India's effective response to Pahalgam attack: MLA Nad Gowda

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಭಾರತ ಸಿರಿವಂತ ದೇಶವಾಗಿದೆ.ನಮಗೆ ಕಾನೂನು ಚೌಕಟ್ಟಿನಲ್ಲಿ ಸ್ವಾತಂತ್ರ್ಯವಿದೆ. ವಾಕ್ ಸ್ವಾತಂತ್ರ್ಯ ಎಂದರೆ ಯಾರನ್ನೂ ಬೇಕಾದರೂ ಟೀಕೆ ಮಾಡುವುದಲ್ಲ. ಯೂಟ್ಯೂಬ್‌ಗಳನ್ನು ಒಳ್ಳೆಯದಕ್ಕೆ ಬಳಸಿಕೊಳ್ಳಿ. ಸಾಮಾಜಿಕ ಜಾಲತಾಣಗಳನ್ನು ಗೆಳೆಯರ ಜೊತೆಗೆ ಅಧ್ಯಯನಕ್ಕೆ , ಸಾಂಸ್ಕೃತಿಕ ಚಟುವಟಿಕೆಗೆ ಬಳಸಿಕೊಳ್ಳಬೇಕೆ ಹೊರತು ಸಮಾಜವನ್ನು ಒಡೆಯುವುದಕ್ಕೆ, ಮತ್ತೊಬ್ಬರನ್ನು ಹೀಯಾಳಿಸುವುದಕ್ಕೆ ಬಳಸಬಾರದ ಎಂದರು.

ಧ್ವಜಾರೋಹಣ ನೆರವೇರಿಸಿದ ತಹಸೀಲ್ದಾರ್ ಕೀರ್ತಿ ಚಾಲಕ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಕಾಂಗ್ರೆಸ್ ಮುಖಂಡ ಎಂ.ಬಿ.ನಾವದಗಿ, ತಾಪಂ ಇಒ ನಿಂಗಪ್ಪ ಮಸಳಿ, ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಸಿಪಿಐ ಮೊಹ್ಮದ ಫಸಿವುದ್ದೀನ, ಬಿಇಒ ಬಿ.ಎಸ್.ಸಾವಳಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಮಾಜಿ ಅಧ್ಯಕ್ಷ ಅಬ್ದುಲಗಫೂರ ಮಕಾನದಾರ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಮುಖಂಡ ಪ್ರಭು ಕಡಿ ಪುರಸಭೆ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಪಥ ಸಂಚಲನದಲ್ಲಿ ಚಿನ್ಮಯ ಜೆಸಿ ಶಾಲೆ ಪ್ರಥಮ, ಅಂಜುಮನ್ ಪ್ರೌಢಶಾಲೆ ದ್ವಿತೀಯ, ಅಭ್ಯುದಯ ಇಂಟರನ್ಯಾಶನಲ್ ಶಾಲೆ ತೃತೀಯ ಸ್ಥಾನ ಪಡೆದುಕೊಂಡಿತು.
ಸಾಂಸ್ಕೃತಿಕ ಪ್ರದರ್ಶನ ಕಾರ್ಯಕ್ರಮದಲ್ಲಿ ಕೆಬಿಎಂಪಿಎಸ್ ಶಾಲೆ ಪ್ರಥಮ, ಎಂ.ಜಿ.ಎಂ.ಕೆ ಎರಡನೇ ಸ್ಥಾನ ಹಾಗೂ ವಿದ್ಯಾಚೇತನ ಶಾಲೆ ಮೂರನೇ ಸ್ಥಾನ ಪಡೆದುಕೊಂಡಿತು. ಆಪರೇಷನ್ ಸಿಂಧೂರ ಪ್ರದರ್ಶನ ನೀಡಿದ ಎಂ.ಜಿ.ಎಂ.ಕೆ ವಿದ್ಯಾರ್ಥಿಗಳ ಪ್ರದರ್ಶನಕ್ಕೆ ಜನಮನ್ನಣೆ ದೊರೆಯಿತು.

ಪ್ರಶಸ್ತಿ ಸ್ವೀಕರಿಸಲು ನಿರಾಕರಣೆ:
ವಿದ್ಯಾಚೇತನ ಶಾಲೆಯ ಮುಖ್ಯಗುರುಗಳು ತಮ್ಮ ಶಾಲೆಗೆ ಬಂದಿದ್ದ ಮೂರನೇ ಸ್ಥಾನದ ಪ್ರಶಸ್ತಿ ಸ್ವೀಕರಿಸದೇ ವೇದಿಕೆಯಲ್ಲಿದ್ದ ಶಾಸಕರ ಮುಂದೆ ನಾವು ಪ್ರಶಸ್ತಿ ಸ್ವೀಕರಿಸುವುದಿಲ್ಲ. ರಿಮಿಕ್ಸ್ ಹಾಡುಗಳಿಗೆ ಅವಕಾಶ ಇಲ್ಲ ಎಂದು ಮೊದಲು ಹೇಳಿದವರು ಈಗ ರಿಮಿಕ್ಸ್ ಹಾಡುಗಳಿಗೆ ಅವಕಾಶ ಕೊಟ್ಟಿದ್ದೂ ಅಲ್ಲದೇ ಬಹುಮಾನಕ್ಕೆ ಆದ್ಯತೆ ನೀಡಿದ್ದನ್ನು ಖಂಡಿಸುವುದಾಗಿ ಹೇಳಿ ಪ್ರಶಸ್ತಿ ಸ್ವೀಕರಿಸದೇ ವಾಪಸ್ ತೆರಳಿದ ಘಟನೆ ನಡೆಯಿತು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ