Sangappa Mante, a freedom fighter neglected by the government

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ ಕಂಡವನಲ್ಲ. ಆಧುನಿಕ ರಾಜಕೀಯ ಪರಿಸ್ಥಿತಿನೇ ಈಗಿದೇ ನನಗೆ ಈವರೆಗೂ ಸರಕಾರ ಯಾವ ಸೌಲಭ್ಯ ಕೊಡುತ್ತಿಲ್ಲ. ಸಮೀಪದ ಕೊಡೇಕಲ್ ಗ್ರಾಮದ ಸುಮಾರು 102 ವರ್ಷದ ನೇಕಾರಿಗೆ ವೃತ್ತಿಯ ಸಂಗಪ್ಪ ಮಂಟೆ ಅವರ ಮನದಾಳದ ಮಾತುಗಳಿವು.

ದೇಶಕ್ಕೆ ಹೆಸರಿಗೆ ಮಾತ್ರ ಸ್ವಾತಂತ್ರ್ಯ ಸಿಕ್ಕಂತಾಗಿದೆ. ಎಲ್ಲೆಂದರಲ್ಲಿ ನಾವೇ ಎನ್ನುವ ಟಿವಿಯ ಮಾತು. ಹಣ ಕೊಟ್ಟರೆ ಅಧಿಕಾರಿಗಳಿಂದ ಕೆಲಸ ಸಾಧ್ಯ. ಇವೆಲ್ಲ ನನಗೆ ಬೇಡ ಎಂದು ನಾನು ನನ್ನ ವೃತ್ತಿಯಲ್ಲಿದ್ದೇನೆ ಎನ್ನುವ ಸಂಗಪ್ಪ ಮಂಟೆ ಅವರು ನೊಂದುಕೊಂಡು ಬದುಕು ಕಟ್ಟಿಕೊಂಡಿದ್ದು ಇಂದಿಗೂ ಇಳಿ ವಯಸ್ಸಿನಲ್ಲಿ ಜಗ್ಗದೇ ನೇಕಾರಿಕೆ ಮಾಡುತ್ತಿದ್ದುದು ಅಚ್ಚರಿ ಮೂಡಿಸಿದೆ.

ಆಸರೆ ಇಲ್ಲ: ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದ ಮಂಟೆ ಅವರು ಸುಮಾರು 15 ವರ್ಷದವರಿದ್ದಾಗಲೇ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತೊಡಗಿಸಿಕೊಂಡಿದ್ದರು. ಮಂಟೆ ನೇರ ದಿಟ್ಟ ನಿರಂತರದ ವ್ಯಕ್ತಿತ್ವದವರು. ಸ್ವಾತಂತ್ರ್ಯಕ್ಕೋಸ್ಕರ ಪ್ರಾಣ ಬಿಟ್ಟವರಲ್ಲಿ ನಮ್ಮ ಭಾಗದಲ್ಲಿ ಅಂದಿನ ಗುಲಬರ್ಗಾ ಜೈಲಲ್ಲಿ 3 ತಿಂಗಳ ಕಾಲ ಕಳೆದಿದ್ದಾರೆ. ಬ್ರೀಟಿಷರು ಸಿಕ್ಕ ಸಿಕ್ಕವರ ಮನೆ ಮನೆಗಳಲ್ಲಿ ಹೊಕ್ಕು ಆಸ್ತಿ ಪಾಸ್ತಿ ಲೂಟಿ ಮಾಡಿದ್ದಲ್ಲದೇ ನಮ್ಮನ್ನು ಕಂಡು ಓಡಿ ಹೋದ ‘ರಜಾಕರು’ ಕ್ರೂರತನ ಮೆರೆದು ನಮ್ಮನ್ನು ಗುಲಾಮಗಿರಿ ಮಾಡಿಕೊಂಡಿದ್ದರು ಎನ್ನುತ್ತಾರೆ. ಆದರೂ ನಾ ಜಗ್ಗದೇ ಸುರುಪುರ ರಾಜಾ ವೆಂಕಟಪ್ಪ ನಾಯಕತ್ವದಲ್ಲಿ ಹೋರಾಡಿದ್ದು ನಿಜಕ್ಕೂ ಎದೆಗಾರಿಕೆಗೆ ಯಾವುದೂ ಸಾಟಿ ಇಲ್ಲದಂತೆ ಕತೆ ಬಿಚ್ಚಿಟ್ಟಿದ್ದಾರೆ.

ಕಾಗದ ಹಿಡಿದು ಅಲೆದಾಡಿದ್ದರು: ಅಂದಿನ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಯವರನ್ನು ಭೇಟಿ ಮಾಡಿದ್ದ ಮಂಟೆ ಅವರು ಈಗಿನ ಅಧಿಕಾರಿಗಳು ರಾಜಕೀಯ ನಾಯಕರು ಅವರ ಮಾತುಗಳೇ ಬಂಡವಾಳ, ಯಾವದೇ ಸರಕಾರ ಅಥವಾ ಪಕ್ಷ ಒಳ್ಳೆಯದ್ದೇ ಇರುತ್ತೆ ಆದರೆ ಆಡಳಿತ ನಡೆಸೋರೇ ಭ್ರಷ್ಟರು, ಸ್ವತಂತ್ರ ಸಿಕ್ಕ ನಂತರ ಸೌಲಭ್ಯಗಳು ಸಿಗಬಹುದು ಎಂದು ದಾಖಲೆಗಳನ್ನು ಹಿಡಿದು ಅಲೆದಾಡಿದೆ. ಎಲ್ಲೆ ಹೋದರೂ ಲಂಚವೇ ಕೇಳಿ ಬಂದಿತು. ಈಗ ಮಾಸಿಕ 10 ಸಾವಿರ ಹೊರತು ಈವರೆಗೂ ಆಸರೆ ಮನೆ ಅಥವಾ ನನ್ನ ಕಾಯಕದ ನೇಕಾರಿಕೆಗೆ ಸಂಬಂಧಿಸಿದ ಯಾವದೇ ಸೌಲಭ್ಯ ಕೊಡಲು ಭ್ರಷ್ಟ ಅಧಿಕಾರಿಗಳು ಮುಂದೆ ಬರಲಿಲ್ಲ. ಒಂದು ಮನೆ ಕೇಳಿದರೆ 20 ಸಾವಿರ ಕೇಳುತ್ತಾರೆ ಯಾಕೆ ಹಣ ಕೊಡಬೇಕು ಎನ್ನುತ್ತಾರೆ ಹೋರಾಟಗಾರ ಸಂಗಪ್ಪ ಮಂಟೆ.

ಜಿಲ್ಲಾ ವರದಿಗಾರ : ಶಿವು ರಾಠೋಡ ಯಾದಗಿರಿ

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ