Sow the seeds of patriotism in children's minds: Ashoka Mani

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮುದ್ದೇಬಿಹಾಳ : ಮಕ್ಕಳ ಮನಸ್ಸಿನಲ್ಲಿ ಬಾಲ್ಯದಿಂದಲೇ ದೇಶಪ್ರೇಮದ ಬೀಜ ಬಿತ್ತಿ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರದು ಹಾಗೂ ಪಾಲಕರದಾಗಿದೆ ಎಂದು ಹಿರಿಯ ಸಾಹಿತಿ ಅಶೋಕ ಮಣಿ ನುಡಿದರು.

ಅವರು ಪಟ್ಟಣದ ವಿದ್ಯಾನಗರ ಬಡಾವಣೆಯಲ್ಲಿರುವ ವಿದ್ಯಾಸ್ಪೂರ್ತಿ ಇಂಟರ್ ನ್ಯಾಶನಲ್ ಸ್ಕೂಲಿನಲ್ಲಿ 79 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು, ಧ್ವಜಾರೋಹಣ ನರೆವೇರಿಸಿ ಮಾತನಾಡಿದರು.

ಮಕ್ಕಳ ಕೈಯಲ್ಲಿ ಮೊಬೈಲ್ ಕೊಡಬೇಡಿ ಪುಸ್ತಕ ಕೊಡಿ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಹುತಾತ್ಮರಾದ ಸ್ವಾತಂತ್ರ್ಯ ಹೋರಾಟಗಾರರ ಬದುಕು ಬರಹ ಕುರಿತು ಬೆಳಕು ಚೆಲ್ಲುವ ವಿಷಯಗಳನ್ನು ಪಠ್ಯ ಪುಸ್ತಕದಲ್ಲಿ ಅಳವಡಿಸಿ, ಮಕ್ಕಳಲ್ಲಿ ರಾಷ್ಟ್ರಪ್ರೇಮ ಜಾಗ್ರತವಾಗುವಂತೆ‌ ಸರಕಾರ ಹಾಗೂ ಶಿಕ್ಷಣ ಇಲಾಖೆ ಮಾಡಬೇಕು.

ನಮ್ಮ ದೇಶ ಶೈಕ್ಷಣಿಕ, ವೈಜ್ಞಾನಿಕ,ಆರ್ಥಿಕವಾಗಿ, ಹಾಗೂ ಸೈನಿಕ ರಂಗದಲ್ಲಿ ಬಲಿಷ್ಠವಾಗಿ ಮುನ್ನಡೆದಿದೆ. ಇದು ಕೆಲವೊಂದು ರಾಷ್ಟ್ರಗಳಿಗೆ ಸಹಿಸಲಾಗುತ್ತಿಲ್ಲ. ಜಾತಿಯ ವಿಷ ಬೀಜ ಬಿತ್ತಿ, ನಮ್ಮ ಒಕ್ಕಟ್ಟನ್ನು ಒಡೆಯಲು ನಿರಂತರ ಹುನ್ನಾರ ನಡೆಸುತ್ತಿವೆ. ಹೇಗಾದರೂ ಮಾಡಿ ಭಾರತದ ಕಾಲೆಳೆಯಲು ಆ ಕುತಂತ್ರಿ ರಾಷ್ಟ್ರಗಳು ಪ್ರಯತ್ನಿಸುತ್ತಲೇ ಇವೆ. ಆದರೆ, ಭಾರತ ಆ ರಾಷ್ಟ್ರಗಳಿಗೆ ಬಗ್ಗುತ್ತಿಲ್ಲ.ಜಗ್ಗುತ್ತಿಲ್ಲ ಹಾಗೂ ಕುಗ್ಗುತ್ತಿಲ್ಲ. ದಿಟ್ಟ ಉತ್ತರವನ್ನು ಕೊಡುತ್ತಲೇ ಮುನ್ನೆಡೆದಿದೆ. ಭಾರತೀಯರಾದ ನಾವು ಜಾತಿ ಮತ ಪಂಥವೆಂಬ ಬೇಧ ಭಾವ ಎನಿಸದೇ ಒಂದಾಗಿ ಸದೃಢ ಭಾರತ ಕಟ್ಟಲು ಪಣತೊಡೋಣ ಎಂದು ಅವರು ನುಡಿದರು.

ವಿದ್ಯಾಸ್ಪೂರ್ತಿ ಇಂಟರ್ ನ್ಯಾಶನಲ್ ಸ್ಕೂಲಿನ ಅಧ್ಯಕ್ಷೆ ಬಸಮ್ಮ ಸಿದರಡ್ಡಿ ಮಾತನಾಡಿ, ಮಕ್ಕಳಿಗೆ ಶಿಕ್ಷಣದ ಜೊತೆ ಜೊತೆಗೆ ಉತ್ತಮ ಸಂಸ್ಕಾರ ನೀಡಿ ಬೆಳೆಸುವುದು ಪ್ರತಿಯೊಬ್ಬ ತಂದೆ ತಾಯಂದಿರ ಕರ್ತವ್ಯ. ಮಕ್ಕಳ ವಿದ್ಯಾಭ್ಯಾಸದ ಕಡೆಗೆ ನಿರ್ಲಕ್ಷ ವಹಿಸುವುದು ಸಲ್ಲದು ಎಂದರು.

ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಹಾಂತೇಶ ಸಿದರಡ್ಡಿ ಮಾತನಾಡಿ, ಮಕ್ಕಳಿಗೆ ಪರಿಸರ ಪ್ರಜ್ಞೆ ಮೂಡಿಸಬೇಕು. ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ ಎಂದರು.

ಮುಖ್ಯ ಅತಿಥಿಗಳಾಗಿ ಉದ್ದಿಮೆದಾರ ಸಂಜಯ ಓಸ್ವಾಲ ಆಗಮಿಸಿದ್ದರು. ಅತಿಥಿಗಳಾಗಿ ಹಿರಿಯ ಪತ್ರಕರ್ತ ಶಂಕರ ಹೆಬ್ಬಾಳ, ಮಾಜಿ ಸೈನಿಕ ಗೌಡಪ್ಪ ಚವನಭಾವಿ ಉಪಸ್ಥಿತರಿದ್ದರು.
ಹೆಚ್ಚಿನ ಸಂಖ್ಯೆಯಲ್ಲಿ ಪಾಲಕರು ಹಾಗೂ ಶಿಕ್ಷಕ ಸಿಬ್ಬಂದಿ ಪಾಲ್ಗೊಂಡಿದ್ದರು. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರದ ಜನರ ಗಮನ ಸೆಳೆದವು. ದಂಡಮ್ಮ ಮಡಿವಾಳರ ಶಿಕ್ಷಕಿಯರು ಸ್ವಾಗತಿಸಿದರು. ಅರ್ಶಿಯಾ ಸಂಕನಾಳ ಶಿಕ್ಷಕಿಯರು ವಂದಿಸಿದರು.ಶೈಲಜಾ ಪಾಟೀಲ್ ಶಿಕ್ಷಕಿಯರು ಕಾರ್ಯಕ್ರಮ ನಿರೂಪಿಸಿದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ