Inauguration of the new chariot at Kuntoji

ಕುಂಟೋಜಿಯಲ್ಲಿ ನೂತನ ರಥದ ಲೋಕಾರ್ಪಣೆ

ಕುಂಟೋಜಿಯಲ್ಲಿ ನೂತನ ರಥದ ಲೋಕಾರ್ಪಣೆ

ತನ್ನನ್ನು ಪರಿವರ್ತಿಸಿಕೊಳ್ಳುವುದೇ ನಿಜವಾದ ಧರ್ಮ-ಕೊಪ್ಪಳ ಶ್ರೀ

ಮುದ್ದೇಬಿಹಾಳ : ಮನುಷ್ಯ ಸಂತೋಷವಾಗಿ ಬದುಕಲು ಅನ್ನ, ಆಶ್ರಯ, ಅರಿವೆ ಬೇಕು. ಅದರ ಜೊತೆಗೆ ನಾನು ಈ ಭೂಮಿಯ ಮೇಲೆ ಹೇಗೆ ಬದುಕುಬೇಕು ಎಂಬ ಅರಿವು ಇಟ್ಟುಕೊಂಡು ಬದುಕುಬೇಕು ಎಂದು ಕೊಪ್ಪಳ ಗವಿಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಕುಂಟೋಜಿಯ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಭಾನುವಾರ ಸಂಜೆ ಏರ್ಪಡಿಸಿದ್ದ ನೂತನ ರಥದ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.

ಮನುಷ್ಯ ಅರಿವಿಲ್ಲದೇ ಬದುಕಬಾರದು,ಜ್ಞಾನ ತಿಳಿವಳಿಕೆ ಇಲ್ಲದ ಬದುಕು ಅಲ್ಲಿ ದುಃಖ,ಚಿಂತೆ ಮನೆ ಮಾಡುತ್ತದೆ. ಮನೆಯಲ್ಲಿ ಸೊಳ್ಳೆಯನ್ನು ಓಡಿಸಲು ಗುಡನೈಟ್ ಹಚ್ಚಿದಂತೆ ಬದುಕಿನಲ್ಲಿ ಕೆಟ್ಟ ವಿಚಾರಗಳು ಹೋಗುವುದಕ್ಕೆ ಗುಡಲೈಫ್ ಹಚ್ಚಬೇಕು. ಇಲ್ಲಿ ಯಾರಿಗೆ ಯಾರೂ ಬದಲಾವಣೆ ಮಾಡುವುದಿಲ್ಲ. ಜಗತ್ತಿನಲ್ಲಿ ತನ್ನನ್ನು ತಾನೇ ಪರಿವರ್ತನೆಯೇ ನಿಜವಾದ ಧರ್ಮವಾಗಿದೆ ಎಂದು ಹೇಳಿದರು.

ಮನಸ್ಸನ್ನು ಒಳ್ಳೆಯ ವಿಷಯಗಳಿಂದ ತುಂಬಿಸಿಕೊಳ್ಳಬೇಕು. ಸುಖ ದುಃಖದ ಪರಿಕಲ್ಪನೆಗಳು ಬೇರೆಲ್ಲೂ ಇಲ್ಲ. ನಮ್ಮಲ್ಲಿಯೇ ಇದೆ. ಕಲ್ಲು ಒಡೆಯುವವನ ಕೈಗೆ ಸಿಕ್ಕರೆ ಕಂಕರ ಆಗುತ್ತದೆ. ಶಿಲ್ಪಿ ಕೈಯ್ಯಲ್ಲಿ ಕೊಟ್ಟರೆ ಅದು ಶಂಕರ ಆಗುತ್ತದೆ. ಕಲ್ಲಿನಲ್ಲಿ ಏನೂ ಇಲ್ಲ. ಕಲ್ಲನ್ನು ರೂಪಿಸುವವನ ಕೈಯ್ಯಲ್ಲಿ ಅದು ಕಂಕರ, ಶಂಕರ ಆಗುವ ಶಕ್ತಿ ಹೊಂದಿದೆ ಎಂದರು.

ದೇವನ ಮನೆಯಲ್ಲಿರುವ ನಾವು ದೇವರಿಗೆ ಮನೆಯನ್ನು ಕಟ್ಟಿದ್ದೇವೆ ಎಂದು ಹೇಳುತ್ತ ತಿರುಗುತ್ತೇವೆ. ಭೂಮಿಗೆ ಬರಬೇಕಾದರೆ ಬರಿಗೈಯ್ಯಲ್ಲಿ ನಾವು ಬಂದಿದ್ದೇವೆ. ದೇವರು ಎಂತಹ ಕರುಣಾಮಯಿ ಎಂದರೆ ನಾವು ಹುಟ್ಟುವುದಕ್ಕಿಂತ ಮುಂಚೆಯೇ ನಮ್ಮ ಸಲುವಾಗಿ ತಾಯಿಯ ಎದೆ ಹಾಲಿನಲ್ಲಿ ಪೌಷ್ಟಿಕಾಂಶವುಳ್ಳ ಎಲ್ಲ ರೀತಿಯ ಆಹಾರವನ್ನು ಒದಗಿಸಿದ್ದಾನೆ. ಈ ದೇಹ ಲೋಕಕ್ಕೆ ಅರ್ಪಿತವಾಗಬೇಕು ಎಂದು ಹೇಳಿದರು.

ಕುಂಟೋಜಿ ಇತಿಹಾಸದಲ್ಲಿಯೇ ಇದೊಂದು ಹೊಸ ಅಧ್ಯಾಯ ನೂತನ ರಥ ಲೋಕಾರ್ಪಣೆ ಸಮಾರಂಭ. ಕಟ್ಟಿಗೆಯ ರಥ ಲೋಕಾರ್ಪಣೆಯಾದರೆ ಸಾಲುವುದಿಲ್ಲ.ಈ ದೇಹ ಲೋಕಕ್ಕೆ ಅರ್ಪಿತವಾಗಬೇಕು. ಬಸವಣ್ಣನವರು ಇದಕ್ಕೆ ಯಜ್ಞ ಎಂದು ಕರೆದಿದ್ದಾರೆ ಎಂದು ತಿಳಿಸಿದರು.

ಕುಂಟೋಜಿ ಸಂಸ್ಥಾನ ಹಿರೇಮಠದ ಚೆನ್ನವೀರ ಶಿವಾಚಾರ್ಯರು ಮಾತನಾಡಿ, ವಸುದೈವ ಕುಟುಂಬದ ಕಲ್ಪನೆ, ದ್ವೇಷ, ಎಲ್ಲರೂ ತನ್ನವರೆಂಬ ಭಾವ, ನಿಂದನೆಗಳಿಲ್ಲದಿದ್ದವರು ದೇವರಾಗಲು ಸಾಧ್ಯವಿದೆ. ಆದರೆ ಮನುಷ್ಯ ದ್ವೇಷ, ಮತ್ತೊಬ್ಬರನ್ನು ನಿಂದಿಸುವುದು, ಪರಸ್ಪರ ಸ್ನೇಹಭಾವವನ್ನು ಹೊಂದುವುದನ್ನು ಸಹಿಸುತ್ತಿಲ್ಲ. ಆತ ದೇವರಾಗಲು ಅಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವೇ.ಪಡದಯ್ಯ ಮಠ, ವೀರಯ್ಯ ಶಾಸ್ತ್ರಿಗಳು, ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ, ಮುಖಂಡ ಸಂಗನಗೌಡ ಪಾಟೀಲ, ರುದ್ರಯ್ಯ ಮಠ, ಶಿವಲಿಂಗಪ್ಪ ಗಸ್ತಿಗಾರ, ಶಿಲ್ಪಿ ಮಲ್ಲಪ್ಪ ಬಡಿಗೇರ, ರಾಘವೇಂದ್ರ ಬಡಿಗೇರ, ಮಹೇಶ ಅಂಬಿಗೇರ, ಗ್ರಾಪಂ ಅಧ್ಯಕ್ಷ ಜಗದೀಶ ಲಮಾಣಿ, ಪಿಡಿಒ ಪರಶುರಾಮ ನಾಯ್ಕೋಡಿ, ಶಿವಣ್ಣ ಚಿನಿವಾಲರ, ಶರಣು ಹಿರೇಮಠ ಇದ್ದರು. ಸಿಂಧೂ ಹಿರೇಮಠ ಪ್ರಾರ್ಥಿಸಿದರು. ಶರಣು ಹಿರೇಮಠ ನಿರೂಪಿಸಿದರು.ಮನಸ್ವಿ ಬಿರಾದಾರ ವಚನ ಗಾಯನಕ್ಕೆ ನೃತ್ಯ ಮಾಡಿದಳು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು