Inauguration of the new chariot at Kuntoji

ಕುಂಟೋಜಿಯಲ್ಲಿ ನೂತನ ರಥದ ಲೋಕಾರ್ಪಣೆ

ಕುಂಟೋಜಿಯಲ್ಲಿ ನೂತನ ರಥದ ಲೋಕಾರ್ಪಣೆ

ತನ್ನನ್ನು ಪರಿವರ್ತಿಸಿಕೊಳ್ಳುವುದೇ ನಿಜವಾದ ಧರ್ಮ-ಕೊಪ್ಪಳ ಶ್ರೀ

ಮುದ್ದೇಬಿಹಾಳ : ಮನುಷ್ಯ ಸಂತೋಷವಾಗಿ ಬದುಕಲು ಅನ್ನ, ಆಶ್ರಯ, ಅರಿವೆ ಬೇಕು. ಅದರ ಜೊತೆಗೆ ನಾನು ಈ ಭೂಮಿಯ ಮೇಲೆ ಹೇಗೆ ಬದುಕುಬೇಕು ಎಂಬ ಅರಿವು ಇಟ್ಟುಕೊಂಡು ಬದುಕುಬೇಕು ಎಂದು ಕೊಪ್ಪಳ ಗವಿಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಕುಂಟೋಜಿಯ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಭಾನುವಾರ ಸಂಜೆ ಏರ್ಪಡಿಸಿದ್ದ ನೂತನ ರಥದ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.

ಮನುಷ್ಯ ಅರಿವಿಲ್ಲದೇ ಬದುಕಬಾರದು,ಜ್ಞಾನ ತಿಳಿವಳಿಕೆ ಇಲ್ಲದ ಬದುಕು ಅಲ್ಲಿ ದುಃಖ,ಚಿಂತೆ ಮನೆ ಮಾಡುತ್ತದೆ. ಮನೆಯಲ್ಲಿ ಸೊಳ್ಳೆಯನ್ನು ಓಡಿಸಲು ಗುಡನೈಟ್ ಹಚ್ಚಿದಂತೆ ಬದುಕಿನಲ್ಲಿ ಕೆಟ್ಟ ವಿಚಾರಗಳು ಹೋಗುವುದಕ್ಕೆ ಗುಡಲೈಫ್ ಹಚ್ಚಬೇಕು. ಇಲ್ಲಿ ಯಾರಿಗೆ ಯಾರೂ ಬದಲಾವಣೆ ಮಾಡುವುದಿಲ್ಲ. ಜಗತ್ತಿನಲ್ಲಿ ತನ್ನನ್ನು ತಾನೇ ಪರಿವರ್ತನೆಯೇ ನಿಜವಾದ ಧರ್ಮವಾಗಿದೆ ಎಂದು ಹೇಳಿದರು.

ಮನಸ್ಸನ್ನು ಒಳ್ಳೆಯ ವಿಷಯಗಳಿಂದ ತುಂಬಿಸಿಕೊಳ್ಳಬೇಕು. ಸುಖ ದುಃಖದ ಪರಿಕಲ್ಪನೆಗಳು ಬೇರೆಲ್ಲೂ ಇಲ್ಲ. ನಮ್ಮಲ್ಲಿಯೇ ಇದೆ. ಕಲ್ಲು ಒಡೆಯುವವನ ಕೈಗೆ ಸಿಕ್ಕರೆ ಕಂಕರ ಆಗುತ್ತದೆ. ಶಿಲ್ಪಿ ಕೈಯ್ಯಲ್ಲಿ ಕೊಟ್ಟರೆ ಅದು ಶಂಕರ ಆಗುತ್ತದೆ. ಕಲ್ಲಿನಲ್ಲಿ ಏನೂ ಇಲ್ಲ. ಕಲ್ಲನ್ನು ರೂಪಿಸುವವನ ಕೈಯ್ಯಲ್ಲಿ ಅದು ಕಂಕರ, ಶಂಕರ ಆಗುವ ಶಕ್ತಿ ಹೊಂದಿದೆ ಎಂದರು.

ದೇವನ ಮನೆಯಲ್ಲಿರುವ ನಾವು ದೇವರಿಗೆ ಮನೆಯನ್ನು ಕಟ್ಟಿದ್ದೇವೆ ಎಂದು ಹೇಳುತ್ತ ತಿರುಗುತ್ತೇವೆ. ಭೂಮಿಗೆ ಬರಬೇಕಾದರೆ ಬರಿಗೈಯ್ಯಲ್ಲಿ ನಾವು ಬಂದಿದ್ದೇವೆ. ದೇವರು ಎಂತಹ ಕರುಣಾಮಯಿ ಎಂದರೆ ನಾವು ಹುಟ್ಟುವುದಕ್ಕಿಂತ ಮುಂಚೆಯೇ ನಮ್ಮ ಸಲುವಾಗಿ ತಾಯಿಯ ಎದೆ ಹಾಲಿನಲ್ಲಿ ಪೌಷ್ಟಿಕಾಂಶವುಳ್ಳ ಎಲ್ಲ ರೀತಿಯ ಆಹಾರವನ್ನು ಒದಗಿಸಿದ್ದಾನೆ. ಈ ದೇಹ ಲೋಕಕ್ಕೆ ಅರ್ಪಿತವಾಗಬೇಕು ಎಂದು ಹೇಳಿದರು.

ಕುಂಟೋಜಿ ಇತಿಹಾಸದಲ್ಲಿಯೇ ಇದೊಂದು ಹೊಸ ಅಧ್ಯಾಯ ನೂತನ ರಥ ಲೋಕಾರ್ಪಣೆ ಸಮಾರಂಭ. ಕಟ್ಟಿಗೆಯ ರಥ ಲೋಕಾರ್ಪಣೆಯಾದರೆ ಸಾಲುವುದಿಲ್ಲ.ಈ ದೇಹ ಲೋಕಕ್ಕೆ ಅರ್ಪಿತವಾಗಬೇಕು. ಬಸವಣ್ಣನವರು ಇದಕ್ಕೆ ಯಜ್ಞ ಎಂದು ಕರೆದಿದ್ದಾರೆ ಎಂದು ತಿಳಿಸಿದರು.

ಕುಂಟೋಜಿ ಸಂಸ್ಥಾನ ಹಿರೇಮಠದ ಚೆನ್ನವೀರ ಶಿವಾಚಾರ್ಯರು ಮಾತನಾಡಿ, ವಸುದೈವ ಕುಟುಂಬದ ಕಲ್ಪನೆ, ದ್ವೇಷ, ಎಲ್ಲರೂ ತನ್ನವರೆಂಬ ಭಾವ, ನಿಂದನೆಗಳಿಲ್ಲದಿದ್ದವರು ದೇವರಾಗಲು ಸಾಧ್ಯವಿದೆ. ಆದರೆ ಮನುಷ್ಯ ದ್ವೇಷ, ಮತ್ತೊಬ್ಬರನ್ನು ನಿಂದಿಸುವುದು, ಪರಸ್ಪರ ಸ್ನೇಹಭಾವವನ್ನು ಹೊಂದುವುದನ್ನು ಸಹಿಸುತ್ತಿಲ್ಲ. ಆತ ದೇವರಾಗಲು ಅಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವೇ.ಪಡದಯ್ಯ ಮಠ, ವೀರಯ್ಯ ಶಾಸ್ತ್ರಿಗಳು, ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ, ಮುಖಂಡ ಸಂಗನಗೌಡ ಪಾಟೀಲ, ರುದ್ರಯ್ಯ ಮಠ, ಶಿವಲಿಂಗಪ್ಪ ಗಸ್ತಿಗಾರ, ಶಿಲ್ಪಿ ಮಲ್ಲಪ್ಪ ಬಡಿಗೇರ, ರಾಘವೇಂದ್ರ ಬಡಿಗೇರ, ಮಹೇಶ ಅಂಬಿಗೇರ, ಗ್ರಾಪಂ ಅಧ್ಯಕ್ಷ ಜಗದೀಶ ಲಮಾಣಿ, ಪಿಡಿಒ ಪರಶುರಾಮ ನಾಯ್ಕೋಡಿ, ಶಿವಣ್ಣ ಚಿನಿವಾಲರ, ಶರಣು ಹಿರೇಮಠ ಇದ್ದರು. ಸಿಂಧೂ ಹಿರೇಮಠ ಪ್ರಾರ್ಥಿಸಿದರು. ಶರಣು ಹಿರೇಮಠ ನಿರೂಪಿಸಿದರು.ಮನಸ್ವಿ ಬಿರಾದಾರ ವಚನ ಗಾಯನಕ್ಕೆ ನೃತ್ಯ ಮಾಡಿದಳು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ