The body of the farmer who was carrying the crocodile was found after five hours of operation

ಮೊಸಳೆ ಹೊತ್ತೊಯ್ದಿದ್ದ ರೈತನ ಶವ ಐದು ಗಂಟೆಗಳ ಕಾರ್ಯಾಚರಣೆ ಬಳಿಕ ಪತ್ತೆ

ಮೊಸಳೆ ಹೊತ್ತೊಯ್ದಿದ್ದ ರೈತನ ಶವ ಐದು ಗಂಟೆಗಳ ಕಾರ್ಯಾಚರಣೆ ಬಳಿಕ ಪತ್ತೆ

ಮುದ್ದೇಬಿಹಾಳ : ಅಮವಾಸ್ಯೆಯ ಪ್ರಯುಕ್ತ ಎತ್ತುಗಳನ್ನು ತೊಳೆಯಲು ಕೃಷ್ಣಾ ನದಿ ತೀರಕ್ಕೆ ಹೋಗಿದ್ದ ರೈತರೊಬ್ಬರನ್ನು ಮೊಸಳೆಯೊಂದು ಎಳೆದುಕೊಂಡು ಹೋಗಿದ್ದು ಐದು ಗಂಟೆಗಳ ಕಾರ್ಯಾಚರಣೆ ನಂತರ ರೈತ ಶವ ಪತ್ತೆಯಾಗಿರುವ ಘಟನೆ ತಾಲ್ಲೂಕಿನ ಕುಂಚಗನೂರ ಗ್ರಾಮದಲ್ಲಿ ಶನಿವಾರ ನಡೆದಿದೆ.

ತಂಗಡಗಿ ಗ್ರಾ.ಪಂ ವ್ಯಾಪ್ತಿಯ ಕುಂಚಗನೂರ ಗ್ರಾಮದ ಪಂಪಹೌಸ್ ಬಳಿ ಈ ಘಟನೆ ನಡೆದಿದೆ. ಕುಂಚಗನೂರ ಗ್ರಾಮದ ಕಾಶಪ್ಪ ಹಣಮಂತ ಕಂಬಳಿ(38) ಎಂಬ ರೈತನೇ ಮೊಸಳೆ ದಾಳಿಗೆ ಒಳಗಾದವರು. ಕುಂಚಗನೂರ ಗ್ರಾಮದ ಕೆಲವರು ಮೊಸಳೆ ಕಾಶಪ್ಪನನ್ನು ಎಳೆದೊಯ್ಯುವುದನ್ನು ನೋಡಿದ್ದಾರೆ ಎನ್ನಲಾಗಿದ್ದು ಕಾರ್ಯಾಚರಣೆ ಬಳಿಕ ಶವ ಪತ್ತೆ ಆಗಿದೆ.

ಜಂಟಿ ಕಾರ್ಯಾಚರಣೆ: ಕಂದಾಯ, ಪೊಲೀಸ್, ಅಗ್ನಿಶಾಮಕ ಹಾಗೂ ಗ್ರಾಪಂ ಅಧಿಕಾರಿಗಳು ಮೊಸಳೆ ಹೊತ್ತೊಯ್ದಿದ್ದ ರೈತನ ಶವ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದರು. ಆರಂಭದಲ್ಲಿ ಶವ ಪತ್ತೆ ಆಗದ ಕಾರಣ ಕೂಡಲಸಂಗಮದಿಂದ ಬೋಟ್ ತರಿಸಿಕೊಂಡು ಕಾರ್ಯಾಚರಣೆ ಮುಂದುವರೆಸಿದಾಗ ಶವ ಪತ್ತೆ ಆಗಿದೆ ಎಂದು ಪೊಲೀಸ ಮೂಲಗಳು ತಿಳಿಸಿವೆ.

ಈ ಕುರಿತು ಮೃತ ರೈತನ ಪತ್ನಿ ಯಲ್ಲವ್ವ ಕಂಬಳಿ ತನ್ನ ಪತಿ ಮೊಸಳೆ ದಾಳಿಯಿಂದಲೇ ಅಸುನೀಗಿದ್ದಾರೆ ಎಂದು ಪೊಲೀಸ ಠಾಣೆಗೆ ದೂರು ನೀಡಿದ್ದಾಗಿ ಪಿಎಸ್‌ಐ ಸಂಜಯ ತಿಪರೆಡ್ಡಿ ತಿಳಿಸಿದ್ದಾರೆ.

ಕಾರ್ಯಾಚರಣೆ ಸಮಯದಲ್ಲಿ ಅಗ್ನಿಶಾಮಕ ಠಾಣೆಯ ಪ್ರಭಾರ ಠಾಣಾಧಿಕಾರಿ ನಾಗೇಶ ರಾಠೋಡ, ಕಂದಾಯ ನಿರೀಕ್ಷಕ ಪವನ್ ತಳವಾರ, ಗ್ರಾಮ ಆಡಳಿತ ಅಧಿಕಾರಿ ಎಚ್.ಸಿ.ಕೊರಬು, ಅಗ್ನಿಶಾಮಕ ಇಲಾಖೆಯ ಶಿವಾನಂದ ವಾಲೀಕಾರ, ಶಕೀಲ್ ಅಹ್ಮದ ಅವಟಿ,ಕಾರ್ತಿಕ ಅಜಮನಿ, ಬಸವರಾಜ ಭಜಂತ್ರಿ, ರಾಜು ರಾಥೋಡ್, ಸುನೀಲ ನಾಯಕ, ವಿರೂಪಾಕ್ಷಿ ಪೂಜಾರಿ ಮೊದಲಾದವರು ಪಾಲ್ಗೊಂಡಿದ್ದರು.

ತಹಸೀಲ್ದಾರ್, ಪಿಎಸೈ ಭೇಟಿ: ಘಟನೆಯ ವಿಷಯ ತಿಳಿದ ನಂತರ ಕೆಲ ಗಂಟೆಗಳಲ್ಲಿ ತಹಸೀಲ್ದಾರ್ ಕೀರ್ತಿ ಚಾಲಕ, ಪಿಎಸೈ ಸಂಜಯ ತಿಪರೆಡ್ಡಿ ಭೇಟಿ ನೀಡಿ ಕಾರ್ಯಾಚರಣೆ ವೀಕ್ಷಿಸಿದರು. ಅಲ್ಲದೇ ರೈತನ ಕುಟುಂಬದವರಿಂದ ಮಾಹಿತಿ ಪಡೆದುಕೊಂಡರು.

50 ಲಕ್ಷ ರೂ. ಪರಿಹಾರಕ್ಕೆ ನಡಹಳ್ಳಿ ಆಗ್ರಹ

ಮುದ್ದೇಬಿಹಾಳ : ಕುಂಚಗನೂರು ಗ್ರಾಮದಲ್ಲಿ ಮೊಸಳೆ ದಾಳಿಗೆ ಒಳಗಾಗಿ ಪ್ರಾಣ ಕಳೆದುಕೊಂಡಿರುವ ರೈತ ಕಾಶಪ್ಪ ಕಂಬಳಿ ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂ.ಪರಿಹಾರ ನೀಡಬೇಕು ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು.

ಕುಂಚಗನೂರದ ಪಂಪಹೌಸ್ ಬಳಿ ಮೊಸಳೆ ದಾಳಿಗೆ ಬಲಿಯಾದ ರೈತನ ಕುಟುಂಬದವರನ್ನು ಭೇಟಿ ಮಾಡಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಾಶಪ್ಪ ಕಂಬಳಿಯವರದ್ದು ಬಡ ರೈತನ ಕುಟುಂಬವಾಗಿದ್ದು ಆತನಿಗೆ ನಾಲ್ವರು ಮಕ್ಕಳಿದ್ದಾರೆ. ಸಣ್ಣ ವಯಸ್ಸಿನಲ್ಲಿಯೇ ಮೊಸಳೆ ದಾಳಿಗೆ ಜೀವ ಕಳೆದುಕೊಂಡಿರುವ ಅವರ ಕುಟುಂಬದ ನೆರವಿಗೆ ಸರ್ಕಾರ ನಿಲ್ಲಬೇಕು ಎಂದು ಒತ್ತಾಯಿಸಿದರು.

ಕೃಷ್ಣಾ ನದಿ ಪಾತ್ರದಲ್ಲಿ ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ನದಿ ದಂಡೆ ಗ್ರಾಮದ ಜನರಿಗೆ ಪ್ರವಾಹದ ಸಮಯದಲ್ಲಿ ಪೊಲೀಸ್ ಇಲಾಖೆಯವರು ನಿರಂತರವಾಗಿ ಕಣ್ಗಾವಲು ಇರಿಸಬೇಕು.ನದಿಯತ್ತ ತೆರಳದಂತೆ ಜನರಿಗೆ ಅರಿವು ಮೂಡಿಸಬೇಕು. ಆದರೆ ಘಟನೆ ನಡೆದ ಎರಡೂವರೆ ಗಂಟೆಗಳ ಬಳಿಕ ಪಿಎಸೈ ಸ್ಥಳಕ್ಕೆ ಬರುತ್ತಾರೆ. ರೈತರು ಠಾಣೆಗೆ ಬಂದೇ ಕೇಸ್ ಕೊಡಬೇಕು ಎಂದು ಹೇಳುತ್ತಾರೆ. ಮನೆಯ ಸದಸ್ಯನನ್ನು ಕಳೆದುಕೊಂಡಿದ್ದ ರೈತನ ಕುಟುಂಬದವರು ಠಾಣೆಗೆ ಹೋಗಿ ಕೇಸು ಕೊಡಲು ಸಾಧ್ಯವೇ? ಎಂದು ಪ್ರಶ್ನಿಸಿದರು. ಮೊಸಳೆಗಳ ಹಾವಳಿ ತಪ್ಪಿಸಲು ಹಿಂದಿನ ಅವಧಿಯಲ್ಲಿ 620 ಕೋಟಿ ರೂ.ಗಳ ಪ್ರಸ್ತಾವನೆಯನ್ನು 40 ಹಳ್ಳಿಗಳಿಗೆ ರಕ್ಷಣೆಗಾಗಿ ರಕ್ಷಣಾ ಗೋಡೆ ನಿರ್ಮಾಣಕ್ಕೆ ಸಲ್ಲಿಸಲಾಗಿತ್ತು. ಆದರೆ ಈ ಸರ್ಕಾರ ಏನೂ ಮಾಡುತ್ತಿಲ್ಲ ಎಂದು ನಡಹಳ್ಳಿ ದೂರಿದರು. ಮುಖಂಡ ಎನ್. ಎಸ್. ದೇಶಮುಖ (ಕುಂಚಗನೂರ), ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಪ್ರಧಾನ ಕಾರ್ಯದರ್ಶಿ ಸಂಜೀವ ಬಾಗೇವಾಡಿ, ಗ್ರಾಪಂ ಮಾಜಿ ಅಧ್ಯಕ್ಷ ಶಿವಾನಂದ ಮಂಕಣಿ ಮೊದಲಾದವರು ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ