Donate what you earn for the betterment of the poor - Darshanapura

ಗಳಿಸಿದ್ದರಲ್ಲಿ ಬಡವರ ಏಳ್ಗೆಗೆ ದಾನ ಮಾಡಿ- ದರ್ಶನಾಪೂರ

ಗಳಿಸಿದ್ದರಲ್ಲಿ ಬಡವರ ಏಳ್ಗೆಗೆ ದಾನ ಮಾಡಿ- ದರ್ಶನಾಪೂರ

ಮುದ್ದೇಬಿಹಾಳ : ತಾವು ಗಳಿಸಿದ್ದರಲ್ಲಿ ಸಮಾಜದ ಸೇವೆಯ ಮೂಲಕ ತಮ್ಮ ತಂದೆ ತಾಯಿಯನ್ನು ಬಡವರ ಮುಖದಲ್ಲಿ ನೋಡುವ ಪರೋಪಕಾರದ ಗುಣ ಸಮಾಜ ಸೇವಕ ಅಯೂಬ್ ಮನಿಯಾರ ಅವರಲ್ಲಿದೆ ಎಂದು ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪೂರ ಹೇಳಿದರು.

ಪಟ್ಟಣದ ಮನಿಯಾರ ಚಾರಿಟೇಬಲ್ ಟ್ರಸ್ಟ್ನಿಂದ ಸೋಮವಾರ ಹಮ್ಮಿಕೊಂಡಿದ್ದ ನೇತ್ರ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಫಲಾನುಭವಿಗಳಿಗೆ ಕನ್ನಡಕ ಹಾಗೂ ಔಷಧ ಉಚಿತ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನೇತ್ರಗಳು ಮಾನವನಿಗೆ ಬಹುಮುಖ್ಯವಾದ ಅಂಗವಾಗಿದ್ದು ಅದಿಲ್ಲದಿದ್ದರೆ ಈ ಜಗತ್ತನ್ನು ಕಾಣುವುದಕ್ಕೆ ಸಾಧ್ಯವಿಲ್ಲ. ಕಣ್ಣು ಕಾಣದವರಿಗೆ ದೃಷ್ಟಿ ದೊರಕಿಸಿಕೊಡುವ ಕೆಲಸ ಮಾಡುತ್ತಿರುವ ಅಯ್ಯೂಬ ಮನಿಯಾರ ಕಾರ್ಯ ಎಲ್ಲರಿಗೂ ಪ್ರೇರಣೆಯಾಗಿದೆ ಎಂದರು.

ಶಾಸಕ ಸಿ.ಎಸ್.ನಾಡಗೌಡ ಮಾತನಾಡಿ, ಸಿರಿವಂತಿಕೆ ಬಂದಾಗ ದಾನ ಮಾಡಬೇಕು. ಕಣ್ಣುಗಳು ಇಲ್ಲದಿದ್ದರೆ ಮನುಷ್ಯ ಪರಾವಲಂಬಿ ಜೀವಿಯಾಗಬೇಕು. ನೇತ್ರದಾನ ಪವಿತ್ರ ದಾನವಾಗಿದೆ. ಸರಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಅವುಗಳ ಪ್ರಯೋಜನ ಸಾರ್ವಜನಿಕರು ಪಡೆದುಕೊಳ್ಳಬೇಕು. ಈಗಿನ ಜನಾಂಗದವರ ಕಣ್ಣುಗಳು ಬೇಗನೇ ಹಾಳಾಗಲು ಮೊಬೈಲ್, ಟಿವಿ ಕಾರಣವಾಗಿದೆ ಎಂದರು.

ಇಳಕಲ್ ಪ್ರವಚನಕಾರ ಲಾಲಹುಸೇನ್ ಕಂದಗಲ್ ಮಾತನಾಡಿ, ಯಾರಿಗೆ ದುಡ್ಡಿನ ಮೇಲೆ ಪ್ರೀತಿ ಇದೆ ಸ್ವಾರ್ಥ ರಹಿತ ಸೇವೆಗಳನ್ನು ಮಾಡುವುದಿಲ್ಲ. ಬಡವರ ಏಳ್ಗೆಗೆ ಕಾರಣವಾದ ಗ್ಯಾರಂಟಿ ಯೋಜನೆಗಳ ಜಾರಿಗಾಗಿ ಸರ್ಕಾರವನ್ನು ನಾನು ಅಭಿನಂದಿಸುತ್ತೇನೆ. ಆದರೆ, ಸಮಾಜದಲ್ಲಿ ಪರಸ್ಪರಲ್ಲಿ ಪ್ರೀತಿ ವಿಶ್ವಾಸ ಕಡಿಮೆ ಆಗುತ್ತಿದೆ. ಸರ್ವಜನಾಂಗದ ಶಾಂತಿಯ ತೋಟವಾದ ರಾಜ್ಯದಲ್ಲಿ ಬೆಳಗಾವಿ, ಶಿವಮೊಗ್ಗದ ಶಾಲೆಯಲ್ಲಿ ನಮ್ಮ ಜಾತಿಯವನಲ್ಲ ಎಂಬ ಕಾರಣಕ್ಕೆ ಶಾಲೆಯ ಕುಡಿವ ನೀರಿನಲ್ಲಿ ವಿಷ ಬೆರೆಸುವ ಮಟ್ಟಿಗೆ ಧಾರ್ಮಿಕ ಅಸಹಿಷ್ಣುತೆ ಬೆಳೆದಿರುವುದು ಅಮಾಯಕ ಮಕ್ಕಳ ಜೀವಕ್ಕೆ ಆಪತ್ತು ತರುತ್ತದೆ. ಕ್ರೌರ್ಯತೆಯಿಂದ ಕರುಣೆ ಕಡೆಗೆ ಮನುಷ್ಯ ತೆರಳಬೇಕಿದೆ. ಕರುಣೆಯನ್ನು ತೋರಬೇಕು ಎಂಬುದನ್ನು ಮನಿಯಾರವರು ಕೈಗೊಳ್ಳುತ್ತಿರುವ ಕಾರ್ಯಗಳು ತೋರಿಸಿಕೊಡುತ್ತಿವೆ ಎಂದರು.

ಕಾರ್ಯಕ್ರಮದ ರೂವಾರಿ, ಮನಿಯಾರ ಚಾರಿಟೇಬಲ್ ಟ್ರಸ್ಟ್ ಸಂಚಾಲಕ ಅಯ್ಯೂಬ ಮನಿಯಾರ ಮಾತನಾಡಿ, ನಮ್ಮ ತಂದೆ ತಾಯಿ ಜೀವಂತ ಇಲ್ಲ. ಆದರೆ, ಬಡವರಿಗೆ ಇಂತಹ ಸೇವೆಗಳನ್ನು ಕೈಗೊಂಡಾಗ ಅವರು ಹರಸುವ ಆಶೀರ್ವಾದದಲ್ಲಿ ನನ್ನ ತಂದೆ ತಾಯಿಯನ್ನು ಕಾಣುತ್ತೇನೆ. ಅಕ್ಕತಂಗಿ, ಅಣ್ಣ ತಮ್ಮಂದಿರ ಜೊತೆಗಿನ ಸಂಬಂಧಗಳನ್ನು ಕಡಿದುಕೊಳ್ಳದೇ ಉಳಿಸಿಕೊಂಡು ನಗು ನಗುತ್ತ ಜೀವನ ನಡೆಸಿ ಎಂದು ಹೇಳಿದರು.

ಅನುಗ್ರಹ ಕಣ್ಣಿನ ಆಸ್ಪತ್ರೆ ವೈದ್ಯ ಡಾ.ಪ್ರಭುಗೌಡ ಪಾಟೀಲ ಲಿಂಗದಳ್ಳಿ, ಆಲಮೇಲದ ಜಗದೇವ ಮಲ್ಲಿಬೊಮ್ಮ ಸ್ವಾಮೀಜಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಮಾಜ ಸೇವಕ ಶಂಕರಗೌಡ ಹೊಸಮನಿ, ಬನಶ್ರೀ ಸೌಹಾರ್ದ ಬ್ಯಾಂಕ್ ಅಧ್ಯಕ್ಷ ರೂಪಸಿಂಗ ಲೋಣಾರಿ, ಉದ್ಯಮಿ ಮದನಸಾಬ ಸಾಲವಾಡಗಿ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಡಾ.ಎ.ಎ.ನಾಲಬಂದ, ಅಫ್ತಾಬ ಮನಿಯಾರ, ಎ.ಎಂ.ಎತ್ತಿನಮನಿ, ಮೈಬೂಬ ನಾಲತವಾಡ, ಆಯ್.ಎಲ್.ಮಮದಾಪೂರ, ಹಾಜಿಮಲಂಗ ಎಕಿನ್ ಇದ್ದರು. 500 ಜನರ ಕಣ್ಣಿನ ತಪಾಸಣೆ ನಡೆಸಿದ್ದರಲ್ಲಿ 200 ಜನಕ್ಕೆ ಉಚಿತವಾಗಿ ಕನ್ನಡ, ಔಷಧಿ ವಿತರಿಸಲಾಯಿತು. ನಿರ್ಗತಿಕರಿಗೆ ಮಾಸಿಕ ಪಿಂಚಣಿಯನ್ನು ನೀಡಲಾಯಿತು.

ವೀರೇಶ ವಾಲಿ ತಂಡದವರು ನಾಡಗೀತೆ ಹಾಡಿದರು. ಮುಜಾಹಿದ್ದ ನಮಾಜಕಟ್ಟಿ ಸ್ವಾಗತಿಸಿದರು. ಶೃತಿ ಜಾಧವ ನಿರೂಪಿಸಿದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ