Donate what you earn for the betterment of the poor - Darshanapura

ಗಳಿಸಿದ್ದರಲ್ಲಿ ಬಡವರ ಏಳ್ಗೆಗೆ ದಾನ ಮಾಡಿ- ದರ್ಶನಾಪೂರ

ಗಳಿಸಿದ್ದರಲ್ಲಿ ಬಡವರ ಏಳ್ಗೆಗೆ ದಾನ ಮಾಡಿ- ದರ್ಶನಾಪೂರ

ಮುದ್ದೇಬಿಹಾಳ : ತಾವು ಗಳಿಸಿದ್ದರಲ್ಲಿ ಸಮಾಜದ ಸೇವೆಯ ಮೂಲಕ ತಮ್ಮ ತಂದೆ ತಾಯಿಯನ್ನು ಬಡವರ ಮುಖದಲ್ಲಿ ನೋಡುವ ಪರೋಪಕಾರದ ಗುಣ ಸಮಾಜ ಸೇವಕ ಅಯೂಬ್ ಮನಿಯಾರ ಅವರಲ್ಲಿದೆ ಎಂದು ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪೂರ ಹೇಳಿದರು.

ಪಟ್ಟಣದ ಮನಿಯಾರ ಚಾರಿಟೇಬಲ್ ಟ್ರಸ್ಟ್ನಿಂದ ಸೋಮವಾರ ಹಮ್ಮಿಕೊಂಡಿದ್ದ ನೇತ್ರ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಫಲಾನುಭವಿಗಳಿಗೆ ಕನ್ನಡಕ ಹಾಗೂ ಔಷಧ ಉಚಿತ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನೇತ್ರಗಳು ಮಾನವನಿಗೆ ಬಹುಮುಖ್ಯವಾದ ಅಂಗವಾಗಿದ್ದು ಅದಿಲ್ಲದಿದ್ದರೆ ಈ ಜಗತ್ತನ್ನು ಕಾಣುವುದಕ್ಕೆ ಸಾಧ್ಯವಿಲ್ಲ. ಕಣ್ಣು ಕಾಣದವರಿಗೆ ದೃಷ್ಟಿ ದೊರಕಿಸಿಕೊಡುವ ಕೆಲಸ ಮಾಡುತ್ತಿರುವ ಅಯ್ಯೂಬ ಮನಿಯಾರ ಕಾರ್ಯ ಎಲ್ಲರಿಗೂ ಪ್ರೇರಣೆಯಾಗಿದೆ ಎಂದರು.

ಶಾಸಕ ಸಿ.ಎಸ್.ನಾಡಗೌಡ ಮಾತನಾಡಿ, ಸಿರಿವಂತಿಕೆ ಬಂದಾಗ ದಾನ ಮಾಡಬೇಕು. ಕಣ್ಣುಗಳು ಇಲ್ಲದಿದ್ದರೆ ಮನುಷ್ಯ ಪರಾವಲಂಬಿ ಜೀವಿಯಾಗಬೇಕು. ನೇತ್ರದಾನ ಪವಿತ್ರ ದಾನವಾಗಿದೆ. ಸರಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಅವುಗಳ ಪ್ರಯೋಜನ ಸಾರ್ವಜನಿಕರು ಪಡೆದುಕೊಳ್ಳಬೇಕು. ಈಗಿನ ಜನಾಂಗದವರ ಕಣ್ಣುಗಳು ಬೇಗನೇ ಹಾಳಾಗಲು ಮೊಬೈಲ್, ಟಿವಿ ಕಾರಣವಾಗಿದೆ ಎಂದರು.

ಇಳಕಲ್ ಪ್ರವಚನಕಾರ ಲಾಲಹುಸೇನ್ ಕಂದಗಲ್ ಮಾತನಾಡಿ, ಯಾರಿಗೆ ದುಡ್ಡಿನ ಮೇಲೆ ಪ್ರೀತಿ ಇದೆ ಸ್ವಾರ್ಥ ರಹಿತ ಸೇವೆಗಳನ್ನು ಮಾಡುವುದಿಲ್ಲ. ಬಡವರ ಏಳ್ಗೆಗೆ ಕಾರಣವಾದ ಗ್ಯಾರಂಟಿ ಯೋಜನೆಗಳ ಜಾರಿಗಾಗಿ ಸರ್ಕಾರವನ್ನು ನಾನು ಅಭಿನಂದಿಸುತ್ತೇನೆ. ಆದರೆ, ಸಮಾಜದಲ್ಲಿ ಪರಸ್ಪರಲ್ಲಿ ಪ್ರೀತಿ ವಿಶ್ವಾಸ ಕಡಿಮೆ ಆಗುತ್ತಿದೆ. ಸರ್ವಜನಾಂಗದ ಶಾಂತಿಯ ತೋಟವಾದ ರಾಜ್ಯದಲ್ಲಿ ಬೆಳಗಾವಿ, ಶಿವಮೊಗ್ಗದ ಶಾಲೆಯಲ್ಲಿ ನಮ್ಮ ಜಾತಿಯವನಲ್ಲ ಎಂಬ ಕಾರಣಕ್ಕೆ ಶಾಲೆಯ ಕುಡಿವ ನೀರಿನಲ್ಲಿ ವಿಷ ಬೆರೆಸುವ ಮಟ್ಟಿಗೆ ಧಾರ್ಮಿಕ ಅಸಹಿಷ್ಣುತೆ ಬೆಳೆದಿರುವುದು ಅಮಾಯಕ ಮಕ್ಕಳ ಜೀವಕ್ಕೆ ಆಪತ್ತು ತರುತ್ತದೆ. ಕ್ರೌರ್ಯತೆಯಿಂದ ಕರುಣೆ ಕಡೆಗೆ ಮನುಷ್ಯ ತೆರಳಬೇಕಿದೆ. ಕರುಣೆಯನ್ನು ತೋರಬೇಕು ಎಂಬುದನ್ನು ಮನಿಯಾರವರು ಕೈಗೊಳ್ಳುತ್ತಿರುವ ಕಾರ್ಯಗಳು ತೋರಿಸಿಕೊಡುತ್ತಿವೆ ಎಂದರು.

ಕಾರ್ಯಕ್ರಮದ ರೂವಾರಿ, ಮನಿಯಾರ ಚಾರಿಟೇಬಲ್ ಟ್ರಸ್ಟ್ ಸಂಚಾಲಕ ಅಯ್ಯೂಬ ಮನಿಯಾರ ಮಾತನಾಡಿ, ನಮ್ಮ ತಂದೆ ತಾಯಿ ಜೀವಂತ ಇಲ್ಲ. ಆದರೆ, ಬಡವರಿಗೆ ಇಂತಹ ಸೇವೆಗಳನ್ನು ಕೈಗೊಂಡಾಗ ಅವರು ಹರಸುವ ಆಶೀರ್ವಾದದಲ್ಲಿ ನನ್ನ ತಂದೆ ತಾಯಿಯನ್ನು ಕಾಣುತ್ತೇನೆ. ಅಕ್ಕತಂಗಿ, ಅಣ್ಣ ತಮ್ಮಂದಿರ ಜೊತೆಗಿನ ಸಂಬಂಧಗಳನ್ನು ಕಡಿದುಕೊಳ್ಳದೇ ಉಳಿಸಿಕೊಂಡು ನಗು ನಗುತ್ತ ಜೀವನ ನಡೆಸಿ ಎಂದು ಹೇಳಿದರು.

ಅನುಗ್ರಹ ಕಣ್ಣಿನ ಆಸ್ಪತ್ರೆ ವೈದ್ಯ ಡಾ.ಪ್ರಭುಗೌಡ ಪಾಟೀಲ ಲಿಂಗದಳ್ಳಿ, ಆಲಮೇಲದ ಜಗದೇವ ಮಲ್ಲಿಬೊಮ್ಮ ಸ್ವಾಮೀಜಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಮಾಜ ಸೇವಕ ಶಂಕರಗೌಡ ಹೊಸಮನಿ, ಬನಶ್ರೀ ಸೌಹಾರ್ದ ಬ್ಯಾಂಕ್ ಅಧ್ಯಕ್ಷ ರೂಪಸಿಂಗ ಲೋಣಾರಿ, ಉದ್ಯಮಿ ಮದನಸಾಬ ಸಾಲವಾಡಗಿ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಡಾ.ಎ.ಎ.ನಾಲಬಂದ, ಅಫ್ತಾಬ ಮನಿಯಾರ, ಎ.ಎಂ.ಎತ್ತಿನಮನಿ, ಮೈಬೂಬ ನಾಲತವಾಡ, ಆಯ್.ಎಲ್.ಮಮದಾಪೂರ, ಹಾಜಿಮಲಂಗ ಎಕಿನ್ ಇದ್ದರು. 500 ಜನರ ಕಣ್ಣಿನ ತಪಾಸಣೆ ನಡೆಸಿದ್ದರಲ್ಲಿ 200 ಜನಕ್ಕೆ ಉಚಿತವಾಗಿ ಕನ್ನಡ, ಔಷಧಿ ವಿತರಿಸಲಾಯಿತು. ನಿರ್ಗತಿಕರಿಗೆ ಮಾಸಿಕ ಪಿಂಚಣಿಯನ್ನು ನೀಡಲಾಯಿತು.

ವೀರೇಶ ವಾಲಿ ತಂಡದವರು ನಾಡಗೀತೆ ಹಾಡಿದರು. ಮುಜಾಹಿದ್ದ ನಮಾಜಕಟ್ಟಿ ಸ್ವಾಗತಿಸಿದರು. ಶೃತಿ ಜಾಧವ ನಿರೂಪಿಸಿದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು