Sangappa Mante, a freedom fighter neglected by the government

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ ಕಂಡವನಲ್ಲ. ಆಧುನಿಕ ರಾಜಕೀಯ ಪರಿಸ್ಥಿತಿನೇ ಈಗಿದೇ ನನಗೆ ಈವರೆಗೂ ಸರಕಾರ ಯಾವ ಸೌಲಭ್ಯ ಕೊಡುತ್ತಿಲ್ಲ. ಸಮೀಪದ ಕೊಡೇಕಲ್ ಗ್ರಾಮದ ಸುಮಾರು 102 ವರ್ಷದ ನೇಕಾರಿಗೆ ವೃತ್ತಿಯ ಸಂಗಪ್ಪ ಮಂಟೆ ಅವರ ಮನದಾಳದ ಮಾತುಗಳಿವು.

ದೇಶಕ್ಕೆ ಹೆಸರಿಗೆ ಮಾತ್ರ ಸ್ವಾತಂತ್ರ್ಯ ಸಿಕ್ಕಂತಾಗಿದೆ. ಎಲ್ಲೆಂದರಲ್ಲಿ ನಾವೇ ಎನ್ನುವ ಟಿವಿಯ ಮಾತು. ಹಣ ಕೊಟ್ಟರೆ ಅಧಿಕಾರಿಗಳಿಂದ ಕೆಲಸ ಸಾಧ್ಯ. ಇವೆಲ್ಲ ನನಗೆ ಬೇಡ ಎಂದು ನಾನು ನನ್ನ ವೃತ್ತಿಯಲ್ಲಿದ್ದೇನೆ ಎನ್ನುವ ಸಂಗಪ್ಪ ಮಂಟೆ ಅವರು ನೊಂದುಕೊಂಡು ಬದುಕು ಕಟ್ಟಿಕೊಂಡಿದ್ದು ಇಂದಿಗೂ ಇಳಿ ವಯಸ್ಸಿನಲ್ಲಿ ಜಗ್ಗದೇ ನೇಕಾರಿಕೆ ಮಾಡುತ್ತಿದ್ದುದು ಅಚ್ಚರಿ ಮೂಡಿಸಿದೆ.

ಆಸರೆ ಇಲ್ಲ: ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದ ಮಂಟೆ ಅವರು ಸುಮಾರು 15 ವರ್ಷದವರಿದ್ದಾಗಲೇ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತೊಡಗಿಸಿಕೊಂಡಿದ್ದರು. ಮಂಟೆ ನೇರ ದಿಟ್ಟ ನಿರಂತರದ ವ್ಯಕ್ತಿತ್ವದವರು. ಸ್ವಾತಂತ್ರ್ಯಕ್ಕೋಸ್ಕರ ಪ್ರಾಣ ಬಿಟ್ಟವರಲ್ಲಿ ನಮ್ಮ ಭಾಗದಲ್ಲಿ ಅಂದಿನ ಗುಲಬರ್ಗಾ ಜೈಲಲ್ಲಿ 3 ತಿಂಗಳ ಕಾಲ ಕಳೆದಿದ್ದಾರೆ. ಬ್ರೀಟಿಷರು ಸಿಕ್ಕ ಸಿಕ್ಕವರ ಮನೆ ಮನೆಗಳಲ್ಲಿ ಹೊಕ್ಕು ಆಸ್ತಿ ಪಾಸ್ತಿ ಲೂಟಿ ಮಾಡಿದ್ದಲ್ಲದೇ ನಮ್ಮನ್ನು ಕಂಡು ಓಡಿ ಹೋದ ‘ರಜಾಕರು’ ಕ್ರೂರತನ ಮೆರೆದು ನಮ್ಮನ್ನು ಗುಲಾಮಗಿರಿ ಮಾಡಿಕೊಂಡಿದ್ದರು ಎನ್ನುತ್ತಾರೆ. ಆದರೂ ನಾ ಜಗ್ಗದೇ ಸುರುಪುರ ರಾಜಾ ವೆಂಕಟಪ್ಪ ನಾಯಕತ್ವದಲ್ಲಿ ಹೋರಾಡಿದ್ದು ನಿಜಕ್ಕೂ ಎದೆಗಾರಿಕೆಗೆ ಯಾವುದೂ ಸಾಟಿ ಇಲ್ಲದಂತೆ ಕತೆ ಬಿಚ್ಚಿಟ್ಟಿದ್ದಾರೆ.

ಕಾಗದ ಹಿಡಿದು ಅಲೆದಾಡಿದ್ದರು: ಅಂದಿನ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಯವರನ್ನು ಭೇಟಿ ಮಾಡಿದ್ದ ಮಂಟೆ ಅವರು ಈಗಿನ ಅಧಿಕಾರಿಗಳು ರಾಜಕೀಯ ನಾಯಕರು ಅವರ ಮಾತುಗಳೇ ಬಂಡವಾಳ, ಯಾವದೇ ಸರಕಾರ ಅಥವಾ ಪಕ್ಷ ಒಳ್ಳೆಯದ್ದೇ ಇರುತ್ತೆ ಆದರೆ ಆಡಳಿತ ನಡೆಸೋರೇ ಭ್ರಷ್ಟರು, ಸ್ವತಂತ್ರ ಸಿಕ್ಕ ನಂತರ ಸೌಲಭ್ಯಗಳು ಸಿಗಬಹುದು ಎಂದು ದಾಖಲೆಗಳನ್ನು ಹಿಡಿದು ಅಲೆದಾಡಿದೆ. ಎಲ್ಲೆ ಹೋದರೂ ಲಂಚವೇ ಕೇಳಿ ಬಂದಿತು. ಈಗ ಮಾಸಿಕ 10 ಸಾವಿರ ಹೊರತು ಈವರೆಗೂ ಆಸರೆ ಮನೆ ಅಥವಾ ನನ್ನ ಕಾಯಕದ ನೇಕಾರಿಕೆಗೆ ಸಂಬಂಧಿಸಿದ ಯಾವದೇ ಸೌಲಭ್ಯ ಕೊಡಲು ಭ್ರಷ್ಟ ಅಧಿಕಾರಿಗಳು ಮುಂದೆ ಬರಲಿಲ್ಲ. ಒಂದು ಮನೆ ಕೇಳಿದರೆ 20 ಸಾವಿರ ಕೇಳುತ್ತಾರೆ ಯಾಕೆ ಹಣ ಕೊಡಬೇಕು ಎನ್ನುತ್ತಾರೆ ಹೋರಾಟಗಾರ ಸಂಗಪ್ಪ ಮಂಟೆ.

ಜಿಲ್ಲಾ ವರದಿಗಾರ : ಶಿವು ರಾಠೋಡ ಯಾದಗಿರಿ

Latest News

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮುದ್ದೆಬಿಹಾಳ : ಆನ್‌ಲೈನ್ ಪೋರ್ಟಲ್‌ಗಳ ಅನಿಯಂತ್ರಿತ ಕಾರ್ಯನಿರ್ವಹಣೆ ಮತ್ತು ದರೋಡೆಕೋರತನದ ಬೆಲೆ ಅಕ್ರಮಗಳು ಸೇರಿದಂತೆ

SSLC RE VALUVETION RESULT :                                                            ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

SSLC RE VALUVETION RESULT : ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

ತಾಳಿಕೋಟಿ : ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನದಲ್ಲಿ ಈ ಮೊದಲು ರಾಜ್ಯಕ್ಕೆ ಮೂರನೆ ಸ್ಥಾನ ಪಡೆದುಕೊಂಡಿದ್ದ ತಾಲ್ಲೂಕಿನ ಮೈಲೇಶ್ವರದ ಬ್ರಿಲಿಯಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಗಂಗಮ್ಮ ಕೋಳೂರುಗೆ ಮತ್ತೆ ಎರಡು ಅಂಕಗಳು ಬಂದಿದ್ದು ಅದರೊಂದಿಗೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ತಾಳಿಕೋಟಿ ಪಟ್ಟಣದ ನಿವಾಸಿಯಾಗಿರುವ ಗಂಗಮ್ಮ ಅಶೋಕ ಕೋಳೂರ ಈ ಮೊದಲು ಫಲಿತಾಂಶ ಬಂದಾಗ 623 ಅಂಕ ಪಡೆದುಕೊಂಡು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದುಕೊಂಡಿದ್ದಳು.ಆದರೆ ಶಾಲೆಯ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ:                                                                  ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ: ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ಸ್ಥಾನ ಗಳಿಸುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾಳೆ. ತಾಲ್ಲೂಕಿನ ನಾಲತವಾಡದ ನಿವಾಸಿ ಸೃಷ್ಟಿ ಎಸ್.ಪಾಟೀಲ ವಿದ್ಯಾರ್ಥಿನಿ ಇದೀಗ 625ಕ್ಕೆ 625 ಅಂಕ ಪಡೆದುಕೊಂಡು ರಾಜ್ಯಕ್ಕೆ ಮೊದಲನೇ ಸ್ಥಾನ ಪಡೆದುಕೊಂಡಿದ್ದಾಳೆ.ಮೊದಲು ಫಲಿತಾಂಶ ಪ್ರಕಟಗೊಂಡಾಗ ಕನ್ನಡ 125,ಗಣಿತ 100,ಹಿಂದಿ 100,ಸಮಾಜ ವಿಜ್ಞಾನ 100, ಇಂಗ್ಲಿಷ್‌ಗೆ 99 ಹಾಗೂ ವಿಜ್ಞಾನ ವಿಷಯದಲ್ಲಿ 97