Stakeholders appeal to Tehsildar: Hold elections to Anjuman Islam Committee expeditiously

ತಹಸೀಲ್ದಾರ್‌ಗೆ ಸಂಸ್ಥೆಯ ಹಿತಾಸಕ್ತರಿಂದ ಮನವಿ ಸಲ್ಲಿಕೆ: ಅಂಜುಮನ್ ಇಸ್ಲಾಂ ಕಮೀಟಿಗೆ ತ್ವರಿತವಾಗಿ ಚುನಾವಣೆ ನಡೆಸಿ

ತಹಸೀಲ್ದಾರ್‌ಗೆ ಸಂಸ್ಥೆಯ ಹಿತಾಸಕ್ತರಿಂದ ಮನವಿ ಸಲ್ಲಿಕೆ: ಅಂಜುಮನ್ ಇಸ್ಲಾಂ ಕಮೀಟಿಗೆ ತ್ವರಿತವಾಗಿ ಚುನಾವಣೆ ನಡೆಸಿ

ಮುದ್ದೇಬಿಹಾಳ : ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿಗೆ ತ್ವರಿತವಾಗಿ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿ ಸಂಸ್ಥೆಯ ಮಾಜಿ ಸದಸ್ಯ ಮಹೆಬೂಬ ಅತ್ತಾರ ನೇತೃತ್ವದಲ್ಲಿ ಶುಕ್ರವಾರ ತಹಸಿಲ್ದಾರ್ ಕೀರ್ತಿ ಚಾಲಕ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಮನವಿ ಸಲ್ಲಿಸಿದ ಮುಸ್ಲಿಂ ಸಮಾಜದ ಮುಖಂಡರು, ಕರ್ನಾಟಕ ರಾಜ್ಯ ವಕ್ಭ್ ಬೋರ್ಡ್ ಆದೇಶ ಜೂ.19 ರಂದೇ ನಿಮ್ಮನ್ನು ಅಂಜುಮನ್ ಇಸ್ಲಾಂ ಕಮೀಟಿ ಸಂಸ್ಥೆಯ ಚುನಾವಣೆ ಮತ್ತು ನೋಂದಣಿ ಅಧಿಕಾರಿಯಾಗಿ ನೇಮಿಸಲಾಗಿದೆ. ಆದರೆ ಈವರೆಗೂ ಚುನಾವಣೆ ಪ್ರಕ್ರಿಯೆಗಳು ಜರುಗಿರುವುದಿಲ್ಲ ಎಂದು ತಿಳಿಸಿದರು.

ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ಚುನಾವಣೆಯನ್ನು ತ್ವರಿತವಾಗಿ ನಡೆಸುವುದು ಸಂಸ್ಥೆಯ ಹಿತಾಸಕ್ತಿ ಹಾಗೂ ಸದಸ್ಯರ ಹಕ್ಕುಗಳಿಗೆ ಅಗತ್ಯವಾಗಿದೆ. ಒಂದು ವೇಳೆ ವಿಳಂಬ ಮಾಡಿದ್ದಲ್ಲಿ ಆ.29 ರಂದು ಮುದ್ದೇಬಿಹಾಳ ತಹಸೀಲ್ದಾರ್ ಕಚೇರಿ ಎದುರಿಗೆ ಶಾಂತಿಯುತ ಧರಣಿ ನಡೆಸುತ್ತೇವೆ ಎಂದು ತಿಳಿಸಿದರು.

ತಹಸೀಲ್ದಾರ್ ಕೀರ್ತಿ ಚಾಲಕ ಮಾತನಾಡಿ, ಜಿಲ್ಲಾ ವಕ್ಭ್ ಬೋರ್ಡ್ ಅಧಿಕಾರಿಯೊಂದಿಗೆ ಮಾತನಾಡಿ ಕೂಡಲೇ ಈ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು. ಮನವಿ ಸಲ್ಲಿಕೆ ಸಂದರ್ಭದಲ್ಲಿ ಎಂ.ಎ.ಮೋಮಿನ, ಇರ್ಫಾನ ಕೂಡಗಿ, ಸಿಕಂದರ್ ಜಾನ್ವೇಕರ, ಹುಸೇನ ಮುಲ್ಲಾ, ಕೆ.ಎ.ರಿಸಾಲ್ದಾರ್, ಆರ್. ಎಂ. ಮುದ್ನಾಳ, ಎಂ.ಬಿ.ಮಕಾನದಾರ,ಸುಲೈಮಾನ ಮಮದಾಪುರ, ಎ.ಡಿ.ಗೋಲಂದಾಜ, ಯು.ಡಿ.ಚೌಧರಿ, ಎಂ.ಎಚ್.ನದಾಫ, ಎ.ಎ.ನಾಯ್ಕೋಡಿ, ಎ.ಎಸ್.ಮೋಮಿನ, ಎಚ್.ಬಿ.ಸಾಲಿಮನಿ ಇದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು