ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸನ್ಮಾನ… ಸೆ.23 ರಂದು ಬನಶಂಕರಿ ಪತ್ತಿನ ಸಂಘದ ರಜತಮಹೋತ್ಸವ

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸನ್ಮಾನ… ಸೆ.23 ರಂದು ಬನಶಂಕರಿ ಪತ್ತಿನ ಸಂಘದ ರಜತಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ 2000ಇಸ್ವಿಯಲ್ಲಿ ಸ್ಥಾಪನೆಗೊಂಡಿರುವ ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ 25ನೇ ವರ್ಷದ ರಜತಮಹೋತ್ಸವವನ್ನು ಸೆ.23 ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಶ್ರೀ ರಾಘವೇಂದ್ರ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಶಂಕರ ಈ.ಹೆಬ್ಬಾಳ ಹೇಳಿದರು.

ಪಟ್ಟಣದ ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಭಾನುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಸಮಾನ ಮನಸ್ಕರು ತಾಲ್ಲೂಕಿನಲ್ಲಿರುವ ದೇವಾಂಗ ನೇಕಾರ ಸಮಾಜದವರ ಆರ್ಥಿಕ ಬೆಳವಣಿಗೆಗಾಗಿ 25ವರ್ಷಗಳ ಹಿಂದೆ ಸಂಘವನ್ನು ಸ್ಥಾಪಿಸಿದ್ದು ಸಂಘವು ಲಾಭದಲ್ಲಿ ಮುನ್ನಡೆದಿರುವುದು ಸಂತಸದ ವಿಷಯ ಎಂದರು.

ಮುದ್ದೇಬಿಹಾಳ ಕಿಲ್ಲಾ ಹೊಸಮಠದ ಅಮರೇಶ್ವರ ದೇವರು ದಿವ್ಯಸಾನಿಧ್ಯ ವಹಿಸಲಿದ್ದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ದೇವಾಂಗ ಸಮಾಜದ ರಾಜ್ಯಾಧ್ಯಕ್ಷ ರವೀಂದ್ರ ಕಲ್ಬುರ್ಗಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ಎಸ್.ಪಾಟೀಲ ಯಾಳಗಿ, ಬಾಗಲಕೋಟ ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರುಗೇಶ ಕಡ್ಲಿಮಟ್ಟಿ, ಸಹಕಾರ ಸಂಘಗಳ ಉಪನಿಬಂಧಕಿ ಎಸ್.ಕೆ.ಭಾಗ್ಯಶ್ರೀ,ಸಹಾಯಕ ನಿಬಂಧಕ ಚೇತನ ಭಾವಿಕಟ್ಟಿ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಉದ್ಯಮಿದಾರ ಸತೀಶ ಓಸ್ವಾಲ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ, ದೇವಾಂಗ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಚಿತ್ತರಗಿ, ನೇಕಾರ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ ಹುಲಮನಿ ಆಗಮಿಸುವರು ಎಂದು ತಿಳಿಸಿದರು.

ಸಂಘದ ಪ್ರಧಾನ ವ್ಯವಸ್ಥಾಪಕರಾದ ವಿ.ಎಸ್.ಪ್ಯಾಟಿಗೌಡರ ಮಾತನಾಡಿ, ಸಂಘವು ಇಂದು ಎಂಟು ಕೋಟಿ ರೂ.ಗಳಿಗೂ ಅಧಿಕ ವ್ಯವಹಾರವನ್ನು ಹೊಂದಿದೆ.ನಾಲತವಾಡದಲ್ಲಿ ಫೆಬ್ರುವರಿ ತಿಂಗಳಲ್ಲಿ ಶಿರಹಟ್ಟಿ ಬಾಳೆಹೊಸೂರಿನ ದಿಂಗಾಲೇಶ್ವರ ಸ್ಮಾಮೀಜಿ, ಶಾಸಕ ಸಿ.ಎಸ್.ನಾಡಗೌಡ ಅವರಿಂದ ಶಾಖೆ ಉದ್ಘಾಟಿಸಲಾಗಿದೆ. ಸಂಘದ ಸಂಸ್ಥಾಪನೆಯ ಸಮಯದಲ್ಲಿ ತಮ್ಮ ಕೊಡುಗೆ ನೀಡಿದ ಸಮಾಜದ ಹಿರಿಯರನ್ನು ಹಾಗೂ ಎಸ್.ಎಸ್.ಎಲ್.ಸಿ.,ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಸಂಘದ ಉಪಾಧ್ಯಕ್ಷ ರಮೇಶ ಹೆಬ್ಬಾಳ ಮಾತನಾಡಿದರು.ನಿರ್ದೇಶಕರಾದ ಎಸ್.ಬಿ.ಕಲ್ಲುಂಡಿ, ದ್ಯಾವಪ್ಪ ಹುಣಶ್ಯಾಳ, ಮುದ್ದೇಬಿಹಾಳ ಹಾಗೂ ನಾಲತವಾಡ ಶಾಖೆಗಳ ಸಿಬ್ಬಂದಿ ಇದ್ದರು.

Latest News

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹಳೇ ಸರಕಾರಿ ಆಸ್ಪತ್ರೆಯ ಹಿಂಭಾಗದಲ್ಲಿ ಬುಧವಾರ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವನನ್ನು ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ ಗ್ರಾಮದ ಶರಣಬಸಪ್ಪ ಸಾಯಬಣ್ಣ ಗೋನಾಳ(45) ಎಂದು ಗುರುತಿಸಲಾಗಿದೆ. ಕುಡಿದ ಮತ್ತಿನಲ್ಲಿ ಯಾವುದೋ ವಿಚಾರಕ್ಕೆ ಮಾನಸಿಕ ಮಾಡಿಕೊಂಡು ತನ್ನ ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೃತನ ಪತ್ನಿ V.S ಗೋನಾಳ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ (ಬಿಎನ್‌ಎಸ್-194) ಪ್ರಕರಣ