ನಾಗರಾಳ ಸದ್ಭಕ್ತರು ನಿರ್ಮಿಸಿದ ಕಪ್ಪರ ಪಡಿಯಮ್ಮತಾಯಿ ಸಮುದಾಯ ಸಭಾ ಭವನ ನಾಳೆ ಲೋಕಾರ್ಪಣೆ

ನಾಗರಾಳ ಸದ್ಭಕ್ತರು ನಿರ್ಮಿಸಿದ ಕಪ್ಪರ ಪಡಿಯಮ್ಮತಾಯಿ ಸಮುದಾಯ ಸಭಾ ಭವನ ನಾಳೆ ಲೋಕಾರ್ಪಣೆ

ಬೀಳಗಿ: ನಾಗರಾಳ ಗ್ರಾಮದಲ್ಲಿ ದಿಗಂಬರೇಶ್ವರಮಠದ ಸದ್ಭಕ್ತರು ಸರಕಾರದ ಸಹಾಯಧನ ಸ್ವೀಕರಿಸದೇ ಸ್ವಯಂಪ್ರೇರಿತರಾಗಿ 50 ಲಕ್ಷ ರೂಪಾಯಿಗಳ ವಂತಿಗೆ ಸೇರಿಸಿ 60 ದಿನಗಳಲ್ಲಿ ಹಿರಿಯರು ಯುವಕರು ತಾಯಂದಿರು ಕೂಡಿಕೊಂಡು ಯಾವುದೇ ಪ್ರತಿಫಲಾಪೇಕ್ಷೆ ಬಯಸದೇ ಯಾವುದೇ ಸಂಭಾವನೆ ಪಡಿಯದೇ ಸ್ವಯ ಸೇವಕರಾಗಿ ಭವ್ಯವಾದ ಕಪ್ಪರ ಪಡಿಯಮ್ಮ ತಾಯಿ ಸಮುದಾಯ ಸಭಾ ಭವನವನ್ನು ನಿರ್ಮಿಸಿದ್ದು ಸೆ.22 ರಂದು ಸೋಮವಾರ ಮು.8.00 ಗಂಟೆಗೆ ನಾಡಿನ ಪೂಜ್ಯರ ದಿವ್ಯ ಸಾನಿಧ್ಯದಲ್ಲಿ ನೂತನ ಕಟ್ಟಡ ಲೋಕಾರ್ಪಣೆಗೊಳ್ಳಲಿದೆ ಎಂದು ನಾಗರಾಳದ ದಿಗಂಬರೇಶ್ವರಮಠ ಶೇಷಪ್ಪಯ್ಯ ಗುರುನಿಂಗಪ್ಪಯ್ಯ ಮಹಾಸ್ವಾಮಿಗಳು ತಿಳಿಸಿದರು.

ಅವರು ದಿಗಂಬರೇಶ್ವರಮಠದಲ್ಲಿ ನಡೆದ ಪೂರ್ವಭಾವಿ ಸಭೆಯ ನೇತೃತ್ವ ವಹಿಸಿ ಮಾತನಾಡಿ ಇಂಗಳೇಶ್ವರ ವಚನ ಶಿಲಾಮಂಟಪ ವಿರಕ್ತಮಠದ ಚನ್ನಬಸವ ಸ್ವಾಮೀಜಿ,ಜಮಖಂಡಿ ಕಲ್ಯಾಣ ಮಠದ ಗೌರಿಶಂಕರ ಶಿವಾಚಾರ್ಯ ಸ್ವಾಮೀಜಿ,
ಗಿರಿಸಾಗರ ಕಲ್ಯಾಣ ಹಿರೇಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ನಾಡಿನ ಅನೇಕ ಪೂಜ್ಯರು ದಿವ್ಯಸಾನಿದ್ಯವಹಿಸಲಿದ್ದಾರೆ ಎಂದರು.

ಶೈಕ್ಷಣಿಕ, ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಸದಾಕಾಲ ಹೊಸದನ್ನೇ ಪ್ರಯೋಗ ಮಾಡುವ ಈ ಗ್ರಾಮದ ಜನರು ಸಮುದಾಯ ಭವನ ನಿರ್ಮಿಸಿದರಿಂದ ಪ್ರತಿ ವರ್ಷ ನಡೆಯುವ ನವರಾತ್ರಿ ಉತ್ಸವದಂತಹ ಧಾರ್ಮಿಕ ಹಾಗೂ ಸಾಹಿತ್ಯಿಕ , ಸಾಂಸ್ಕೃತಿಕ, ಶೈಕ್ಷಣಿಕವಾದ ಸಮಾಜಮುಖಿ ಕಾರ್ಯಕ್ರಮಗಳಿಗೆ ಸುಸಜ್ಜಿತವಾದ ವೇದಿಕೆಯನ್ನು ಒದಗಿಸಿದ್ದು ನಮಗೆ ಸಂತೋಷ ತಂದಿದೆ.

ಸಪ್ಟೆಂಬರ್ 22ರಂದು ಬೆಳಿಗ್ಗೆ 7 ಕ್ಕೆ ಹೋಮ ಹವನ ಪೂಜಾ ಕಾರ್ಯಕ್ರಮ 8 ಗಂಟೆಗೆ ನಾಡದೇವಿ ಮೂರ್ತಿ ಭವ್ಯ ಮೆರವಣಿಗೆ. 501 ಮಹಿಳೆಯರಿಂದ ಕುಂಭಮೇಳ. ನಾವಲಗಿಯ ಪ್ರಸಿದ್ಧ ಸಂಬಳ ವಾದನ ನಾಡಿನ ಪ್ರಸಿದ್ಧ ಕಲಾವಿದರಿಂದ ಭವ್ಯ ಮೆರವಣಿಗೆ. ನಂತರ 11 ಗಂಟೆಗೆ 1001 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ. ನಾಡಿನ ಹರ ಗುರು ಚರಮೂರ್ತಿಗಳ ಅಮೃತ ಹಸ್ತದಿಂದ ಮಂದಿರ ಲೋಕಾರ್ಪಣೆ ಕಾರ್ಯಕ್ರಮ ಜರುಗಲಿದೆ ಎಂದು ದಿಗಂಬರೇಶ್ವರ ಮಠ ನಾಗರಾಳ ಶೇಷಪ್ಪಯ್ಯ ಗುರುನಿಂಗಪ್ಪಯ್ಯ ಮಹಾಸ್ವಾಮಿಗಳು ಹೇಳಿದ್ದಾರೆ.

ಈ ಸಂದರ್ಭದಲ್ಲಿ ನಿಂಗಪ್ಪಯ್ಯ ಗುರುಶೇಷಪ್ಪಯ್ಯ ಮಹಾಸ್ವಾಮಿಗಳು ಸೇರಿದಂತೆ ದಿಗಂಬರೇಶ್ವರ ಮಠದ ಸದ್ಭಕ್ತರು ಭಾಗಿಯಾಗಿದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ