Donate what you earn for the betterment of the poor - Darshanapura

ಗಳಿಸಿದ್ದರಲ್ಲಿ ಬಡವರ ಏಳ್ಗೆಗೆ ದಾನ ಮಾಡಿ- ದರ್ಶನಾಪೂರ

ಗಳಿಸಿದ್ದರಲ್ಲಿ ಬಡವರ ಏಳ್ಗೆಗೆ ದಾನ ಮಾಡಿ- ದರ್ಶನಾಪೂರ

ಮುದ್ದೇಬಿಹಾಳ : ತಾವು ಗಳಿಸಿದ್ದರಲ್ಲಿ ಸಮಾಜದ ಸೇವೆಯ ಮೂಲಕ ತಮ್ಮ ತಂದೆ ತಾಯಿಯನ್ನು ಬಡವರ ಮುಖದಲ್ಲಿ ನೋಡುವ ಪರೋಪಕಾರದ ಗುಣ ಸಮಾಜ ಸೇವಕ ಅಯೂಬ್ ಮನಿಯಾರ ಅವರಲ್ಲಿದೆ ಎಂದು ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪೂರ ಹೇಳಿದರು.

ಪಟ್ಟಣದ ಮನಿಯಾರ ಚಾರಿಟೇಬಲ್ ಟ್ರಸ್ಟ್ನಿಂದ ಸೋಮವಾರ ಹಮ್ಮಿಕೊಂಡಿದ್ದ ನೇತ್ರ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಫಲಾನುಭವಿಗಳಿಗೆ ಕನ್ನಡಕ ಹಾಗೂ ಔಷಧ ಉಚಿತ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನೇತ್ರಗಳು ಮಾನವನಿಗೆ ಬಹುಮುಖ್ಯವಾದ ಅಂಗವಾಗಿದ್ದು ಅದಿಲ್ಲದಿದ್ದರೆ ಈ ಜಗತ್ತನ್ನು ಕಾಣುವುದಕ್ಕೆ ಸಾಧ್ಯವಿಲ್ಲ. ಕಣ್ಣು ಕಾಣದವರಿಗೆ ದೃಷ್ಟಿ ದೊರಕಿಸಿಕೊಡುವ ಕೆಲಸ ಮಾಡುತ್ತಿರುವ ಅಯ್ಯೂಬ ಮನಿಯಾರ ಕಾರ್ಯ ಎಲ್ಲರಿಗೂ ಪ್ರೇರಣೆಯಾಗಿದೆ ಎಂದರು.

ಶಾಸಕ ಸಿ.ಎಸ್.ನಾಡಗೌಡ ಮಾತನಾಡಿ, ಸಿರಿವಂತಿಕೆ ಬಂದಾಗ ದಾನ ಮಾಡಬೇಕು. ಕಣ್ಣುಗಳು ಇಲ್ಲದಿದ್ದರೆ ಮನುಷ್ಯ ಪರಾವಲಂಬಿ ಜೀವಿಯಾಗಬೇಕು. ನೇತ್ರದಾನ ಪವಿತ್ರ ದಾನವಾಗಿದೆ. ಸರಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಅವುಗಳ ಪ್ರಯೋಜನ ಸಾರ್ವಜನಿಕರು ಪಡೆದುಕೊಳ್ಳಬೇಕು. ಈಗಿನ ಜನಾಂಗದವರ ಕಣ್ಣುಗಳು ಬೇಗನೇ ಹಾಳಾಗಲು ಮೊಬೈಲ್, ಟಿವಿ ಕಾರಣವಾಗಿದೆ ಎಂದರು.

ಇಳಕಲ್ ಪ್ರವಚನಕಾರ ಲಾಲಹುಸೇನ್ ಕಂದಗಲ್ ಮಾತನಾಡಿ, ಯಾರಿಗೆ ದುಡ್ಡಿನ ಮೇಲೆ ಪ್ರೀತಿ ಇದೆ ಸ್ವಾರ್ಥ ರಹಿತ ಸೇವೆಗಳನ್ನು ಮಾಡುವುದಿಲ್ಲ. ಬಡವರ ಏಳ್ಗೆಗೆ ಕಾರಣವಾದ ಗ್ಯಾರಂಟಿ ಯೋಜನೆಗಳ ಜಾರಿಗಾಗಿ ಸರ್ಕಾರವನ್ನು ನಾನು ಅಭಿನಂದಿಸುತ್ತೇನೆ. ಆದರೆ, ಸಮಾಜದಲ್ಲಿ ಪರಸ್ಪರಲ್ಲಿ ಪ್ರೀತಿ ವಿಶ್ವಾಸ ಕಡಿಮೆ ಆಗುತ್ತಿದೆ. ಸರ್ವಜನಾಂಗದ ಶಾಂತಿಯ ತೋಟವಾದ ರಾಜ್ಯದಲ್ಲಿ ಬೆಳಗಾವಿ, ಶಿವಮೊಗ್ಗದ ಶಾಲೆಯಲ್ಲಿ ನಮ್ಮ ಜಾತಿಯವನಲ್ಲ ಎಂಬ ಕಾರಣಕ್ಕೆ ಶಾಲೆಯ ಕುಡಿವ ನೀರಿನಲ್ಲಿ ವಿಷ ಬೆರೆಸುವ ಮಟ್ಟಿಗೆ ಧಾರ್ಮಿಕ ಅಸಹಿಷ್ಣುತೆ ಬೆಳೆದಿರುವುದು ಅಮಾಯಕ ಮಕ್ಕಳ ಜೀವಕ್ಕೆ ಆಪತ್ತು ತರುತ್ತದೆ. ಕ್ರೌರ್ಯತೆಯಿಂದ ಕರುಣೆ ಕಡೆಗೆ ಮನುಷ್ಯ ತೆರಳಬೇಕಿದೆ. ಕರುಣೆಯನ್ನು ತೋರಬೇಕು ಎಂಬುದನ್ನು ಮನಿಯಾರವರು ಕೈಗೊಳ್ಳುತ್ತಿರುವ ಕಾರ್ಯಗಳು ತೋರಿಸಿಕೊಡುತ್ತಿವೆ ಎಂದರು.

ಕಾರ್ಯಕ್ರಮದ ರೂವಾರಿ, ಮನಿಯಾರ ಚಾರಿಟೇಬಲ್ ಟ್ರಸ್ಟ್ ಸಂಚಾಲಕ ಅಯ್ಯೂಬ ಮನಿಯಾರ ಮಾತನಾಡಿ, ನಮ್ಮ ತಂದೆ ತಾಯಿ ಜೀವಂತ ಇಲ್ಲ. ಆದರೆ, ಬಡವರಿಗೆ ಇಂತಹ ಸೇವೆಗಳನ್ನು ಕೈಗೊಂಡಾಗ ಅವರು ಹರಸುವ ಆಶೀರ್ವಾದದಲ್ಲಿ ನನ್ನ ತಂದೆ ತಾಯಿಯನ್ನು ಕಾಣುತ್ತೇನೆ. ಅಕ್ಕತಂಗಿ, ಅಣ್ಣ ತಮ್ಮಂದಿರ ಜೊತೆಗಿನ ಸಂಬಂಧಗಳನ್ನು ಕಡಿದುಕೊಳ್ಳದೇ ಉಳಿಸಿಕೊಂಡು ನಗು ನಗುತ್ತ ಜೀವನ ನಡೆಸಿ ಎಂದು ಹೇಳಿದರು.

ಅನುಗ್ರಹ ಕಣ್ಣಿನ ಆಸ್ಪತ್ರೆ ವೈದ್ಯ ಡಾ.ಪ್ರಭುಗೌಡ ಪಾಟೀಲ ಲಿಂಗದಳ್ಳಿ, ಆಲಮೇಲದ ಜಗದೇವ ಮಲ್ಲಿಬೊಮ್ಮ ಸ್ವಾಮೀಜಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಮಾಜ ಸೇವಕ ಶಂಕರಗೌಡ ಹೊಸಮನಿ, ಬನಶ್ರೀ ಸೌಹಾರ್ದ ಬ್ಯಾಂಕ್ ಅಧ್ಯಕ್ಷ ರೂಪಸಿಂಗ ಲೋಣಾರಿ, ಉದ್ಯಮಿ ಮದನಸಾಬ ಸಾಲವಾಡಗಿ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಡಾ.ಎ.ಎ.ನಾಲಬಂದ, ಅಫ್ತಾಬ ಮನಿಯಾರ, ಎ.ಎಂ.ಎತ್ತಿನಮನಿ, ಮೈಬೂಬ ನಾಲತವಾಡ, ಆಯ್.ಎಲ್.ಮಮದಾಪೂರ, ಹಾಜಿಮಲಂಗ ಎಕಿನ್ ಇದ್ದರು. 500 ಜನರ ಕಣ್ಣಿನ ತಪಾಸಣೆ ನಡೆಸಿದ್ದರಲ್ಲಿ 200 ಜನಕ್ಕೆ ಉಚಿತವಾಗಿ ಕನ್ನಡ, ಔಷಧಿ ವಿತರಿಸಲಾಯಿತು. ನಿರ್ಗತಿಕರಿಗೆ ಮಾಸಿಕ ಪಿಂಚಣಿಯನ್ನು ನೀಡಲಾಯಿತು.

ವೀರೇಶ ವಾಲಿ ತಂಡದವರು ನಾಡಗೀತೆ ಹಾಡಿದರು. ಮುಜಾಹಿದ್ದ ನಮಾಜಕಟ್ಟಿ ಸ್ವಾಗತಿಸಿದರು. ಶೃತಿ ಜಾಧವ ನಿರೂಪಿಸಿದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು