A life without sports is like a fruit eaten by an insect - A.C. Kerura

ಕ್ರೀಡೆ ಇಲ್ಲದ ಜೀವನ ಕೀಟ ತಿಂದ ಹಣ್ಣಿನಂತೆ – ಎ.ಸಿ.ಕೆರೂರ

ಕ್ರೀಡೆ ಇಲ್ಲದ ಜೀವನ ಕೀಟ ತಿಂದ ಹಣ್ಣಿನಂತೆ – ಎ.ಸಿ.ಕೆರೂರ

ಅಡವಿ ಹುಲಗಬಾಳ : ಅಹಿಲ್ಯದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಅಡವಿ ಹುಲುಗಬಾಳದಲ್ಲಿ 2025-26 ನೇ ಸಾಲಿನ ನಾಲತವಾಡ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟವು ಜರುಗಿದವು. ಕ್ರೀಡೆ ಇಲ್ಲದ ಜೀವನ ಕೀಟ ತಿಂದ ಹಣ್ಣಿನಂತೆ, ಮನುಷ್ಯ ಸದೃಢವಾಗಿ ಇರಬೇಕೆಂದರೆ ಪ್ರತಿದಿನ ಯೋಗ, ಕ್ರೀಡೆಯಲ್ಲಿ ಭಾಗವಹಿಸುವುದು ಅತಿ ಮುಖ್ಯ, ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸು ಎನ್ನುವಂತೆ, ದೇಹವನ್ನು ದಂಡಿಸಿದಾಗ ಮಾತ್ರ ಆರೋಗ್ಯದಿಂದಿರಲು ಸಾಧ್ಯ.

ಈಗ ಎಲ್ಲರೂ ಯಂತ್ರಗಳಿಗೆ ಮೊರೆ ಹೋಗುವುದರಿಂದ ದೇಹವನ್ನು ದಂಡಿಸಲು ಆಗುತ್ತಿಲ್ಲ. ಹಾಗಾಗಿ ರೋಗ-ರುಜಿನುಗಳಿಗೆ ಅಣಿ ಆಗುತ್ತಿದ್ದಾನೆ. ಸೋಲು ಗೆಲುವನ್ನು ಸಮಾನತೆಯಿಂದ ಕಾಣುವ ಗುಣವನ್ನು ಹೊಂದಿರಬೇಕು. ಕ್ರೀಡಾಪಟುಗಳೊಂದಿಗೆ ಬಂದಂತಹ ಹಿತೈಷಿಗಳು ಯಾವುದೇ ರೀತಿಯಾಗಿ ಜಗಳಕ್ಕೆ ಅಣಿಯಾಗದಂತೆ, ಕ್ರೀಡೆಯಲ್ಲಿ ಭಾಗವಹಿಸಬೇಕು. ಈ ವರ್ಷ ಅರ್ಹತಾ ಪ್ರಮಾಣ ಪತ್ರವನ್ನು ಆನ್ಲೈನ್ ಮುಖಾಂತರವಾಗಿ ತೆಗೆದುಕೊಳ್ಳುತ್ತಿರುವುದರಿಂದ ಬೇರೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಕ್ರೀಡಾಕೂಟದಲ್ಲಿ ಭಾಗವಹಿಸಲು ಕಡಿವಾಣವನ್ನು ಸರಕಾರ ಹಾಕಿದ್ದು ತುಂಬಾ ಸಂತೋಷ. ಕ್ರೀಡೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ನಿರ್ಣಾಯಕರು ಕೊಟ್ಟಂತಹ ನಿರ್ಣಯಗಳಿಗೆ ಬದ್ಧರಾಗಬೇಕು. ನಿರ್ಣಾಯಕರು ಸಹ ನೀಡುವ ತೀರ್ಪು ಎಲ್ಲರೂ ಒಪ್ಪುವಂತಿರಬೇಕು. ಒಳ್ಳೆಯ ಮತ್ತು ನೈಜ ಪ್ರತಿಭಾವಂತ ಕ್ರೀಡಾಪಟುಗಳನ್ನು ವಲಯ, ತಾಲೂಕು, ಜಿಲ್ಲಾ , ವಿಭಾಗ, ರಾಜ್ಯ ಮಟ್ಟಕ್ಕೆ ಕಳಿಸುವರು ನಾವು ಆಗಬೇಕು. ಆಡಿಸುವರ ಕಣ್ಣು ಎರಡು ಆದರೆ ನೋಡುವವರ ಕಣ್ಣು ನೂರಾರು ಆಗಿರುತ್ತವೆ, ಹಾಗಾಗಿ ತೀರ್ಪು ನ್ಯಾಯ ಸಮ್ಮತವಾಗಿರಬೇಕು ಎಲ್ಲ ಮಕ್ಕಳು ನಮ್ಮ ಶಾಲೆಯ ಮಕ್ಕಳು ಎಂದು ನಿರ್ಣಯವನ್ನು ನೀಡಬೇಕು ಎಂದು ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸರ್ಕಾರಿ ಗ್ರೇಡ್ -1 ದೈಹಿಕ ಶಿಕ್ಷಕರ ಸಂಘ,ಮುದ್ದೇಬಿಹಾಳ ಅಧ್ಯಕ್ಷರಾದ ಎ.ಸಿ.ಕೆರೂರ ಹೇಳಿದರು.
ಇನ್ನೋರ್ವ ಅತಿಥಿಯಾಗಿ ಆಗಮಿಸಿದ್ದ ರಾಹುತ ಪೂಜಾರಿ ಅಧ್ಯಕ್ಷರು ದೈ.ಶಿ.ಶಿ. ಸಂಘ ತಾಳಿಕೋಟೆ ಎಲ್ಲಿ ಕ್ರೀಡಾಂಗಣಗಳು ಕ್ರೀಡಾಪಟುಗಳಿಂದ ತುಂಬಿರುತ್ತವೆ ಆ ಊರಲ್ಲಿ ಆಸ್ಪತ್ರೆಗಳು ಖಾಲಿ ಖಾಲಿ ಇರುತ್ತವೆ, ಕ್ರೀಡೆ, ಕ್ರೀಡಾ ಸ್ಪೂರ್ತಿಯಿಂದ ನ್ಯಾಯಯುತವಾಗಿ ಮಾಡಬೇಕು, ಆಟದಿಂದ ನಾಯಕತ್ವವನ್ನು ಹೊಂದಾಣಿಕೆ ಗುಣ ಬೆಳೆಸಿಕೊಳ್ಳಬೇಕು ಹೊರತು ಸಿಟ್ಟು, ದ್ವೇಷ, ಗುಣದಿಂದ ದೂರ ಇರಬೇಕು.

ಈ ವಲಯದ ಕ್ರೀಡಾಪಟುಗಳು ರಾಜ್ಯಮಟ್ಟದವರೆಗೆ ಆಡಿ ನಮ್ಮ ವಲಯದ ಕೀರ್ತಿಯನ್ನು ತರಬೇಕು ಎಂದು ಅಧ್ಯಕ್ಷತೆ ವಹಿಸಿದ ಕಿರಣ್ ಮದರಿ , ಅಧ್ಯಕ್ಷರು ಅಹಿಲ್ಯ ದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಅಡವಿ ಹುಲಗಬಾಳ ಶುಭವನ್ನು ಕೋರಿದರು . ಕ್ರೀಡಾ ಧ್ವಜಾರೋಹಣವನ್ನು ಅಂಬರೀಶ್ ಮದರಿ, ನಿರ್ದೇಶಕರು ಅಹಿಲ್ಯ ದೇವಿ ಶಿಕ್ಷಣ ಸಂಸ್ಥೆ ಅಡವಿ ನಿರ್ವಹಿಸಿದರು, ವೇದಿಕೆ ಮೇಲಿದ್ದ ಕಿರಣ್ ಮದರಿ , ಎ.ಸಿ.ಕೆರೂರ, ಎಂ.ಎಸ್.ಗುಡಗುಂಟಿ ಮುಖ್ಯ ಗುರುಗಳು ಸರ್ಕಾರಿ ಪ್ರೌಢಶಾಲೆ ಅಡವಿ ಹುಲುಗಬಾಳ, ಬಿ.ಬಿ.ಪೂಜಾರಿ, ರಾಹುತ್ ಪೂಜಾರಿ, ಮಲ್ಲಿಕಾರ್ಜುನ ರಾಯಗೊಂಡ, ಪಾರಿವಾಳಗಳನ್ನು ಹಾರಿ ಬಿಡುವುದರಿಂದ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು .
ಕಾರ್ಯಕ್ರಮದಲ್ಲಿ ಪ್ರಾರ್ಥನೆಯನ್ನು ಶ್ರೀಮತಿ.ರೇಖಾ ಹಿರೇಮಠ, ಸ್ವಾಗತವನ್ನು ಬಿ.ಕೆ.ಪೂಜಾರಿ ಮುಖ್ಯ ಗುರುಗಳು ಅಭ್ಯುದಯ ಪ್ರೌಢಶಾಲೆ ಅಡವಿ ಹುಳಗಬಾಳ, ನಿರೂಪಣೆ ಬಿ.ಬಿ.ತಳವಾರ ಶಿಕ್ಷಕರು ಅಭ್ಯುದಯ ಪ್ರೌಢಶಾಲೆ ಅಡವಿಹುಲಗಬಾಳ ನಿರ್ವಹಿಸಿದರು. ಇದೇ ಸಂದರ್ಭದಲ್ಲಿ ವಲಯದ ಕ್ರೀಡಾಪಟುಗಳು ತಂಡದ ವ್ಯವಸ್ಥಾಪಕರು ಮತ್ತು ನಿರ್ಣಾಯಕರಾಗಿ, ವೀರೇಶ್ ಗದಗ, ಮೋಹನ್ .ಬಿ.ಪಾಟೀಲ್, ಬಲಭೀಮ ಮಾದರ್, ಎಸ್. ಎಸ್.ಹಿರೇಮಠ್ , ಎಸ್.ಪಿ.ಹಂಡರಗಲ್, ಪ್ರಕಾಶ್ ಜಂಬಿಗಿ, ಎನ್.ವಿ. ಪತ್ತಾರ್, ಎಚ್.ಎಲ್. ಭಜಂತ್ರಿ, ಎಚ್.ಕೆ.ನಾಟಿಕರ್, ವಿಶ್ವನಾಥ್ ಪಾಟೀಲ್, ಬಸವರಾಜ್ ಚಳ್ಳಗಿ, ಡಿ.ಎ.ಜಾವೂರ್, ಡಿ.ಎ.ಮಂಕಣಿ, ಶ್ರೀಮತಿ ಗೀತಾ ಯರಂತಲಿಮಠ, ಶ್ರೀಮತಿ ಡಿ.ಬಿ.ಪೂಜಾರಿ, ಮುಂತಾದವರು ಭಾಗವಹಿಸಿದ್ದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು