A woman weighs 17 kg from the womb. ESIC hospital doctors who removed the tumor

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್ ಮತ್ತು ಎಂಹೆಚ್ ಆಸ್ಪತ್ರೆ ವೈದ್ಯರು 17 ಕೆ.ಜಿ. ಗೆಡ್ಡೆ ತೆಗೆದಿದ್ದಾರೆ. ರೋಗಿ ಇದೀಗ ಚೇತರಿಸಿಕೊಳ್ಳುತ್ತಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ.

ಇಎಸ್‌ಐಸಿ ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ, ಅನಿತಾ. ಎ.ಎಂ ಮತ್ತು ಆಂಕೋಸರ್ಜನ್ ಡಾ. ಹೇಮಂತ್. ಎಸ್. ಗಾಲಿಗೆ ನೇತೃತ್ವದಲ್ಲಿ ಯಶಸ್ವಿಯಾಗಿ ಶಸ್ತ ಚಿಕಿತ್ಸೆ ನಡೆಸಲಾಗಿದೆ.
48 ವರ್ಷದ ಎರಡು ಮಕ್ಕಳ ತಾಯಿಯಾದ ಮಹಿಳೆ 8 ತಿಂಗಳಿಂದ ಹೊಟ್ಟೆಯಲ್ಲಿ ಕಾಣಿಸಿಕೊಂಡ ಉಬ್ಬರವನ್ನು ಗ್ಯಾಸ್ಟಿಕ್ ತೊಂದರೆ ಎಂದುಕೊಂಡು ಆಯುರ್ವೇದ ಔಷಧ ಸೇವಿಸುತ್ತಿದ್ದರು. ಕಳೆದ 4-5 ತಿಂಗಳಿಂದ ಹೊಟ್ಟೆ ಉಬ್ಬರ ಅಧಿಕವಾದರೂ ರೋಗಿಯು ಮಾತ್ರೆಯನ್ನೇ ಮುಂದುವರಿಸಿದ್ದರು.

ರೋಗಿಯ ಪ್ರಕಾರ ಕಳೆದ ಒಂದುವರೆ ವರ್ಷದಿಂದ ಸರಿಯಾಗಿ ಋತುಚಕ್ರ ಆಗುತ್ತಿರಲಿಲ್ಲ. ಹೊಟ್ಟೆ ಉಬ್ಬರದ ಒತ್ತಡ ಸಮಸ್ಯೆಗಳು, ಮಲಮೂತ್ರ, ಉಸಿರಾಟದ ತೊಂದರೆಗಳು ಕಾಣಿಸಿರುವುದಿಲ್ಲ. ಆದರೆ ಈಕೆ ಅಧಿಕ ರಕ್ತೊದೊತ್ತಡ ಹೊಂದಿದ್ದು, ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು.

ರೋಗಿಯನ್ನು ತಪಾಸಣೆ ಮಾಡುವಾಗ, ರೋಗಿಯ ಹೊಟ್ಟೆಯು (3 ಮಕ್ಕಳ ಗಾತ್ರದ) ಗರ್ಬಿಣಿ ಹೊಟ್ಟೆಯ ರೀತಿಯಲ್ಲಿದ್ದು, ನೀರು ತುಂಬಿದ ಗಡ್ಡೆಯ ಸ್ಥಿತಿಯಲ್ಲಿರುವುದು ಕಂಡು ಬಂತು. ಯೋನಿ ಹಾಗೂ ಗರ್ಭಕೋಶವನ್ನು ಪರೀಕ್ಷಿಸಿದಾಗ ಗರ್ಭಕೋಶದ ಕಂಠವು ಸಹಜರೀತಿಯಲ್ಲಿದ್ದು ಗಡ್ಡೆಯು ಗರ್ಭಕೋಶವನ್ನು ಎಳೆದಿರುವ ಲಕ್ಷಣಗಳು ಕಂಡು ಬಂತು. ಹೊಟ್ಟೆಯ ಅಲ್ಪಾಸೌಂಡ್ ಇಮೇಜಿಂಗ್ ಹಾಗೂ ಸಿಟಿ ಸ್ಕ್ಯಾನ್ ಪರೀಕ್ಷೆಗೆ ಒಳಪಡಿಸಿದಾಗ ಗರ್ಭಕೋಶದಲ್ಲಿ ಗಡ್ಡೆ ಇರುವುದು ಪತ್ತೆಯಾಯಿತು.

ಜೂನ್‌ 24 ರಂದು ರೋಗಿಯನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿದಾಗ ದೊಡ್ಡಗಾತ್ರದ ನೀರು ತುಂಬಿದ ಗಡ್ಡೆ ಕಂಡು ಬಂತು. 17 ಕೆ.ಜಿ. ಗಡ್ಡೆಯು ಗರ್ಭಕೋಶದ ಮುಂದಿನ ಪದರದಲ್ಲಿತ್ತು. ರೋಗಿಯ ಎರಡು ಅಂಡಾಶಯಗಳು ಸಹಜ ಸ್ಥಿತಿಯಲ್ಲಿದ್ದವು. ಗಡ್ಡೆಯ ಸುತ್ತಮುತ್ತಲಿನ ಅಂಗಾಗಳು ಸಹಜ ಸ್ಥಿತಿಯಲ್ಲಿತ್ತು. ಗಡ್ಡೆಯನ್ನು ಹಿಸ್ಟೋಪಾಥಾಲಜಿಯ ಪರೀಕ್ಷೆಗೆ ಒಳಪಡಿಸಿದಾಗ ಗಡ್ಡೆಯು ಸಿಸ್ಟಿಕ್‌ ಡಿಜನೆರೇಷನ್‌ ಫೈಬ್ರಾಯ್ಡ್ ಎಂದು ದೃಢೀಕರಿಸಲಾಗಿದೆ. ಶಸ್ತ್ರಚಿಕಿತ್ಸೆಯ ನಂತರ ರೋಗಿಯು ಸಹಜ ಸ್ಥಿತಿಯಲ್ಲಿದ್ದು ಚಿಕಿತ್ಸೆಗೆ ಸ್ವಂದಿಸುತ್ತಿದ್ಧಾರೆ. ಫೈಬ್ರಾಯ್ಡ್ ಗಡ್ಡೆಯು ಸಾಮಾನ್ಯ ವಾಗಿ 20-30% ಮಹಿಳೆಯರಲ್ಲಿ ಕಂಡು ಬರುತ್ತದೆ. 40 ರಿಂದ 80ರಷ್ಟು ಮಹಿಳೆಯರಲ್ಲಿ ಈ ಫೈಬ್ರಾಯ್ಡ್‌ ಗಡ್ಡೆಯ ಬೆಳವಣಿಗೆ ಸಾಮಾನ್ಯ. ಕೆಲವರು ಏನೂ ರೋಗ ಲಕ್ಷಣಗಳನ್ನು ಹೊಂದಿರುವುದೇ ಇಲ್ಲ. ಆದರೆ ಫೈಬ್ರಾಯ್ಡ್‌ ಗಡ್ಡೆ ದೊಡ್ಡದಾಗಿ ಬೆಳೆಯುತ್ತಿದ್ದರೆ ಕೆಲವೊಂದು ರೋಗ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಸಿಸ್ಟಿಕ್‌ ಡಿಜನೆರೇಷನ್‌ ಫೈಬ್ರಾಯ್ಡ್ ತೊಡಕು 4% ಮಹಿಳೆಯರಲ್ಲಿ ಕಂಡುಬರುತ್ತದೆ
ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸೋನಿಯ, ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗ ಪಿಜಿ ವಿದ್ಯಾರ್ಥಿನಿ ಡಾ. ಅಹಲ್ಯಾ, ಅರವಳಿಕೆ ತಜ್ಞರಾದ ಡಾ. ಲಕ್ಷ್ಮಿ ಮತ್ತು ತಂಡ. ದಾದಿಯರಾದ ವಂದನಾ ಅವರು ಶಸ್ತ್ತ ಚಿಕಿತ್ಸೆಯಲ್ಲಿ ಭಾಗವಹಿಸಿದ್ದರು. ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀಲತಾ ಮತ್ತು ಡಾ. ಅಶೋಕ್ ಕುಮಾರ್, ಡೀನ್: ಡಾ. ಸಂಧ್ಯಾ. ಆರ್ ಮತ್ತು ಚಿಕಿತ್ಸಾ ಅಧೀಕ್ಷಕರಾದ ಡಾ. ಪ್ರಸಾದ್ ಅವರ ಮೇಲ್ವಿಚಾರಣೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಯಿತು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ