Onion price: ಉಳ್ಳಾಗಡ್ಡಿ ಬೆಳೆಗೆ ಬೆಂಬಲ ಬೆಲೆಗೆ ಆಗ್ರಹ

Onion price: ಉಳ್ಳಾಗಡ್ಡಿ ಬೆಳೆಗೆ ಬೆಂಬಲ ಬೆಲೆಗೆ ಆಗ್ರಹ

ಬೀಳಗಿ: ಸತತವಾಗಿ ಸುರಿದ ಮಳೆಯಿಂದಾಗಿ ಅತಿವೃಷ್ಟಿ, ಅನಾವೃಷ್ಟಿಯಿಂದಾಗಿ ರೈತರು ಬೀಜ, ರಸಗೊಬ್ಬರ, ಕೀಟನಾಶಕ ಔಷದ, ಕಳೆ ತೆಗೆಯಲು ಕೃಷಿ ಕಾರ್ಮಿಕರಿಗೆ ಎಕರೆಗೆ ಈರುಳ್ಳಿ ಬೀಜ (onion price) ಬಿತ್ತನೆಗೆ ಕನಿಷ್ಟ ನಾಲವತ್ತು ಸಾವಿರ ರೂಪಾಯಿಗಳು ಖುರ್ಚು ಮಾಡಿದ್ದು, ಆ ಬೆಳೆಗಳು ನೀರು ಪಾಲಾಗಿದ್ದು, ಕೈ ಗೆ ಬಂದ ತುತ್ತು ಬಾಯಿಗೆ ಬರದಂತಾಗಿ ರೈತನು ಕಷ್ಟದಲ್ಲಿ ಸಿಲುಕಿದ್ದು ಕೇಂದ್ರ ಹಾಗೂ ರಾಜ್ಯ ಸರಕಾರ ನ್ಯಾಯಯುತ ಪರಿಹಾರವನ್ನು ಶೀಘ್ರದಲ್ಲಿ ನೀಡಬೇಕೆಂದು ಭಾರತೀಯ ಕಿಸಾನ ಸಂಘದ ಜಿಲ್ಲಾಧ್ಯಕ್ಚ ವಿರುಪಾಕ್ಷಯ್ಯ ಪ.ಹಿರೇಮಠ ಆಗ್ರಹಪಡಿಸಿದರು.

ಅವರು ಬೀಳಗಿ ಪಟ್ಟಣದಲ್ಲಿ ಭಾರತೀಯ ಕಿಸಾನ ಸಂಘ ಕರ್ನಾಟಕ ಪ್ರದೇಶ ಉತ್ತರ ಪ್ರಾಂತ ಬಾಗಲಕೋಟ ಜಿಲ್ಲಾ ಘಟಕ ಹಾಗೂ ಬೀಳಗಿ ತಾಲೂಕು ಘಟಕದ ಸಹಯೋಗದಲ್ಲಿ ಈರುಳ್ಳಿ ಬೆಳೆಗಾರರಿಗೆ ನ್ಯಾಯಯುತ ಲಾಭದಾಯಕ ಬೆಂಬಲ ಬೆಲೆ ನೀಡಬೇಕೆಂದು ಆಗ್ರಹಿಸಿ ತಾಲೂಕು ಆಡಳಿತ ಸೌಧದ ಮುಂದೆ ರೈತರು ನಡೆಸಿದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು.

ಅಳಿದುಳಿದ ಈರುಳ್ಳಿ ಬೆಳೆಯನ್ನು ಮಾರಾಟ ಮಾಡಲು ಮಾರ್ಕೆಟಿಗೆ ಹೋದರೆ ಅದರ ದರ ಸಂಪೂರ್ಣ ಕುಸಿದಿದ್ದು ಬೆಳೆಯನ್ನು ಬೆಳೆಯಲು ಹಾಕಿದ ಖರ್ಚು ಬಾರದೇ ಇರುವದರಿಂದ ರೈತರು ಹಣಕಾಸು ಸಂಸ್ಥೆಗಳಿಂದ ಹಾಗೂ ಲೇವಾದೇವಿಗಾರರಿಂದ ಪಡೆದ ಸಾಲ ತೀರಿಸುವದು ಹೇಗೆ ಎಂದು ಚಿಂತಾಕ್ರಾಂತರಾಗಿದ್ದು, ಸರಕಾರ ನ್ಯಾಯಯುತ ಲಾಭದಾಯಕ ಬೆಂಬಲ ಬೆಲೆ ನೀಡಬೇಕು ಒತ್ತಾಯಿಸಿದರು.

ಉ.ಪ್ರಾ. ಕಾರ್ಯಕಾರಿಣಿ ಸದಸ್ಯ ಸುಬ್ಬರಾಯಗೌಡ ಪಾಟೀಲ ಮಾತನಾಡಿ ಬೆಳೆ ವಿಮೆ ಕಟ್ಟಿದ ರೈತರಿಗೆ ವಿಮಾ ಕಂಪನಿ, ಕೃಷಿ ಇಲಾಖೆ, ತೋಟಗಾರಿಕೆ, ರೇಷ್ಮೆ, ಕಂದಾಯ ಇಲಾಖೆಯವರು ಸರಿಯಾಗಿ ಪರಿಶೀಲನೆ ನಡೆಸದೇ ಇರುವದರಿಂದ ರೈತರು ವಿಮಾ ಕಂಪನಿ ನೀಡುವ ಕ್ಲೇಮ್ ದಿಂದ ವಂಚಿತರಾಗುತ್ತಿದ್ದು ಸರಕಾರ ರೈತರಿಗೆ ಅನ್ಯಾಯವಾಗದಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಮಲ್ಲಪ್ಪ ಗಾಣಿಗೇರ, ಪ್ರಧಾನ ಕಾರ್ಯದರ್ಶಿ ಗುರು ಅನಗವಾಡಿ, ಜಿಲ್ಲಾ ಕೋಶ್ಯಾಧ್ಯಕ್ಷ ಮುದುಕಪ್ಪ ವಡವಾಣಿ, ಜಿಲ್ಲಾ ಮಹಿಳಾ ಪ್ರಮುಖರಾದ ರೇಣುಕಾ ಹುಲ್ಲಿಕೇರಿ, ರೈತ ಮುಖಂಡರಾದ ಶಿವನಗೌಡ ಪಾಟೀಲ, ಡೊಂಗ್ರಿಸಾಬ ನದಾಪ, ಚಂದ್ರಶೇಖರ ಕಾಖಂಡಕಿ ಬಸವಂತ ಸಂಕಾನಟ್ಟಿ, ಸುರೇಶ ಹೂಗಾರ,ಮಂಜು ಬಾವಿ, ಹಣಮಂತ ದೊರೆಗೊಳ, ಶಾಂತಯ್ಯ ಪಂಚಗಟ್ಟಿಮಠ, ಲಕ್ಷ್ಮಣ್ಣ ಸವನಾಳ, ಯಲ್ಲಾಲಿಂಗ ಕುರಿ, ಸಿದ್ದಪ್ಪ ಕೂಗಟಿ ಇದ್ದರು.

Latest News

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹಳೇ ಸರಕಾರಿ ಆಸ್ಪತ್ರೆಯ ಹಿಂಭಾಗದಲ್ಲಿ ಬುಧವಾರ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವನನ್ನು ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ ಗ್ರಾಮದ ಶರಣಬಸಪ್ಪ ಸಾಯಬಣ್ಣ ಗೋನಾಳ(45) ಎಂದು ಗುರುತಿಸಲಾಗಿದೆ. ಕುಡಿದ ಮತ್ತಿನಲ್ಲಿ ಯಾವುದೋ ವಿಚಾರಕ್ಕೆ ಮಾನಸಿಕ ಮಾಡಿಕೊಂಡು ತನ್ನ ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೃತನ ಪತ್ನಿ V.S ಗೋನಾಳ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ (ಬಿಎನ್‌ಎಸ್-194) ಪ್ರಕರಣ