A woman weighs 17 kg from the womb. ESIC hospital doctors who removed the tumor

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್ ಮತ್ತು ಎಂಹೆಚ್ ಆಸ್ಪತ್ರೆ ವೈದ್ಯರು 17 ಕೆ.ಜಿ. ಗೆಡ್ಡೆ ತೆಗೆದಿದ್ದಾರೆ. ರೋಗಿ ಇದೀಗ ಚೇತರಿಸಿಕೊಳ್ಳುತ್ತಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ.

ಇಎಸ್‌ಐಸಿ ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ, ಅನಿತಾ. ಎ.ಎಂ ಮತ್ತು ಆಂಕೋಸರ್ಜನ್ ಡಾ. ಹೇಮಂತ್. ಎಸ್. ಗಾಲಿಗೆ ನೇತೃತ್ವದಲ್ಲಿ ಯಶಸ್ವಿಯಾಗಿ ಶಸ್ತ ಚಿಕಿತ್ಸೆ ನಡೆಸಲಾಗಿದೆ.
48 ವರ್ಷದ ಎರಡು ಮಕ್ಕಳ ತಾಯಿಯಾದ ಮಹಿಳೆ 8 ತಿಂಗಳಿಂದ ಹೊಟ್ಟೆಯಲ್ಲಿ ಕಾಣಿಸಿಕೊಂಡ ಉಬ್ಬರವನ್ನು ಗ್ಯಾಸ್ಟಿಕ್ ತೊಂದರೆ ಎಂದುಕೊಂಡು ಆಯುರ್ವೇದ ಔಷಧ ಸೇವಿಸುತ್ತಿದ್ದರು. ಕಳೆದ 4-5 ತಿಂಗಳಿಂದ ಹೊಟ್ಟೆ ಉಬ್ಬರ ಅಧಿಕವಾದರೂ ರೋಗಿಯು ಮಾತ್ರೆಯನ್ನೇ ಮುಂದುವರಿಸಿದ್ದರು.

ರೋಗಿಯ ಪ್ರಕಾರ ಕಳೆದ ಒಂದುವರೆ ವರ್ಷದಿಂದ ಸರಿಯಾಗಿ ಋತುಚಕ್ರ ಆಗುತ್ತಿರಲಿಲ್ಲ. ಹೊಟ್ಟೆ ಉಬ್ಬರದ ಒತ್ತಡ ಸಮಸ್ಯೆಗಳು, ಮಲಮೂತ್ರ, ಉಸಿರಾಟದ ತೊಂದರೆಗಳು ಕಾಣಿಸಿರುವುದಿಲ್ಲ. ಆದರೆ ಈಕೆ ಅಧಿಕ ರಕ್ತೊದೊತ್ತಡ ಹೊಂದಿದ್ದು, ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು.

ರೋಗಿಯನ್ನು ತಪಾಸಣೆ ಮಾಡುವಾಗ, ರೋಗಿಯ ಹೊಟ್ಟೆಯು (3 ಮಕ್ಕಳ ಗಾತ್ರದ) ಗರ್ಬಿಣಿ ಹೊಟ್ಟೆಯ ರೀತಿಯಲ್ಲಿದ್ದು, ನೀರು ತುಂಬಿದ ಗಡ್ಡೆಯ ಸ್ಥಿತಿಯಲ್ಲಿರುವುದು ಕಂಡು ಬಂತು. ಯೋನಿ ಹಾಗೂ ಗರ್ಭಕೋಶವನ್ನು ಪರೀಕ್ಷಿಸಿದಾಗ ಗರ್ಭಕೋಶದ ಕಂಠವು ಸಹಜರೀತಿಯಲ್ಲಿದ್ದು ಗಡ್ಡೆಯು ಗರ್ಭಕೋಶವನ್ನು ಎಳೆದಿರುವ ಲಕ್ಷಣಗಳು ಕಂಡು ಬಂತು. ಹೊಟ್ಟೆಯ ಅಲ್ಪಾಸೌಂಡ್ ಇಮೇಜಿಂಗ್ ಹಾಗೂ ಸಿಟಿ ಸ್ಕ್ಯಾನ್ ಪರೀಕ್ಷೆಗೆ ಒಳಪಡಿಸಿದಾಗ ಗರ್ಭಕೋಶದಲ್ಲಿ ಗಡ್ಡೆ ಇರುವುದು ಪತ್ತೆಯಾಯಿತು.

ಜೂನ್‌ 24 ರಂದು ರೋಗಿಯನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿದಾಗ ದೊಡ್ಡಗಾತ್ರದ ನೀರು ತುಂಬಿದ ಗಡ್ಡೆ ಕಂಡು ಬಂತು. 17 ಕೆ.ಜಿ. ಗಡ್ಡೆಯು ಗರ್ಭಕೋಶದ ಮುಂದಿನ ಪದರದಲ್ಲಿತ್ತು. ರೋಗಿಯ ಎರಡು ಅಂಡಾಶಯಗಳು ಸಹಜ ಸ್ಥಿತಿಯಲ್ಲಿದ್ದವು. ಗಡ್ಡೆಯ ಸುತ್ತಮುತ್ತಲಿನ ಅಂಗಾಗಳು ಸಹಜ ಸ್ಥಿತಿಯಲ್ಲಿತ್ತು. ಗಡ್ಡೆಯನ್ನು ಹಿಸ್ಟೋಪಾಥಾಲಜಿಯ ಪರೀಕ್ಷೆಗೆ ಒಳಪಡಿಸಿದಾಗ ಗಡ್ಡೆಯು ಸಿಸ್ಟಿಕ್‌ ಡಿಜನೆರೇಷನ್‌ ಫೈಬ್ರಾಯ್ಡ್ ಎಂದು ದೃಢೀಕರಿಸಲಾಗಿದೆ. ಶಸ್ತ್ರಚಿಕಿತ್ಸೆಯ ನಂತರ ರೋಗಿಯು ಸಹಜ ಸ್ಥಿತಿಯಲ್ಲಿದ್ದು ಚಿಕಿತ್ಸೆಗೆ ಸ್ವಂದಿಸುತ್ತಿದ್ಧಾರೆ. ಫೈಬ್ರಾಯ್ಡ್ ಗಡ್ಡೆಯು ಸಾಮಾನ್ಯ ವಾಗಿ 20-30% ಮಹಿಳೆಯರಲ್ಲಿ ಕಂಡು ಬರುತ್ತದೆ. 40 ರಿಂದ 80ರಷ್ಟು ಮಹಿಳೆಯರಲ್ಲಿ ಈ ಫೈಬ್ರಾಯ್ಡ್‌ ಗಡ್ಡೆಯ ಬೆಳವಣಿಗೆ ಸಾಮಾನ್ಯ. ಕೆಲವರು ಏನೂ ರೋಗ ಲಕ್ಷಣಗಳನ್ನು ಹೊಂದಿರುವುದೇ ಇಲ್ಲ. ಆದರೆ ಫೈಬ್ರಾಯ್ಡ್‌ ಗಡ್ಡೆ ದೊಡ್ಡದಾಗಿ ಬೆಳೆಯುತ್ತಿದ್ದರೆ ಕೆಲವೊಂದು ರೋಗ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಸಿಸ್ಟಿಕ್‌ ಡಿಜನೆರೇಷನ್‌ ಫೈಬ್ರಾಯ್ಡ್ ತೊಡಕು 4% ಮಹಿಳೆಯರಲ್ಲಿ ಕಂಡುಬರುತ್ತದೆ
ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸೋನಿಯ, ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗ ಪಿಜಿ ವಿದ್ಯಾರ್ಥಿನಿ ಡಾ. ಅಹಲ್ಯಾ, ಅರವಳಿಕೆ ತಜ್ಞರಾದ ಡಾ. ಲಕ್ಷ್ಮಿ ಮತ್ತು ತಂಡ. ದಾದಿಯರಾದ ವಂದನಾ ಅವರು ಶಸ್ತ್ತ ಚಿಕಿತ್ಸೆಯಲ್ಲಿ ಭಾಗವಹಿಸಿದ್ದರು. ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀಲತಾ ಮತ್ತು ಡಾ. ಅಶೋಕ್ ಕುಮಾರ್, ಡೀನ್: ಡಾ. ಸಂಧ್ಯಾ. ಆರ್ ಮತ್ತು ಚಿಕಿತ್ಸಾ ಅಧೀಕ್ಷಕರಾದ ಡಾ. ಪ್ರಸಾದ್ ಅವರ ಮೇಲ್ವಿಚಾರಣೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಯಿತು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು