Donate what you earn for the betterment of the poor - Darshanapura

ಗಳಿಸಿದ್ದರಲ್ಲಿ ಬಡವರ ಏಳ್ಗೆಗೆ ದಾನ ಮಾಡಿ- ದರ್ಶನಾಪೂರ

ಗಳಿಸಿದ್ದರಲ್ಲಿ ಬಡವರ ಏಳ್ಗೆಗೆ ದಾನ ಮಾಡಿ- ದರ್ಶನಾಪೂರ

ಮುದ್ದೇಬಿಹಾಳ : ತಾವು ಗಳಿಸಿದ್ದರಲ್ಲಿ ಸಮಾಜದ ಸೇವೆಯ ಮೂಲಕ ತಮ್ಮ ತಂದೆ ತಾಯಿಯನ್ನು ಬಡವರ ಮುಖದಲ್ಲಿ ನೋಡುವ ಪರೋಪಕಾರದ ಗುಣ ಸಮಾಜ ಸೇವಕ ಅಯೂಬ್ ಮನಿಯಾರ ಅವರಲ್ಲಿದೆ ಎಂದು ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪೂರ ಹೇಳಿದರು.

ಪಟ್ಟಣದ ಮನಿಯಾರ ಚಾರಿಟೇಬಲ್ ಟ್ರಸ್ಟ್ನಿಂದ ಸೋಮವಾರ ಹಮ್ಮಿಕೊಂಡಿದ್ದ ನೇತ್ರ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಫಲಾನುಭವಿಗಳಿಗೆ ಕನ್ನಡಕ ಹಾಗೂ ಔಷಧ ಉಚಿತ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನೇತ್ರಗಳು ಮಾನವನಿಗೆ ಬಹುಮುಖ್ಯವಾದ ಅಂಗವಾಗಿದ್ದು ಅದಿಲ್ಲದಿದ್ದರೆ ಈ ಜಗತ್ತನ್ನು ಕಾಣುವುದಕ್ಕೆ ಸಾಧ್ಯವಿಲ್ಲ. ಕಣ್ಣು ಕಾಣದವರಿಗೆ ದೃಷ್ಟಿ ದೊರಕಿಸಿಕೊಡುವ ಕೆಲಸ ಮಾಡುತ್ತಿರುವ ಅಯ್ಯೂಬ ಮನಿಯಾರ ಕಾರ್ಯ ಎಲ್ಲರಿಗೂ ಪ್ರೇರಣೆಯಾಗಿದೆ ಎಂದರು.

ಶಾಸಕ ಸಿ.ಎಸ್.ನಾಡಗೌಡ ಮಾತನಾಡಿ, ಸಿರಿವಂತಿಕೆ ಬಂದಾಗ ದಾನ ಮಾಡಬೇಕು. ಕಣ್ಣುಗಳು ಇಲ್ಲದಿದ್ದರೆ ಮನುಷ್ಯ ಪರಾವಲಂಬಿ ಜೀವಿಯಾಗಬೇಕು. ನೇತ್ರದಾನ ಪವಿತ್ರ ದಾನವಾಗಿದೆ. ಸರಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಅವುಗಳ ಪ್ರಯೋಜನ ಸಾರ್ವಜನಿಕರು ಪಡೆದುಕೊಳ್ಳಬೇಕು. ಈಗಿನ ಜನಾಂಗದವರ ಕಣ್ಣುಗಳು ಬೇಗನೇ ಹಾಳಾಗಲು ಮೊಬೈಲ್, ಟಿವಿ ಕಾರಣವಾಗಿದೆ ಎಂದರು.

ಇಳಕಲ್ ಪ್ರವಚನಕಾರ ಲಾಲಹುಸೇನ್ ಕಂದಗಲ್ ಮಾತನಾಡಿ, ಯಾರಿಗೆ ದುಡ್ಡಿನ ಮೇಲೆ ಪ್ರೀತಿ ಇದೆ ಸ್ವಾರ್ಥ ರಹಿತ ಸೇವೆಗಳನ್ನು ಮಾಡುವುದಿಲ್ಲ. ಬಡವರ ಏಳ್ಗೆಗೆ ಕಾರಣವಾದ ಗ್ಯಾರಂಟಿ ಯೋಜನೆಗಳ ಜಾರಿಗಾಗಿ ಸರ್ಕಾರವನ್ನು ನಾನು ಅಭಿನಂದಿಸುತ್ತೇನೆ. ಆದರೆ, ಸಮಾಜದಲ್ಲಿ ಪರಸ್ಪರಲ್ಲಿ ಪ್ರೀತಿ ವಿಶ್ವಾಸ ಕಡಿಮೆ ಆಗುತ್ತಿದೆ. ಸರ್ವಜನಾಂಗದ ಶಾಂತಿಯ ತೋಟವಾದ ರಾಜ್ಯದಲ್ಲಿ ಬೆಳಗಾವಿ, ಶಿವಮೊಗ್ಗದ ಶಾಲೆಯಲ್ಲಿ ನಮ್ಮ ಜಾತಿಯವನಲ್ಲ ಎಂಬ ಕಾರಣಕ್ಕೆ ಶಾಲೆಯ ಕುಡಿವ ನೀರಿನಲ್ಲಿ ವಿಷ ಬೆರೆಸುವ ಮಟ್ಟಿಗೆ ಧಾರ್ಮಿಕ ಅಸಹಿಷ್ಣುತೆ ಬೆಳೆದಿರುವುದು ಅಮಾಯಕ ಮಕ್ಕಳ ಜೀವಕ್ಕೆ ಆಪತ್ತು ತರುತ್ತದೆ. ಕ್ರೌರ್ಯತೆಯಿಂದ ಕರುಣೆ ಕಡೆಗೆ ಮನುಷ್ಯ ತೆರಳಬೇಕಿದೆ. ಕರುಣೆಯನ್ನು ತೋರಬೇಕು ಎಂಬುದನ್ನು ಮನಿಯಾರವರು ಕೈಗೊಳ್ಳುತ್ತಿರುವ ಕಾರ್ಯಗಳು ತೋರಿಸಿಕೊಡುತ್ತಿವೆ ಎಂದರು.

ಕಾರ್ಯಕ್ರಮದ ರೂವಾರಿ, ಮನಿಯಾರ ಚಾರಿಟೇಬಲ್ ಟ್ರಸ್ಟ್ ಸಂಚಾಲಕ ಅಯ್ಯೂಬ ಮನಿಯಾರ ಮಾತನಾಡಿ, ನಮ್ಮ ತಂದೆ ತಾಯಿ ಜೀವಂತ ಇಲ್ಲ. ಆದರೆ, ಬಡವರಿಗೆ ಇಂತಹ ಸೇವೆಗಳನ್ನು ಕೈಗೊಂಡಾಗ ಅವರು ಹರಸುವ ಆಶೀರ್ವಾದದಲ್ಲಿ ನನ್ನ ತಂದೆ ತಾಯಿಯನ್ನು ಕಾಣುತ್ತೇನೆ. ಅಕ್ಕತಂಗಿ, ಅಣ್ಣ ತಮ್ಮಂದಿರ ಜೊತೆಗಿನ ಸಂಬಂಧಗಳನ್ನು ಕಡಿದುಕೊಳ್ಳದೇ ಉಳಿಸಿಕೊಂಡು ನಗು ನಗುತ್ತ ಜೀವನ ನಡೆಸಿ ಎಂದು ಹೇಳಿದರು.

ಅನುಗ್ರಹ ಕಣ್ಣಿನ ಆಸ್ಪತ್ರೆ ವೈದ್ಯ ಡಾ.ಪ್ರಭುಗೌಡ ಪಾಟೀಲ ಲಿಂಗದಳ್ಳಿ, ಆಲಮೇಲದ ಜಗದೇವ ಮಲ್ಲಿಬೊಮ್ಮ ಸ್ವಾಮೀಜಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಮಾಜ ಸೇವಕ ಶಂಕರಗೌಡ ಹೊಸಮನಿ, ಬನಶ್ರೀ ಸೌಹಾರ್ದ ಬ್ಯಾಂಕ್ ಅಧ್ಯಕ್ಷ ರೂಪಸಿಂಗ ಲೋಣಾರಿ, ಉದ್ಯಮಿ ಮದನಸಾಬ ಸಾಲವಾಡಗಿ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಡಾ.ಎ.ಎ.ನಾಲಬಂದ, ಅಫ್ತಾಬ ಮನಿಯಾರ, ಎ.ಎಂ.ಎತ್ತಿನಮನಿ, ಮೈಬೂಬ ನಾಲತವಾಡ, ಆಯ್.ಎಲ್.ಮಮದಾಪೂರ, ಹಾಜಿಮಲಂಗ ಎಕಿನ್ ಇದ್ದರು. 500 ಜನರ ಕಣ್ಣಿನ ತಪಾಸಣೆ ನಡೆಸಿದ್ದರಲ್ಲಿ 200 ಜನಕ್ಕೆ ಉಚಿತವಾಗಿ ಕನ್ನಡ, ಔಷಧಿ ವಿತರಿಸಲಾಯಿತು. ನಿರ್ಗತಿಕರಿಗೆ ಮಾಸಿಕ ಪಿಂಚಣಿಯನ್ನು ನೀಡಲಾಯಿತು.

ವೀರೇಶ ವಾಲಿ ತಂಡದವರು ನಾಡಗೀತೆ ಹಾಡಿದರು. ಮುಜಾಹಿದ್ದ ನಮಾಜಕಟ್ಟಿ ಸ್ವಾಗತಿಸಿದರು. ಶೃತಿ ಜಾಧವ ನಿರೂಪಿಸಿದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ