Workers' money should be used for workers' welfare: Minister Lad

ಕಾರ್ಮಿಕರ ಹಣ ಕಾರ್ಮಿಕರ ಕಲ್ಯಾಣಕ್ಕೇ ಬಳಕೆಯಾಗಬೇಕು: ಸಚಿವ ಲಾಡ್

ಕಾರ್ಮಿಕರ ಹಣ ಕಾರ್ಮಿಕರ ಕಲ್ಯಾಣಕ್ಕೇ ಬಳಕೆಯಾಗಬೇಕು: ಸಚಿವ ಲಾಡ್

ಬೆಂಗಳೂರು, ಆಗಸ್ಟ್‌ 13: ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ಜಿಲ್ಲೆಗೊಂದರಂತೆ ಶ್ರಮಿಕ ವಸತಿ ಶಾಲೆ ಆರಂಭ ಮಾಡುವುದರ ಉದ್ದೇಶವನ್ನು ಸವಿವರವಾಗಿ ವಿವರಿಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು, ವಿರೋಧ ಪಕ್ಷದ ಸದಸ್ಯರ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡಿ ಸರ್ಕಾರದ ನಿಲುವಿನ ಬಗ್ಗೆ ತಿಳಿಸಿದರು.

ಕಾರ್ಮಿಕರಿಂದ ಸೆಸ್‌ ಸಂಗ್ರಹಿಸಿದನ್ನು ಬೇರೆಯವರಿಗೆ, ಬೇರೆ ಇಲಾಖೆಗೆ ನೀಡಲಾಗದು. ಅದಕ್ಕೆ ಅವಕಾಶ ಇಲ್ಲ. ಆದ್ದರಿಂದ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ. ಈ ಬಗ್ಗೆ ಸ್ಪಷ್ಟ ನಿರ್ದೇಶನ ಇದೆ ಎಂದು ಸಚಿವ ಲಾಡ್‌ ಅವರು ಹೇಳಿದರು.

ʼಸಾವಿರಾರು ಕೋಟಿ ಹಣ ಇದೆ ಎಂಬ ಮಾತ್ರಕ್ಕೆ ಜಿಲ್ಲೆಗೊಂದರಂತೆ ವಸತಿ ಶಾಲೆ ತೆರೆಯುತ್ತೀದ್ದೀರಾ? ಎಂಬ ಬಿಜೆಪಿ ಸದಸ್ಯ ಎನ್‌ ರವಿಕುಮಾರ್‌ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಲಾಡ್‌ ಅವರು, ಮಂಡಳಿಯಲ್ಲಿ ಹಣ ಇದೆ ಎಂಬ ಕಾರಣದಿಂದ ವಸತಿ ಶಾಲೆ ಆರಂಭಿಸುತ್ತಿಲ್ಲ. ಎಲ್ಲಾ ಸರ್ಕಾರದಲ್ಲೂ ವಸತಿ ಶಾಲೆ ಆರಂಭವಾಗಿವೆ. ಬಿಸಿಎಂ ಇಲಾಖೆ ಸೇರಿದಂತೆ ಹಲವು ಇಲಾಖೆಯಲ್ಲಿ ವಸತಿ ಶಾಲೆಗಳಿವೆ. ವಸತಿ ಶಾಲೆಗಳನ್ನು ತೆರೆದರೆ ಸರ್ಕಾರಿ ಶಾಲೆಗಳು ಮುಚ್ಚುತ್ತವೆ ಎಂಬ ಭಯ ಬೇಡ. ಹಾಗಾದರೆ ಯಾವುದೇ ಇಲಾಖೆಯಿಂದ ವಸತಿ ಶಾಲೆ ಆರಂಭಿಸಬಾರದೇ ಎಂದು ಪ್ರಶ್ನೆ ಮಾಡಿದರು.

ಸದನದಲ್ಲಿ ಸುಳ್ಳು ಮಾತನಾಡಲಾಗದು. ಸುಳ್ಳು ಮಾಹಿತಿ ನೀಡಲಾಗದು. ಆದ್ದರಿಂದ ಸರ್ಕಾರದ ನಿಯಮಾವಳಿಗಳು ಏನಿವೆ ಅದರಂತೆ ಕೆಲಸ ಮಾಡಬೇಕು. ನಿರ್ಮಾಣ ಕಾರ್ಮಿಕರು ಕೆಲಸಕ್ಕಾಗಿ ಒಂದು ಊರಿನಿಂದ ಮತ್ತೊಂದು ಊರಿಗೆ ವಲಸೆ ಹೋಗ್ತ ಇರುತ್ತಾರೆ. ಅವರು ಮಕ್ಕಳನ್ನು ಒಂದು ನಿಗದಿತ ವಸತಿ ಶಾಲೆಯಲ್ಲಿ ದಾಖಲು ಮಾಡಿದರೆ ಅನುಕೂಲವಾಗಲಿದೆ. ಎಲ್ಲರಿಗೂ ಇರುವ ಕಾಳಜಿಯಂತೆಯೇ ನಮಗೂ ಇದೆ ಎಂದರು.

ಬೇರೆ ಉದ್ದೇಶಕ್ಕೆ ಸೆಸ್‌ ಬಳಕೆಗೆ ಅವಕಾಶ ಇಲ್ಲ:
ಯಾವ ಉದ್ದೇಶಕ್ಕಾಗಿ ಸೆಸ್‌ ಸಂಗ್ರಹ ಮಾಡಲಾಗಿದೆಯೋ ಅದೇ ಉದ್ದೇಶಕ್ಕೆ ಬಳಸಬೇಕು ಎಂಬ ನಿಯಮ ಇದೆ. ಬೇರೆ ಇಲಾಖೆಗೆ ಹಾಗೂ ಬೇರೆಯವರಿಗೆ ಅದನ್ನು ಕೊಡಲಾಗದು. ಸಾರಿಗೆಯಿಂದ ಸೆಸ್‌ ಸಂಗ್ರಹಿಸಿದರೆ ಅದನ್ನು ಅಸಂಘಟಿತ ಕಾರ್ಮಿಕರಿಗೆ ಕೊಡಲು ಬರಲ್ಲ. ಈ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್‌ ಸಹ ಹೇಳಿದೆ ಎಂದು ವಿವರಿಸಿದರು.

ನಮ್ಮಲ್ಲಿ ಹಾಸ್ಟೆಲ್‌ಗೆ ಸಾಕಷ್ಟು ಬೇಡಿಕೆ ಇದೆ. ಹುಬ್ಬಳ್ಳಿ-ಧಾರವಾಡದಲ್ಲಿ ಇನ್ನಷ್ಟು ಹಾಸ್ಟೆಲ್‌ ಬೇಕು ಎಂದು ಮಕ್ಕಳು ಕರೆ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ಮಾಡಿದರೆ ಅನುಕೂಲವಾಗಲಿದೆ. ಒಟ್ಟಿನಲ್ಲಿ ಹಣ ಸದುಪಯೋಗ ಮಾಡಬೇಕು. ಕೆಲವು ಹಾಸ್ಟೆಲ್‌ ಪ್ರವೇಶಕ್ಕೆ ಪರೀಕ್ಷೆ ಇದೆ. ಪ್ರತಿಭಾವಂತರು ಮಾತ್ರವೇ ಅಲ್ಲಿ ಪ್ರವೇಶ ಪಡೆಯುತ್ತಾರೆ. ನಿರ್ಮಾಣ ಕ್ಷೇತ್ರದಲ್ಲಿನ ಗೋಡೆ ಕಟ್ಟುವವರು, ಪೇಂಟರ್‌, ಬಡಗಿಗಳ ಮಕ್ಕಳಿಗೆ ಒಳ್ಳೆಯ ಹಾಸ್ಟೆಲ್‌ ಸಿಕ್ಕರೆ ಅವರು ಓದುತ್ತಾರೆ ಎಂದರು.

ನಮ್ಮಲ್ಲಿ ಹಣ ಇದೆ. ಕಳೆದ ಮೂರು ವರ್ಷದಲ್ಲಿ ೧೪ ಲಕ್ಷ ಮಕ್ಕಳಿಗೆ ಪ್ರೋತ್ಸಾಹಧನ ಕೊಟ್ಟಿದ್ದೇವೆ. ಕೋಟ್ಯಂತರ ಹಣ ಬರ್ತಾ ಇದೆ, ಅದು ಸರಿಯಾಗಿ ಬಳಕೆ ಆಗಬೇಕು ಎಂದು ವಿವರಿಸಿದರು.

ಇಲಾಖೆಯಿಂದ ಕೌಶಲ್ಯ ಕೇಂದ್ರ ಆರಂಭ:
ಕಟ್ಟಡ ಕಾರ್ಮಿಕರ ಮಕ್ಕಳ ಅನುಕೂಲಕ್ಕಾಗಿ ಧಾರವಾಡ ಮತ್ತು ಮೈಸೂರಿನಲ್ಲಿ ಕೌಶಲ್ಯ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ. ಇಂದಿನ ಉದ್ಯೋಗಕ್ಕೆ ಬೇಕಾದ ಕೌಶಲ ತರಬೇತಿ ನೀಡುತ್ತೇವೆ. ಕೇವಲ ಪ್ರಮಾಣ ಪತ್ರ ಕೊಟ್ಟರೆ ಪ್ರಯೋಜನ ಇಲ್ಲ. ತರಬೇತಿ ಕಾಲಕಾಲಕ್ಕೆ ಬದಲಾಗುತ್ತವೆ. ಈ ತರಬೇತಿಯನ್ನ ಸರ್ಕಾರ ಕೊಡಲ್ಲ. ಉದ್ಯಮದವರೇ ಕೊಡ್ತಾರೆ. ಅವರೇ ಸಿಲಬಸ್‌ ಕೊಡ್ತಾರೆ. ಸರ್ಕಾರ ಕೊಡಲ್ಲ ʼಉದ್ಯಮದವರೇ ತರಬೇತಿ ಕೊಡತಾರೆ. ಅಂತರರಾಷ್ಟ್ರೀಯ ಮಟ್ಟದ ತರಬೇತಿಯನ್ನು ನಾವು ಕೊಡ್ತಿವಿ ಎಂದರು.

ನಾವು ವೈರಿಗಳಲ್ಲ, ಸಲಹೆ ನೀಡಿ: ಯಾವುದೇ ವಿಷಯದ ಬಗ್ಗೆ ಸಲಹೆ ನೀಡಿ. ಮುಕ್ತ ಹೃದಯದಿಂದ ನಾವು ಅದನ್ನು ಸ್ವೀಕರಿಸುತ್ತೇವೆ. ನಾವು ಯಾರೂ ವೈರಿಗಳಲ್ಲ. ಟೀಕೆ ಮಾಡಿದರೆ ವೈಷಮ್ಯ ಮಾಡಲ್ಲ. ಗೌರವಿಸುತ್ತೇನೆ ಎಂದರು.

ಈ ವೇಳೆ ಮಧ್ಯಪ್ರವೇಶಿಸಿದ ಸದಸ್ಯ ಬೋಜೆಗೌಡ ಅವರು, ಕಾರ್ಮಿಕ ಸಚಿವರು ಒಳ್ಳೆಯ ಕೆಲಸ ಮಾಡ್ತಾ ಇದ್ದೀರಿ. ಕಾರ್ಮಿಕರ ಮಕ್ಕಳು ಕಾರ್ಮಿಕರೇ ಆಗಬೇಕಿಲ್ಲ. ಅವರೂ ಒಳ್ಳೆಯ ತರಬೇತಿ ಪಡೆಯಲಿ. ವಿದ್ಯಾವಂತರಾಗಲಿ ಎಂದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ