ಯಾವುದೇ ಕಾರ್ಯ ಮಾಡುವದು ಅಸಾಧ್ಯವಾದುದಲ್ಲ

ಯಾವುದೇ ಕಾರ್ಯ ಮಾಡುವದು ಅಸಾಧ್ಯವಾದುದಲ್ಲ

ಬೀಳಗಿ: ಜಗತ್ತಿನಲ್ಲಿ ಸಮಾಜದ ಒಳತಿಗಾಗಿ ಸತ್ಕಾರ್ಯ ಮಾಡುವ ಮನಸ್ಸು ಸದ್ಭಕ್ತರು ಶ್ರದ್ಧಾ ಭಕ್ತಿಯಿಂದ ಸಂಕಲ್ಪ ಮಾಡಿ ಭಕ್ತರ ಭಕ್ತಿ, ಭಗವಂತನ ಶಕ್ತಿ ಒಂದಾದರೇ ಯಾವುದೇ ಕಾರ್ಯ ಮಾಡುವದು ಅಸಾಧ್ಯವಾದುದಲ್ಲ ಎಂದು ಜಮಖಂಡಿ ಕಲ್ಯಾಣ ಹಿರೇಮಠದ ಗೌರಿಶಂಕರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ಅವರು ತಾಲೂಕಿನ ನಾಗರಾಳ ಗ್ರಾಮದಲ್ಲಿ ಯಾವುದೇ ರಾಜಕಾರಣಿಗಳಿಂದ ಹಾಗೂ ಸರಕಾರದಿಂದ ವಂತಿಗೆ ಸ್ವೀಕರಿಸದೆ ದಿಗಂಭರೇಶ್ವರಮಠದ ಸದ್ಭಕ್ತರು ಸ್ವಂತ ದೇಣಿಗೆ ಸಂಗ್ರಹಿಸಿ 50 ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಾಣ ಮಾಡಿದ ಕಪ್ಪರ ಪಡಿಯಮ್ಮ ತಾಯಿ ಸಭಾ ಭವನವನ್ನು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.

ನಾವು ಯಾವುದೇ ಆಸ್ತಿಪಾಸ್ತಿ ಗಳಿಸಿದರೂ ನಮ್ಮ ಅಂತ್ಯವಾದಾಗ ನಮ್ಮ ಹಿಂದೆ ಬರುವದಿಲ್ಲ ಆದರೇ ನಾವು ಸಮಾಜದ ಅಭಿವೃದ್ದಿಗಾಗಿ, ಧಾನ ಧರ್ಮ ಸತ್ಕಾರ್ಯಗಳು, ಪರೋಪಕಾರ ಸೇವೆ ಮಾಡಿದರೇ, ಅದೇ ಸೇವೆ ಭಗವಂತನಿಗೆ ಅರ್ಪಿತವಾಗುತ್ತದೆ ಇದಕ್ಕೆ ಸಾಕ್ಷಿ ನಾಗರಾಳದ ದಿಗಂಬರೇಶ್ವರ ಮಠದ ಸದ್ಭಕರ ಸೇವೆ ಎಂದರು.

ಗಿರಿಸಾಗರ ಕಲ್ಯಾಣ ಹಿರೇಮಠದ ರುದ್ರಮುನಿ ಶಿವಾಚಾರ್ಯರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಹಾತ್ಮರು, ಶರಣರು, ಸಂತರು, ಶಿವಯೋಗಿಗಳು ಯಾವ ಕ್ಷೇತ್ರದಲ್ಲಿ ತಮ್ಮ ಪಾದಸ್ಪರ್ಶ ಮಾಡುತ್ತಾರೊ ಅದು ಪುಣ್ಯಕ್ಷೇತ್ರವಾಗುತ್ತದೆ.ಇಂದಿನ ಜಗತ್ತಿನಲ್ಲಿ ಕ್ಷಣ ಕ್ಷಣಕ್ಕೂ ನಾವೆಲ್ಲ ಜನರು ಅರಿತು ಅರಿಯದೇ ಮಾಡಿದ ತಪ್ಪುಗಳನ್ನು ಇಂತಹ ಪುಣ್ಯ ಕ್ಷೇತ್ರಗಳಗೆ ಆಗಮಿಸಿ ಪುಣ್ಯ ಕಾರ್ಯಗಳನ್ನು ಮಾಡಿ ಕಳೆದುಕೊಳ್ಳಬೇಕು ಎಂದರು.

ನಾಗರಾಳ ವಿಗಂಬರೇಶ್ವರ ಮಠ ತನ್ನದೆಯಾದ ದೈವಿಕ ಶಕ್ತಿಯನ್ನು ಹೊಂದಿದೆ. ಸಿದ್ದಿ ಪುರುಷರಾಗಿರುವಂತ ದಿಗಂಬರೇಶ್ವರರು ಸಿದ್ಧಸಾಧಕರಾಗಿದ್ದರು ಈಗಿನ ಶ್ರೀ ಮಠದ ಪೀಠಾಧಿಕಾರಿ ಶೇಷಪ್ಪಯ್ಯ ಸ್ವಾಮಿಗಳು ಭಕ್ರರಿಂದ ಯಾವುದೇ ಫಲಾಪೇಕ್ಷೆ ಬಯಸದೇ ಶ್ರೀ ಮಠ ಇದು ಭಕ್ತರ ಮಠ ನಾನು ಭಗವಂತನ ಸೇವಕ ಎಂದು ತ್ಯಾಗ ಮನೋಭಾವನೆಯುಳ್ಳವರಾಗಿದ್ದು ಸದ್ಭಕ್ತರಿಗೆ ಸದಾ ಒಳಿತನ್ನು ಬಯಸುತ್ತಾರೆ ಎಂದು ಗಿರಿಸಾಗರ ಕಲ್ಯಾಣ ಹಿರೇಮಠದ ರುದ್ರಮುನಿ ಶಿವಾಚಾರ್ಯರು ಹೇಳಿದರು.

ಈ ಸಂದರ್ಭದಲ್ಲಿ ಇಂಗಳೇಶ್ವರದ ವಿರಕ್ತಮಠದ ಚನ್ನಬಸವ ಸ್ವಾಮೀಜಿ,ಬೀಳಗಿ ಸೋಮಪ್ಪಯ್ಯನ ಮಠದ ಚನ್ನಬಸವ ಸ್ವಾಮೀಜಿ,ಬನಹಟ್ಟಿ ಹಿರೇಮಠ ಶರಣಬಸವ ಶಿವಾಚಾರ್ಯ ಸ್ವಾಮೀಜಿ,, ಬೀಳಗಿ ಕಲ್ಮಠದ ಗುರುಪಾದ ಶಿವಾಚಾರ್ಯ ಸ್ವಾಮೀಜಿ,ಕುಂದರಗಿ ಚರಂತಿಮಠದ ವೀರಸಂಗಮೇಶ್ವರ ಶಿವಾಚಾರ್ಯ ನಾಗರಾಳ ದಿಗಂಬರೇಶ್ವರ ಮಠದ ಶೇಷಪ್ಪಯ್ಯ ಗುರುನಿಂಗಪ್ಪಯ್ಯ ಸ್ವಾಮೀಜಿ, ನಿಂಗಪ್ಪಯ್ಯ ಗುರುಶೇಷಪ್ಪಯ್ಯ ಸ್ವಾಮೀಜಿ ಸುನಗದ ಅನ್ನಪೂರ್ಣೇಶ್ವರಿ ಬೃಹನ್ಮಠ ಶಿವಾನಂದ ಸ್ವಾಮೀಜಿ, ಬೀಳಗಿ ಹುಚ್ಚಪ್ಪಯ್ಯನ ಮಠದ ಫಕೀರಯ್ಯ ಸ್ವಾಮೀಜಿ, ಸಿದ್ದಾಪೂರ ಮಾನಪ್ಪಯ್ಯ ಹುಚ್ಚಪ್ಪಯ್ಯ ಸ್ವಾಮೀಜಿ,ಮತ್ತು ನಾಗರಾಳ ಸಕಲ ಸದ್ಭಕ್ತರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕಿಂತ ಮೊದಲು ಕಪ್ಪರ ಪಡಿಯಮ್ಮಗೆ ರುದ್ರಾಭಿಷೇಕ, ಹೋಮ-ಹವನ, ಸಕಲ ಧಾರ್ಮಿಕ ವಿಧಿವಿಧಾನಗಳು ನಡೆದವು. ನಂತರ ಸಕಲ ವಾಧ್ಯವೃಂದದೊಂದಿಗೆ 501 ಸುಮಂಗಲಿಯರಿಂದ ಕುಂಭ ಮೇಳ ಹಾಗೂ ನಾಡದೇವಿ ಮೂರ್ತಿಯ ಭವ್ಯ ಮರುವಣಿಗೆಯು ಗ್ರಾಮದ ಪ್ರಮುಖ ಬೀದಿಯಲ್ಲಿ ಸಂಚರಿಸಿ ಮಠದ ಆವರಣಕ್ಕೆ ಆಗಮಿಸಿತು. 1001 ಸುಮಂಗಲಿಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿತು.

Latest News

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ;                ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ; ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಮುದ್ದೇಬಿಹಾಳ : ಕಾಂಕ್ರೀಟ್ ಮಿಕ್ಸರ್‌ನಲ್ಲಿ ಕಾರ್ಮಿಕನೊಬ್ಬನ ಕೈ ಸಿಲುಕಿಕೊಂಡು ಎಲುಬುಗಳು ತುಂಡಾಗಿರುವ ಘಟನೆ ಮಂಗಳವಾರ ಇಲ್ಲಿನ ಪಟ್ಟಣದಲ್ಲಿ ಅಂಬೇಡ್ಕರ್ ಸಮುದಾಯ ಭವನದ ಬಳಿ ನಡೆದಿದೆ. ಅಬ್ಬಿಹಾಳ ಗ್ರಾಮದ ಕಾರ್ಮಿಕ ಗಂಗಣ್ಣ ಬಸಪ್ಪ ಕಂಬಳಿ(25) ಘಟನೆಯಲ್ಲಿ ಅವರ ಬಲಗೈ ಮಣಿಕಟ್ಟಿಗೆ ತೀವ್ರ ಗಾಯವಾಗಿ ನರಗಳು ಮತ್ತು ಎಲಬು ತುಂಡಾಗಿದೆ.ವಿಷಯ ತಿಳಿದ ತಕ್ಷಣ ಹತ್ತಿರದಲ್ಲಿಯೇ ಇದ್ದ ಅಗ್ನಿಶಾಮಕ ಇಲಾಖೆ ಇಡೀ ತಂಡದ ಸಿಬ್ಬಂದಿ ಧಾವಿಸಿ ಬಂದು ಕಾರ್ಮಿಕನನ್ನು ಪ್ರಾಣಾಪಾಯದಿಂದ ರಕ್ಷಣೆ ಮಾಡಿದರು. ಕಾಂಕ್ರಿಟ್

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ ಒಳ್ಳೆಯ ಶಿಕ್ಷಕರು ರೋಲ್ ಮಾಡೆಲ್ ಆಗಿರುತ್ತಾರೆ ಎಂದು ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ ನರಗುಂದ ಹೇಳಿದರು. ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 11ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜರ್ಮನಿಯ ಶಿಕ್ಷಣ ತಜ್ಞ ಫ್ರೆಡ್ರಿಕ್ ಪ್ರೋಬೆಲ್ ಕಿಂಡರ್ ಗಾರ್ಟನ್ ಕಲ್ಪನೆಯನ್ನು ಬಿತ್ತಿದರು.ಈ ವ್ಯವಸ್ಥೆಯಲ್ಲಿ