The basic objective of our government is to deliver pro-people governance to the masses: Minister Lad

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು.

ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 79ನೇ ಸ್ವಾತಂತ್ರ್ಯೋತ್ಸವದ ರಾಷ್ಟ್ರ ಧ್ವಜಾರೋಹಣ ನೇರವೆರಿಸಿ, ಸಂದೇಶ ನೀಡಿ ಅವರು ಮಾತನಾಡಿದರು.

ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಎಲ್ಲಾ ಮಹನೀಯರ ನೆನಪಿನಲ್ಲಿ ಮತ್ತು ಅವರುಗಳಿಗೆ ಗೌರವ ಸಲ್ಲಿಸುವುದಕ್ಕಾಗಿ ಈ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಏಕತೆ, ಸತ್ಯಾಗ್ರಹ, ಅಹಿಂಸೆ ಹಾಗೂ ಶಾಂತಿ ಮಾರ್ಗವನ್ನು ಅನುಸರಿಸಿ ಸ್ವಾತಂತ್ರ್ಯ ಗಳಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ ಎಂದು ಅವರು ಹೇಳಿದರು.

ಭಾರತದ ಸ್ವಾತಂತ್ರ್ಯದ ಚಳವಳಿಯನ್ನು ರೂಪಿಸಿದ ನಮ್ಮ ಹಿರಿಯ ಹೋರಾಟಗಾರರಾದ ರಾಜಾರಾಮ್ ಮೋಹನ್ ರಾಯ್, ಝಾನ್ಸಿ ರಾಣಿ ಲಕ್ಷ್ಮಿಬಾಯಿ, ದಾದಾಬಾಯಿ ನವರೋಜಿ, ಬಾಲ ಗಂಗಾಧರ ತಿಲಕ್, ಗೋಖಲೆ, ಲಾಲಾ ಲಜಪತರಾಯ್, ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರು, ನೇತಾಜಿ ಸುಭಾಷ್‍ಚಂದ್ರ ಬೋಸ್, ಭಗತ್‍ಸಿಂಗ್, ಮೌಲಾನಾ ಅಬುಲ್ ಕಲಾಂ ಆಜಾದ್ ಮೊದಲಾದ ಮಹನೀಯರುಗಳನ್ನು ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ.

ಧಾರವಾಡ ಜಿಲ್ಲೆಯ ಮೈಲಾರ ಮಹದೇವಪ್ಪ, ಆರ್.ಆರ್.ದಿವಾಕರ್, ಉಮಾಬಾಯಿ ಕುಂದಾಪುರ, ಎನ್. ಎಸ್. ಹರಡೀಕರ್, ಕೆ.ಎಫ್. ಪಾಟೀಲ, ಗೋವಿಂದಾಚಾರ್ಯ ಅಗ್ನಿಹೋತ್ರಿ, ನರಸಿಂಹ ದಾಬಡೆ, ಡೆಪ್ಯೂಟಿ ಚನ್ನಬಸಪ್ಪ, ಸರ್. ಸಿದ್ದಪ್ಪ ಕಂಬಳಿ, ಅರಟಾಳ ರುದ್ರಗೌಡರು ಸೇರಿದಂತೆ ಮೊದಲಾದ ನೇತಾರರು ಸ್ವಾತಂತ್ರ್ಯ ಹೋರಾಟದಲ್ಲಿ ಕೈ ಜೋಡಿಸಿದ್ದರು.

ನಮ್ಮ ದೇಶದ ಹೆಮ್ಮೆಯ ಸಂಕೇತವಾಗಿರುವ ರಾಷ್ಟ್ರಧ್ವಜವನ್ನು ಧಾರವಾಡದ ಗರಗ ಹಾಗೂ ಹುಬ್ಬಳ್ಳಿಯ ಬೆಂಗೇರಿಯಲ್ಲಿ ಸಿದ್ಧಪಡಿಸಿ, ಇಡೀ ದೇಶಕ್ಕೆ ಒದಗಿಸುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ ಎಂದು ಸಚಿವ ಸಂತೋಷ ಲಾಡ್ ಹೆಮ್ಮೆ ವ್ಯಕ್ತಪಡಿಸಿದರು.

ಈ ಸ್ವಾತಂತ್ರ್ಯ ದಿನದಂದು ಮಹಾತ್ಮ ಗಾಂಧೀಜಿಯವರ “ಮನುಷ್ಯರಾಗಿ ನಮ್ಮ ದೊಡ್ಡ ಸಾಮರ್ಥ್ಯವೆಂದರೆ, ಜಗತ್ತನ್ನು ಬದಲಾಯಿಸುವುದು ಅಲ್ಲ, ಬದಲಾಗಿ ನಮ್ಮನ್ನು ನಾವು ಬದಲಾಯಿಸಿಕೊಳ್ಳುವುದು” ಎಂಬ ಮಾತುಗಳನ್ನು ಪಾಲಿಸೋಣ. ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್‌ ಅವರು ರಚಿಸಿರುವ ಸಂವಿಧಾನದ ಪೂರ್ವ ಪೀಠಿಕೆಯು ನಮ್ಮ ಸ್ವಾತಂತ್ರ್ಯ ಹೋರಾಟದ ಆದರ್ಶಗಳನ್ನು ಒಳಗೊಂಡಿದೆ. ಉತ್ತಮ ನಾಗರಿಕರಾಗಲು, ಕಷ್ಟಪಟ್ಟು ಕೆಲಸ ಮಾಡಲು ಮತ್ತು ನಮ್ಮ ದೇಶದ ಪ್ರಗತಿಗೆ ಕೊಡುಗೆ ನೀಡಲು ನಾವು ಪಣ ತೊಡೋಣ ಹಾಗೂ ಬಲಿಷ್ಠ ಭಾರತದ ಕನಸನ್ನು ಜೀವಂತವಾಗಿರಿಸೋಣ ಎಂದು ಸಚಿವರು ಸಂಕಲ್ಪಿಸಿದರು.

ಜನಪ್ರಿಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ ಸರ್ಕಾರವು ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನು ತಾವು ಮಂಡಿಸಿರುವ ಈ ಸಾಲಿನ ಬಜೆಟ್ ಮುಖಾಂತರ ನಾಡಿನ ಜನತೆಗೆ ತಿಳಿಸಿ, ಅವರ ಪ್ರೀತಿ ಗಳಿಸಿರುತ್ತಾರೆ. ರೈತರು, ಕಾರ್ಮಿಕರು, ಹಿಂದುಳಿದ ವರ್ಗದವರು ಸೇರಿದಂತೆ ಎಲ್ಲಾ ವರ್ಗದ ಬಡ ಜನತೆಗೆ ಭದ್ರತೆಯನ್ನು ಒದಗಿಸಲು ಸರ್ಕಾರ ಸದಾ ಬದ್ಧವಾಗಿದೆ.

ಒಟ್ಟಾರೆ ನಮ್ಮ ಸರ್ಕಾರದ ಮೂಲ ಉದ್ದೇಶ ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದಾಗಿದೆ. ಸರ್ಕಾರ ರೂಪಿಸುವ ಎಲ್ಲಾ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತರಲು ಎಲ್ಲರ ಸಹಕಾರ ಮತ್ತು ಬದ್ಧತೆ ಅಗತ್ಯವಾಗಿದೆ. ಎಲ್ಲರ ಒಳಿತಿಗಾಗಿ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ವಿಶೇಷವಾಗಿ ಈ ಒಂದು ಕಾರ್ಯಕ್ರಮದಲ್ಲಿ ಬಹಳಷ್ಟು ಯುವಕ ಜನರು ಸೇರಿದ್ದೀರಿ ಈ ದೇಶದ ಜವಾಬ್ದಾರಿ ನಿಮ್ಮ ಹೆಗಲ ಮೇಲೆ ಇದೆ. ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಎಲ್ಲರೂ ಅಳವಡಿಸಿಕೊಂಡು ಈ ದೇಶವನ್ನು ಬಲಿಷ್ಠವನ್ನಾಗಿ ಮಾಡಿ ಮುಂದೆ ನಡೆಸಿಕೊಂಡು ಹೊಗೋಣ ಎಂದು ಅವರು ಹೇಳಿದರು.

ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಾಟೀಲ ಭುವನೇಶ ದೇವಿದಾಸ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ ಆರ್ಯ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಗರಿಮಾ ಪವಾರ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಗಳು, ಜನಪ್ರತಿನಿಧಿಗಳು, ಮುಖಂಡರು ವೇದಿಕೆಯಲ್ಲಿದರು.

ಕಾರ್ಯಕ್ರಮದಲ್ಲಿ ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥತರಿದ್ದರು.

ಪಥ ಸಂಚಲನ: ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತವು ಆಯೋಜಿಸಿದ್ದ 79ನೇ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಮತ್ತು ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಆಕರ್ಷಕವಾದ ಪಥ ಸಂಚಲನವನ್ನು ಪ್ರಸ್ತುತ ಪಡಿಸಿದರು.

ಸಾಧಕರಿಗೆ ಸನ್ಮಾನ: ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ಧಾರವಾಡ ಜಿಲ್ಲಾಡಳಿತದಿಂದ ಸಭಾಪತಿ ಬಸವರಾಜ ಹೊರಟ್ಟಿ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಹಾಗೂ ಹಿರಿಯರನ್ನು ಗೌರವಿಸಿ, ಸನ್ಮಾನಿಸಿದರು.

ಪ್ರೇಕ್ಷಕರ ಮನ ಗೆದ್ದ ಸಾಂಸ್ಕøತಿಕ ಕಾರ್ಯಕ್ರಮಗಳು: ಜಿಲ್ಲಾಡಳಿತವು 79 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲಾ ಕ್ರೀಡಾಂಗದಲ್ಲಿ ಇಂದು ಆಯೋಜಿಸಿದ್ದ ವಿವಿಧ ರೀತಿಯ ಸಾಂಸ್ಕøತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನ ಗೆದ್ದವು.

ಕೈಮಗ್ಗ ಕಸೂತಿ ವಸ್ತು ಪ್ರದರ್ಶನಕ್ಕೆ ಚಾಲನೆ: ಜಿಲ್ಲಾಡಳಿತ ಹಾಗೂ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮವು ಜಿಲ್ಲಾ ಕ್ರೀಡಾಂಗಣ ಆವರಣದಲ್ಲಿ ಆಯೋಜಿಸಿರುವ ಎರಡು ದಿನಗಳ ವಸ್ತು ಪ್ರದರ್ಶನ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್ ಲಾಡ್ ಉದ್ಘಾಟಿಸಿ, ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಗರಿಮಾ ಪವಾರ ಸೇರಿದಂತೆ ಇತರರು ಇದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ