First Maharathotsava of the magnificent Kuntoji Basaveshwara temple

ವೈಭವದ ಕುಂಟೋಜಿ ಬಸವೇಶ್ವರರ ದೇವಸ್ಥಾನದ ಪ್ರಥಮ ಮಹಾರಥೋತ್ಸವ

ವೈಭವದ ಕುಂಟೋಜಿ ಬಸವೇಶ್ವರರ ದೇವಸ್ಥಾನದ ಪ್ರಥಮ ಮಹಾರಥೋತ್ಸವ

ಮುದ್ದೇಬಿಹಾಳ : ಕೊಪ್ಪಳದ ಗವಿಸಿದ್ಧೇಶ್ವರ ಸ್ವಾಮೀಜಿ ಲೋಕಾರ್ಪಣೆಗೊಳಿಸಿದ ತಾಲ್ಲೂಕಿನ ಕುಂಟೋಜಿ ಶ್ರೀ ಬಸವೇಶ್ವರ ಹಾಗೂ ಶ್ರೀ ಸಂಗಮೇಶ್ವರ ದೇವಸ್ಥಾನದ ರಥೋತ್ಸವ ಸಾವಿರಾರು ಭಕ್ತಾದಿಗಳ ಜಯಘೋಷಗಳ ಮಧ್ಯೆ ಮಂಗಳವಾರ ಸಂಜೆ 6.35ಕ್ಕೆ ಜರುಗಿತು.

ತಾಲ್ಲೂಕಿನ ಆಲೂರು ಗ್ರಾಮದ ಭಕ್ತರಿಂದ ತೇರಿನ ಕಳಸ, ಗರಸಂಗಿಯಿಂದ ತೇರಿನ ಹಗ್ಗ, ಮುದ್ದೇಬಿಹಾಳ ಹಾಗೂ ಅಬ್ಬಿಹಾಳ ಭಕ್ತರಿಂದ ರುದ್ರಾಕ್ಷಿ ಹಾರಗಳು ಆಗಮಿಸಿದ ನಂತರ ಪಲ್ಲಕ್ಕಿಯೊಂದಿಗೆ ರಥದ ಸುತ್ತ ಪ್ರದಕ್ಷಿಣೆ ಹಾಕಲಾಯಿತು. ನಿಡಸೋಸಿ ಶಿವಲಿಂಗೇಶ್ವರ ಸಿದ್ಧಸಂಸ್ಥಾನಮಠದ ಪ್ರಭು ಸ್ವಾಮೀಜಿ, ಕುಂಟೋಜಿ ಚೆನ್ನವೀರ ಶಿವಾಚಾರ್ಯರು, ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ಜಾತ್ರಾ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ ಹಾಗೂ ಇತರರು ನೂತನ ಪ್ರಥಮ ರಥೋತ್ಸವಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ಪ್ರಥಮ ಬಾರಿಗೆ ರಥೋತ್ಸವದಲ್ಲಿ ಪಾಲ್ಗೊಂಡಿದ್ದ ತರುಣರು ತಮ್ಮೂರಿನ ತೇರು ಪಾದಗಟ್ಟಿ ಮುಟ್ಟುತ್ತಲೇ ಜಯಘೋಷಗಳೊಂದಿಗೆ ಕುಣಿದು ಸಂಭ್ರಮಿಸಿದರು.‌ ಭಕ್ತರು ರಥಕ್ಕೆ ಉತ್ತತ್ತಿ, ಬಾಳೆ ಹಣ್ಣು ಮತ್ತಿತರ ಮಂಗಲಕಾರಿ ವಸ್ತುಗಳು ಅರ್ಪಿಸಿ ನಮಿಸಿದರು. ಸಿಪಿಐ ಮೊಹ್ಮದ ಫಸಿವುದ್ದೀನ, ಪಿಎಸ್‌ಐ ಸಂಜಯ ತಿಪರೆಡ್ಡಿ ಹಾಗೂ ಸಿಬ್ಬಂದಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಂಡರು.
ವಿಶೇಷವೆಂದರೆ ಎರಡು ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿದ್ದ ಮಳೆರಾಯ ರಥೋತ್ಸವದ ಸಮಯದಲ್ಲಿ ಎರಡ್ಮೂರು ತಾಸು ಬಿಡುವು ಕೊಟ್ಟಿದ್ದು ವಿಶೇಷವಾಗಿತ್ತು. ರಥೋತ್ಸವದ ಸಂದರ್ಭದಲ್ಲಿ ಪ್ರಮುಖರಾದ ಸಂಗನಬಸಯ್ಯ ಹಿರೇಮಠ, ಸಿದ್ದಲಿಂಗಯ್ಯ ಕಲ್ಯಾಣಮಠ, ಶಿವಣ್ಣ ಚಿನಿವಾರ,ಅಮರೇಶ ಗೂಳಿ, ಶರಣು ಹಿರೇಮಠ, ಎಂ.ಎಸ್.ಕನ್ನೂರ, ಸಂಗಮ್ಮ ಉಣ್ಣಿಬಾವಿ, ಸುರೇಶ ಅಳಗುಂಡಗಿ, ಮಲ್ಲಪ್ಪ ಬಡಿಗೇರ, ಹಣಮಪ್ಪ ಕಾರಕೂರ, ರಾಘವೇಂದ್ರ ಬಡಿಗೇರ, ಮಹೇಶ ಅಂಬಿಗೇರ ಭಾಗವಹಿಸಿದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ