Donate what you earn for the betterment of the poor - Darshanapura

ಗಳಿಸಿದ್ದರಲ್ಲಿ ಬಡವರ ಏಳ್ಗೆಗೆ ದಾನ ಮಾಡಿ- ದರ್ಶನಾಪೂರ

ಗಳಿಸಿದ್ದರಲ್ಲಿ ಬಡವರ ಏಳ್ಗೆಗೆ ದಾನ ಮಾಡಿ- ದರ್ಶನಾಪೂರ

ಮುದ್ದೇಬಿಹಾಳ : ತಾವು ಗಳಿಸಿದ್ದರಲ್ಲಿ ಸಮಾಜದ ಸೇವೆಯ ಮೂಲಕ ತಮ್ಮ ತಂದೆ ತಾಯಿಯನ್ನು ಬಡವರ ಮುಖದಲ್ಲಿ ನೋಡುವ ಪರೋಪಕಾರದ ಗುಣ ಸಮಾಜ ಸೇವಕ ಅಯೂಬ್ ಮನಿಯಾರ ಅವರಲ್ಲಿದೆ ಎಂದು ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪೂರ ಹೇಳಿದರು.

ಪಟ್ಟಣದ ಮನಿಯಾರ ಚಾರಿಟೇಬಲ್ ಟ್ರಸ್ಟ್ನಿಂದ ಸೋಮವಾರ ಹಮ್ಮಿಕೊಂಡಿದ್ದ ನೇತ್ರ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಫಲಾನುಭವಿಗಳಿಗೆ ಕನ್ನಡಕ ಹಾಗೂ ಔಷಧ ಉಚಿತ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನೇತ್ರಗಳು ಮಾನವನಿಗೆ ಬಹುಮುಖ್ಯವಾದ ಅಂಗವಾಗಿದ್ದು ಅದಿಲ್ಲದಿದ್ದರೆ ಈ ಜಗತ್ತನ್ನು ಕಾಣುವುದಕ್ಕೆ ಸಾಧ್ಯವಿಲ್ಲ. ಕಣ್ಣು ಕಾಣದವರಿಗೆ ದೃಷ್ಟಿ ದೊರಕಿಸಿಕೊಡುವ ಕೆಲಸ ಮಾಡುತ್ತಿರುವ ಅಯ್ಯೂಬ ಮನಿಯಾರ ಕಾರ್ಯ ಎಲ್ಲರಿಗೂ ಪ್ರೇರಣೆಯಾಗಿದೆ ಎಂದರು.

ಶಾಸಕ ಸಿ.ಎಸ್.ನಾಡಗೌಡ ಮಾತನಾಡಿ, ಸಿರಿವಂತಿಕೆ ಬಂದಾಗ ದಾನ ಮಾಡಬೇಕು. ಕಣ್ಣುಗಳು ಇಲ್ಲದಿದ್ದರೆ ಮನುಷ್ಯ ಪರಾವಲಂಬಿ ಜೀವಿಯಾಗಬೇಕು. ನೇತ್ರದಾನ ಪವಿತ್ರ ದಾನವಾಗಿದೆ. ಸರಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಅವುಗಳ ಪ್ರಯೋಜನ ಸಾರ್ವಜನಿಕರು ಪಡೆದುಕೊಳ್ಳಬೇಕು. ಈಗಿನ ಜನಾಂಗದವರ ಕಣ್ಣುಗಳು ಬೇಗನೇ ಹಾಳಾಗಲು ಮೊಬೈಲ್, ಟಿವಿ ಕಾರಣವಾಗಿದೆ ಎಂದರು.

ಇಳಕಲ್ ಪ್ರವಚನಕಾರ ಲಾಲಹುಸೇನ್ ಕಂದಗಲ್ ಮಾತನಾಡಿ, ಯಾರಿಗೆ ದುಡ್ಡಿನ ಮೇಲೆ ಪ್ರೀತಿ ಇದೆ ಸ್ವಾರ್ಥ ರಹಿತ ಸೇವೆಗಳನ್ನು ಮಾಡುವುದಿಲ್ಲ. ಬಡವರ ಏಳ್ಗೆಗೆ ಕಾರಣವಾದ ಗ್ಯಾರಂಟಿ ಯೋಜನೆಗಳ ಜಾರಿಗಾಗಿ ಸರ್ಕಾರವನ್ನು ನಾನು ಅಭಿನಂದಿಸುತ್ತೇನೆ. ಆದರೆ, ಸಮಾಜದಲ್ಲಿ ಪರಸ್ಪರಲ್ಲಿ ಪ್ರೀತಿ ವಿಶ್ವಾಸ ಕಡಿಮೆ ಆಗುತ್ತಿದೆ. ಸರ್ವಜನಾಂಗದ ಶಾಂತಿಯ ತೋಟವಾದ ರಾಜ್ಯದಲ್ಲಿ ಬೆಳಗಾವಿ, ಶಿವಮೊಗ್ಗದ ಶಾಲೆಯಲ್ಲಿ ನಮ್ಮ ಜಾತಿಯವನಲ್ಲ ಎಂಬ ಕಾರಣಕ್ಕೆ ಶಾಲೆಯ ಕುಡಿವ ನೀರಿನಲ್ಲಿ ವಿಷ ಬೆರೆಸುವ ಮಟ್ಟಿಗೆ ಧಾರ್ಮಿಕ ಅಸಹಿಷ್ಣುತೆ ಬೆಳೆದಿರುವುದು ಅಮಾಯಕ ಮಕ್ಕಳ ಜೀವಕ್ಕೆ ಆಪತ್ತು ತರುತ್ತದೆ. ಕ್ರೌರ್ಯತೆಯಿಂದ ಕರುಣೆ ಕಡೆಗೆ ಮನುಷ್ಯ ತೆರಳಬೇಕಿದೆ. ಕರುಣೆಯನ್ನು ತೋರಬೇಕು ಎಂಬುದನ್ನು ಮನಿಯಾರವರು ಕೈಗೊಳ್ಳುತ್ತಿರುವ ಕಾರ್ಯಗಳು ತೋರಿಸಿಕೊಡುತ್ತಿವೆ ಎಂದರು.

ಕಾರ್ಯಕ್ರಮದ ರೂವಾರಿ, ಮನಿಯಾರ ಚಾರಿಟೇಬಲ್ ಟ್ರಸ್ಟ್ ಸಂಚಾಲಕ ಅಯ್ಯೂಬ ಮನಿಯಾರ ಮಾತನಾಡಿ, ನಮ್ಮ ತಂದೆ ತಾಯಿ ಜೀವಂತ ಇಲ್ಲ. ಆದರೆ, ಬಡವರಿಗೆ ಇಂತಹ ಸೇವೆಗಳನ್ನು ಕೈಗೊಂಡಾಗ ಅವರು ಹರಸುವ ಆಶೀರ್ವಾದದಲ್ಲಿ ನನ್ನ ತಂದೆ ತಾಯಿಯನ್ನು ಕಾಣುತ್ತೇನೆ. ಅಕ್ಕತಂಗಿ, ಅಣ್ಣ ತಮ್ಮಂದಿರ ಜೊತೆಗಿನ ಸಂಬಂಧಗಳನ್ನು ಕಡಿದುಕೊಳ್ಳದೇ ಉಳಿಸಿಕೊಂಡು ನಗು ನಗುತ್ತ ಜೀವನ ನಡೆಸಿ ಎಂದು ಹೇಳಿದರು.

ಅನುಗ್ರಹ ಕಣ್ಣಿನ ಆಸ್ಪತ್ರೆ ವೈದ್ಯ ಡಾ.ಪ್ರಭುಗೌಡ ಪಾಟೀಲ ಲಿಂಗದಳ್ಳಿ, ಆಲಮೇಲದ ಜಗದೇವ ಮಲ್ಲಿಬೊಮ್ಮ ಸ್ವಾಮೀಜಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಮಾಜ ಸೇವಕ ಶಂಕರಗೌಡ ಹೊಸಮನಿ, ಬನಶ್ರೀ ಸೌಹಾರ್ದ ಬ್ಯಾಂಕ್ ಅಧ್ಯಕ್ಷ ರೂಪಸಿಂಗ ಲೋಣಾರಿ, ಉದ್ಯಮಿ ಮದನಸಾಬ ಸಾಲವಾಡಗಿ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಡಾ.ಎ.ಎ.ನಾಲಬಂದ, ಅಫ್ತಾಬ ಮನಿಯಾರ, ಎ.ಎಂ.ಎತ್ತಿನಮನಿ, ಮೈಬೂಬ ನಾಲತವಾಡ, ಆಯ್.ಎಲ್.ಮಮದಾಪೂರ, ಹಾಜಿಮಲಂಗ ಎಕಿನ್ ಇದ್ದರು. 500 ಜನರ ಕಣ್ಣಿನ ತಪಾಸಣೆ ನಡೆಸಿದ್ದರಲ್ಲಿ 200 ಜನಕ್ಕೆ ಉಚಿತವಾಗಿ ಕನ್ನಡ, ಔಷಧಿ ವಿತರಿಸಲಾಯಿತು. ನಿರ್ಗತಿಕರಿಗೆ ಮಾಸಿಕ ಪಿಂಚಣಿಯನ್ನು ನೀಡಲಾಯಿತು.

ವೀರೇಶ ವಾಲಿ ತಂಡದವರು ನಾಡಗೀತೆ ಹಾಡಿದರು. ಮುಜಾಹಿದ್ದ ನಮಾಜಕಟ್ಟಿ ಸ್ವಾಗತಿಸಿದರು. ಶೃತಿ ಜಾಧವ ನಿರೂಪಿಸಿದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ