Sow the seeds of patriotism in children's minds: Ashoka Mani

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮುದ್ದೇಬಿಹಾಳ : ಮಕ್ಕಳ ಮನಸ್ಸಿನಲ್ಲಿ ಬಾಲ್ಯದಿಂದಲೇ ದೇಶಪ್ರೇಮದ ಬೀಜ ಬಿತ್ತಿ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರದು ಹಾಗೂ ಪಾಲಕರದಾಗಿದೆ ಎಂದು ಹಿರಿಯ ಸಾಹಿತಿ ಅಶೋಕ ಮಣಿ ನುಡಿದರು.

ಅವರು ಪಟ್ಟಣದ ವಿದ್ಯಾನಗರ ಬಡಾವಣೆಯಲ್ಲಿರುವ ವಿದ್ಯಾಸ್ಪೂರ್ತಿ ಇಂಟರ್ ನ್ಯಾಶನಲ್ ಸ್ಕೂಲಿನಲ್ಲಿ 79 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು, ಧ್ವಜಾರೋಹಣ ನರೆವೇರಿಸಿ ಮಾತನಾಡಿದರು.

ಮಕ್ಕಳ ಕೈಯಲ್ಲಿ ಮೊಬೈಲ್ ಕೊಡಬೇಡಿ ಪುಸ್ತಕ ಕೊಡಿ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಹುತಾತ್ಮರಾದ ಸ್ವಾತಂತ್ರ್ಯ ಹೋರಾಟಗಾರರ ಬದುಕು ಬರಹ ಕುರಿತು ಬೆಳಕು ಚೆಲ್ಲುವ ವಿಷಯಗಳನ್ನು ಪಠ್ಯ ಪುಸ್ತಕದಲ್ಲಿ ಅಳವಡಿಸಿ, ಮಕ್ಕಳಲ್ಲಿ ರಾಷ್ಟ್ರಪ್ರೇಮ ಜಾಗ್ರತವಾಗುವಂತೆ‌ ಸರಕಾರ ಹಾಗೂ ಶಿಕ್ಷಣ ಇಲಾಖೆ ಮಾಡಬೇಕು.

ನಮ್ಮ ದೇಶ ಶೈಕ್ಷಣಿಕ, ವೈಜ್ಞಾನಿಕ,ಆರ್ಥಿಕವಾಗಿ, ಹಾಗೂ ಸೈನಿಕ ರಂಗದಲ್ಲಿ ಬಲಿಷ್ಠವಾಗಿ ಮುನ್ನಡೆದಿದೆ. ಇದು ಕೆಲವೊಂದು ರಾಷ್ಟ್ರಗಳಿಗೆ ಸಹಿಸಲಾಗುತ್ತಿಲ್ಲ. ಜಾತಿಯ ವಿಷ ಬೀಜ ಬಿತ್ತಿ, ನಮ್ಮ ಒಕ್ಕಟ್ಟನ್ನು ಒಡೆಯಲು ನಿರಂತರ ಹುನ್ನಾರ ನಡೆಸುತ್ತಿವೆ. ಹೇಗಾದರೂ ಮಾಡಿ ಭಾರತದ ಕಾಲೆಳೆಯಲು ಆ ಕುತಂತ್ರಿ ರಾಷ್ಟ್ರಗಳು ಪ್ರಯತ್ನಿಸುತ್ತಲೇ ಇವೆ. ಆದರೆ, ಭಾರತ ಆ ರಾಷ್ಟ್ರಗಳಿಗೆ ಬಗ್ಗುತ್ತಿಲ್ಲ.ಜಗ್ಗುತ್ತಿಲ್ಲ ಹಾಗೂ ಕುಗ್ಗುತ್ತಿಲ್ಲ. ದಿಟ್ಟ ಉತ್ತರವನ್ನು ಕೊಡುತ್ತಲೇ ಮುನ್ನೆಡೆದಿದೆ. ಭಾರತೀಯರಾದ ನಾವು ಜಾತಿ ಮತ ಪಂಥವೆಂಬ ಬೇಧ ಭಾವ ಎನಿಸದೇ ಒಂದಾಗಿ ಸದೃಢ ಭಾರತ ಕಟ್ಟಲು ಪಣತೊಡೋಣ ಎಂದು ಅವರು ನುಡಿದರು.

ವಿದ್ಯಾಸ್ಪೂರ್ತಿ ಇಂಟರ್ ನ್ಯಾಶನಲ್ ಸ್ಕೂಲಿನ ಅಧ್ಯಕ್ಷೆ ಬಸಮ್ಮ ಸಿದರಡ್ಡಿ ಮಾತನಾಡಿ, ಮಕ್ಕಳಿಗೆ ಶಿಕ್ಷಣದ ಜೊತೆ ಜೊತೆಗೆ ಉತ್ತಮ ಸಂಸ್ಕಾರ ನೀಡಿ ಬೆಳೆಸುವುದು ಪ್ರತಿಯೊಬ್ಬ ತಂದೆ ತಾಯಂದಿರ ಕರ್ತವ್ಯ. ಮಕ್ಕಳ ವಿದ್ಯಾಭ್ಯಾಸದ ಕಡೆಗೆ ನಿರ್ಲಕ್ಷ ವಹಿಸುವುದು ಸಲ್ಲದು ಎಂದರು.

ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಹಾಂತೇಶ ಸಿದರಡ್ಡಿ ಮಾತನಾಡಿ, ಮಕ್ಕಳಿಗೆ ಪರಿಸರ ಪ್ರಜ್ಞೆ ಮೂಡಿಸಬೇಕು. ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ ಎಂದರು.

ಮುಖ್ಯ ಅತಿಥಿಗಳಾಗಿ ಉದ್ದಿಮೆದಾರ ಸಂಜಯ ಓಸ್ವಾಲ ಆಗಮಿಸಿದ್ದರು. ಅತಿಥಿಗಳಾಗಿ ಹಿರಿಯ ಪತ್ರಕರ್ತ ಶಂಕರ ಹೆಬ್ಬಾಳ, ಮಾಜಿ ಸೈನಿಕ ಗೌಡಪ್ಪ ಚವನಭಾವಿ ಉಪಸ್ಥಿತರಿದ್ದರು.
ಹೆಚ್ಚಿನ ಸಂಖ್ಯೆಯಲ್ಲಿ ಪಾಲಕರು ಹಾಗೂ ಶಿಕ್ಷಕ ಸಿಬ್ಬಂದಿ ಪಾಲ್ಗೊಂಡಿದ್ದರು. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರದ ಜನರ ಗಮನ ಸೆಳೆದವು. ದಂಡಮ್ಮ ಮಡಿವಾಳರ ಶಿಕ್ಷಕಿಯರು ಸ್ವಾಗತಿಸಿದರು. ಅರ್ಶಿಯಾ ಸಂಕನಾಳ ಶಿಕ್ಷಕಿಯರು ವಂದಿಸಿದರು.ಶೈಲಜಾ ಪಾಟೀಲ್ ಶಿಕ್ಷಕಿಯರು ಕಾರ್ಯಕ್ರಮ ನಿರೂಪಿಸಿದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ