನಮ್ಮ ಮಕ್ಕಳ ಮತ್ತು ಗ್ರಾಮಸ್ಥರ ಪರವಾಗಿ ಧನ್ಯವಾದಗಳನ್ನು ತಿಳಿಸುತ್ತೇವೆ. ಶ್ರೀ ನಿಂಗಪ್ಪ ಕೊಂಡೇಕಾರ. ಶ್ರೀ ನೀಲಕಂಠ ಕೊಂಡೇಕಾರ. ಬಸ್ಸಾಪೂರ.

ಬಸ್ ಬರುವ ಸಮಯ: ಹುಣಸಗಿ ಯಿಂದ ಹೊರಟು ಕೊಡೇಕಲ್ಲ, ಮಾರನಾಳ, ಯಣ್ಣೀವಡಗೇರಿಯಿಂದ ಒಳಗಡೆ 4 ಕಿಲೋ ಮೀಟರ್ ದೂರದಲ್ಲಿರುವ ಬಸ್ಸಾಪೂರಕ್ಕೆ ಬೆಳಿಗ್ಗೆ 7. 30 ಕ್ಕೆ ಹಾಗೂ ಸಾಯಂಕಾಲ 4.30 ಕ್ಕೆ ಬಂದು ನಾಲತ್ವಾಡಕ್ಕೆ ಹೊಗುತ್ತದೆ.

ವರದಿಗಾರ : ಶಿವು ರಾಠೋಡ

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ