Onion price: ಉಳ್ಳಾಗಡ್ಡಿ ಬೆಳೆಗೆ ಬೆಂಬಲ ಬೆಲೆಗೆ ಆಗ್ರಹ

Onion price: ಉಳ್ಳಾಗಡ್ಡಿ ಬೆಳೆಗೆ ಬೆಂಬಲ ಬೆಲೆಗೆ ಆಗ್ರಹ

ಬೀಳಗಿ: ಸತತವಾಗಿ ಸುರಿದ ಮಳೆಯಿಂದಾಗಿ ಅತಿವೃಷ್ಟಿ, ಅನಾವೃಷ್ಟಿಯಿಂದಾಗಿ ರೈತರು ಬೀಜ, ರಸಗೊಬ್ಬರ, ಕೀಟನಾಶಕ ಔಷದ, ಕಳೆ ತೆಗೆಯಲು ಕೃಷಿ ಕಾರ್ಮಿಕರಿಗೆ ಎಕರೆಗೆ ಈರುಳ್ಳಿ ಬೀಜ (onion price) ಬಿತ್ತನೆಗೆ ಕನಿಷ್ಟ ನಾಲವತ್ತು ಸಾವಿರ ರೂಪಾಯಿಗಳು ಖುರ್ಚು ಮಾಡಿದ್ದು, ಆ ಬೆಳೆಗಳು ನೀರು ಪಾಲಾಗಿದ್ದು, ಕೈ ಗೆ ಬಂದ ತುತ್ತು ಬಾಯಿಗೆ ಬರದಂತಾಗಿ ರೈತನು ಕಷ್ಟದಲ್ಲಿ ಸಿಲುಕಿದ್ದು ಕೇಂದ್ರ ಹಾಗೂ ರಾಜ್ಯ ಸರಕಾರ ನ್ಯಾಯಯುತ ಪರಿಹಾರವನ್ನು ಶೀಘ್ರದಲ್ಲಿ ನೀಡಬೇಕೆಂದು ಭಾರತೀಯ ಕಿಸಾನ ಸಂಘದ ಜಿಲ್ಲಾಧ್ಯಕ್ಚ ವಿರುಪಾಕ್ಷಯ್ಯ ಪ.ಹಿರೇಮಠ ಆಗ್ರಹಪಡಿಸಿದರು.

ಅವರು ಬೀಳಗಿ ಪಟ್ಟಣದಲ್ಲಿ ಭಾರತೀಯ ಕಿಸಾನ ಸಂಘ ಕರ್ನಾಟಕ ಪ್ರದೇಶ ಉತ್ತರ ಪ್ರಾಂತ ಬಾಗಲಕೋಟ ಜಿಲ್ಲಾ ಘಟಕ ಹಾಗೂ ಬೀಳಗಿ ತಾಲೂಕು ಘಟಕದ ಸಹಯೋಗದಲ್ಲಿ ಈರುಳ್ಳಿ ಬೆಳೆಗಾರರಿಗೆ ನ್ಯಾಯಯುತ ಲಾಭದಾಯಕ ಬೆಂಬಲ ಬೆಲೆ ನೀಡಬೇಕೆಂದು ಆಗ್ರಹಿಸಿ ತಾಲೂಕು ಆಡಳಿತ ಸೌಧದ ಮುಂದೆ ರೈತರು ನಡೆಸಿದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು.

ಅಳಿದುಳಿದ ಈರುಳ್ಳಿ ಬೆಳೆಯನ್ನು ಮಾರಾಟ ಮಾಡಲು ಮಾರ್ಕೆಟಿಗೆ ಹೋದರೆ ಅದರ ದರ ಸಂಪೂರ್ಣ ಕುಸಿದಿದ್ದು ಬೆಳೆಯನ್ನು ಬೆಳೆಯಲು ಹಾಕಿದ ಖರ್ಚು ಬಾರದೇ ಇರುವದರಿಂದ ರೈತರು ಹಣಕಾಸು ಸಂಸ್ಥೆಗಳಿಂದ ಹಾಗೂ ಲೇವಾದೇವಿಗಾರರಿಂದ ಪಡೆದ ಸಾಲ ತೀರಿಸುವದು ಹೇಗೆ ಎಂದು ಚಿಂತಾಕ್ರಾಂತರಾಗಿದ್ದು, ಸರಕಾರ ನ್ಯಾಯಯುತ ಲಾಭದಾಯಕ ಬೆಂಬಲ ಬೆಲೆ ನೀಡಬೇಕು ಒತ್ತಾಯಿಸಿದರು.

ಉ.ಪ್ರಾ. ಕಾರ್ಯಕಾರಿಣಿ ಸದಸ್ಯ ಸುಬ್ಬರಾಯಗೌಡ ಪಾಟೀಲ ಮಾತನಾಡಿ ಬೆಳೆ ವಿಮೆ ಕಟ್ಟಿದ ರೈತರಿಗೆ ವಿಮಾ ಕಂಪನಿ, ಕೃಷಿ ಇಲಾಖೆ, ತೋಟಗಾರಿಕೆ, ರೇಷ್ಮೆ, ಕಂದಾಯ ಇಲಾಖೆಯವರು ಸರಿಯಾಗಿ ಪರಿಶೀಲನೆ ನಡೆಸದೇ ಇರುವದರಿಂದ ರೈತರು ವಿಮಾ ಕಂಪನಿ ನೀಡುವ ಕ್ಲೇಮ್ ದಿಂದ ವಂಚಿತರಾಗುತ್ತಿದ್ದು ಸರಕಾರ ರೈತರಿಗೆ ಅನ್ಯಾಯವಾಗದಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಮಲ್ಲಪ್ಪ ಗಾಣಿಗೇರ, ಪ್ರಧಾನ ಕಾರ್ಯದರ್ಶಿ ಗುರು ಅನಗವಾಡಿ, ಜಿಲ್ಲಾ ಕೋಶ್ಯಾಧ್ಯಕ್ಷ ಮುದುಕಪ್ಪ ವಡವಾಣಿ, ಜಿಲ್ಲಾ ಮಹಿಳಾ ಪ್ರಮುಖರಾದ ರೇಣುಕಾ ಹುಲ್ಲಿಕೇರಿ, ರೈತ ಮುಖಂಡರಾದ ಶಿವನಗೌಡ ಪಾಟೀಲ, ಡೊಂಗ್ರಿಸಾಬ ನದಾಪ, ಚಂದ್ರಶೇಖರ ಕಾಖಂಡಕಿ ಬಸವಂತ ಸಂಕಾನಟ್ಟಿ, ಸುರೇಶ ಹೂಗಾರ,ಮಂಜು ಬಾವಿ, ಹಣಮಂತ ದೊರೆಗೊಳ, ಶಾಂತಯ್ಯ ಪಂಚಗಟ್ಟಿಮಠ, ಲಕ್ಷ್ಮಣ್ಣ ಸವನಾಳ, ಯಲ್ಲಾಲಿಂಗ ಕುರಿ, ಸಿದ್ದಪ್ಪ ಕೂಗಟಿ ಇದ್ದರು.

Latest News

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಮುದ್ದೇಬಿಹಾಳ : ಗಾನ ಗಾರುಡಿಗ ಪಂಡಿತ ಪುಟ್ಟರಾಜ ಗವಾಯಿಗಳ ಜನಪದ ಮತ್ತು ಸಾಂಸ್ಕೃತಿಕ ಸಂಘ

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ : ತೀವ್ರ ತುರುಸಿನಿಂದ ಕೂಡಿದ ಇಲ್ಲಿನ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ಸೋಮವಾರ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು ಒಟ್ಟು ಶೇ.92.95ರಷ್ಟು ಮತದಾನ ಆಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಒಟ್ಟು 2625 ಮತದಾರರಲ್ಲಿ 2440 ಮತದಾರರು ತಮ್ಮ ಹಕ್ಕು ಚಲಾಯಿಸಿದರು.ಆರಂಭದಲ್ಲಿ ಚುರುಕುಗೊಂಡಿದ್ದ ಮತದಾನ ಪ್ರಕ್ರಿಯೆ ಮದ್ಯಾಹ್ನದ ಹೊತ್ತಿಗೆ ಮಂದಗತಿಯಲ್ಲಿ ಸಾಗಿತ್ತು.ಅಂತಿಮ ಸಮಯ ಮೀರುವ ಮುನ್ನವೇ ಬಹುತೇಕ ಮತದಾರರು ತಮ್ಮ ಹಕ್ಕು ಚಲಾಯಿಸಿದರು. ಒಂದು ಮತಗಟ್ಟೆಯಲ್ಲಿ ಇಬ್ಬರು ಮತದಾರರು ನಕಲಿ ಮತದಾನಕ್ಕೆ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಗದಗ: ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಿ, ಟೈರ್‌ಗೆ ಬೆಂಕಿ ಹಚ್ಚಲು ಮುಂದಾದಾಗ ಕಾರ್ಯಕರ್ತರೊಬ್ಬರ ಪ್ಯಾಂಟ್‌ಗೆ ಬೆಂಕಿ ತಾಗಿದೆ. ಕಾಂಗ್ರೆಸ್‌ ನಾಯಕರ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು ರಸ್ತೆ ಮಧ್ಯೆ ಬೆಂಕಿ ಹಚ್ಚಿ, ಟೈರ್‌ ಸುಡಲು ಯತ್ನಿಸಿದರು. ಪೊಲೀಸರು ಟೈರ್‌ ಅನ್ನು ಕುಸಿದುಕೊಂಡಾಗ ನೂಕಾಟ ಉಂಟಾಯಿತು. ಕಾರ್ಯಕರ್ತರು ಒಮ್ಮೆಲೆ ನುಗ್ಗಿದ್ದರಿಂದ ಕಾರ್ಯಕರ್ತರೊಬ್ಬರ ಪ್ಯಾಂಟ್‌ಗೆ ಬೆಂಕಿ ತಾಗಿದೆ. ಅಲ್ಪ ಪ್ರಮಾಣದಲ್ಲಿ