ಯಾವುದೇ ಕಾರ್ಯ ಮಾಡುವದು ಅಸಾಧ್ಯವಾದುದಲ್ಲ

ಯಾವುದೇ ಕಾರ್ಯ ಮಾಡುವದು ಅಸಾಧ್ಯವಾದುದಲ್ಲ

ಬೀಳಗಿ: ಜಗತ್ತಿನಲ್ಲಿ ಸಮಾಜದ ಒಳತಿಗಾಗಿ ಸತ್ಕಾರ್ಯ ಮಾಡುವ ಮನಸ್ಸು ಸದ್ಭಕ್ತರು ಶ್ರದ್ಧಾ ಭಕ್ತಿಯಿಂದ ಸಂಕಲ್ಪ ಮಾಡಿ ಭಕ್ತರ ಭಕ್ತಿ, ಭಗವಂತನ ಶಕ್ತಿ ಒಂದಾದರೇ ಯಾವುದೇ ಕಾರ್ಯ ಮಾಡುವದು ಅಸಾಧ್ಯವಾದುದಲ್ಲ ಎಂದು ಜಮಖಂಡಿ ಕಲ್ಯಾಣ ಹಿರೇಮಠದ ಗೌರಿಶಂಕರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ಅವರು ತಾಲೂಕಿನ ನಾಗರಾಳ ಗ್ರಾಮದಲ್ಲಿ ಯಾವುದೇ ರಾಜಕಾರಣಿಗಳಿಂದ ಹಾಗೂ ಸರಕಾರದಿಂದ ವಂತಿಗೆ ಸ್ವೀಕರಿಸದೆ ದಿಗಂಭರೇಶ್ವರಮಠದ ಸದ್ಭಕ್ತರು ಸ್ವಂತ ದೇಣಿಗೆ ಸಂಗ್ರಹಿಸಿ 50 ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಾಣ ಮಾಡಿದ ಕಪ್ಪರ ಪಡಿಯಮ್ಮ ತಾಯಿ ಸಭಾ ಭವನವನ್ನು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.

ನಾವು ಯಾವುದೇ ಆಸ್ತಿಪಾಸ್ತಿ ಗಳಿಸಿದರೂ ನಮ್ಮ ಅಂತ್ಯವಾದಾಗ ನಮ್ಮ ಹಿಂದೆ ಬರುವದಿಲ್ಲ ಆದರೇ ನಾವು ಸಮಾಜದ ಅಭಿವೃದ್ದಿಗಾಗಿ, ಧಾನ ಧರ್ಮ ಸತ್ಕಾರ್ಯಗಳು, ಪರೋಪಕಾರ ಸೇವೆ ಮಾಡಿದರೇ, ಅದೇ ಸೇವೆ ಭಗವಂತನಿಗೆ ಅರ್ಪಿತವಾಗುತ್ತದೆ ಇದಕ್ಕೆ ಸಾಕ್ಷಿ ನಾಗರಾಳದ ದಿಗಂಬರೇಶ್ವರ ಮಠದ ಸದ್ಭಕರ ಸೇವೆ ಎಂದರು.

ಗಿರಿಸಾಗರ ಕಲ್ಯಾಣ ಹಿರೇಮಠದ ರುದ್ರಮುನಿ ಶಿವಾಚಾರ್ಯರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಹಾತ್ಮರು, ಶರಣರು, ಸಂತರು, ಶಿವಯೋಗಿಗಳು ಯಾವ ಕ್ಷೇತ್ರದಲ್ಲಿ ತಮ್ಮ ಪಾದಸ್ಪರ್ಶ ಮಾಡುತ್ತಾರೊ ಅದು ಪುಣ್ಯಕ್ಷೇತ್ರವಾಗುತ್ತದೆ.ಇಂದಿನ ಜಗತ್ತಿನಲ್ಲಿ ಕ್ಷಣ ಕ್ಷಣಕ್ಕೂ ನಾವೆಲ್ಲ ಜನರು ಅರಿತು ಅರಿಯದೇ ಮಾಡಿದ ತಪ್ಪುಗಳನ್ನು ಇಂತಹ ಪುಣ್ಯ ಕ್ಷೇತ್ರಗಳಗೆ ಆಗಮಿಸಿ ಪುಣ್ಯ ಕಾರ್ಯಗಳನ್ನು ಮಾಡಿ ಕಳೆದುಕೊಳ್ಳಬೇಕು ಎಂದರು.

ನಾಗರಾಳ ವಿಗಂಬರೇಶ್ವರ ಮಠ ತನ್ನದೆಯಾದ ದೈವಿಕ ಶಕ್ತಿಯನ್ನು ಹೊಂದಿದೆ. ಸಿದ್ದಿ ಪುರುಷರಾಗಿರುವಂತ ದಿಗಂಬರೇಶ್ವರರು ಸಿದ್ಧಸಾಧಕರಾಗಿದ್ದರು ಈಗಿನ ಶ್ರೀ ಮಠದ ಪೀಠಾಧಿಕಾರಿ ಶೇಷಪ್ಪಯ್ಯ ಸ್ವಾಮಿಗಳು ಭಕ್ರರಿಂದ ಯಾವುದೇ ಫಲಾಪೇಕ್ಷೆ ಬಯಸದೇ ಶ್ರೀ ಮಠ ಇದು ಭಕ್ತರ ಮಠ ನಾನು ಭಗವಂತನ ಸೇವಕ ಎಂದು ತ್ಯಾಗ ಮನೋಭಾವನೆಯುಳ್ಳವರಾಗಿದ್ದು ಸದ್ಭಕ್ತರಿಗೆ ಸದಾ ಒಳಿತನ್ನು ಬಯಸುತ್ತಾರೆ ಎಂದು ಗಿರಿಸಾಗರ ಕಲ್ಯಾಣ ಹಿರೇಮಠದ ರುದ್ರಮುನಿ ಶಿವಾಚಾರ್ಯರು ಹೇಳಿದರು.

ಈ ಸಂದರ್ಭದಲ್ಲಿ ಇಂಗಳೇಶ್ವರದ ವಿರಕ್ತಮಠದ ಚನ್ನಬಸವ ಸ್ವಾಮೀಜಿ,ಬೀಳಗಿ ಸೋಮಪ್ಪಯ್ಯನ ಮಠದ ಚನ್ನಬಸವ ಸ್ವಾಮೀಜಿ,ಬನಹಟ್ಟಿ ಹಿರೇಮಠ ಶರಣಬಸವ ಶಿವಾಚಾರ್ಯ ಸ್ವಾಮೀಜಿ,, ಬೀಳಗಿ ಕಲ್ಮಠದ ಗುರುಪಾದ ಶಿವಾಚಾರ್ಯ ಸ್ವಾಮೀಜಿ,ಕುಂದರಗಿ ಚರಂತಿಮಠದ ವೀರಸಂಗಮೇಶ್ವರ ಶಿವಾಚಾರ್ಯ ನಾಗರಾಳ ದಿಗಂಬರೇಶ್ವರ ಮಠದ ಶೇಷಪ್ಪಯ್ಯ ಗುರುನಿಂಗಪ್ಪಯ್ಯ ಸ್ವಾಮೀಜಿ, ನಿಂಗಪ್ಪಯ್ಯ ಗುರುಶೇಷಪ್ಪಯ್ಯ ಸ್ವಾಮೀಜಿ ಸುನಗದ ಅನ್ನಪೂರ್ಣೇಶ್ವರಿ ಬೃಹನ್ಮಠ ಶಿವಾನಂದ ಸ್ವಾಮೀಜಿ, ಬೀಳಗಿ ಹುಚ್ಚಪ್ಪಯ್ಯನ ಮಠದ ಫಕೀರಯ್ಯ ಸ್ವಾಮೀಜಿ, ಸಿದ್ದಾಪೂರ ಮಾನಪ್ಪಯ್ಯ ಹುಚ್ಚಪ್ಪಯ್ಯ ಸ್ವಾಮೀಜಿ,ಮತ್ತು ನಾಗರಾಳ ಸಕಲ ಸದ್ಭಕ್ತರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕಿಂತ ಮೊದಲು ಕಪ್ಪರ ಪಡಿಯಮ್ಮಗೆ ರುದ್ರಾಭಿಷೇಕ, ಹೋಮ-ಹವನ, ಸಕಲ ಧಾರ್ಮಿಕ ವಿಧಿವಿಧಾನಗಳು ನಡೆದವು. ನಂತರ ಸಕಲ ವಾಧ್ಯವೃಂದದೊಂದಿಗೆ 501 ಸುಮಂಗಲಿಯರಿಂದ ಕುಂಭ ಮೇಳ ಹಾಗೂ ನಾಡದೇವಿ ಮೂರ್ತಿಯ ಭವ್ಯ ಮರುವಣಿಗೆಯು ಗ್ರಾಮದ ಪ್ರಮುಖ ಬೀದಿಯಲ್ಲಿ ಸಂಚರಿಸಿ ಮಠದ ಆವರಣಕ್ಕೆ ಆಗಮಿಸಿತು. 1001 ಸುಮಂಗಲಿಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿತು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ