Sangappa Mante, a freedom fighter neglected by the government

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ ಕಂಡವನಲ್ಲ. ಆಧುನಿಕ ರಾಜಕೀಯ ಪರಿಸ್ಥಿತಿನೇ ಈಗಿದೇ ನನಗೆ ಈವರೆಗೂ ಸರಕಾರ ಯಾವ ಸೌಲಭ್ಯ ಕೊಡುತ್ತಿಲ್ಲ. ಸಮೀಪದ ಕೊಡೇಕಲ್ ಗ್ರಾಮದ ಸುಮಾರು 102 ವರ್ಷದ ನೇಕಾರಿಗೆ ವೃತ್ತಿಯ ಸಂಗಪ್ಪ ಮಂಟೆ ಅವರ ಮನದಾಳದ ಮಾತುಗಳಿವು.

ದೇಶಕ್ಕೆ ಹೆಸರಿಗೆ ಮಾತ್ರ ಸ್ವಾತಂತ್ರ್ಯ ಸಿಕ್ಕಂತಾಗಿದೆ. ಎಲ್ಲೆಂದರಲ್ಲಿ ನಾವೇ ಎನ್ನುವ ಟಿವಿಯ ಮಾತು. ಹಣ ಕೊಟ್ಟರೆ ಅಧಿಕಾರಿಗಳಿಂದ ಕೆಲಸ ಸಾಧ್ಯ. ಇವೆಲ್ಲ ನನಗೆ ಬೇಡ ಎಂದು ನಾನು ನನ್ನ ವೃತ್ತಿಯಲ್ಲಿದ್ದೇನೆ ಎನ್ನುವ ಸಂಗಪ್ಪ ಮಂಟೆ ಅವರು ನೊಂದುಕೊಂಡು ಬದುಕು ಕಟ್ಟಿಕೊಂಡಿದ್ದು ಇಂದಿಗೂ ಇಳಿ ವಯಸ್ಸಿನಲ್ಲಿ ಜಗ್ಗದೇ ನೇಕಾರಿಕೆ ಮಾಡುತ್ತಿದ್ದುದು ಅಚ್ಚರಿ ಮೂಡಿಸಿದೆ.

ಆಸರೆ ಇಲ್ಲ: ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದ ಮಂಟೆ ಅವರು ಸುಮಾರು 15 ವರ್ಷದವರಿದ್ದಾಗಲೇ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತೊಡಗಿಸಿಕೊಂಡಿದ್ದರು. ಮಂಟೆ ನೇರ ದಿಟ್ಟ ನಿರಂತರದ ವ್ಯಕ್ತಿತ್ವದವರು. ಸ್ವಾತಂತ್ರ್ಯಕ್ಕೋಸ್ಕರ ಪ್ರಾಣ ಬಿಟ್ಟವರಲ್ಲಿ ನಮ್ಮ ಭಾಗದಲ್ಲಿ ಅಂದಿನ ಗುಲಬರ್ಗಾ ಜೈಲಲ್ಲಿ 3 ತಿಂಗಳ ಕಾಲ ಕಳೆದಿದ್ದಾರೆ. ಬ್ರೀಟಿಷರು ಸಿಕ್ಕ ಸಿಕ್ಕವರ ಮನೆ ಮನೆಗಳಲ್ಲಿ ಹೊಕ್ಕು ಆಸ್ತಿ ಪಾಸ್ತಿ ಲೂಟಿ ಮಾಡಿದ್ದಲ್ಲದೇ ನಮ್ಮನ್ನು ಕಂಡು ಓಡಿ ಹೋದ ‘ರಜಾಕರು’ ಕ್ರೂರತನ ಮೆರೆದು ನಮ್ಮನ್ನು ಗುಲಾಮಗಿರಿ ಮಾಡಿಕೊಂಡಿದ್ದರು ಎನ್ನುತ್ತಾರೆ. ಆದರೂ ನಾ ಜಗ್ಗದೇ ಸುರುಪುರ ರಾಜಾ ವೆಂಕಟಪ್ಪ ನಾಯಕತ್ವದಲ್ಲಿ ಹೋರಾಡಿದ್ದು ನಿಜಕ್ಕೂ ಎದೆಗಾರಿಕೆಗೆ ಯಾವುದೂ ಸಾಟಿ ಇಲ್ಲದಂತೆ ಕತೆ ಬಿಚ್ಚಿಟ್ಟಿದ್ದಾರೆ.

ಕಾಗದ ಹಿಡಿದು ಅಲೆದಾಡಿದ್ದರು: ಅಂದಿನ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಯವರನ್ನು ಭೇಟಿ ಮಾಡಿದ್ದ ಮಂಟೆ ಅವರು ಈಗಿನ ಅಧಿಕಾರಿಗಳು ರಾಜಕೀಯ ನಾಯಕರು ಅವರ ಮಾತುಗಳೇ ಬಂಡವಾಳ, ಯಾವದೇ ಸರಕಾರ ಅಥವಾ ಪಕ್ಷ ಒಳ್ಳೆಯದ್ದೇ ಇರುತ್ತೆ ಆದರೆ ಆಡಳಿತ ನಡೆಸೋರೇ ಭ್ರಷ್ಟರು, ಸ್ವತಂತ್ರ ಸಿಕ್ಕ ನಂತರ ಸೌಲಭ್ಯಗಳು ಸಿಗಬಹುದು ಎಂದು ದಾಖಲೆಗಳನ್ನು ಹಿಡಿದು ಅಲೆದಾಡಿದೆ. ಎಲ್ಲೆ ಹೋದರೂ ಲಂಚವೇ ಕೇಳಿ ಬಂದಿತು. ಈಗ ಮಾಸಿಕ 10 ಸಾವಿರ ಹೊರತು ಈವರೆಗೂ ಆಸರೆ ಮನೆ ಅಥವಾ ನನ್ನ ಕಾಯಕದ ನೇಕಾರಿಕೆಗೆ ಸಂಬಂಧಿಸಿದ ಯಾವದೇ ಸೌಲಭ್ಯ ಕೊಡಲು ಭ್ರಷ್ಟ ಅಧಿಕಾರಿಗಳು ಮುಂದೆ ಬರಲಿಲ್ಲ. ಒಂದು ಮನೆ ಕೇಳಿದರೆ 20 ಸಾವಿರ ಕೇಳುತ್ತಾರೆ ಯಾಕೆ ಹಣ ಕೊಡಬೇಕು ಎನ್ನುತ್ತಾರೆ ಹೋರಾಟಗಾರ ಸಂಗಪ್ಪ ಮಂಟೆ.

ಜಿಲ್ಲಾ ವರದಿಗಾರ : ಶಿವು ರಾಠೋಡ ಯಾದಗಿರಿ

Latest News

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ;                ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ; ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಮುದ್ದೇಬಿಹಾಳ : ಕಾಂಕ್ರೀಟ್ ಮಿಕ್ಸರ್‌ನಲ್ಲಿ ಕಾರ್ಮಿಕನೊಬ್ಬನ ಕೈ ಸಿಲುಕಿಕೊಂಡು ಎಲುಬುಗಳು ತುಂಡಾಗಿರುವ ಘಟನೆ ಮಂಗಳವಾರ ಇಲ್ಲಿನ ಪಟ್ಟಣದಲ್ಲಿ ಅಂಬೇಡ್ಕರ್ ಸಮುದಾಯ ಭವನದ ಬಳಿ ನಡೆದಿದೆ. ಅಬ್ಬಿಹಾಳ ಗ್ರಾಮದ ಕಾರ್ಮಿಕ ಗಂಗಣ್ಣ ಬಸಪ್ಪ ಕಂಬಳಿ(25) ಘಟನೆಯಲ್ಲಿ ಅವರ ಬಲಗೈ ಮಣಿಕಟ್ಟಿಗೆ ತೀವ್ರ ಗಾಯವಾಗಿ ನರಗಳು ಮತ್ತು ಎಲಬು ತುಂಡಾಗಿದೆ.ವಿಷಯ ತಿಳಿದ ತಕ್ಷಣ ಹತ್ತಿರದಲ್ಲಿಯೇ ಇದ್ದ ಅಗ್ನಿಶಾಮಕ ಇಲಾಖೆ ಇಡೀ ತಂಡದ ಸಿಬ್ಬಂದಿ ಧಾವಿಸಿ ಬಂದು ಕಾರ್ಮಿಕನನ್ನು ಪ್ರಾಣಾಪಾಯದಿಂದ ರಕ್ಷಣೆ ಮಾಡಿದರು. ಕಾಂಕ್ರಿಟ್

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ ಒಳ್ಳೆಯ ಶಿಕ್ಷಕರು ರೋಲ್ ಮಾಡೆಲ್ ಆಗಿರುತ್ತಾರೆ ಎಂದು ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ ನರಗುಂದ ಹೇಳಿದರು. ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 11ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜರ್ಮನಿಯ ಶಿಕ್ಷಣ ತಜ್ಞ ಫ್ರೆಡ್ರಿಕ್ ಪ್ರೋಬೆಲ್ ಕಿಂಡರ್ ಗಾರ್ಟನ್ ಕಲ್ಪನೆಯನ್ನು ಬಿತ್ತಿದರು.ಈ ವ್ಯವಸ್ಥೆಯಲ್ಲಿ