ನಾಗರಾಳ ಸದ್ಭಕ್ತರು ನಿರ್ಮಿಸಿದ ಕಪ್ಪರ ಪಡಿಯಮ್ಮತಾಯಿ ಸಮುದಾಯ ಸಭಾ ಭವನ ನಾಳೆ ಲೋಕಾರ್ಪಣೆ

ನಾಗರಾಳ ಸದ್ಭಕ್ತರು ನಿರ್ಮಿಸಿದ ಕಪ್ಪರ ಪಡಿಯಮ್ಮತಾಯಿ ಸಮುದಾಯ ಸಭಾ ಭವನ ನಾಳೆ ಲೋಕಾರ್ಪಣೆ

ಬೀಳಗಿ: ನಾಗರಾಳ ಗ್ರಾಮದಲ್ಲಿ ದಿಗಂಬರೇಶ್ವರಮಠದ ಸದ್ಭಕ್ತರು ಸರಕಾರದ ಸಹಾಯಧನ ಸ್ವೀಕರಿಸದೇ ಸ್ವಯಂಪ್ರೇರಿತರಾಗಿ 50 ಲಕ್ಷ ರೂಪಾಯಿಗಳ ವಂತಿಗೆ ಸೇರಿಸಿ 60 ದಿನಗಳಲ್ಲಿ ಹಿರಿಯರು ಯುವಕರು ತಾಯಂದಿರು ಕೂಡಿಕೊಂಡು ಯಾವುದೇ ಪ್ರತಿಫಲಾಪೇಕ್ಷೆ ಬಯಸದೇ ಯಾವುದೇ ಸಂಭಾವನೆ ಪಡಿಯದೇ ಸ್ವಯ ಸೇವಕರಾಗಿ ಭವ್ಯವಾದ ಕಪ್ಪರ ಪಡಿಯಮ್ಮ ತಾಯಿ ಸಮುದಾಯ ಸಭಾ ಭವನವನ್ನು ನಿರ್ಮಿಸಿದ್ದು ಸೆ.22 ರಂದು ಸೋಮವಾರ ಮು.8.00 ಗಂಟೆಗೆ ನಾಡಿನ ಪೂಜ್ಯರ ದಿವ್ಯ ಸಾನಿಧ್ಯದಲ್ಲಿ ನೂತನ ಕಟ್ಟಡ ಲೋಕಾರ್ಪಣೆಗೊಳ್ಳಲಿದೆ ಎಂದು ನಾಗರಾಳದ ದಿಗಂಬರೇಶ್ವರಮಠ ಶೇಷಪ್ಪಯ್ಯ ಗುರುನಿಂಗಪ್ಪಯ್ಯ ಮಹಾಸ್ವಾಮಿಗಳು ತಿಳಿಸಿದರು.

ಅವರು ದಿಗಂಬರೇಶ್ವರಮಠದಲ್ಲಿ ನಡೆದ ಪೂರ್ವಭಾವಿ ಸಭೆಯ ನೇತೃತ್ವ ವಹಿಸಿ ಮಾತನಾಡಿ ಇಂಗಳೇಶ್ವರ ವಚನ ಶಿಲಾಮಂಟಪ ವಿರಕ್ತಮಠದ ಚನ್ನಬಸವ ಸ್ವಾಮೀಜಿ,ಜಮಖಂಡಿ ಕಲ್ಯಾಣ ಮಠದ ಗೌರಿಶಂಕರ ಶಿವಾಚಾರ್ಯ ಸ್ವಾಮೀಜಿ,
ಗಿರಿಸಾಗರ ಕಲ್ಯಾಣ ಹಿರೇಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ನಾಡಿನ ಅನೇಕ ಪೂಜ್ಯರು ದಿವ್ಯಸಾನಿದ್ಯವಹಿಸಲಿದ್ದಾರೆ ಎಂದರು.

ಶೈಕ್ಷಣಿಕ, ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಸದಾಕಾಲ ಹೊಸದನ್ನೇ ಪ್ರಯೋಗ ಮಾಡುವ ಈ ಗ್ರಾಮದ ಜನರು ಸಮುದಾಯ ಭವನ ನಿರ್ಮಿಸಿದರಿಂದ ಪ್ರತಿ ವರ್ಷ ನಡೆಯುವ ನವರಾತ್ರಿ ಉತ್ಸವದಂತಹ ಧಾರ್ಮಿಕ ಹಾಗೂ ಸಾಹಿತ್ಯಿಕ , ಸಾಂಸ್ಕೃತಿಕ, ಶೈಕ್ಷಣಿಕವಾದ ಸಮಾಜಮುಖಿ ಕಾರ್ಯಕ್ರಮಗಳಿಗೆ ಸುಸಜ್ಜಿತವಾದ ವೇದಿಕೆಯನ್ನು ಒದಗಿಸಿದ್ದು ನಮಗೆ ಸಂತೋಷ ತಂದಿದೆ.

ಸಪ್ಟೆಂಬರ್ 22ರಂದು ಬೆಳಿಗ್ಗೆ 7 ಕ್ಕೆ ಹೋಮ ಹವನ ಪೂಜಾ ಕಾರ್ಯಕ್ರಮ 8 ಗಂಟೆಗೆ ನಾಡದೇವಿ ಮೂರ್ತಿ ಭವ್ಯ ಮೆರವಣಿಗೆ. 501 ಮಹಿಳೆಯರಿಂದ ಕುಂಭಮೇಳ. ನಾವಲಗಿಯ ಪ್ರಸಿದ್ಧ ಸಂಬಳ ವಾದನ ನಾಡಿನ ಪ್ರಸಿದ್ಧ ಕಲಾವಿದರಿಂದ ಭವ್ಯ ಮೆರವಣಿಗೆ. ನಂತರ 11 ಗಂಟೆಗೆ 1001 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ. ನಾಡಿನ ಹರ ಗುರು ಚರಮೂರ್ತಿಗಳ ಅಮೃತ ಹಸ್ತದಿಂದ ಮಂದಿರ ಲೋಕಾರ್ಪಣೆ ಕಾರ್ಯಕ್ರಮ ಜರುಗಲಿದೆ ಎಂದು ದಿಗಂಬರೇಶ್ವರ ಮಠ ನಾಗರಾಳ ಶೇಷಪ್ಪಯ್ಯ ಗುರುನಿಂಗಪ್ಪಯ್ಯ ಮಹಾಸ್ವಾಮಿಗಳು ಹೇಳಿದ್ದಾರೆ.

ಈ ಸಂದರ್ಭದಲ್ಲಿ ನಿಂಗಪ್ಪಯ್ಯ ಗುರುಶೇಷಪ್ಪಯ್ಯ ಮಹಾಸ್ವಾಮಿಗಳು ಸೇರಿದಂತೆ ದಿಗಂಬರೇಶ್ವರ ಮಠದ ಸದ್ಭಕ್ತರು ಭಾಗಿಯಾಗಿದ್ದರು.

Latest News

ಸೌಜನ್ಯಾ ಕಂದಕೂರಗೆ 625 ಅಂಕ :                        ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಸೌಜನ್ಯಾ ಕಂದಕೂರಗೆ 625 ಅಂಕ : ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬಳು ಈ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ. ಪರೀಕ್ಷೆಗೆ ಕೂತಿದ್ದ 400 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದಾರೆ. ಅದರಲ್ಲಿ ಸುಮಂತ ಕುಪ್ಪಸ್ತ ಹಾಗೂ ಅಂಕಿತಾ ಬಡಿಗೇರ 600ಕ್ಕೆ 586 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿಜಯ ರಾಠೋಡ 585 ಅಂಕಗಳನ್ನು ಪಡೆದು ದ್ವಿತೀಯ ಮತ್ತು ಅಪ್ಸಾನಾ ನದಾಫ್ ಹಾಗೂ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ ಶೇ.100ರಷ್ಟಾಗಿದೆ. ಪರೀಕ್ಷೆಗೆ ಕೂತಿದ್ದ 46 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದಾರೆ.ಅದರಲ್ಲಿ ಶೇ.95ಕ್ಕೂ ಅಧಿಕ ಅಂಕವನ್ನು 10 ವಿದ್ಯಾರ್ಥಿಗಳು,ಶೇ.90ಕ್ಕೂ ಅಧಿಕ ಅಂಕವನ್ನು 25 ವಿದ್ಯಾರ್ಥಿಗಳು ಶೇ.80 ಕ್ಕೂ ಹೆಚ್ಚು ಅಂಕವನ್ನು 11 ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಶೇ.98 ಅಂಕ ಪಡೆದ ರೋಹನ್ ಸೂಳಿಭಾವಿ ಮುದ್ದೇಬಿಹಾಳ ನಗರಕ್ಕೆ ಪ್ರಥಮ,ಶೇ.97.5 ಅಂಕ ಪಡೆದಿರುವ ಚೆನ್ನಪ್ಪ ಸಜ್ಜನ ದ್ವಿತೀಯ ಹಾಗೂ ಶೇ.97.33 ಅಂಕ