Rampur Public Fund Festival Committee completes 58 years

ರಾಂಪುರ ಸಾರ್ವಜನಿಕ ಗಜಾನನ ಉತ್ಸವ ಸಮಿತಿಗೆ 58 ವರ್ಷ ಭರ್ತಿ

ರಾಂಪುರ ಸಾರ್ವಜನಿಕ ಗಜಾನನ ಉತ್ಸವ ಸಮಿತಿಗೆ 58 ವರ್ಷ ಭರ್ತಿ

ಮುಧೋಳ : ರನ್ನನಗರಿ ಮುಧೋಳದ ಗಣೇಶ ಉತ್ಸವಕ್ಕೆ ತನ್ನದೆಯಾದ ಇತಿಹಾಸ ಇದೆ. 58 ವರ್ಷಗಳ ಹಿಂದೆ ಕೆಲವು ಸಮಾನ ಮನಸ್ಕರು ಸೇರಿ ಮೊದಲ ಭಾರಿಗೆ ಇಲ್ಲಿನ ರಾಂಪುರ ಗಲ್ಲಿಯಲ್ಲಿ ಹಿಂದು ಧರ್ಮ ಜಾಗೃತಿಗಾಗಿ ಸಾರ್ವಜನಿಕ ಗಣೇಶ ಉತ್ಸವ ಪ್ರಾರಂಭವಾಗಿದ್ದು ಒಂದು ವರ್ಷವೂ ಬಿಡದೆ ನಡೆದುಕೊಂಡು ಬಂದ ನಗರದ ಮೊದಲ ಮಹಾಗಣಪತಿ ಉತ್ಸವ ಇದಾಗಿದೆ.

ನಗರಕ್ಕೂ ಪಕ್ಕದ ಮಹಾರಾಷ್ಟ್ರದ ಕೆಲವು ನಗರಗಳಿಗೂ ಆರ್ಥಿಕ, ಸಾಮಾಜಿಕ, ಕೌಟಿಂಬಿಕ, ಧಾರ್ಮಿಕ ಅವಿನಾಭಾವ ಸಂಬಂಧಗಳಿಂದ ಇಲ್ಲಿ ಹೆಚ್ಚಾಗಿ ಮರಾಠಿ ಭಾಷಿಕರು ಹೆಚ್ಚಾಗಿದ್ದ ಸಮಯವದು, ನಗರದಿಂದ ಇಬ್ಬರು ವ್ಯಕ್ತಿಗಳು ಪ್ರತಿನಿತ್ಯ ಪುಣೆ ನಗರಕ್ಕೆ ವಿವಿದ ವಾಣಿಜ್ಯ ಸಾಮಗ್ರಿಗಳನ್ನು ಸಾಗಿಸಲು ಟ್ರಕ್ ಚಾಲಕರಾಗಿ ಕಾಯಕ ಮಾಡುವಾಗ ಮಹಾರಾಷ್ಟ್ರದ ಪುಣೆ ನಗರದಲ್ಲಿ ಭಾರಿ ಪ್ರಮಾಣದ ಸಾರ್ವಜನಿಕ ಗಣೇಶೋತ್ಸವ ನೋಡಿ ಬಂದು ನಮ್ಮೂರಲ್ಲಿ ಯಾಕೆ ಮಾಡಬಾರದು ಎಂದು ತಿರ್ಮಾನಿಸಿ ಪ್ರಾರಂಭಿಸಿದ ಸಾರ್ವಜನಿಕ ಗಜಾನನ ಉತ್ಸವ ಸಮಿತಿಯ ಗಣೇಶನೇ ಮುಧೋಳದ ಪ್ರಪ್ರಥಮ ಸಾರ್ವಜನಿಕ ಗಣಪತಿ.

ಕೇವಲ ಕೆಲವು ಸಮುದಾಯದ ಮನೆಗಳಲ್ಲಿ ಮಾತ್ರ ಪ್ರತಿಷ್ಠಾಪನೆ ಮಾಡುವ ಈ ಸಂಪ್ರದಾಯವನ್ನು ಪ್ರಪ್ರಥಮವಾಗಿ ಸಾರ್ವಜನಿಕವಾಗಿ 1968ರಲ್ಲಿ ಪ್ರಾರಂಭಿಸಲಾಯಿತು. ಸ್ವಾತಂತ್ರ್ಯ ಪೂರ್ವದಲ್ಲಿ ಅದ್ದೂರಿಯಾಗಿ ನಡೆಯುತ್ತಿದ್ದ ಸಾರ್ವಜನಿಕ ಗಣೇಶ ಉತ್ಸವ ನಂತರ ಕಡಿಮೆಯಾಗಿ ನಂತರ ಅರವತ್ತರ ದಶಕದಲ್ಲಿ ಮತ್ತೆ ಪ್ರಾರಂಭವಾಯಿತು. ಅಂತಹ ಸಮಯದಲ್ಲಿ ಮೊದಲಿನಿಂದಲು ಹಿಂದು ಸಂಪ್ರದಾಯ, ಸಂಸ್ಕೃತಿಗೆ ಹೆಚ್ಚು ಪ್ರಾದ್ಯಾನ್ಯತೆ ಕೊಡುತ್ತಿದ್ದ ಮುಧೋಳ ಸಂಸ್ಥಾನದ ಬಾಜಿರಾವ್, ವೆಂಕಟೇಶ, ಮಾಲೋಜಿರಾವ್ ಘೋರ್ಪಡೆ ರಾಜರ ಕುಟುಂಬ ಸ್ವತಂತ್ರ್ಯ ನಂತರವೂ ಈ ತರಹದ ಸಂಪ್ರದಾಯಕ್ಕೆ ಆಧ್ಯತೆ ನೀಡುತ್ತಾ ಬಂದಿದೆ.

ಇತಿಹಾಸ: ಟ್ರಕ್ ಚಾಲಕರಾಗಿದ್ದ ಇಬ್ಬರನ್ನು ಕರೆದುಕೊಂಡು ಮಹಾರಾಷ್ಟದ ಪುಣೆ ನಗರದಲ್ಲಿ ಗಣೇಶ ಉತ್ಸವ ನೋಡಿಕೊಂಡು ಬಂದ ರಾಂಪುರ ಗಲ್ಲಿಯ ಬ್ರಾಹ್ಮಣ ಹಾಗೂ ಮರಾಠಾ ಸಮುದಾಯ ಜೊತೆಗೆ ಇತರ ಹಿಂದು ಮುಖಂಡರು 1968ರಲ್ಲಿ ಪ್ರಥಮ ಭಾರಿಗೆ ಸಾರ್ವಜನಿಕ ಗಜಾನನ ಉತ್ಸವ ಸಮಿತಿ ಸ್ಥಾಪನೆ ಮಾಡಿ ಗಣೇಶ ಉತ್ಸವವನ್ನು ಬಹು ವಿಜೃಂಭಣೆಯಿಂದ ಪ್ರಾರಂಭಿಸಿದರು. ಮೊದಲ ವರ್ಷ ಐದು ದಿನದ ಗಣೇಶನನ್ನು ಪ್ರತಿಷ್ಠಾಪನೆ ಮಾಡಿ ವಿಸರ್ಜನೆ ಸಲುವಾಗಿ ಮುಷ್ಟಾನ ಭೋಜನವನ್ನು ಸಾರ್ವಜನಿಕರಿಗೆ ದಾರಿ ಹೋಕರಿಗೆ ಹಾಕಿ ಖ್ಯಾತಿ ಪಡೆದ ಈ ಸಮಿತಿ ಅಂದಿನಿಂದ ಇಂದಿನವರೆಗೆ ಏಳು ದಿನದ ಗಣೇಶ ಉತ್ಸವದ ವಿಸರ್ಜನ ಮುಂಚೆ ಅದೇ ಮೃಷ್ಠಾನ್ನ ಭೋಜವನನ್ನು ಹಾಕುತ್ತಾ ಬಂದಿದ್ದಾರೆ. ಈ ಗಣೇಶ ಉತ್ಸವದಲ್ಲಿ ಪ್ರಸಾದ ಸವಿಯದ ಮುಧೋಳಿಗರು ಇಲ್ಲ, ಎನ್ನಬಹುದಾದಷ್ಟು ಇಲ್ಲಿನ ಪ್ರಸಾದ ವ್ಯವಸ್ಥೆ ಅಚ್ಚುಕಟ್ಟಾಗಿ ಇರುತ್ತದೆ.

ಮಹಾರಾಷ್ಟ್ರದ ಸಂಪ್ರದಾಯ ಹಾಗೂ ಸಂಘಟನೆ ಮತ್ತು ಹಿಂದು ಧರ್ಮದ ಉಳಿವಿಗಾಗಿ ಸ್ಥಾಪನೆಯಾದ ಈ ಗಣೇಶ ಉತ್ಸವ ಸಮಿತಿ ಅದರಂತೆ ಆ ಉದ್ದೇಶ ಈಡೇರಿಕೆಗಾಗಿ ಸಾಕಷ್ಟು ಯತ್ನಗಳು ನಡೆಯುತ್ತಾ ಬಂದಿವೆ. ಹೀಗಾಗಿ ಈ ಗಣೇಶ ಎಲ್ಲರಿಗೂ ಮಾದರಿಯಾಗಿದ್ದಾನೆ. ಜೊತೆಗೆ ತೆರಬಂಡಿ, ವಿದ್ಯಾರ್ಥಿಗಳ ನೃತ್ಯ, ಮೊಸರು ಗಡಿಗೆ ಒಡೆಯುವ ಸ್ಪರ್ಧೆ ಸೇರಿದಂತೆ ಐವತ್ತು ವರ್ಷ ಮೇಲ್ಪಟ್ಟ ಹಿರಿಯರಿಗೆ ಸೈಕಲ್ ಸ್ಪರ್ಧೆಗಳನ್ನು ಆಯೋಜನೆ ಮಾಡಿದ್ದು ಐವತ್ತನೆಯ ವರ್ಷದ ಸಂಭ್ರಮಾಚರಣೆಯಲ್ಲಿ ಲೋಗೋ ಬಿಡುಗಡೆ ಕಾರ್ಯ ಪ್ರಾರಂಭವಾಗಿದ್ದು ಅಂದಿನಿಂದ ಇಂದಿನವರೆಗೆ ಮುಂಚಿತವಾಗಿ ಲೋಗೋ ಬಿಡುಗಡೆ ಕಾರ್ಯಕ್ರಮ ಜರುತ್ತದೆ. ಮುಂಬೈದಲ್ಲಿನ ಲಾಲಬಾಗ್ ರಾಜಾ ರೀತಿಯಲ್ಲಿ ಇಲ್ಲಿ ಡಬಲ್ ಶೇಟ್ ಗಣೇಶ ಸ್ಥಾಪನೆ ಸಾಮಾನ್ಯವಾಗಿದೆ.

ಸಂಘಟಿಕರು, ರಾಂಪುರ ಗಲ್ಲಿಯಲ್ಲಿ ಎಲ್ಲರೂ ವಿದ್ಯಾವಂತರಾಗಿದ್ದರಿಂದ ಈ ಉತ್ಸವವನ್ನು ದಾಖಲಿಸಿ ಇಂದಿನವರೆಗೆ ನಡೆಸಿಕೊಂಡು ಬಂದಿರುವ ಅಣ್ಣಾರಾವ್ ಭಕ್ಷಿ, ಭೀಮರಾವ್ ಟಂಕಸಾಲಿ, ಮಾಧವರಾವ್ ಮಸೂರಕರ, ಬಾಬುರಾವ ಮಾನೆ, ಶಂಕರ ಘೋರ್ಫಡೆ, ರಾಘವೇಂದ್ರ ಭಕ್ಷಿ, ಡಾ.ಜಿ.ಎಸ್..ಬೀಡೆ, ಮಾಜಿ ಎಂ.ಪಿ ಎಸ್. ಟಿ. ಪಾಟೀಲ್ ರತ್ನಾಕರ ಮಸೂರಕರ ಅಂದು ಪ್ರಾರಂಭಿಸಿದ ಗಣೇಶ ಉತ್ಸವವನ್ನು ಅವರ ಕುಟುಂಬಸ್ತರು ಇಂದಿಗೂ ಈ ಗಲ್ಲಿಯ ಮುಖಂಡರು ಯುವಕರು ಅಚ್ಚುಕಟ್ಟಾಗಿ ನೆರವೇರಿಸಿಕೊಂಡು ಬಂದಿರುತ್ತಾರೆ.

“ಹಿಂದು ಸಂಪ್ರದಾಯ,ಸಂಸ್ಕೃತಿ ಉಳಿದು ಬೆಳೆಯುವ ಸದುದ್ದೇಶದಿಂದ ಕಳೆದ ೫೮ ವರ್ಷಗಳಿಂದ ಈ ಗಣೇಶ ಉತ್ಸವ ಸಮಿತಿ ಕಾರ್ಯ ಮಾಡಿ ರಾಜ್ಯ ಮಟ್ಟದ ತೆರಬಂಡಿ,ಸೈಕಲ್ ರೇಶ ಸ್ಪರ್ಧೆಗನ್ನು ಆಯೋಜನೆ ಮಾಡುತ್ತಾ ಬಂದಿದೆ”
ವಸಂತ ಮಾನೆ
ವೆಂಕಟೇಶ ಗುಡೆಪ್ಪನವರ

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು