Protest from the right wing community Ny. Demand to reject Nagmohandas report

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಮುದ್ದೇಬಿಹಾಳ : ಕುಲಶಾಸ್ತ್ರಿಯ ಅಧ್ಯಯನದ ಕೊರತೆ, ಬಲಗೈ ಸಮುದಾಯದ ವಿರುದ್ಧ ದ್ವೇಷಪೂರಿತ ನಿರ್ಧಾರವಾಗಿರುವ ಒಳಮೀಸಲಾತಿ ಕೊಡುವ ಹಿನ್ನೆಲೆಯಲ್ಲಿ ನ್ಯಾ. ನಾಗಮೋಹನದಾಸ್ ನೀಡಿರುವ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ತಾಲ್ಲೂಕು ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ ಆರಂಭಗೊಂಡ ಪ್ರತಿಭಟನೆ ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ, ತಹಸೀಲ್ದಾರ್ ಕಚೇರಿಗೆ ಆಗಮಿಸಿತು. ಮುಖಂಡ ಹರೀಶ ನಾಟೀಕಾರ, ಚೆನ್ನಪ್ಪ ವಿಜಯಕರ್ ಮಾತನಾಡಿ, ನಗರ ಮತ್ತು ಗ್ರಾಮ ಪಂಚಾಯತ್‌ನಲ್ಲಿ ಬೂತ ತೆರೆಯದೇ ಮನೆಗಳಿಗೆ ಚೀಟಿ ಅಚಿಟಿಸುವ ಮೂಲಕ ಸಮೀಕ್ಷೆ ಪೂರ್ಣವಾಗಿದೆ ಎಂದು ತಪ್ಪು ವರದಿ ನೀಡಲಾಗಿದ್ದು ಇದರಲ್ಲಿ 1.47 ಕೋಟಿ ಬದಲು 1.16 ಕೋಟಿ ಜನರ ವರದಿ ಸಲ್ಲಿಕೆಯಾಗಿದೆ. ಅದರಲ್ಲಿ ಆಯೋಗವು 1.05 ಕೋಟಿ ಮಾತ್ರ ಸರ್ವೆ ಮಾಡಿದೆ. 40 ಲಕ್ಷ ಜನರು ಸಮೀಕ್ಷೆಯಿಂದ ಹೊರಗುಳಿದಿದ್ದಾರೆ ಎಂದು ದೂರಿದರು.

ಕೆಲವು ಬಲಗೈ ಜಾತಿಗಳನ್ನು ತಪ್ಪಾಗಿ ಪ್ರವರ್ಗ-ಎ ಗೆ ಸೇರಿಸಲಾಗಿದ್ದು ಬಲಗೈ ಸಮುದಾಯದ ಜನಸಂಖ್ಯೆಯನ್ನು ಒಡೆದು ತೋರಿಸಲಾಗಿದೆ ಎಂದು ದೂರಿದರು. ಅವೈಜ್ಞಾನಿಕವಾಗಿರುವ ನಾಗಮೋಹನದಾಸ ವರದಿಯನ್ನು ಸರ್ಕಾರ ತಿರಸ್ಕರಿಸಬೇಕು. ಹೊಲೆಯ ಹಾಗೂ ಮಾದಿಗ ಸಮುದಾಯ ಒಂದೆ ಜೋಡೆತ್ತು ಇದ್ದಂತೆ ಇಬ್ಬರು ಸಮುದಾಯದವರಿಗೂ ಸಮಾನ ನ್ಯಾಯ ದೊರಕಿಸಿಕೊಡುವ ಕಾರ್ಯ ವರದಿಯಿಂದಾಗಬೇಕಿತ್ತು ಎಂದು ಹೇಳಿದರು.

ತಹಸೀಲ್ದಾರ್ ಕೀರ್ತಿ ಚಾಲಕ್ ಮನವಿ ಪತ್ರ ಸ್ವೀಕರಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಪ್ರೊ. ಪಿ. ಎಚ್. ಉಪ್ಪಲದಿನ್ನಿ, ಮುಖಂಡರಾದ ಸಿದ್ದು ಕಟ್ಟಿಮನಿ, ದೌರ್ಜನ್ಯ ತಡೆ ಸಮೀತಿ ಸದಸ್ಯ ಮಲ್ಲು ತಳವಾರ, ಎಸ್. ಆರ್. ಕಟ್ಟೀಮನಿ, ಅಶೋಕ ಪಾದಗಟ್ಟಿ, ಶಿವಪುತ್ರ ಅಜಮನಿ, ಪ್ರಕಾಶ್ ಚಲವಾದಿ ಮಾತನಾಡಿದರು.

ಪುರಸಭೆ ಸದಸ್ಯ ಶಿವು ಶಿವಪೂರ, ಚಲವಾದಿ ಮಹಾಸಭೆ ತಾಲೂಕು ಅಧ್ಯಕ್ಷ ರೇವಣಪ್ಪ ಹರಿಜನ, ಯಲ್ಲಪ್ಪ ಚಲವಾದಿ, ಮಹಾಂತೇಶ ಚಲವಾದಿ, ಕೆ.ಎಂ.ಇಬ್ರಾಹಿಂಪೂರ, ಶ್ರೀಕಾಂತ ಚಲವಾದಿ, ಶರಣು ಚಲವಾದಿ, ಸಂಗು ಚಲವಾದಿ, ಸಿದ್ದು ಚಲವಾದಿ, ಮಂಜುನಾಥ ಬಸರಕೋಡ, ಪ್ರಶಾಂತ ಕಾಳೆ, ಮಂಜುನಾಥ್ ಕಟ್ಟಿಮನಿ, ದೇವರಾಜ್ ಹಂಗರಗಿ, ಎಚ್. ಆರ್. ಗಂಜಾಳ ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ