ವಿಮಾ‌ ಕಂಪನಿಗಳಿಂದ ಅನ್ನದಾತರಿಗೆ ಮೋಸ

ವಿಮಾ‌ ಕಂಪನಿಗಳಿಂದ ಅನ್ನದಾತರಿಗೆ ಮೋಸ

ಇಲಕಲ್ : ಅತಿವೃಷ್ಟಿ, ಅನಾವೃಷ್ಟಿ ಹಾಗೂ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆಹಾನಿ ಆದರೆ ಪರಿಹಾರಕ್ಕಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ ಭೀಮಾ ಯೋಜನೆಡಿಯಲ್ಲಿ ವಿಮಾ ಕಂಪನಿಗೆ ಹೋಬಳಿವಾರು ಸರಕಾರ ನಿಗದಿಪಡಿಸಿದ ಬೆಳೆಗೆ ಪ್ರತಿ ವರ್ಷ ರೈತರು ವಿಮಾ ಪ್ರೀಮಿಯಮ್ ಪಾವತಿಸಿದರೂ ಬೆಳೆ ಹಾನಿ ಆದ ಸಂದರ್ಭದಲ್ಲಿ ವಿಮಾ ಕಂಪನಿಯವರು ಜಿಲ್ಲೆಯಲ್ಲಿ ಕ್ಲೇಮ ಪಾವತಿಸದೇ ಸದಾ ಕಾಲ ಮೋಸ ಮಾಡಿ‌ ನಿಗದಿಪಡಿಸಿದ ಇನ್ಸೂರೆನ್ಸ ಕಂಪನಿಯವರು ಬ್ರಹ್ಮಾಂಡ ಬ್ರಷ್ಟಾಚಾರದಲ್ಲಿ ತೊಡಗಿದ್ದು ತಕ್ಷಣ ಸರಕಾರ ಈ ಹಗರಣವನ್ನು ಸಿ.ಬಿ.ಐ ಇಲ್ಲವೆ ಸಿ.ಐ.ಡಿ ತನಿಖೆಗೊಳಪಡಿಸಿ ರೈತರಿಗೆ ಹಲವಾರು ವರ್ಷಗಳಿಂದ ಆಗಿರುವ ಮೋಸಕ್ಕೆ ನ್ಯಾಯ ದೊರಕಿಸಿಕೊಂಡಬೇಕೆಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಪಂ.ಹಿರೇಮಠ ಸರಕಾರಕ್ಕೆ ಒತ್ತಾಯಿಸಿದರು.

ಅವರು ನಗರದ ತಹಶೀಲ್ದಾರ ಕಚೇರಿ ಮುಂದೆ ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ಉತ್ತರ ಪ್ರಾಂತ ಜಿಲ್ಲಾ ಘಟಕ ಹಾಗೂ ಇಲಕಲ್ ತಾಲೂಕು ಘಟಕದ ನೇತ್ರತ್ವದಲ್ಲಿ ರೈತರು ಪ್ರತಿಭಟನೆ ನಡೆಸಿ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಗೆ ತಹಶೀಲ್ದಾರ ಮೂಲಕ ಮನವಿ ಸಲ್ಲಿಸಿದ ನಂತರ ಮಾತನಾಡಿದರು.

ಇಲಕಲ್ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಹಾವರಗಿ ಮಾತನಾಡಿ, ಕಳೆದ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನಲ್ಲಿ ತೇವಾಂಶ ಹೆಚ್ಚಾಗಿ ಬೆಳೆಗಳಾದ ಈರುಳ್ಳಿ, ಗೋವಿನಜೋಳ, ಸಜ್ಜೆ, ತೊಗರಿ, ಹೆಸರು,ಹತ್ತಿ, ಜೋಳ, ಮೆಣಸಿನಕಾಯಿ ಸೇರಿದಂತೆ ಕೃಷಿ ಹಾಗೂ ತೋಟಗಾರಿಕೆ, ರೇಷ್ಮೆ ಇಲಾಖೆಯ ವಿವಿಧ ಬೆಳೆಗಳು ನೀರುಪಾಲಾಗಿದ್ದು, ರೈತರು ಈ ಬೆಳೆಗಳನ್ನು ಬೆಳೆಯಲು ಲಕ್ಷಾಂತರ ರೂಪಾಯಿಗಳನ್ನು ಖರ್ಚುಮಾಡಿದ್ದು, ರೈತರು ಸಂಕಷ್ಟದಲ್ಲಿ ಸಿಲುಕಿದ್ದು, ರೈತರಿಗೆ ಸರಕಾರ ಯಾವುದೇ ತಾಂತ್ರಿಕ ತೊಂದರೆ ನೆಪ ಹೇಳದೆ, ಸರಕಾರ ಬೆಳೆ ಹಾನಿಯಾದ ಜಮೀನಗಳ ಸಮೀಕ್ಷೆ ನಡೆಸಿ ನ್ಯಾಯೋಚಿತ ಬೆಳೆ ನಷ್ಟ ಪರಿಹಾರ ಒದಗಿಸಬೇಕೆಂದು ಆಗ್ರಹ ಪಡಿಸಿದರು.

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್‌ ಭೀಮಾ ಯೋಜನೆ, ರೈತರಿಗೆ ಅತ್ಯಂತ ಲಾಭದಾಯಕವಾಗಿದ್ದು. ಆದರೆ, ಹೋಬಳಿವಾರು ಕೆಲವು ಬೆಳೆಗಳಿಗೆ ಮಾತ್ರ ಬೆಳೆ ವಿಮೆ ಪಾವತಿಗೆ ಅವಕಾಶ ನೀಡಿದ್ದು ಎಲ್ಲ ಬೆಳೆಗಳಿಗೆ ವಿಮೆ ಪಾವತಿಸಲು ಅವಕಾಶ ನೀಡಬೇಕು. ಬೆಳೆ ವಿಮೆ ಪಾವತಿಸುವ ಅವಧಿಯನ್ನು ಮುಂದುವರೆಸಬೇಕು, ರೈತರಿಗೆ ಬೆಳೆ ವಿಮೆ ಬಗ್ಗೆ ಸರಕಾರ ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಬಾಗಲಕೋಟೆ ಜಿಲ್ಲಾ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ವಿರುಪಾಕ್ಷಯ್ಯ ಪಂ.ಹಿರೇಮಠ ಒತ್ತಾಯಿಸಿದರು.

ಉತ್ತರ ಪ್ರಾಂತ ಕಾರ್ಯಕಾರಿಣಿ ಸದಸ್ಯ ಸುಬ್ಬರಾಯಗೌಡ ಪಾಟೀಲ ಮಾತನಾಡಿ ಬೆಳೆಗಳಿಗೆ ಆರ್.ಸಿ.ಎಪ್.ಜೈಕಿಸಾನ್ ದ ಜುವಾರಿ ಯೂರಿಯಾ ರಸಗೊಬ್ಬರ ಕೊರತೆಯಾಗಿದ್ದು ಈಗ ಅವಶಕತೆ ಇದ್ದು ತಕ್ಷಣ ಪೂರೈಸಬೇಕು. ಅತಿವೃಷ್ಡಿಯಿಂದಾಗಿ ಮನೆಗಳು ಬೀಳುತ್ತಿದ್ದು ಮರು ನಿರ್ಮಾಣಕ್ಕೆ ಪರಿಹಾರ ಒದಗಿಸಬೇಕು.ಈ ಮೇಲ್ಕಾಣಿಸಿದ ಎಲ್ಲ ಬೇಡಿಕೆಗಳನ್ಬು ಶೀಘ್ರದಲ್ಲಿ ಈಡೇರಿಸಬೇಕೆಂದು ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ರೈತರು ಉಗ್ರಹೋರಾಟ ಮಾಡಬೇಕಾಗುತ್ತದೆ ಎಚ್ಚರಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಉಪಾಧ್ಯಕ್ಷ ಚಂದ್ರು ಗೌಡರ,ಪ್ರಧಾನ ಕಾರ್ಯದರ್ಶಿ ಮಂಜುನಾಥ ಗುಡಗುಂಟಿ, ದುರೀಣರಾದ ಬಸವರಾಜ ಅಂಗಡಿ,ಶರಷು ಗುಡಿಹಾಳ, ಬಸವರಾಜ ಕಂದಕೂರ, ರಾಚನಗೌಡ ಪಾಟೀಲ, ವೆಂಕಟೇಶ ಗದಗಿ, ವಿಶ್ವನಾಥ ಪಾಟೀಲ ಸೇರಿದಂತೆ ಅನೇಕರು ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ