Workers' money should be used for workers' welfare: Minister Lad

ಕಾರ್ಮಿಕರ ಹಣ ಕಾರ್ಮಿಕರ ಕಲ್ಯಾಣಕ್ಕೇ ಬಳಕೆಯಾಗಬೇಕು: ಸಚಿವ ಲಾಡ್

ಕಾರ್ಮಿಕರ ಹಣ ಕಾರ್ಮಿಕರ ಕಲ್ಯಾಣಕ್ಕೇ ಬಳಕೆಯಾಗಬೇಕು: ಸಚಿವ ಲಾಡ್

ಬೆಂಗಳೂರು, ಆಗಸ್ಟ್‌ 13: ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ಜಿಲ್ಲೆಗೊಂದರಂತೆ ಶ್ರಮಿಕ ವಸತಿ ಶಾಲೆ ಆರಂಭ ಮಾಡುವುದರ ಉದ್ದೇಶವನ್ನು ಸವಿವರವಾಗಿ ವಿವರಿಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು, ವಿರೋಧ ಪಕ್ಷದ ಸದಸ್ಯರ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡಿ ಸರ್ಕಾರದ ನಿಲುವಿನ ಬಗ್ಗೆ ತಿಳಿಸಿದರು.

ಕಾರ್ಮಿಕರಿಂದ ಸೆಸ್‌ ಸಂಗ್ರಹಿಸಿದನ್ನು ಬೇರೆಯವರಿಗೆ, ಬೇರೆ ಇಲಾಖೆಗೆ ನೀಡಲಾಗದು. ಅದಕ್ಕೆ ಅವಕಾಶ ಇಲ್ಲ. ಆದ್ದರಿಂದ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ. ಈ ಬಗ್ಗೆ ಸ್ಪಷ್ಟ ನಿರ್ದೇಶನ ಇದೆ ಎಂದು ಸಚಿವ ಲಾಡ್‌ ಅವರು ಹೇಳಿದರು.

ʼಸಾವಿರಾರು ಕೋಟಿ ಹಣ ಇದೆ ಎಂಬ ಮಾತ್ರಕ್ಕೆ ಜಿಲ್ಲೆಗೊಂದರಂತೆ ವಸತಿ ಶಾಲೆ ತೆರೆಯುತ್ತೀದ್ದೀರಾ? ಎಂಬ ಬಿಜೆಪಿ ಸದಸ್ಯ ಎನ್‌ ರವಿಕುಮಾರ್‌ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಲಾಡ್‌ ಅವರು, ಮಂಡಳಿಯಲ್ಲಿ ಹಣ ಇದೆ ಎಂಬ ಕಾರಣದಿಂದ ವಸತಿ ಶಾಲೆ ಆರಂಭಿಸುತ್ತಿಲ್ಲ. ಎಲ್ಲಾ ಸರ್ಕಾರದಲ್ಲೂ ವಸತಿ ಶಾಲೆ ಆರಂಭವಾಗಿವೆ. ಬಿಸಿಎಂ ಇಲಾಖೆ ಸೇರಿದಂತೆ ಹಲವು ಇಲಾಖೆಯಲ್ಲಿ ವಸತಿ ಶಾಲೆಗಳಿವೆ. ವಸತಿ ಶಾಲೆಗಳನ್ನು ತೆರೆದರೆ ಸರ್ಕಾರಿ ಶಾಲೆಗಳು ಮುಚ್ಚುತ್ತವೆ ಎಂಬ ಭಯ ಬೇಡ. ಹಾಗಾದರೆ ಯಾವುದೇ ಇಲಾಖೆಯಿಂದ ವಸತಿ ಶಾಲೆ ಆರಂಭಿಸಬಾರದೇ ಎಂದು ಪ್ರಶ್ನೆ ಮಾಡಿದರು.

ಸದನದಲ್ಲಿ ಸುಳ್ಳು ಮಾತನಾಡಲಾಗದು. ಸುಳ್ಳು ಮಾಹಿತಿ ನೀಡಲಾಗದು. ಆದ್ದರಿಂದ ಸರ್ಕಾರದ ನಿಯಮಾವಳಿಗಳು ಏನಿವೆ ಅದರಂತೆ ಕೆಲಸ ಮಾಡಬೇಕು. ನಿರ್ಮಾಣ ಕಾರ್ಮಿಕರು ಕೆಲಸಕ್ಕಾಗಿ ಒಂದು ಊರಿನಿಂದ ಮತ್ತೊಂದು ಊರಿಗೆ ವಲಸೆ ಹೋಗ್ತ ಇರುತ್ತಾರೆ. ಅವರು ಮಕ್ಕಳನ್ನು ಒಂದು ನಿಗದಿತ ವಸತಿ ಶಾಲೆಯಲ್ಲಿ ದಾಖಲು ಮಾಡಿದರೆ ಅನುಕೂಲವಾಗಲಿದೆ. ಎಲ್ಲರಿಗೂ ಇರುವ ಕಾಳಜಿಯಂತೆಯೇ ನಮಗೂ ಇದೆ ಎಂದರು.

ಬೇರೆ ಉದ್ದೇಶಕ್ಕೆ ಸೆಸ್‌ ಬಳಕೆಗೆ ಅವಕಾಶ ಇಲ್ಲ:
ಯಾವ ಉದ್ದೇಶಕ್ಕಾಗಿ ಸೆಸ್‌ ಸಂಗ್ರಹ ಮಾಡಲಾಗಿದೆಯೋ ಅದೇ ಉದ್ದೇಶಕ್ಕೆ ಬಳಸಬೇಕು ಎಂಬ ನಿಯಮ ಇದೆ. ಬೇರೆ ಇಲಾಖೆಗೆ ಹಾಗೂ ಬೇರೆಯವರಿಗೆ ಅದನ್ನು ಕೊಡಲಾಗದು. ಸಾರಿಗೆಯಿಂದ ಸೆಸ್‌ ಸಂಗ್ರಹಿಸಿದರೆ ಅದನ್ನು ಅಸಂಘಟಿತ ಕಾರ್ಮಿಕರಿಗೆ ಕೊಡಲು ಬರಲ್ಲ. ಈ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್‌ ಸಹ ಹೇಳಿದೆ ಎಂದು ವಿವರಿಸಿದರು.

ನಮ್ಮಲ್ಲಿ ಹಾಸ್ಟೆಲ್‌ಗೆ ಸಾಕಷ್ಟು ಬೇಡಿಕೆ ಇದೆ. ಹುಬ್ಬಳ್ಳಿ-ಧಾರವಾಡದಲ್ಲಿ ಇನ್ನಷ್ಟು ಹಾಸ್ಟೆಲ್‌ ಬೇಕು ಎಂದು ಮಕ್ಕಳು ಕರೆ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ಮಾಡಿದರೆ ಅನುಕೂಲವಾಗಲಿದೆ. ಒಟ್ಟಿನಲ್ಲಿ ಹಣ ಸದುಪಯೋಗ ಮಾಡಬೇಕು. ಕೆಲವು ಹಾಸ್ಟೆಲ್‌ ಪ್ರವೇಶಕ್ಕೆ ಪರೀಕ್ಷೆ ಇದೆ. ಪ್ರತಿಭಾವಂತರು ಮಾತ್ರವೇ ಅಲ್ಲಿ ಪ್ರವೇಶ ಪಡೆಯುತ್ತಾರೆ. ನಿರ್ಮಾಣ ಕ್ಷೇತ್ರದಲ್ಲಿನ ಗೋಡೆ ಕಟ್ಟುವವರು, ಪೇಂಟರ್‌, ಬಡಗಿಗಳ ಮಕ್ಕಳಿಗೆ ಒಳ್ಳೆಯ ಹಾಸ್ಟೆಲ್‌ ಸಿಕ್ಕರೆ ಅವರು ಓದುತ್ತಾರೆ ಎಂದರು.

ನಮ್ಮಲ್ಲಿ ಹಣ ಇದೆ. ಕಳೆದ ಮೂರು ವರ್ಷದಲ್ಲಿ ೧೪ ಲಕ್ಷ ಮಕ್ಕಳಿಗೆ ಪ್ರೋತ್ಸಾಹಧನ ಕೊಟ್ಟಿದ್ದೇವೆ. ಕೋಟ್ಯಂತರ ಹಣ ಬರ್ತಾ ಇದೆ, ಅದು ಸರಿಯಾಗಿ ಬಳಕೆ ಆಗಬೇಕು ಎಂದು ವಿವರಿಸಿದರು.

ಇಲಾಖೆಯಿಂದ ಕೌಶಲ್ಯ ಕೇಂದ್ರ ಆರಂಭ:
ಕಟ್ಟಡ ಕಾರ್ಮಿಕರ ಮಕ್ಕಳ ಅನುಕೂಲಕ್ಕಾಗಿ ಧಾರವಾಡ ಮತ್ತು ಮೈಸೂರಿನಲ್ಲಿ ಕೌಶಲ್ಯ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ. ಇಂದಿನ ಉದ್ಯೋಗಕ್ಕೆ ಬೇಕಾದ ಕೌಶಲ ತರಬೇತಿ ನೀಡುತ್ತೇವೆ. ಕೇವಲ ಪ್ರಮಾಣ ಪತ್ರ ಕೊಟ್ಟರೆ ಪ್ರಯೋಜನ ಇಲ್ಲ. ತರಬೇತಿ ಕಾಲಕಾಲಕ್ಕೆ ಬದಲಾಗುತ್ತವೆ. ಈ ತರಬೇತಿಯನ್ನ ಸರ್ಕಾರ ಕೊಡಲ್ಲ. ಉದ್ಯಮದವರೇ ಕೊಡ್ತಾರೆ. ಅವರೇ ಸಿಲಬಸ್‌ ಕೊಡ್ತಾರೆ. ಸರ್ಕಾರ ಕೊಡಲ್ಲ ʼಉದ್ಯಮದವರೇ ತರಬೇತಿ ಕೊಡತಾರೆ. ಅಂತರರಾಷ್ಟ್ರೀಯ ಮಟ್ಟದ ತರಬೇತಿಯನ್ನು ನಾವು ಕೊಡ್ತಿವಿ ಎಂದರು.

ನಾವು ವೈರಿಗಳಲ್ಲ, ಸಲಹೆ ನೀಡಿ: ಯಾವುದೇ ವಿಷಯದ ಬಗ್ಗೆ ಸಲಹೆ ನೀಡಿ. ಮುಕ್ತ ಹೃದಯದಿಂದ ನಾವು ಅದನ್ನು ಸ್ವೀಕರಿಸುತ್ತೇವೆ. ನಾವು ಯಾರೂ ವೈರಿಗಳಲ್ಲ. ಟೀಕೆ ಮಾಡಿದರೆ ವೈಷಮ್ಯ ಮಾಡಲ್ಲ. ಗೌರವಿಸುತ್ತೇನೆ ಎಂದರು.

ಈ ವೇಳೆ ಮಧ್ಯಪ್ರವೇಶಿಸಿದ ಸದಸ್ಯ ಬೋಜೆಗೌಡ ಅವರು, ಕಾರ್ಮಿಕ ಸಚಿವರು ಒಳ್ಳೆಯ ಕೆಲಸ ಮಾಡ್ತಾ ಇದ್ದೀರಿ. ಕಾರ್ಮಿಕರ ಮಕ್ಕಳು ಕಾರ್ಮಿಕರೇ ಆಗಬೇಕಿಲ್ಲ. ಅವರೂ ಒಳ್ಳೆಯ ತರಬೇತಿ ಪಡೆಯಲಿ. ವಿದ್ಯಾವಂತರಾಗಲಿ ಎಂದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ